ಶಿವಮೊಗ್ಗ, ವಿಶ್ವವೇ ಮಾನ್ಯ ಮಾಡುವ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ನೀಡಿರುವ “ಭಯೋತ್ಪಾದಕ” ಎಂಬ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ನಗರದ ಗೋಪಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, “ಕಾಂಗ್ರೆಸ್ ಪಕ್ಷವು ಸತತ ವೈಫಲ್ಯಗಳಿಂದ ದಿಕ್ಕುತೋಚದೆ ಹತಾಶೆಯ ಪರಮಾವಧಿಗೆ ತಲುಪಿದೆ.
ಜಗತ್ತೇ ಮೆಚ್ಚುವ ನಾಯಕನನ್ನು ‘ಭಯೋತ್ಪಾದಕ’ ಎಂದು ಕರೆದಿರುವುದು ಕೇವಲ ಪ್ರಧಾನಿಯವರಿಗೆ ಮಾಡಿದ ಅವಮಾನವಲ್ಲ, ಬದಲಾಗಿ ದೇಶದ 140 ಕೋಟಿ ಜನತೆಗೆ ಮಾಡಿದ ದ್ರೋಹವಾಗಿದೆ. ಕಾಂಗ್ರೆಸ್ ತನ್ನ ಇಂತಹ ಕೀಳುಮಟ್ಟದ ರಾಜಕಾರಣವನ್ನು ತಕ್ಷಣವೇ ನಿಲ್ಲಿಸಬೇಕು,” ಎಂದು ಎಚ್ಚರಿಸಿದರು.

ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಹಿರಿಯ ಮುಖಂಡರಾದ ಶ್ರೀ ಜ್ಯೋತಿಪ್ರಕಾಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಕ್ಕೆ, ನಗರಾಧ್ಯಕ್ಷರಾದ ಶ್ರೀ ರಾಹುಲ್ ಬಿದರೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಭಾಗವಹಿಸಿದ್ದರು.


