ಶಿವಮೊಗ್ಗ | ಮಹಿಳೆಯರಿಗೆ ಗೌರವ, ಅವಕಾಶ, ಧ್ವನಿ, ಸುರಕ್ಷತೆ ಕೊಡಬೇಕಿದೆ : ಅರುಂಧತಿ ಚಂದ್ರಶೇಖರ್ ಹೇಳಿಕೆ

ವೈದ್ಯರಾಗಿದ್ದಂತಹ ನನ್ನ ಪಾಲಕರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂಬುದು ಹೆಮ್ಮೆಯ ಸಂಗತಿ ಎಂದರು. ಭಾರತೀಯ ಆಡಳಿತ ಸೇವೆಯಲ್ಲಿ ಮಹಿಳೆಯರ ಸಮಾನತೆಗೆ ಯಶಸ್ವಿಯಾಗಿ ಹೋರಾಡಿದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಥಮ ಮಹಿಳೆ ಸಿ.ಬಿ.ಮುತ್ತಮ್ಮ ಅವರ ಕೊಡುಗೆ ಸ್ಮರಿಸಿದರು. ಐಎಂಎ ಶಿವಮೊಗ್ಗ ವರ್ಷವಿಡೀ ನಡೆಸುತ್ತಿರುವ ವಿವಿಧ ಕಾರ್ಯಕ್ರಮಗಳಾದ ಮಹಿಳೆಯರ ಆರೋಗ್ಯದ ಕುರಿತು ವಿವಿಧ ಮಾಧ್ಯಮಗಳ ಮೂಲಕ ಮಾಹಿತಿ, ಅಗತ್ಯವಿರುವಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು, ಶಾಲಾ ಹೆಣ್ಣು ಮಕ್ಕಳಿಗೆ ನೈರ್ಮಲ್ಯ ಕುರಿತು ನಡೆಸುತ್ತಿರುವ ಕಾರ್ಯಕ್ರಮ ಶ್ಲಾಘನೀಯ ಎಂದರು.ಐಎಂಎ ಸದಸ್ಯರಾದ ಡಾ|| ರಕ್ಷಾ […]

Continue Reading

ಶಿವಮೊಗ್ಗ | ಆತ್ಮಹತ್ಯೆಗೆ ಶರಣಾದ ಯುವಕ

ಹಳೆಯ ಪ್ರೇಮ ಪ್ರಕರಣದ ನೋವು ಹಾಗೂ ಮದ್ಯಪಾನದ ಅಮಲಿನಲ್ಲಿ ಈ ಆತ್ಮಹತ್ಯೆ ಸಂಭವಿಸಿರಬಹುದು ಎಂದು ಮೃತನ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಂಡ್ಯ | ನೇಣಿಗೆ ಶರಣಾದ ದಂಪತಿ, ಪ್ರಾಣಾಪಾಯದಿಂದ ಪಾರಾದ ಮಗು

ದಂಪತಿ ತಮ್ಮ ಎರಡು ವರ್ಷದ ಹೆಣ್ಣು ಮಗುವಿನ ಜೀವಕ್ಕೂ ಹಾನಿ ಮಾಡಲು ಯತ್ನಿಸಿದರೆಂಬ ಶಂಕೆ ವ್ಯಕ್ತವಾಗಿದ್ದು, ಮಗು ಅದೃಷ್ಟವಶಾತ್ ಬದುಕುಳಿದಿದೆ ಎಂದು ಮಾಹಿತಿ ಲಭ್ಯವಾಗಿದೆ. ದಿವ್ಯಶ್ರೀ ಅವರು ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದವರಾಗಿದ್ದು, ಸುಮಾರು ಮೂರು ವರ್ಷಗಳ ಹಿಂದೆ ಹೊಸಕೋಟೆಯ ದರ್ಶನ್ ಅವರೊಂದಿಗೆ ವಿವಾಹವಾಗಿದ್ದರು. ದಂಪತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ದರ್ಶನ್ ಅವರ ತಂದೆ ನೀಡಿದ ದೂರಿನ ಮೇರೆಗೆ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Continue Reading

