ಊರು ತುಂಬೆಲ್ಲಾ ಸಾಲ ಪಡೆದಿದ್ದಾನೆಂದು ಪೋಸ್ಟರ್ ಅಂಟಿಸಿ ವ್ಯಕ್ತಿಗೆ ಅವಮಾನ

ಸಿದ್ದರಾಜಯ್ಯ ಅವರು ಕುರಂಕೋಟೆ ಗ್ರಾಮದ ನಿವಾಸಿಯಾಗಿದ್ದಾರೆ. ಸಿದ್ದರಾಜು ಸಾಲಕ್ಕೆ ಜಾಮೀನು ನೀಡಿರುವ ವ್ಯಕ್ತಿಯ ಫೋಟೋ ಸಹ ಪೋಸ್ಟರ್‌ನಲ್ಲಿ ಹಾಕಲಾಗಿದೆ. ಕೊಡಚಾದ್ರಿ ಚಿಟ್ಸ್ ಕಂಪನಿ ಕುರಂಕೋಟೆ ಗ್ರಾಮದ ಶುದ್ದ ಕುಡಿಯುವ ನೀರಿನ ಘಟಕ, ಬಸ್ ನಿಲ್ದಾಣ, ಹಾಗೂ ಊರಿನ ಪ್ರಮುಖ ರಸ್ತೆಯಲ್ಲಿ ಪೊಸ್ಟರ್ ಅಂಟಿಸಲಾಗಿದೆ. ಹಣಕಾಸಿನ ಸಂಸ್ಥೆ ಹೆಸರಿನಲ್ಲಿ ಈ ರೀತಿಯ ಪೋಸ್ಟರ್ ಅಂಟಿಸಲಾಗಿದೆ. ಇನ್ನು ಪೋಸ್ಟರ್ ಕಾಣುತ್ತಿದ್ದಂತೆ ಸಿದ್ದರಾಜಯ್ಯ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಹಣಕಾಸಿನ ಸಂಸ್ಥೆ ಘಟಕಕ್ಕೆ ಬಂದಿದ್ದಾರೆ. ನಾವು ಈ ರೀತಿಯಲ್ಲಿ ಪೋಸ್ಟರ್ ಅಂಟಿಸಲ್ಲ. […]

Continue Reading

ಶಿವಮೊಗ್ಗ | ಮಲವಗೋಪ್ಪದ ಜನತಾ ಶಾಲೆಗೆ ಉತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಮಕ್ಕಳ ಕಲಿಕೆ, ಸಹಪಠ್ಯ ಚಟುವಟಿಕೆಯಲ್ಲಿ ಮಕ್ಕಳ ಭಾಗವಹಿಸುವಿಕೆ ಉತ್ತಮವಾಗಿದೆ. ಮಕ್ಕಳ ದಸರಾ, ಗಣರಾಜ್ಯ ದಿನ, ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಶಾಲೆಯ ಮಕ್ಕಳು ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಮಲವಗೊಪ್ಪದ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ತುಳಸಿ ಅಡಿಗ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ರಕ್ತದಾನ ಜೀವಮಾನದ ಮಹಾದಾನ : ಡಾ. ತಿಮ್ಮಪ್ಪ ಟಿ.ಡಿ. ಅಭಿಪ್ರಾಯ

