ಶಿವಮೊಗ್ಗ | ಕೇಂದ್ರ ಕಾರಗೃಹದಲ್ಲಿ ಹೊಲಿಗೆ ತರಬೇತಿ

ಶಿವಮೊಗ್ಗ

ಶಿವಮೊಗ್ಗ, ಶಾಹಿ ಎಕ್ಸ್ ಪೋರ್ಟ್ ಸಂಸ್ಥೆ ವತಿಯಿಂದ ಶಿವಮೊಗ್ಗದಲ್ಲಿರುವ ಕೇಂದ್ರ ಕಾರಾಗೃಹದ ಬಂಧಿ ನಿವಾಸಿಗಳಿಗೆ ಹೊಲಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಮಾರೋಪ ಸಮಾರಂಭ ಹಾಗೂ ಅರ್ಹತಾ ಪ್ರಮಾಣ ಪತ್ರ ವಿತರಣಾ ಸಮಾರಂಭ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಅವರು ಕೌಶಲ್ಯದ ಕಲಿಕೆ ಸಾವಲಂಬನೆಗೆ ದಾರಿದೀಪವಾಗಲಿದೆ ಎಂದರು.

ಪ್ರಮಾಣ ಪತ್ರ ವಿತರಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಬಂಧಿ ನಿವಾಸಿಗಳಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕಿಶ್ ಭಾನು, ಶಾಹಿ ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಕವಿತಾ ಪ್ರಸಾದ್, ಆಡಳಿತ ವಿಭಾಗದ ಜಿಎಂ ಲಕ್ಷ್ಮಣ ಧರ್ಮಟ್ಟಿ, ಕೇಂದ್ರ ಕಾರಾಗೃಹದ ಮುಖ್ಯ ಅಧ್ಯಕ್ಷಕ ಡಾ. ಬಿ ರಂಗನಾಥ್, ಶಿವಮೊಗ್ಗ ಡಿವೈಎಸ್ಪಿ ಅಂಜನಪ್ಪ ಕಾರಾಗೃಹದ ಸಹಾಯಕ ಅಧೀಕ್ಷಕಿ ಪ್ರೀತಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತರಬೇತಿ ಅಧಿಕಾರಿಗಳಾದ ನಾಗರಾಜ್ ಕಿರಣ್ ಅವರನ್ನು ಅಭಿನಂಧಿಸಲಾಯಿತು. ತಿಮ್ಮಪ್ಪ ಪ್ರಾರ್ಥಿಸಿದರು, ತಿಪ್ಪೇಸ್ವಾಮಿ ಹಾಗೂ ಶಿವಾನಾಯ್ಕ ಅವರು ತರಬೇತಿ ಅವಧಿಯ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆ ಶಿಕ್ಷಕ ಗೋಪಾಲಕೃಷ್ಣ ಅವರು ಸ್ವಾಗತಿಸಿದರು.

Author