ಬಾಗಲಕೋಟೆ | ಬುದ್ಧಿಮಾಂದ್ಯ ಮಕ್ಕಳ ಮೇಲೆ ಕ್ರೌರ್ಯ ; ಕಣ್ಣಿಗೆ ಖಾರದಪುಡಿ ಎರಚಿ, ಬೆಲ್ಟ್, ಪೈಪ್‌ನಿಂದ ಹೊಡೆದು ಶಿಕ್ಷಕರಿಂದ ಹಿಂಸೆ

ಬಾಗಲಕೋಟೆಯ ನವನಗರ ಠಾಣೆಯಲ್ಲಿ ಶಾಲೆ ವಿರುದ್ಧ ದೂರು ದಾಖಲಾಗಿದೆ.ಬುದ್ಧಿಮಾಂದ್ಯ ಬಾಲಕರ ಮೇಲೆ ಶಿಕ್ಷಕ ದಂಪತಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಪಿ ಸಿದ್ದಾರ್ಥ ಗೋಯಲ್‌ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಅಕ್ಷಯ್ ಹಾಗೂ ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .

Continue Reading

ಶಿವಮೊಗ್ಗ | ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು : ಶಾಸಕ ಎಸ್ ಎನ್ ಚನ್ನಬಸಪ್ಪ

ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಉದ್ಘಾಟಕ ನುಡಿಗಳನ್ನಾಡಿ, ಸ್ವತಂತ್ರ್ಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಅನೇಕ ಬದಲಾವಣೆಗಳನ್ನು ತಂದಿದ್ದು, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸೌಲಭ್ಯಗಳನ್ನು ನೀಡಿ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿದೆ. ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗುತ್ತಿದ್ದು ಇದು ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರುತ್ತಿರುವ ಕಾರಣ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ […]

Continue Reading

ಚಾಮರಾಜನಗರ | ಹುಲಿಗಳ ಓಡಾಟ ಕಂಡು ಜನ ಕಂಗಾಲು

ಈ ಹಿಂದೆ ಇದೇ ನಂಜದೇವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬಿಆರ್​​ಟಿ ಚಾಮರಾಜನಗರ ಬಫರ್ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಗಳ ಸೆರೆಗಾಗಿ ತೀವ್ರ ಕೂಂಬಿಂಗ್ ನಡೆಸಿದ್ದರಾದರೂ ಸೆರೆಯಾಗಿರಲಿಲ್ಲ. ಈಗ ಮತ್ತೆ ಹುಲಿಗಳು ಕಾಣಿಸಿಕೊಂಡಿರುವುದು ರೈತರನ್ನು ಆತಂಕಕ್ಕೀಡುಮಾಡಿದೆ. ಮಾಹಿತಿ ತಿಳಿದು ಅರಣ್ಯಾಧಿಕಾರಿಗಳು‌‌‌‌‌ ಸ್ಥಳಕ್ಕೆ‌‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಗೂರಿನಲ್ಲಿ ಹಸು ತಿನ್ನುವ ದೃಶ್ಯ ಸೆರೆ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯ ವ್ಯಾಪ್ತಿಯ ಮೂಡುಗೂರು ಗ್ರಾಮದಲ್ಲಿ ಹಾಡಹಗಲೇ ಹುಲಿಯೊಂದು ದಾಳಿ ನಡೆಸಿ, ಎರಡು […]

Continue Reading

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ ; 8 ಆನೆಗಳು ಸಾವು

ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಘಟನೆ ಹಿನ್ನೆಲೆ, ಜಮುನಾಮುಖ್-ಕಂಪುರ ವಿಭಾಗದ ಮೂಲಕ ಹಾದುಹೋಗಬೇಕಿದ್ದ ರೈಲುಗಳನ್ನು ಯುಪಿ ಮಾರ್ಗದ ಮೂಲಕ ತಿರುಗಿಸಲಾಗಿದ್ದು, ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.