ರಕ್ತದಾನದ ಕುರಿತು ಇಂದು ಸಾಕಷ್ಟು ಜಾಗೃತಿ ಮೂಡಿದ್ದು ರಕ್ತದಾನಿಗಳ ಸಂಖ್ಯೆ ಹೆಚ್ಚು ಆಗುತ್ತಿರುವುದು ಸಂತೋಷದಾಯಕವಾದ ಸಂಗತಿ ಆಗಿದೆ ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಪ್ರಾಚಾರ್ಯರಾದ ಡಾ. ಟಿ. ಅವಿನಾಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದು ಜಗತ್ತಿನಲ್ಲಿ ರಕ್ತ ಚೆಲ್ಲುವ ರಕ್ತ ಬಯಸುವ ವಿದ್ಯಮಾನಗಳು ನಡೆಯುತ್ತಿವೆ. ಎಲ್ಲೆಲ್ಲೂ ಹಿಂಸೆ ತಾಂಡವವಾಡುತ್ತಿದೆ. ಇಂಥ ಸಂದರ್ಭದಲ್ಲಿ ನಮ್ಮ ವಿದ್ಯಾರ್ಥಿಗಳು ರಕ್ತದಾನ ಮಾಡುತ್ತಿರುವುದು ಸಮಾಜಕ್ಕೆ ಶುಭ ಸಂದೇಶವನ್ನು ನೀಡುವ ಸಂಗತಿಯಾಗಿದೆ. ರಕ್ತದಾನಿಗಳು ಆತ್ಮವಿಶ್ವಾಸದಿಂದ ರಕ್ತದಾನ ಮಾಡುವುದರ ಮೂಲಕ ಸಮಾಜ ಕಾರ್ಯದಲ್ಲಿ ತಮ್ಮನ್ನು […]

Continue Reading

ಹೋಳಿ ಹಬ್ಬ ನೆಪದಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿದರೆ ಕಠಿಣ ಕ್ರಮ

ಹಬ್ಬದ ಸಂಭ್ರಮಾಚರಣೆಯ ನೆಪದಲ್ಲಿ ಬಣ್ಣ ಎರಚುವಾಗ ಅಥವಾ ಗುಂಪುಗಳಲ್ಲಿ ಸೇರುವಾಗ ಮಹಿಳೆಯರ ಅನುಮತಿ ಇಲ್ಲದೆ ಅವರೊಂದಿಗೆ ಅನುಚಿತವಾಗಿ ವರ್ತಿಸುವುದು, ಕಿಡಿಗೇಡಿತನ ತೋರುವುದು ಅಥವಾ ಮಹಿಳೆಯರಿಗೆ ಮುಜುಗರ ಉಂಟುಮಾಡುವುದು ಕಾನೂನುಬಾಹಿರ ಅಪರಾಧವಾಗಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ವ್ಯಕ್ತಿಗಳ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಲಿದೆ ಪೊಲೀಸ್ ಇಲಾಖೆಯ ಸೂಚನೆಗಳುಮಹಿಳೆಯರ ತೇಜೋವಧೆ ಮಾಡುವ ಅಥವಾ ಅವರ ಘನತೆಗೆ ಚ್ಯುತಿ ತರುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್​ 79 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು. ಈ ಕಾಯ್ದೆಯನ್ವಯ […]

Continue Reading

ಸೊರಬ | ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸಚಿವ ಮಧು ಬಂಗಾರಪ್ಪ ಅವರು ವಿಮಾನದಲ್ಲಿ ಪ್ರತಿ ವಿದ್ಯಾರ್ಥಿಗೂ ಕಿಟಕಿ ಪಕ್ಕ ಸೀಟು ದೊರಕುವಂತೆ ಮಾಡಿ, ಪ್ರತಿಯೊಬ್ಬರನ್ನು ಮಾತನಾಡಿಸುತ್ತಾ, ಅವರ ಅಂಕಗಳನ್ನು ಕೇಳುತ್ತಾ ಗುಡ್ ಎನ್ನುತ್ತಾ ಹುರಿದುಂಬಿಸಿದರು. 30ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ವಿಮಾನಯಾನ: ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಭಾನುವಾರ ಸೊರಬ ತಾಲೂಕಿನ 40 ಜನ ಪೌರ ಕಾರ್ಮಿಕರಿಗೂ ವಿಮಾನಯಾನ ಭಾಗ್ಯ ಕಲ್ಪಿಸಿದ್ದರು. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಿದ್ದರು. ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ […]

