ಕೊಲ್ಲೂರು ಮೂಕಾಂಬಿಕ ದರ್ಶನದ ನಂತರ ತಮಿಳುನಾಡು ಸಿಎಂ ವಿಜಯ್ ದಾಂಪತ್ಯದಲ್ಲಿ ಸಿಹಿಸುದ್ದಿ?

ರಾಜಕೀಯ

ಕಳೆದ ಹಲವಾರು ತಿಂಗಳುಗಳಿಂದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ಅವರು ವಿಚ್ಛೇದನ ವಿಚಾರವಾಗಿ ಸಾಕಷ್ಟು ಸುದ್ದಿಯಾಗಿದ್ದಾರೆ. ವಿಚ್ಛೇದನಕ್ಕೆ ಸಂಬಂಧಿಸಿದಂತೆ ಜೂನ್ 15 ರಂದು ನಿರ್ಣಾಯಕ ವಿಚಾರಣೆ ನಡೆಯಲಿದ್ದು, ದಂಪತಿ ಇದೀಗ ಒಂದಾಗಲಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ಮಾಧ್ಯಮ ವರದಿಗಳ ಪ್ರಕಾರ, ವಿಷಯವನ್ನು ಸೌಹಾರ್ದಯುತವಾಗಿ ಪರಿಹರಿಸುವ ಸಲುವಾಗಿ ದಂಪತಿ ನಡುವೆ ಸದ್ಯ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ. ವಿಜಯ್ ಅಥವಾ ಸಂಗೀತಾ ಅವರಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲವಾದರೂ, ಸಂಭವನೀಯ ಇತ್ಯರ್ಥದ ಸುತ್ತಲಿನ ಊಹಾಪೋಹಗಳು ಹೆಚ್ಚಾಗಿವೆ.

ಶುಕ್ರವಾರ ವಿಜಯ್ ಉಡುಪಿಯ ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಾಲಯದಲ್ಲಿ ಕೆಲಕಾಲ ಕಳೆದ ಅವರು ದೇವಿಗೆ 1.6 ಕೆಜಿಯ ಬೆಳ್ಳಿ ಖಡ್ಗವನ್ನು ಅರ್ಪಿಸಿದ್ದಾರೆ. ಈ ಭೇಟಿ ಬಳಿಕ ಅವರ ವೈಯಕ್ತಿಕ ಜೀವನದ ಬಗ್ಗೆ ಹೊಸ ಚರ್ಚೆಗಳು ಆರಂಭವಾಗಿವೆ.

ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ಮಧ್ಯವರ್ತಿಯಾಗಿದ್ದು, ಅವರು ದಂಪತಿ ನಡುವಿನ ಭಿನ್ನಾಭಿಪ್ರಾಯಗಳನ್ನು ಖಾಸಗಿಯಾಗಿಯೇ ಪರಿಹರಿಸಿಕೊಳ್ಳಲು ಸಹಾಯ ಮಾಡುತ್ತಿದ್ದಾರೆ ಮತ್ತು ಇಬ್ಬರ ನಡುವೆ ಮಾತುಕತೆಗೆ ಪ್ರೋತ್ಸಾಹಿಸುತ್ತಿದ್ದಾರೆ ಎಂದು ವರದಿಯಾಗಿದ್ದು, ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.

Author