ರಸ್ತೆಯಲ್ಲಿ ಪಾನ್ ಉಗುಳಿದ ಭಾರತೀಯ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ ವಿಧಿಸಿದ ಲಂಡನ್ ನ್ಯಾಯಾಲಯ

ಇದೇ ರೀತಿಯ ಪ್ರತ್ಯೇಕ ಪ್ರಕರಣದಲ್ಲಿ, ರುಯಿಸ್ಲಿಪ್‌ನಲ್ಲಿ ವಾಸಿ ಹಿತೇಶ್ ಪಟೇಲ್ (32) ಅವರಿಗೂ ನ್ಯಾಯಾಲಯವು 1,391 ಯುರೋ (1.7 ಲಕ್ಷ ರೂ.) ದಂಡ ವಿಧಿಸಿದೆ. ಜೂನ್ 12, 2025 ರಂದು ವೆಂಬ್ಲಿ ಹಿಲ್‌ನ ರಸ್ತೆಯೊಂದರಲ್ಲಿ ಪಾನ್ ಉಗುಳಿದ್ದರು. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಅನುಪಸ್ಥಿತಿಯಲ್ಲೇ ವಿಚಾರಣೆ ನಡೆಸಿದ ನ್ಯಾಯಾಲಯ ದಂಡ ವಿಧಿಸಿದೆ. ಪಾನ್ ಉಗುಳುವುದರಿಂದ ಉಂಟಾಗುವ ಕಲೆಗಳನ್ನು ಸ್ವಚ್ಛಗೊಳಿಸಲು ಪ್ರತಿ ವರ್ಷ 30,000 ಯೂರೋಗಳಿಗಿಂತ (32,08,920 ರೂ.) ಹೆಚ್ಚು ಖರ್ಚು ಮಾಡಲಾಗುತ್ತದೆ. ಯಂತ್ರಗಳು ಸಹ ಆ ಕಲೆಯನ್ನು ಸಂಪೂರ್ಣವಾಗಿ […]

Continue Reading

ದಾವಣಗೆರೆ ಉಪಚುನಾವಣೆ ; ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಕಣಕ್ಕೆ

ತಾತನ ಕಾರನ್ನು ಸ್ವಚ್ಛಗೊಳಿಸಿ ಪೂಜೆ ಮಾಡಿ, ಅದೇ ಕಾರಿನಲ್ಲಿ ಶುಭಗಳಿಗೆಯಲ್ಲಿ ತಾಯಿ ಪ್ರಭಾ ಮಲ್ಲಿಕಾರ್ಜುನ ಅವರ ಜೊತೆಗೆ ಅಜ್ಜಿ ಮನೆಗೆ ತೆರಳಿ ಅಜ್ಜಿಯ ಆಶೀರ್ವಾದ ಪಡೆದರು. ಬಳಿಕ ಅಲ್ಲಿಂದ ನೇರವಾಗಿ ಮಹಾನಗರ ಪಾಲಿಕೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ಎಸಿ ಹಾಗೂ ಚುನಾವಣಾಧಿಕಾರಿ ಸಂತೋಷ್ ಅವರಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಕಟ್ಟಿರುವುದೇ ಅಪ್ಪಾಜಿ, ಕಾಂಗ್ರೆಸ್​​ನಿಂದಲೇ ನಾಮಪತ್ರ ಸಲ್ಲಿಕೆ: ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಸಮರ್ಥ್ ಶಾಮನೂರು ಅವರು ಅಪ್ಪಟ ದೇಸಿ ಸಾಂಪ್ರದಾಯಿಕ ಉಡುಗೆಯಲ್ಲಿ ನಾಮಪತ್ರ ಸಲ್ಲಿಸಲು ಹೊರಡುವ […]

Continue Reading

ಆರ್‌ಸಿಬಿ ಪಂದ್ಯಗಳ ಅಧಿಕೃತ ಟಿಕೆಟ್ ಇದ್ದರೆ ನಮ್ಮ ಮೆಟ್ರೋ ಪ್ರಯಾಣ ಉಚಿತ

ಟಿಕೆಟ್‌ ಖರೀದಿ ಹೇಗೆ?: ಈ ಬಾರಿ ಆರ್‌ಸಿಬಿ ತಂಡದ ತವರಿನ ಪಂದ್ಯಗಳಿಗೆ ಆನ್‌ಲೈನ್ ಟಿಕೆಟ್‌ಗಳಿಗೆ ಮಾತ್ರವೇ ಆದ್ಯತೆ ನೀಡಲಾಗಿದೆ. ತಂಡದ ಅಧಿಕೃತ ವೆಬ್‌ಸೈಟ್‌ (SHOP.ROYALCHALLENGERS.COM) ಅಥವಾ ಆ್ಯಪ್ ಮೂಲಕ ಅಭಿಮಾನಿಗಳು ಟಿಕೆಟ್ ಖರೀದಿಸಬಹುದು. ಶೀಘ್ರದಲ್ಲೇ ಟಿಕೆಟ್ ಮಾರಾಟದ ದಿನಾಂಕ ಪ್ರಕಟವಾಗಲಿದೆ. ಯಾವುದೇ ಇತರ ವೆಬ್‌ಸೈಟ್ ಅಥವಾ ವ್ಯಕ್ತಿಯು ಟಿಕೆಟ್ ಮಾರಾಟದ ಹಕ್ಕು ಹೊಂದಿಲ್ಲ. ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಫ್ರಾಂಚೈಸಿ ಸ್ಪಷ್ಟಪಡಿಸಿದೆ. ಟಿಕೆಟ್‌ ಖರೀದಿಸುವವರು ಸೀಮಿತವಾದ ವಾಹನ ಪಾರ್ಕಿಂಗ್ ಸ್ಥಳಗಳನ್ನು ಮುಂಗಡವಾಗಿ ಬುಕ್ […]

