ತಂಬಾಕು ಮುಕ್ತ ಆರೋಗ್ಯಕರ ಸಮಾಜಕ್ಕಾಗಿ ನಾವೆಲ್ಲರೂ ಪಣತೊಡೋಣ ಮಾಜಿ ಸಚಿವ ಎಸ್. ಮಧು ಬಂಗಾರಪ್ಪ

ಯುವ ಪೀಳಿಗೆಯನ್ನು ಗುರಿಯಾಗಿಸಿಕೊಂಡು ಜಾಗತಿಕವಾಗಿ ಹರಡುತ್ತಿರುವ ತಂಬಾಕು ಪಿಡುಗಿನ ವಿರುದ್ಧ ಧ್ವನಿ ಎತ್ತುವುದು ಇದರ ಮುಖ್ಯ ಉದ್ದೇಶವಾಗಿದೆ. ಹೃದ್ರೋಗ, ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ಕಾರಣವಾಗುವ ತಂಬಾಕು ಸೇವನೆಯನ್ನು ತ್ಯಜಿಸುವುದು ಅತ್ಯಗತ್ಯ. ಕಠಿಣ ತಂಬಾಕು ನಿಯಂತ್ರಣ ನೀತಿಗಳೊಂದಿಗೆ, ಆರೋಗ್ಯಕರ ದೇಹ, ಸ್ವಚ್ಛ ಪರಿಸರ ಮತ್ತು ಉತ್ತಮ ಭವಿಷ್ಯಕ್ಕಾಗಿ ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡಲು ನಾವೆಲ್ಲರೂ ಪಣತೊಡೋಣ ಎಂದು ಮಧು ಬಂಗಾರಪ್ಪನವರು ತಿಳಿಸಿದರು.