ಭದ್ರಾವತಿ | ಜಾತಿ ನಿಂದಿಸಿ, ಹಲ್ಲೆಗೈದ ಆರೋಪಿಗಳಿಗೆ ಎರಡು ವರ್ಷ ಶಿಕ್ಷೆ

ಸುಣ್ಣದಹಳ್ಳಿ ನಿವಾಸಿ ವಿ. ಆರ್‍ಮುಗಂ ಅವರು ಸದರಿ ಗ್ರಾಮದಲ್ಲಿರುವ ತಮಗೆ ಸೇರಿದ ಸರ್ವೆ ನಂ. ೫೮/೮ ರಲ್ಲಿ ಒಂದು ಎಕರೆ ಜಮೀನು ಇದ್ದು, ಇದರಲ್ಲಿ ೧೦ ಗುಂಟೆ ಜಮೀನನ್ನು ಸೈಟ್ ಮಾಡಿ ಅದರಲ್ಲಿ ಪ್ರೇಮ ಕೋಂ ಮಂಜುನಾಥ ಇವರಿಗೆ ೪೦*೯೦ ಉದ್ದಳತೆಯ ನಿವೇಶನವನ್ನು ಕೊಟ್ಟಿದ್ದು, ಸದರಿಯವರು ನಿವೇಶನದಲ್ಲಿ ಆರ್,ಸಿ.ಸಿ ಮನೆಯನ್ನು ಕಟ್ಟಿಕೊಂಡು ವಾಸವಿರುತ್ತಾರೆ. ಸದರಿ ಮನೆಯ ಪಕ್ಕದಲ್ಲಿ ೧/೨ ಗುಂಟೆ ಖಾಲಿಜಾಗವಿದ್ದು, ಆ ಖಾಲಿ ಜಾಗವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಸರ್ಕಾರಿ ಸರ್ವೆಗೆ ಹಾಕಿದ್ದು, ಅದರಂತೆ ಜೂನ್ ೩, […]

Continue Reading

ಭದ್ರಾವತಿ | ಚಾನೆಲ್ ಗೆ ಬಿದ್ದ ಬೈಕ್ ಸವಾರ ; ERSS-112 ತಂಡದಿಂದ ತಕ್ಷಣ ರಕ್ಷಣೆ

ಸಾರ್ವಜನಿಕರ ಸಹಕಾರದೊಂದಿಗೆ ಚಾನೆಲ್‌ಗೆ ಬಿದ್ದಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ತುರ್ತಾಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿದರು. ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ. ಐಪಿಎಸ್ ಅವರು ERSS-112 ಅಧಿಕಾರಿಗಳು ತೋರಿದ ಸಮಯೋಚಿತ ಕಾರ್ಯ ಮತ್ತು ಮಾನವೀಯ ಸೇವೆಯನ್ನು ಪ್ರಶಂಸಿಸಿ ಅಭಿನಂದಿಸಿದ್ದಾರೆ

Continue Reading

ತೀರ್ಥಹಳ್ಳಿ | ಮೇಗರವಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಶೇಷ ಶಿಬಿರ ಯಶಸ್ವಿ

ಶಿಬಿರದ ಅವಧಿಯಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರು ಗ್ರಾಮ ಸ್ವಚ್ಛತಾ ಕಾರ್ಯ, ಮೇಗರವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣ ಸ್ವಚ್ಛತೆ, ಗ್ರಾಮ ಪಂಚಾಯತಿ ಆವರಣ ಸ್ವಚ್ಛತೆ, ಗ್ರಾಮ ಪಂಚಾಯಿತಿ ಗ್ರಂಥಾಲಯ ಗೋಡೆಗೆ ಬಣ್ಣ ಹಚ್ಚುವುದು,ಗ್ರಾಮ ಪಂಚಾಯಿತಿ ಆವರಣ ಸ್ವಚ್ಛತೆ, ಶಾಲಾ ಆವರಣ ಸ್ವಚ್ಛತೆ, ದೇವಾಲಯದ ಆವರಣ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರು. ಜೊತೆಗೆ ಗ್ರಾಮ ಸಮೀಕ್ಷೆ, ಆರೋಗ್ಯ ಅರಿವು, ಸ್ವ ಉದ್ಯೋಗ ಪ್ರಾತ್ಯಕ್ಷಿಕೆ ಹಾಗೂ ಕೃಷಿ ಸಂಬಂಧಿತ ಉಪನ್ಯಾಸಗಳನ್ನು ಆಯೋಜಿಸಲಾಯಿತು.ಸಹ ಶಿಬಿರಾಧಿಕಾರಿಗಳಾಗಿ ಮಾರುತಿ, ಡಾ.ವಿಮಲಾ, .ನಿರಂಜನ್, ಮತ್ತು . ಅರುಣ್ […]

