ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ‘ಶಿಕ್ಷಣ ಬಂಗಾರ‘ ಶ್ರೇಯ

ಬೆಂಗಳೂರು

ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರ‍ಪ್ಪ ಅವರು ತಂದಿರುವ ಕ್ರಾಂತಿಕಾರ ಬದಲಾವಣೆಗಳು ಹಾಗೂ ಅವುಗಳ ಅನುಷ್ಠಾನದಲ್ಲಿ ಸಚಿವರು ತೋರಿದ ಬದ್ಧತೆಯನ್ನು ಗಮನಿಸಿರುವ ಕರ್ನಾಟಕದ ಪ್ರತಿಷ್ಠಿತ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ಸ್ ಆಫ್ ಪ್ರೈಮರಿ ಮತ್ತು ಸೆಕೆಂಡರಿ ಸ್ಕೂಲ್ಸ್ ಇನ್ ಕರ್ನಾಟಕ (KAMS) ಸಂಘಟನೆ ಬೆಂಗಳೂರಿನಲ್ಲಿ ನಡೆದ ‘ವಿಷನ್ – ಮಿಷನ್’ (VISION – MISSION) ಶಿಕ್ಷಣ ಸಮ್ಮೇಳನದಲ್ಲಿ ‘ಶಿಕ್ಷಣ ಬಂಗಾರ’ – ಶಿಕ್ಷಣ ಇಲಾಖೆಯ ಬಂಗಾರದ ಮನುಷ್ಯ (Shikshana Bangara) ಎಂಬ ಗೌರವಯುತ ಬಿರುದನ್ನು ನೀಡಿ ಸನ್ಮಾನಿಸಿದೆ.

ಈ ವೇಳೆ ಮಾತನಾಡಿದ ಮಧು ಬಂಗಾರಪ್ಪ, ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲಾ ಮಾನ್ಯತೆ ನವೀಕರಣ (RR) ಪ್ರಕ್ರಿಯೆಯನ್ನು ಈಗಾಗಲೇ ಸರಳಗೊಳಿಸಿದ್ದು, ಮುಂದಿನ ದಿನಗಳಲ್ಲಿ ನಿಯಮಗಳನ್ನು ಇನ್ನಷ್ಟು ಸರಳೀಕರಣಗೊಳಿಸುವ ಭರವಸೆ ನೀಡಿ ಇಲಾಖೆಯನ್ನು ಜನಸ್ನೇಹಿಯಾಗಿಸುವ ಕಾರ್ಯ ಹೀಗೆ ನಿರಂತರವಾಗಿರಲಿದೆ ಎಂಬ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಡಿ.ಟಿ. ಶ್ರೀನಿವಾಸ್, ರಾಮೋಜಿ ಗೌಡ, ಭಾರತೀಯ ಶಿಕ್ಷಣ ಮಂಡಳಿಯ ಕಾರ್ಯನಿರತ ಅಧ್ಯಕ್ಷ ಎನ್.ಪಿ. ಸಿಂಗ್ ಮತ್ತು KAMS ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಉಪಸ್ಥಿತರಿದ್ದರು.

Author