Continue Reading

ಖಮೇನಿ ಹತ್ಯೆ ಖಂಡನೀಯ, ಕೇಂದ್ರ ಸರ್ಕಾರದ ಮೌನದ ವಿರುದ್ಧ ಸೋನಿಯಾ ಗಾಂಧಿ ಟೀಕೆ

ಆರಂಭದಲ್ಲಿ ಅಮೆರಿಕಾ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ದಾಳಿ ಬಗ್ಗೆ ಪ್ರಧಾನಿ ಮೋದಿ ಮೌನವಹಿಸುತ್ತಾರೆ. ಬಳಿಕ ಇದು ಕಳವಳಕಾರಿ, ಶಾಂತಿ, ಸಂಧಾನದ ಮಾತನಾಡುತ್ತಾರೆ. ಇದೆಲ್ಲಾ ನೋಡಿದರೆ ನಮ್ಮ ದೇಶದ ವಿದೇಶಾಂಗ ನೀತಿ ಬಗ್ಗೆಯೇ ಅನುಮಾನವಾಗುತ್ತದೆ’ ಎಂದಿದ್ದಾರೆ.

Continue Reading

ಹಾರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್ ; ತೈಲ ಬೆಲೆಯಲ್ಲಿ ಭಾರಿ ಪ್ರಮಾಣದ ಏರಿಕೆ

ಅಷ್ಟೇ ಅಲ್ಲದೆ, ಈ ಜಲಮಾರ್ಗದ ಮೂಲಕ ಹಾದುಹೋಗಲು ಪ್ರಯತ್ನಿಸುವ ಯಾವುದೇ ಹಡಗನ್ನು ಸುಟ್ಟು ಭಸ್ಮ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಇರಾನ್ ಮತ್ತು ಒಮಾನ್ ದೇಶಗಳನ್ನು ಬೇರ್ಪಡಿಸುವ ಈ ಜಲಸಂಧಿಯ ಸುತ್ತ ಕನಿಷ್ಠ ಐದು ಟ್ಯಾಂಕರ್‌ಗಳು ಹಾನಿಗೊಳಗಾಗಿವೆ, ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 150 ಹಡಗುಗಳು ಮಧ್ಯದಾರಿಯಲ್ಲೇ ಸಿಲುಕಿಕೊಂಡಿವೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಶನಿವಾರ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿಯ ಮುನ್ಸೂಚನೆಯಿಂದಾಗಿ ಉಂಟಾದ ಉದ್ವಿಗ್ನತೆಯ ಮಧ್ಯೆ, ಶುಕ್ರವಾರ […]

Continue Reading

ಕಾಗೋಡು ತಿಮ್ಮಪ್ಪ ಅವರಿಂದ ಜನ್ಮದಿನದ ಆಶೀರ್ವಾದ ಪಡೆದ ಮಧು ಬಂಗಾರಪ್ಪ

ಈಗಾಗಲೆ ನ್ಯಾಯಾಲಯ ಉತ್ತಮವಾಗಿ ಸ್ಪಂದಿಸುತ್ತಿದೆ, ಕೇಂದ್ರ ಸರ್ಕಾರ ಸಕಾರಾತ್ಮಕವಾಗಿದೆ. ಶರಾವತಿ, ಚಕ್ರ, ವರಾಹಿ ಎಲ್ಲರಿಗೂ ನ್ಯಾಯ ಸಿಗುತ್ತದೆ. ಈಗ ಭಾಷಣ ಹೊಡೆಯುವವರು ಹಿಂದೆ ಅಧಿಕಾರದಲ್ಲಿದ್ದಾಗ ಪರಿಭಾವಿತ ಅರಣ್ಯ ಕಾಯ್ದೆ ಜಾರಿಗೆ ತಂದಿದ್ದರು. ಡೀಮ್ಡ್ ಫಾರೆಸ್ಟ್ ಕಾಯ್ದೆ ತಿದ್ದುಪಡಿಗೆ ಸಹ ಅವಕಾಶ ಸಿಕ್ಕಿದೆ. ನ್ಯಾಯಾಲಯ ಆದೇಶ ಹೊರತುಪಡಿಸಿ ಇತರೆ ಸಂದರ್ಭದಲ್ಲಿ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಇದೇ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅಭಿನಂದಿಸಿದರು. ಈ ಸಂದರ್ಭದಲ್ಲಿ ದೀಪಾ ಕಾಗೋಡು, ಅನಿತಾ […]