Continue Reading

ಮೊಟ್ಟೆಯಲ್ಲಿ ಕ್ಯಾನ್ಸರ್​ಕಾರಕ ಅಂಶವಿಲ್ಲ, ಸೇವನೆಗೆ ಸುರಕ್ಷಿತ : ಎಫ್​ಎಸ್​ಎಸ್​ಎಐ ಸ್ಪಷ್ಟನೆ

ಇಎಂಆರ್​ಎಲ್​ ಕನಿಷ್ಠ ಪ್ರಮಾಣದ ಅವಶೇಷಗಳ ಪತ್ತೆ ಆಹಾರ ಸುರಕ್ಷತೆಯ ಉಲ್ಲಂಘನೆಯಾಗುವುದಿಲ್ಲ. ಇದು ಯಾವುದೇ ಆರೋಗ್ಯ ಅಪಾಯವನ್ನು ಸೂಚಿಸುವುದಿಲ್ಲ ಎಂದಿದ್ದಾರೆ. ಭಾರತದಲ್ಲಿ ಅಂತಾರಾಷ್ಟ್ರೀಯ ಮಾನದಂಡದೊಂದಿಗೆ ನಿಯಂತ್ರಣಗಳನ್ನು ರೂಪಿಸಲಾಗಿದೆ. ಯುರೋಪಿಯನ್ ದೇಶ ಮತ್ತು ಅಮೆರಿಕ ಈ ನ್ಯೂಟ್ರೋಫ್ಯೂರಾನ್​ ಪ್ರಾಣಿಗಳ ಉತ್ಪಾದಕ ವಸ್ತುಗಳ ಬಳಕೆಯನ್ನು ನಿರ್ಬಂಧಿಸಿದೆದೇಶಾದ್ಯಂತ ಸಂಖ್ಯಾತ್ಮಕ ಮಾನದಂಡಗಳಲ್ಲಿನ ವ್ಯತ್ಯಾಸಗಳು ವಿಶ್ಲೇಷಣಾತ್ಮಕ ಮತ್ತು ನಿಯಂತ್ರಕ ವಿಧಾನಗಳಲ್ಲಿನ ವ್ಯತ್ಯಾಸಗಳನ್ನು ಪ್ರತಿಬಿಂಬಿಸುತ್ತವೆ. ಗ್ರಾಹಕ ಸುರಕ್ಷತಾ ಮಾನದಂಡಗಳಲ್ಲಿನ ವ್ಯತ್ಯಾಸಗಳಲ್ಲಿ ಅಲ್ಲ ಎಂದು ಅದು ಸ್ಪಷ್ಟಪಡಿಸಿದೆ.

Continue Reading

ಟಿ-20 ವಿಶ್ವಕಪ್ ಭಾರತ ತಂಡ ಪ್ರಕಟ ; ಶುಭ್ ಮನ್ ಗಿಲ್ ಗೆ ಕೊಕ್‌, ಇಶಾನ್ ಕಿಶಾನ್ ಗೆ ಸ್ಥಾನ

ಇಲ್ಲಿನ ಪ್ರಧಾನ ಕಚೇರಿಯಲ್ಲಿ ಬಿಸಿಸಿಐ ಹಿರಿಯ ಆಯ್ಕೆದಾರರ ಸಮಿತಿ ಸಭೆ ನಂತರ ತಂಡವನ್ನು ಅಂತಿಮಗೊಳಿಸಲಾಯಿತು. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸುದ್ದಿಗೋಷ್ಠಿಯಲ್ಲಿ ತಂಡವನ್ನು ಪ್ರಕಟಿಸಿದರು. ನಂತರ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಇವರಿಬ್ಬರು ಮುಂಬರುವ ವಿಶ್ವಕಪ್ ಮತ್ತು ನ್ಯೂಜಿಲೆಂಡ್ ವಿರುದ್ಧದ T20 ಸರಣಿಗಾಗಿ ಭಾರತದ ಉದ್ದೇಶಗಳನ್ನು ವಿವರಿಸಿದರು. ಟಿ-20 ಮಾದರಿಯಲ್ಲಿ ಕಳಪೆ ಪ್ರದರ್ಶನಕ್ಕೆ ಗಿಲ್ ಬೆಲೆ ತೆತ್ತಿದ್ದಾರೆ. ಹಿಂದೊಮ್ಮೆ T20 ಗಳಲ್ಲಿ ಭಾರತದ ಉಪನಾಯಕರಾಗಿದ್ದ ಅವರು […]

Continue Reading

ಚಿಕ್ಕಮಗಳೂರು | ಕುದುರೆಮುಖಕ್ಕೆ ತೆರಳುತ್ತಿದ್ದ ಬಸ್ ಮಗುಚಿ ಬಿದ್ದು ಹಲವರಿಗೆ ಗಾಯ

ಬಸ್ ನಿಯಂತ್ರಣ ತಪ್ಪಿ ಪಲ್ಟಿ ಆದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.

Continue Reading

ಚಿಕ್ಕಮಗಳೂರು | ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗೆ ಪ್ರಾಂಶುಪಾಲರಿಂದ ಥಳಿತ

ವಿಷಯ ತಿಳಿಯುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಮತ್ತು ಮಾಲಾಧಾರಿಗಳು ಶಾಲೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಹಿಜಾಬ್ ವಿಚಾರದಲ್ಲಿ ಕಾನೂನು ಹೇಗಿದೆಯೋ ಇಲ್ಲಿಯೂ ಹಾಗೆಯೇ ವರ್ತಿಸಿ. ಇಲ್ಲದಿದ್ದರೆ ನಿಮ್ಮ ಸಂಸ್ಥೆ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸರ್ಕಾರದ ಆದೇಶ ಇಲ್ಲದಿದ್ದರೂ ನಿಮ್ಮ ಹಬ್ಬಕ್ಕೆ 15 ದಿನ ರಜೆ ನೀಡುವ ನೀವು ಸಂಪ್ರದಾಯದಂತೆ ಶಬರಿಮಲೆಗೆ ಹೋಗುವ ಬಾಲಕನಿಗೆ ರಜೆ ನೀಡಲು ಏಕೆ ಹಿಂದೇಟು ಹಾಕುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳ ಧಾರ್ಮಿಕ ಭಾವನೆಗೆ […]

Continue Reading