ಶಿವಮೊಗ್ಗ ನಗರದ ನಿವಾಸಿಗಳಿಗೆ ಕುಡಿಯುವ ನೀರು ಪೂರೈಸುವ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯಲಿದ್ದು, ಏಪ್ರಿಲ್ 4 ಮತ್ತು 5 ರಂದು ನಗರದಾದ್ಯಂತ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಮುನ್ನೆಚ್ಚರಿಕೆಯಾಗಿ ನೀರಿನ ಸಂಗ್ರಹ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ.



