ದಾವಣಗೆರೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ ; ಜಮೀರ್ ವಿರುದ್ಧ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೋರಲು ಅವರ ಬೆಂಬಲಿಗರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬಂದಿದ್ದರು. ಆದರೆ, ಈ ಸಂದರ್ಭದಲ್ಲಿ ಬೆಂಬಲಿಗರ ಮನವಿ ಆಲಿಸುವ ಬದಲು ಸಿದ್ದರಾಮಯ್ಯನವರು ಅವರ ಮುಂದೆ ಜಮೀರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.