ಬೆಳಗಾವಿ | ನಮ್ಮ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ : ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಳಗಾವಿ

ಬೆಳಗಾವಿ ಎಸ್ಪಿ ಕಚೇರಿಯಲ್ಲಿ ಉತ್ತರ ವಲಯ ಅಧಿಕಾರಿಗಳ ಜೊತೆಗೆ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪರಮೇಶ್ವರ್ ಚಳಿಗಾಲದ ಅಧಿವೇಶನ ವೇಳೆ ಎದುರಾಗುವ ಸಮಸ್ಯೆ, ಪ್ರತಿಭಟನೆಗಳನ್ನ ಸಮರ್ಥವಾಗಿ ನಿಭಾಯಿಸಲು ಸಮಾಲೋಚನೆ ನಡೆಸಿರುವೆ ಎಂದರು.

6000 ಪೊಲೀಸ್ ಸಿಬ್ಬಂದಿ ಚಳಿಗಾಲದ ಅಧಿವೇಶನಕ್ಕೆ ನೇಮಕ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಬೆಳಗಾವಿ ಪೊಲೀಸ್ ಕಮೀಷನರ್, ಬೆಳಗಾವಿ ಐಜಿ ಮತ್ತು ರಾಜ್ಯಮಟ್ಟದ ಎಡಿಜಿಪಿ ಜೊತೆಗೆ ಸಭೆ ಮಾಡಿದ್ದೇವೆ ಎಂದು ತಿಳಿಸಿದರು.

ಕಳೆದ ವರ್ಷಕ್ಕಿಂತ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ,ಅಧಿವೇಶನದಲ್ಲಿ ಸಾಲು ಸಾಲು ಪ್ರತಿಭಟನೆ ನಡೆಯಲಿವೆ.ರೈತರು, ಎಂಇಎಸ್, ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯೋ ಸಾಧ್ಯತೆಯಿದೆ.

ಅಧಿವೇಶನ ಸಂದರ್ಭದಲ್ಲಿ ಎದುರಾಗುವ ಪ್ರತಿಭಟನೆ ಯನ್ನ ಗಮನದಲ್ಲಿಟ್ಟುಕೊಂಡು ಭದ್ರತೆ ಮಾಡ್ತಿದ್ದೇವೆ ಎಂದರು.

ನಮ್ಮ ಸಿಬ್ಬಂದಿಗೆ ಊಟ, ವಸತಿ ಸೇರಿ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡ್ತಿವಿ.ನಮ್ಮ ಸರ್ಕಾರ ವಿವಿಧ ಇಲಾಖೆ ಖಾಲಿ ಇರೋ ಹುದ್ದೆಗಳ ಭರ್ತಿಗೆ ಅನುಮತಿ ಕೊಟ್ಟಿವೆ.

ಒಳ ಮೀಸಲಾತಿ ಕಾರಣಕ್ಕೆ ಈ ನೇಮಕಾತಿ ವಿಳಂಬವಾಗಿತ್ತು. ಈಗ ಆ ಸಮಸ್ಯೆ ನಿವಾರಣೆ ಆಗಿದೆ.545 ಸಬ್ ಇನ್ಸ್ಪೆಕ್ಟರ್ ಗಳ ನೇಮಕ ಆಗಿ, ತರಬೇತಿ ಮುಗಿಯುವ ಹಂತಕ್ಕೆ ಬಂದಿದೆ.

ಇನ್ನೂ600 ಖಾಲಿ ಇರೋ‌ ಪಿಎಸ್ಐ ಗಳ ನೇಮಕಾತಿ ಮಾಡುತ್ತೇವೆ.ನಮ್ಮಲ್ಲಿ 15 ಸಾವಿರ ಪೊಲೀಸ್ ಪೇದೆ ಹುದ್ದೆ ಖಾಲಿಯಿವೆ,ಅವುಗಳನ್ನ ಹಂತ ಹಂತವಾಗಿ ನೇಮಕಾತಿ ಮಾಡುತ್ತೇವೆ ಎಂದರು.

ಜೊತೆಗೆ ಎರಡು ವರ್ಷ ವಯೋಮಿತಿ ವಿನಾಯಿತಿ ಕೊಟ್ಟಿದ್ದೇವೆ 70 ಸಾವಿರವರೆಗೂ ಖಾಲಿ ಹುದ್ದೆಗಳ‌ ಭರ್ತಿ ಪ್ರಕ್ರಿಯೆ ಸರ್ಕಾರದಲ್ಲಿ ಆರಂಭವಾಗಿದೆ ಎಂಬ ಮಾಹಿತಿ ನೀಡಿದರು.

ಕಬ್ಬು, ಮೆಕ್ಕೆಜೋಳ ಸೇರಿದಂತೆ ರೈತರ ವಿವಿಧ ಸಮಸ್ಯೆ ಗಳನ್ನ ಪರಿಹರಿಸಲು ಕ್ರಮ ವಹಿಸುತ್ತೇವೆ ಎಂದು ಪರಮೇಶ್ವರ ತಿಳಿಸಿದರು.

ಗ್ಯಾಂಬ್ಲಿಂಗ್, ಮಟ್ಕಾ ಸೇರಿದಂತೆ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ನಮ್ಮ ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವೆ,ನಮ್ಮ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

Author