ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ನಾಳೆ ಪ್ರತಿಭಟನೆ

ಒಂದೇ ರೀತಿಯ ಸಮಸ್ಯೆಗಳು ಪ್ರತಿ ಸೆಮಿಸ್ಟರ್‌ನಲ್ಲೂ ಮರುಕಳಿಸುತ್ತಿರುವುದರಿಂದ ವಿದ್ಯಾರ್ಥಿಗಳಲ್ಲಿ ವಿಶ್ವವಿದ್ಯಾಲಯದ ಫಲಿತಾಂಶ ವ್ಯವಸ್ಥೆಯ ಕುರಿತು ಅಸಮಾಧಾನ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಫಲಿತಾಂಶಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವುದು, ಫಲಿತಾಂಶಗಳನ್ನು ನಿಗದಿತ ಸಮಯಕ್ಕೆ ಪ್ರಕಟಿಸುವುದು, ಅಂಕಗಳ ಹಾಗೂ ಫಲಿತಾಂಶದಲ್ಲಿನ ದೋಷಗಳನ್ನು ತ್ವರಿತವಾಗಿ ಸರಿಪಡಿಸುವುದು, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಸರಿಯಾದ ಫಲಿತಾಂಶ ನೀಡುವುದು ಹಾಗೂ ಮರುಮೌಲ್ಯಮಾಪನದ ಫಲಿತಾಂಶಗಳನ್ನು ನಿಗದಿತ ಅವಧಿಯಲ್ಲಿ ಪ್ರಕಟಿಸುವ ಮೂಲಕ ಫಲಿತಾಂಶ ಪ್ರಕಟಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯನ್ನು ಖಾತರಿಪಡಿಸುವಂತೆ ಎನ್‌ಎಸ್‌ಯುಐ ಶಿವಮೊಗ್ಗ ವಿಶ್ವವಿದ್ಯಾಲಯ […]

Continue Reading

ಮೊದಲ ಬಾರಿಗೆ ಟಿ. ನರಸೀಪುರದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಹಾಗೂ ಶೋಭಯಾತ್ರೆಗೆ ಸಿದ್ಧತೆ ! ಇನ್ಸ್​ಪೆಕ್ಟರ್ ಧನಂಜಯ್​ ಸವಾಲು ಸ್ವೀಕರಿಸಿದ ಹಿಂದೂ ಜಾಗರಣ ವೇದಿಕೆ

ಟಿ. ನರಸೀಪುರ ಲಿಂಕ್ ರಸ್ತೆಯಲ್ಲಿ ಗಣೇಶ ಮೆರವಣಿಗೆ ವಿವಾದಕ್ಕೆ ಸಂಬಂಧಪಟ್ಟಂತೆ, ಹಿಂದೂ ಜಾಗರಣ ವೇದಿಕೆ, ಇನ್ಸ್‌ಪೆಕ್ಟ‌ರ್ ಧನಂಜಯ್ ಸವಾಲು ಸ್ವೀಕರಿಸಿದೆ. ಮೊದಲ ಬಾರಿಗೆ ನರಸೀಪುರದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಮಾಡಿದೆ. ಪೊಲೀಸ್ ಠಾಣೆಯ 200 ಮೀಟ‌ರ್ ಅಂತರದಲ್ಲೇ ಹಿಂದೂ ಜಾಗರಣ ವೇದಿಕೆ ವತಿಯಿಂದ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. ಈ ವೇಳೆ ವಿವಿಧ ಧಾರ್ಮಿಕ ಗುರುಗಳು, ಬಿಜೆಪಿ ಮುಖಂಡರು ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು. ಇನ್ನು, ಸೆಪ್ಟೆಂಬರ್ 18ಕ್ಕೆ ಲಿಂಕ್ ರಸ್ತೆಯಲ್ಲಿ ಗಣೇಶ ಮೂರ್ತಿ ಭವ್ಯ ಮೆರವಣಿಗೆಗೆ ಸಿದ್ಧತೆ ನಡೆಸಲಾಗಿದೆ.ಇನ್ನು, ಈ […]