Continue Reading

ಭದ್ರಾವತಿ ಬಿಇಒ ನಾಗೇಂದ್ರಪ್ಪ ಲೋಕಾಯುಕ್ತ ಬಲೆಗೆ

ಈ ಕುರಿತು ಮಾ. 02,ರಂದು ಲೋಕಾಯುಕ್ತರ ಕಛೇರಿಗೆ ತೆರಳಿ ದೂರು ದಾಖಲಿಸಿದ್ದರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ-2018)ರ ಕಲಂ 7(ಎ) ಅಡಿಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು. ಮಾ,3 ರ ಸಂಜೆ ಸುಮಾರು 7 ಗಂಟೆ ವೇಳೆಗೆ ಭದ್ರಾವತಿ ಬಿಇಒ ಕಚೇರಿಯ ಕೊಠಡಿಯಲ್ಲಿ, ಲಿಂಗರಾಜು ಅವರಿಂದ 1 ಲಕ್ಷ ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣವನ್ನು ಜಪ್ತಿಪಡಿಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿತರಾದ ನಾಗೇಂದ್ರಪ್ಪ ಎ.ಕೆ. ಮತ್ತು ಮಧ್ಯವರ್ತಿ ಮಂಜುನಾಥರನ್ನು […]

Continue Reading

ನ್ಯೂಯಾರ್ಕ್ : ಗುಂಡಿನ ದಾಳಿಯಿಂದ ಭಾರತದ ವಿದ್ಯಾರ್ಥಿನಿ ಸವಿತಾ ಶಾನ್ ಸಾವು

ವಿದ್ಯಾರ್ಥಿನಿಯ ಸಾವನ್ನು ಟೆಕ್ಸಾಸ್ ವಿವಿಯ ಅಧ್ಯಕ್ಷ ಜಿಮ್ ಡೇವಿಸ್ ದೃಢಪಡಿಸಿದ್ದು, ಇಮೇಲ್ ಮೂಲಕ ತಮ್ಮ ಕ್ಯಾಂಪಸ್ ಸಮುದಾಯಕ್ಕೆ ಮಾಹಿತಿ ನೀಡಿದ್ದಾರೆ. “ಆಕೆ ಜಗತ್ತಿನಲ್ಲಿ ಬದಲಾವಣೆ ತರಲು ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿ” ಎಂದು ಅವರು ಉಲ್ಲೇಖಿಸಿದ್ದಾರೆ. “ಪೋಷಕರಿಗೆ ಪ್ರೀತಿಯ ಮಗುವಾಗಿದ್ದಳು ಮತ್ತು ಹಲವರಿಗೆ ನಂಬಿಕಸ್ತ ಸ್ನೇಹಿತೆಯಾಗಿದ್ದಳು” ಎಂದು ಸ್ಮರಿಸಿದ್ದಾರೆ. “ಆಘಾತಕಾರಿ ಘಟನೆಯಿಂದ ಅತೀವ ಬೇಸರ ಉಂಟಾಗಿದೆ. ನಾವು ಆಕೆಯನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ. ಗುಂಡಿನ ದಾಳಿಯನ್ನು ವಿವರಿಸಿದ ಆಸ್ಟಿನ್ ಪೊಲೀಸ್ ಮುಖ್ಯಸ್ಥೆ ಲಿಸಾ ಡೇವಿಸ್, “ಭಾನುವಾರ ಬೆಳಗ್ಗೆ […]

Continue Reading