ದಾವಣಗೆರೆ,ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ ರಾಜ್ಯಾಧ್ಯಕ್ಷರಾದ ಬಿ. ವೈ.ವಿಜಯೇಂದ್ರ ಅವರು ಇಂದು ದಾವಣಗೆರೆಯಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿ, ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಕೇಂದ್ರ ಸಚಿವರಾದ ಜಿ. ಎಂ. ಸಿದ್ದೇಶ್ವರ್, ಮಾಜಿ ಸಚಿವರಾದ ಎಂ. ಪಿ. ರೇಣುಕಾಚಾರ್ಯ, ರವೀಂದ್ರ ನಾಥ್, ಶಾಸಕರಾದ ಶ್ರೀವತ್ಸ, ಬಿ. ಪಿ. ಹರೀಶ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕರಾದ ಶಿವಯೋಗಿ ಸ್ವಾಮಿ, ವಿಭಾಗ ಪ್ರಭಾರಿ ಟಿ. ಡಿ ಮೇಘರಾಜ್, ಮಾಜಿ ಶಾಸಕರಾದ ರಾಮಚಂದ್ರಪ್ಪ , ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.



