ಶಿವಮೊಗ್ಗ | ನವಜಾತ ಶಿಶು ಪತ್ತೆ

ಸ್ಥಳಕ್ಕೆ ಹೋಗಿ ನೋಡಿದಾಗ ರಕ್ತ-ಸಿಕ್ತವಾದ ಶಿಶುವನ್ನು ಟವೆಲ್‌ನಲ್ಲಿ ಸುತ್ತಿ ಇಡಲಾಗಿತ್ತು. ಈ ವಿಷಯವನ್ನು ಗ್ರಾಮಸ್ಥರಿಗೆ ಮುಟ್ಟಿಸಿದ ಶ್ರೀನಿವಾಸ್, ಶಿಶುವನ್ನು ಮನೆಗೆ ತೆಗೆದುಕೊಂಡು ಆರೈಕೆ ಮಾಡಿದ್ದಾರೆ. ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಹಾಗೂ ಗ್ರಾಮಸ್ಥ ಅವಿನಾಶ್ ಪೊಲೀಸರಿಗೆ ಮಾಹಿತಿ ನೀಡಿದರು.