ಶಿವಮೊಗ್ಗ | ಈಜಲು ತೆರಳಿದ್ದ ವಿದ್ಯಾರ್ಥಿ ತುಂಗಾ ನದಿ ಪಾಲು

ಶಿವಮೊಗ್ಗ

ಶಿವಮೊಗ್ಗ, ತಾಲೂಕಿನ ಪಿಳ್ಳಂಗಿರಿ ಗ್ರಾಮದ ಬಳಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಗರದ ಕಾಮಾಕ್ಷಿ ಬೀದಿ ನಿವಾಸಿ ಪ್ರೇಮ್ ಕುಮಾರ್ (17) ಮೃತಪಟ್ಟ ದುರ್ದೈವಿ. ಮೃತ ಪ್ರೇಮ್ ಕುಮಾರ್ ಶಿವಮೊಗ್ಗದ ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ತಮ್ಮ ಸ್ನೇಹಿತರೊಂದಿಗೆ ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ದೇವಸ್ಥಾನಕ್ಕೆ ಪ್ರವಾಸ ಕೈಗೊಂಡಿದ್ದರು. ದೇವಸ್ಥಾನದ ದರ್ಶನದ ಬಳಿಕ ತುಂಗಾ ನದಿಯಲ್ಲಿ ಈಜಲು ಇಳಿದಿದ್ದಾರೆ.

ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿದ ಪ್ರೇಮ್ ಕುಮಾರ್ ಈಜಲಾಗದೆ ನೀರಿನಲ್ಲಿ ಮುಳುಗಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author