Continue Reading

ಹೊನ್ನಾಳಿ | ದುರ್ಗಿಗುಡಿ ಓಂ ಗಣಪತಿಗೆ 1.5 ಕೆ.ಜಿ. ಬೆಳ್ಳಿ ಕಿರೀಟ ಸಮರ್ಪಣೆ : ಬರಗಾಲದ ಹಿನ್ನೆಲೆ ಅದ್ದೂರಿತನಕ್ಕೆ ಬ್ರೇಕ್

ಸಾರ್ವಜನಿಕರಿಂದ ಶ್ಲಾಘನೆ : ಕ್ಷಣಿಕ ಆಡಂಬರದ ಕಾರ್ಯಕ್ರಮಗಳಿಗಿಂತ ದೇವರಿಗೆ ಶಾಶ್ವತ ಆಸ್ತಿಯಾಗುವ ಹಾಗೂ ಭಕ್ತಿಯ ಸಂಕೇತವಾಗುವ ಕೊಡುಗೆ ನೀಡಿದ ದುರ್ಗಿಗುಡಿ ಯುವಕರ ಈ ಜನಪರ ನಿರ್ಧಾರಕ್ಕೆ ಪಟ್ಟಣದ ಹಿರಿಯರು, ವರ್ತಕರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. “ಮೂರನೇ ದಿನ ಗಣೇಶಮೂರ್ತಿ ವಿಸರ್ಜನೆ” ಮೂರು ದಿನಗಳ ಕಾಲ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿಗಳು ನೆರವೇರಲಿದ್ದು, ಭಕ್ತಾದಿಗಳಿಗೆ ಪ್ರಸಾದ ವಿನಿಯೋಗದ ವ್ಯವಸ್ಥೆ ಮಾಡಲಾಗಿದೆ. ಸರಳವಾಗಿ ವಿಜೃಂಭಣೆ ಇಲ್ಲದೆ ವಿಸರ್ಜನೆ ಮಾಡಲಾಗುವುದು ಎಂದು ಸಮಿತಿಯ ಪದಾಧಿಕಾರಿಗಳು […]

Continue Reading

ಶಿವಮೊಗ್ಗ | ಟಿಪ್ಪು ನಗರದಲ್ಲಿ 14 ವರ್ಷ ದಿಂದ ಸಾಕ್ಷಿ ಆಗಿರುವ ಸೌಹಾರ್ದ ಗಣಪತಿ

ಗಣಪತಿ ಹಬ್ಬವು ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಸಮಾಜದಲ್ಲಿ ಒಗ್ಗಟ್ಟು, ಸ್ನೇಹ ಮತ್ತು ಸಹೋದರತ್ವವನ್ನು ಬೆಳೆಸುವ ವೇದಿಕೆಯಾಗಬೇಕು ಎಂಬ ಸಂದೇಶವನ್ನು ಈ ಸಂದರ್ಭದಲ್ಲಿ ಸಾರಾಲಾಗುತ್ತಿದೆ. ಸೌಹಾರ್ದ ಗಣಪತಿ ಸ್ಥಾಪನೆಯ ಕಾರ್ಯಕ್ರಮದಲ್ಲಿ ಸ್ಥಳೀಯರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯದ ವಾತಾವರಣದಲ್ಲಿ ಹಬ್ಬವನ್ನು ಆಚರಿಸುವ ಸಂಕಲ್ಪವನ್ನು ವ್ಯಕ್ತಪಡಿಸಲಾಗುತ್ತಿದೆ . ಈ ಗಣಪತಿಯನ್ನು ನೀವು ನೋಡಬೇಕಾದಲ್ಲಿ ಟಿಪ್ಪು ನಗರ ಕೆ.ರಾಜ ಅವರು 14 ವರ್ಷದಿಂದ ಟಿಪ್ಪು ನಗರ 6ನೇ […]

Continue Reading

SIR ಪ್ರಕ್ರಿಯೆಯ ‘ಸಾಮಾಜಿಕ ಲೆಕ್ಕಪರಿಶೋಧನೆ’ಗೆ ಪ್ರಕಾಶ್ ರಾಜ್ ಅಭಿಯಾನ

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ಎನ್ನಲಾದ ಲೋಪಗಳಿಗೆ ಸಂಬಂಧಿಸಿದಂತೆ ದಾಖಲಿತ ಪುರಾವೆಗಳನ್ನು ಆಯೋಗಕ್ಕೆ ಸಲ್ಲಿಸಲಿದ್ದಾರೆ.

