“ಶಿವಮೊಗ್ಗ ನಗರದ ಪ್ರತಿಯೊಂದು ಬಡಾವಣೆಗೂ ನಾಗರಿಕ ಮೂಲಸೌಕರ್ಯಗಳನ್ನು ಒದಗಿಸಿ, ನಗರವನ್ನು ಸುಸಜ್ಜಿತ ಹಾಗೂ ಮಾದರಿಯನ್ನಾಗಿ ರೂಪಿಸುವುದೇ ನಮ್ಮ ಪ್ರಮುಖ ಆದ್ಯತೆಯಾಗಿದೆ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ತಿಳಿಸಿದ್ದಾರೆ.
ನಾಗರ ಸರ್ವಾಂಗೀಣ ಪ್ರಗತಿಯ ಸಂಕಲ್ಪದೊಂದಿಗೆ ಇಂದು ಬೆಳಿಗ್ಗೆ ಶಾಸಕರು ಕ್ಷೇತ್ರದ ವ್ಯಾಪ್ತಿಯ ವಿವಿಧ ಪ್ರಮುಖ ಬಡಾವಣೆಗಳಾದ ಅಶ್ವತ್ ನಗರ, ಎಲ್.ಬಿ.ಎಸ್. ನಗರ, ಜೆ.ಎಚ್. ಪಟೇಲ್ ಬಡಾವಣೆ ಹಾಗೂ ನವನಗರ ಬಡಾವಣೆಗಳಲ್ಲಿ ನೂತನ ರಸ್ತೆ ನಿರ್ಮಾಣ ಮತ್ತು ಒಳಚರಂಡಿ (UGD) ಕಾಮಗಾರಿಗಳಿಗೆ ಶಾಸ್ತ್ರೋಕ್ತವಾಗಿ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಬಳಿಕ ಮಾಹಿತಿ ಹಂಚಿಕೊಂಡ ಶಾಸಕರು, “ಬಡಾವಣೆಗಳಲ್ಲಿ ವಾಸಿಸುವ ನಾಗರಿಕರಿಗೆ ಸುಗಮ ಸಂಪರ್ಕ ಕಲ್ಪಿಸುವ ರಸ್ತೆಗಳು ಮತ್ತು ವೈಜ್ಞಾನಿಕ ಹಂತದ ಒಳಚರಂಡಿ ವ್ಯವಸ್ಥೆಯನ್ನು ಒದಗಿಸುವುದು ಅತ್ಯಗತ್ಯವಾಗಿದೆ.

ಈ ನಿಟ್ಟಿನಲ್ಲಿ ಇಂದಿನಿಂದಲೇ ಕೆಲಸಗಳು ಆರಂಭಗೊಳ್ಳಲಿವೆ. ಕಾಮಗಾರಿಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಯೋಜನೆಗಳನ್ನು ಯಾವುದೇ ವಿಳಂಬವಿಲ್ಲದೆ, ಗುಣಮಟ್ಟದೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯ ಎಂಜಿನಿಯರ್ಗಳು ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ,” ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಪಕ್ಷದ ಪದಾಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕ ಬಂಧುಗಳು ಉಪಸ್ಥಿತರಿದ್ದುರು.


