ಶಿವಮೊಗ್ಗ, ನೂತನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ನಿಖಿಲ್. ಬಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಶುಭಾಶಯ ಕೋರಲಾಯಿತು.
ಶಿವಮೊಗ್ಗ ಜಿಲ್ಲೆ ಸೊರಬ. ನಗರ ಹಾಗೂ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಬಹಿಷ್ಕಾರ ಪದ್ಧತಿಯ ವಿಚಾರವಾಗಿ ಮಾಹಿತಿಯನ್ನು ತಿಳಿಸಲಾಯಿತು ಈ ಹಳ್ಳಿಗಳಲ್ಲಿ ಪ್ರತ್ಯೇಕ ಸಂವಿಧಾನದ ವ್ಯವಸ್ಥೆ ಇದೆ ಎಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗ ತಿಳಿಸಿದರು.
ಈ ಹಂತದಲ್ಲಿ ಬಹಿಷ್ಕಾರ ಪದ್ಧತಿಯ ವಿಚಾರವಾಗಿ ಮನವಿಯನ್ನು ಸಹ ಸಲ್ಲಿಸುವ ಸಲ್ಲಿಸಲಾಯಿತು ಸೂಕ್ತವಾಗಿ ಸ್ಪಂದಿಸಿದ ಜಿಲ್ಲಾ ರಕ್ಷಣಾಧಿಕಾರಿಗಳು ಹಂತ ಹಂತವಾಗಿ ಸರಿಪಡಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್ ಜಿಲ್ಲಾ ಖಜಾಂಚಿ ಗಣೇಶ್, ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿ ನೂರಲ್ಲ, ಜಿಲ್ಲಾ ಯುವ ಘಟಕ ಸದನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಮಾಧ್ಯಮ ಸಲಹೆಗಾರ ಅನಿಲ್ ಕುಮಾರ್ ಪದಾಧಿಕಾರಿಗಳಾದ ಸತೀಶ್ ಆನ್ಸರ್ ಮುಂತಾದ ಕಾರ್ಯಕರ್ತರು ಹಾಜರಿದ್ದರು.