Continue Reading

ಬೆಂಗಳೂರಿನ ಸರ್ಕಾರಿ ಶಾಲೆ ಸಮಯ ಬದಲಾವಣೆ ಸಾಧ್ಯತೆ

ಬದಲಾವಣೆಗೆ ಕಾರಣ ಬೆಳಗ್ಗೆ ಮತ್ತು ಸಂಜೆ ಪೀಕ್ ಅವರ್‌ಗಳಲ್ಲಿ ಶಾಲಾ ವಾಹನಗಳು ರಸ್ತೆಗಿಳಿಯುವುದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಕಚೇರಿಗಳಿಗೆ ಹೋಗುವವರ ಸಮಯ ಮತ್ತು ಶಾಲಾ ಸಮಯ ಪರಸ್ಪರ ಮುಖಾಮುಖಿಯಾಗದಂತೆ ತಡೆಯುವುದು ಇದರ ಮುಖ್ಯ ಉದ್ದೇಶವಾಗಿದೆ. ಹಾಗಾಗಿ, ಶಾಲಾ ಸಮಯವನ್ನು 30 ನಿಮಿಷಗಳಿಂದ 1 ಗಂಟೆಯವರೆಗೆ ಬದಲಾಯಿಸುವ (ಮುಂದೂಡುವ ಅಥವಾ ಮುಂಚಿತವಾಗಿ ಆರಂಭಿಸುವ) ಸಾಧ್ಯತೆಗಳಿವೆ.ಇದಕ್ಕೂ ಮುನ್ನ ಸದ್ಯ ಬೆಂಗಳೂರಿನ ಸರ್ಕಾರಿ ಶಾಲೆಗಳು ಬೆಳಗ್ಗೆ 10:30 ರಿಂದ ಸಂಜೆ 4:30 ರವರೆಗೆ ನಡೆಯುತ್ತಿವೆ. ಟ್ರಾಫಿಕ್‌ನಿಂದಾಗಿ ತಡವಾಗುತ್ತಿರುವುದರಿಂದ ಈ ಸಮಯವನ್ನು […]

Continue Reading

“ಶಿವಮೊಗ್ಗ ಜಿಲ್ಲೆಯ ಮನೆ-ಮನಗಳಲ್ಲಿ ಗೌರಿ-ಗಣೇಶ ಹಬ್ಬವು ಮತ್ತಷ್ಟು ಸಂಭ್ರಮ, ಶಾಂತಿ, ಸಮೃದ್ಧಿಗಳನ್ನು ತರಲಿ” : ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ ಸೇರಿದಂತೆ ಮಲೆನಾಡಿನಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ, ಭಕ್ತಿ-ಭಾವದಿಂದ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಂದು ಕುಟುಂಬಕ್ಕೂ ನನ್ನ ಭಕ್ತಿಪೂರ್ವಕ ಶುಭಕಾಮನೆಗಳು. ನಮ್ಮ ಗ್ರಾಮ, ಊರು, ಜಿಲ್ಲೆ ಮತ್ತು ನಮ್ಮ ನಾಡಿನ ಅಭಿವೃದ್ಧಿ, ನಮ್ಮ ರೈತರು ಮತ್ತು ದುಡಿಯುವ ಜನರ ಬದುಕಿನಲ್ಲಿ ಇನ್ನಷ್ಟು ಬೆಳಕು, ಯುವಜನರಿಗೆ ಹೊಸ ಅವಕಾಶಗಳು, ಮಹಿಳೆಯರಿಗೆ ಹೆಚ್ಚಿನ ಶಕ್ತಿ ಹಾಗೂ ನಮ್ಮ ಶಿವಮೊಗ್ಗದ ಸಮಗ್ರ ಪ್ರಗತಿಗೆ ಈ ಹಬ್ಬ ಹೊಸ ಶುಭಾರಂಭದ ಸಂಕೇತವಾಗಲಿ ಎಂದು ಸಂಸದ ರಾಘವೇಂದ್ರ ಹಾರೈಸಿದ್ದಾರೆ. ಹಾಗೆಯೇ, ಸಾರ್ವಜನಿಕವಾಗಿ ಗೌರಿ-ಗಣೇಶ ಹಬ್ಬವನ್ನು […]

Continue Reading