ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆ ತಕ್ಷಣ ದುರಸ್ತಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಶಾಸಕರ ಖಡಕ್ ಸೂಚನೆ

ಪ್ರಯಾಣಿಕರ ವಿಶ್ರಾಂತಿಗಾಗಿ ನಿರ್ಮಿಸಲಾದ ಬೆಡ್ ಹಾಲ್ ಅಸ್ವಚ್ಛವಾಗಿದ್ದು ದುರ್ವಾಸನೆ ಬೀರುತ್ತಿದೆ ಎಂದು ಪರಿಶೀಲನೆಯಲ್ಲಿ ತಿಳಿದುಬಂದಿದೆ. ಹಿಂದೆ ಅಳವಡಿಸಲಾಗಿದ್ದ ದೂರದರ್ಶನ (ಟಿವಿ) ಈಗ ಇಲ್ಲದಿರುವುದರಿಂದ, ಸರ್ಕಾರಿ ಯೋಜನೆಗಳು ಮತ್ತು ಸಾರ್ವಜನಿಕ ಮಾಹಿತಿ ಪ್ರಸಾರಕ್ಕೆ ಇದ್ದ ಅವಕಾಶವೂ ಕಳೆದುಹೋಗಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.ಬಸ್ ನಿಲ್ದಾಣದ ಆಸನಗಳ ಮೇಲೆ ಪಕ್ಷಿಗಳು ಮತ್ತು ಪ್ರಾಣಿಗಳ ಮಲಮೂತ್ರದಿಂದ ಗಲೀಜಾಗಿದ್ದು, ಅವುಗಳನ್ನು ಸಮರ್ಪಕವಾಗಿ ಸ್ವಚ್ಛಗೊಳಿಸದಿರುವುದು ಕಂಡುಬಂದಿದೆ.