ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಮಾಡಿಸಲು ಏಜೆಂಟ್ರುಗಳನ್ನು ನಿಯುಕ್ತಿ ಮಾಡಿಕೊಳ್ಳಲಾಗುತ್ತಿದ್ದು, 18 ವರ್ಷ ಮೇಲ್ಪಟ್ಟ ವಯೋಮಿತಿಯ 10ನೇ ತರಗತಿ ಪಾಸಾಗಿರುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ನುರಿತ ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ರೂ. 5000/-ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇರಿಸಬೇಕಾಗುವುದು.
ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಮೇ 22 ಮತ್ತು 25 ರಂದು ಬೆಳಗ್ಗೆ 11.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿಗಳು ದೂ.ಸಂ.: 9620455929 ಇವರನ್ನು ಸಂಪರ್ಕಿಸುವುದು.