Continue Reading

ಶಿವಮೊಗ್ಗ | ಪಶು ವೈದ್ಯೆ ಸಾವು : ಸಚಿವ ಮಧು ಬಂಗಾರಪ್ಪ ಸಂತಾಪ

ಈ ಸಂದರ್ಭದಲ್ಲಿ ದೇವರು ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಹಾಗೂ ಅವರ ಸಹಪಾಠಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ.

Continue Reading

ಶಿವಮೊಗ್ಗ | ಮೃಗಲಾಯದಲ್ಲಿ ನೀರಾನೆ ಹಠಾತ್ ದಾಳಿ ; ಪಶು ವೈದ್ಯೆ ಸಾವು : ತನಿಖೆಗೆ ಅದೇಶಿಸಿದ ಸಚಿವರು

ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿವಮೊಗ್ಗದ ಮ್ಯಾಕ್ಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 6:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಶಿವಮೊಗ್ಗ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ದುರಂತದ ಕುರಿತು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ತಂಡವು ಕೂಲಂಕಷವಾಗಿ ತನಿಖೆ ನಡೆಸಲಿದೆ. […]

Continue Reading

ಆಟವಾಡುತ್ತಾ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ ; ಪ್ರಾಣದ ಹಂಗುತೊರೆದು ಮಗುವನ್ನು ರಕ್ಷಿಸಿದ ಆಪದ್ಬಾಂಧವ

ಗಾಬರಿಯಿಂದ ಮನೆಯೊಳಗೆಲ್ಲಾ ಹುಡುಕಿದರೂ ಮಗು ಸಿಗಲಿಲ್ಲ. ಕೊನೆಗೆ ಅನುಮಾನಗೊಂಡು ಮನೆಯ ಹಿಂದಿನ ಬಾವಿಯ ಬಳಿ ಹೋಗಿ ಇಣುಕಿ ನೋಡಿದಾಗ, ಬಾವಿಯೊಳಗಿನಿಂದ ಮಗುವಿನ ಅಳುವಿನ ಶಬ್ದ ಕೇಳಿಸಿದೆ. ಪುಟ್ಟ ಭುವಿ ಬಾವಿಯಲ್ಲಿದ್ದ ನೀರಿನ ಪಂಪ್‌ನ ಪೈಪ್‌ ಅನ್ನು ಗಟ್ಟಿಯಾಗಿ ಹಿಡಿದುಕೊಂಡು, ನೀರಿನ ಮೇಲೆ ಒದ್ದಾಡುತ್ತಾ ಅಳುತ್ತಿದ್ದಳು.ಅಜ್ಜಿಯ ಕೂಗಾಟ ಕೇಳಿ ತಕ್ಷಣವೇ ಅಕ್ಕಪಕ್ಕದವರು ಓಡಿಬಂದಿದ್ದಾರೆ. ಈ ಆತಂಕದ ಸುದ್ದಿ ಹತ್ತಿರದಲ್ಲೇ ವಾಸವಿದ್ದ ಪಯ್ಯು ಚೌಟಿ ಅವರಿಗೂ ತಲುಪಿದೆ. ಆಗಷ್ಟೇ ಬೆಂಗಳೂರಿಗೆ ಹೊರಡಲು ಸಿದ್ಧರಾಗಿದ್ದ ಅವರು, ವಿಷಯ ತಿಳಿದ ಕೂಡಲೇ ಒಂದು […]

Continue Reading

ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ನೋಟೀಸ್

ಪೊಲೀಸ್ ಇಲಾಖೆಯ ಶಿಫಾರಸ್ಸಿನ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು, ಅಹಮದ್, ಫಾರೂಕ್, ಇಬ್ರಾಹಿಂ ಅಲಿಯಾಸ್ ಇಬ್ಬು ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್, ಫಾಜಿಲ್ ಅಹಮದ್‌, ಜಾವೀದ್ […]

