ಶಿವಮೊಗ್ಗ | ಹವಾಮಾನ ಬದಲಾವಣೆ ಕುರಿತು ವೈಜ್ಞಾನಿಕ, ಸುಸ್ಥಿರ ಕ್ರಿಯಾ ಯೋಜನೆ ರೂಪಿಸಬೇಕು : ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ

ಹವಾಮಾನ ಸಮತೋಲನ ತಪ್ಪುತ್ತಿದೆ. ಇದರಿಂದ ಅನಿಶ್ಚಿತ ಮಳೆ, ಇಳುವರಿಯಲ್ಲಿ ಕುಸಿತ, ಪ್ರವಾಹ, ಭೂ ಕುಸಿತ, ಬಿಸಿಗಾಳಿ, ಆರೋಗ್ಯದಲ್ಲಿ ವೈಪರೀತ್ಯಗಳನ್ನು ಎದುರಿಸುತ್ತಿದ್ದೇವೆ. ಜಾಗತಿಕ ತಾಪಮಾನದ ಪರಿಣಾಮವಾಗಿ ಧ್ರುವ ಪ್ರದೇಶಗಳಲ್ಲಿನ ಹಿಮನದಿಗಳು ಹಾಗೂ ಹಿಮಾಲಯದ ಮಂಜುಗಡ್ಡೆಗಳು ವೇಗವಾಗಿ ಕರಗುತ್ತಿವೆ.ಇದರಿಂದಾಗಿ ಸಮುದ್ರದ ನೀರಿನ ಮಟ್ಟ ವರ್ಷದಿಂದ ವರ್ಷಕ್ಕೆ ಏರುತ್ತಿದ್ದು, ಕರಾವಳಿ ತೀರದ ನಗರಗಳು ಮತ್ತು ದ್ವೀಪಗಳು ಮುಳುಗಡೆಯಾಗುವ ಭೀತಿ ಎದುರಿಸುತ್ತಿವೆ.