ಶಿವಮೊಗ್ಗ | ಸಾಲ ಕೊಡೊವುದಾಗಿ ನಕಲಿ ಬ್ಯಾಂಕ್ ಮ್ಯಾನೇಜರ್ ಮಾತು ನಂಬಿದ ಹಿರಿಯ ಪೊಲೀಸ್ ಅಧಿಕಾರಿಗೆ ವಂಚನೆ

ದೂರುದಾರರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದನು. ತಾನು ಕೇಂದ್ರ ಸರ್ಕಾರದ ಮುದ್ರಾ ಲೋನ್ ಯೋಜನೆಯ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದ ವಂಚಕ, ಮುದ್ರಾ ಯೋಜನೆಯಡಿ ನಿಮಗೆ 25,00,000 ರೂಪಾಯಿ ಸಾಲ ಹಾಗೂ ಅದರ ಜೊತೆಗೆ 5,00,000 ರೂಪಾಯಿ ಸಬ್ಸಿಡಿ ಕೊಡಿಸುವುದಾಗಿ ನಂಬಿಸಿದ್ದಾನೆ.