Continue Reading

ಶಿವಮೊಗ್ಗ | ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ರಾಮನವಮಿ ಉತ್ಸವ

ಮಾ.19 (ಗುರುವಾರ) – ಯುಗಾದಿ ಹಬ್ಬದ ಅಂಗವಾಗಿ ಪಂಚಾಂಗ ಶ್ರವಣ, ಮಹಾವಿಷ್ಣು ಅಲಂಕಾರ ಮಾ.20 (ಶುಕ್ರವಾರ) – ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ವಿಶ್ವಾಮಿತ್ರ ಯಜ್ಞ ಸಂರಕ್ಷಣೆ ಅಲಂಕಾರ ಮಾ.21 (ಶನಿವಾರ) – ಉಪನ್ಯಾಸ ಕಾರ್ಯಕ್ರಮ (ಸೀತಾ ಪರಿಹಾರ), ಅಹಲ್ಯಾ ಶಾಪ ವಿಮೋಚನೆ ಅಲಂಕಾರ ಮಾ.22 (ಭಾನುವಾರ) – ಶಾಸ್ತ್ರೀಯ ಸಂಗೀತ, ಸೀತಾ ಕಲ್ಯಾಣ ಅಲಂಕಾರ ಮಾ.23 (ಸೋಮವಾರ) – ಗಮಕ ವಾಚನ ಹಾಗೂ ಉಪನ್ಯಾಸ, ಗುಹಾ ಅತಿಥ್ಯ ಅಲಂಕಾರ ಮಾ.24 (ಮಂಗಳವಾರ) – ಸಂಗೀತ ಕಾರ್ಯಕ್ರಮ, […]

Continue Reading

ದಾವಣಗೆರೆ ದಕ್ಷಿಣ ಶ್ರೀನಿವಾಸ ದಾಸ ಕರಿಯಪ್ಪ, ಬಾಗಲಕೋಟೆ ವೀರಣ್ಣ ಚರಂತಿಮಠ ; ಉಪಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ

ಅಚ್ಚರಿ ತೀರ್ಮಾನ ಎಂಬಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಟಿ ಸಮುದಾಯದ ಶ್ರೀನಿವಾಸ ದಾಸ ಕರಿಯಪ್ಪ ಟಿಕೆಟ್ ನೀಡುವ ಮೂಲಕ ಬಿಜೆಪಿ ಹೈ ಕಮಾಂಡ್ ಅಚ್ಚರಿ ನಿರ್ಧಾರ ಕೈಗೊಂಡಿದೆ. ಕುರುಬ ಸಮುದಾಯದ ಜಿ.ಬಿ.ವಿನಯ್ ಕುಮಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಲವಾದ ಮಾತುಗಳು ಕೇಳಿ ಬರುತ್ತಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿಸಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು. ಆದರೆ, ಅಚ್ಚರಿ ಎಂಬಂತೆ ಬಿಜೆಪಿ ಹೈ ಕಮಾಂಡ್ ಸ್ಥಳೀಯ […]

Continue Reading

ಹೆಣ್ಣಿನ ಬಗ್ಗೆ ಅಸಹ್ಯ ಸಾಹಿತ್ಯ ರಚನೆ : ಕೊನೆಗೂ ಕ್ಷಮೆಯಾಚಿಸಿದ ಪ್ರೇಮ್

ಪ್ರೇಮ್ ಸಿನಿಮಾ ಬಂದರೆ ಹಾಡುಗಳನ್ನು ಭರ್ಜರಿಯಾಗಿ ಮಾಡಿರುತ್ತಾನೆ ಅಂದುಕೊಂಡಿರುತ್ತಾರೆ. ಅದಕ್ಕೆಲ್ಲ ನಾನು ಯಾವಾಗಲೂ ಚಿರಋಣಿ ಆಗಿರುತ್ತೇನೆ” ಎಂದಿದ್ದಾರೆ. https://www.instagram.com/reel/DWBrUvck4c2/?igsh=bzJzY2txa3B5NTFt ಈ ಹಾಡು (ಸರ್ಸೆ ಸೆರಗು) ಬರೆದಾಗ ನಾನು ನನ್ನ ದೃಷ್ಟಿಕೋನದಿಂದ ಬರೆದಿದ್ದೆ. ಒಂದು ಬಾಟಲ್, ಉಪ್ಪಿನ ಕಾಯಿ ಕಂಟೆಂಟ್ ಇಡ್ಕೊಂಡು ಬರೆದಿದ್ದೆ. ಒಂದು ಪದ ತೆಗೆದು ಮೇಲೇ ಹಾಕಬಹುದಿತ್ತು. ಆದರೆ ಕುತೂಹಲ ಇರಲಿ ಅಂತ ಕೊನೆಯಲ್ಲಿ ಬರೆದೆ. ಯಾಕೆ ಅಂದ್ರೆ ಒಬ್ಬ ಸಾಹಿತಿ ಹೀಗೂ ಬರೆಯಬಹುದು ಅಂತ ಬರೆದೆ. ಹಾಗಂತ ನಾನು ಅ*ಶ್ಲೀಲವಾಗಿ ಆಗಲಿ, ಯಾರಿಗೂ ನೋವು […]

Continue Reading