Continue Reading

ಶಿವಮೊಗ್ಗ | ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಈ ಸಂದರ್ಬದಲ್ಲಿ ಶಿವಮೊಗ್ಗ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಚರಣ್ ಜೆ. ಶೆಟ್ಟಿ ಮಾತನಾಡಿ ಬಿಜೆಪಿ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ. ಪ್ರಧಾನಿ ಮೋದಿಯವರು ಡೊನಾಲ್ಡ್ ಟ್ರಂಪ್ ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗದಿಂದ ತತ್ತರಿಸಿರುವ ಸಾಮಾನ್ಯ ಜನರು, ದಿನಗೂಲಿ ನೌಕರರು, ರೈತರು ಹಾಗೂ ಮಹಿಳೆಯರಿಗೆ ಈ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ ಈ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರಕ್ಕೆ ಸೂಚಿಸಬೇಕು, ಇಲ್ಲವೇ ಜನವಿರೋಧಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. […]

Continue Reading

ಸರ್ಕಾರಿ ಜಮೀನು ಕಾಂಗ್ರೆಸ್ ಕಚೇರಿಗಳಿಗೆ? : ಡಿ.ಎಸ್. ಅರುಣ್ ಗಂಭೀರ ಆರೋಪ

ಜನರ ಆಸ್ತಿಯನ್ನು ಪಕ್ಷದ ಹಿತಾಸಕ್ತಿಗಾಗಿ ಬಳಸುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಹಣಕಾಸು ಇಲಾಖೆಯ ಅಭಿಪ್ರಾಯ ಪಡೆಯದೇ ಮುಂದುವರಿದಿರುವುದು ಗಂಭೀರ ಆಡಳಿತಾತ್ಮಕ ನಿರ್ಲಕ್ಷ್ಯವಾಗಿದೆ ಎಂದು ಡಿ.ಎಸ್. ಅರುಣ್ ಅವರು ಹೇಳಿದರು. ಸರ್ಕಾರದಲ್ಲೇ ಇರುವ ವ್ಯಕ್ತಿಗಳು ಕಾಂಗ್ರೆಸ್ ಟ್ರಸ್ಟ್‌ನಲ್ಲೂ ಇದ್ದು, ಅದೇ ಸರ್ಕಾರದ ಸಚಿವ ಸಂಪುಟದಲ್ಲಿ ಜಮೀನು ಮಂಜೂರಾತಿಗೆ ಅನುಮೋದನೆ ಪಡೆಯುತ್ತಿರುವುದು ಸಚಿವ ಸಂಪುಟದ ಅಧಿಕಾರ ದುರುಪಯೋಗವಾಗುತ್ತಿದೆ ಎಂದು ಅವರು ಆಕ್ಷೇಪಿಸಿದರು. ಇದಲ್ಲದೆ, ಇಂತಹ ಮಂಜೂರಾತಿಗೆ ಮುನ್ನ ಯಾವುದೇ ಸಾರ್ವಜನಿಕ ಟೆಂಡರ್ ಅಥವಾ ಮುಕ್ತ […]

Continue Reading

ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು, ನಿಯಂತ್ರಣ ಹಾಗೂ ಮರು ವೇಳಾಪಟ್ಟಿ

ನಿಯಂತ್ರಣ ಮಾ. 10 ರಂದು ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ (16206) ಮಾರ್ಗಮಧ್ಯೆ 25 ನಿಮಿಷ ನಿಯಂತ್ರಣವಾಗಲಿದೆ. ಮಾ. 16 ರಂದು ಮೈಸೂರು–ಅರಸೀಕೆರೆ ಪ್ಯಾಸೆಂಜರ್ (56266) 70 ನಿಮಿಷ ಹಾಗೂ ಮೈಸೂರು–ಯಶವಂತಪುರ ಎಕ್ಸ್‌ಪ್ರೆಸ್ (16208) 30 ನಿಮಿಷ ಮಾರ್ಗಮಧ್ಯೆ ತಡೆಹಿಡಿಯಲಾಗುವುದು. ಸಮಯ ಮರುನಿಗದಿ: ಮಾರ್ಚ್ 10ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56267) ಮತ್ತು ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (16225) ರೈಲುಗಳು ನಿಗದಿತ ಸಮಯಕ್ಕಿಂತ 90 ನಿಮಿಷ ತಡವಾಗಿ ಹೊರಡಲಿವೆ.ಅದೇ ರೀತಿ, ಮಾರ್ಚ್ 16ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56265) ಮತ್ತು ಮೈಸೂರು–ಎಸ್‌ಎಂವಿಟಿ ಬೆಂಗಳೂರು […]

Continue Reading