ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ನೋಟೀಸ್

ಪೊಲೀಸ್ ಇಲಾಖೆಯ ಶಿಫಾರಸ್ಸಿನ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು, ಅಹಮದ್, ಫಾರೂಕ್, ಇಬ್ರಾಹಿಂ ಅಲಿಯಾಸ್ ಇಬ್ಬು ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್, ಫಾಜಿಲ್ ಅಹಮದ್‌, ಜಾವೀದ್ […]

Continue Reading

ಸಂಚಾರಿ ನಿಯಮ ಉಲ್ಲಂಘನೆ ; ಸರ್ಕಲ್ ನಲ್ಲಿ ಸಂಚಾರ ಜಾಗೃತಿ ಬೋರ್ಡ್ ಹಿಡಿದು ನಿಲ್ಲುವಂತೆ ನ್ಯಾಯಾಲಯ ಆದೇಶ

ಈತ ಈ ಹಿಂದೆ ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡಿದ್ದ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ರಂಜಿತ್ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದರಿಂದ, ನ್ಯಾಯಾಧೀಶರು ಆತನಿಗೆ ವಿಭಿನ್ನವಾದ ಶಿಕ್ಷೆಯನ್ನು ವಿಧಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ, ರಂಜಿತ್ ಮಾರ್ಚ್ 17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಡೂರು ಪಟ್ಟಣದ ಪ್ರಮುಖ ವೃತ್ತವಾದ ಮರವಂಜಿ ಸರ್ಕಲ್‌ನಲ್ಲಿ ಸಂಚಾರ ಜಾಗೃತಿಯ ಬೋರ್ಡ್ ಹಿಡಿದು ನಿಲ್ಲಬೇಕಾಯಿತು. […]

Continue Reading

ಚಿಕ್ಕಮಗಳೂರು | ಹೆಣ್ಣುಮಕ್ಕಳಿಂದ ತಂದೆಯ ಅಂತ್ಯಸಂಸ್ಕಾರ

ತಂಗಿ ಹಾಗೂ ಭಾವನ ಜೊತೆ ಸೇರಿ ತಂದೆಯ ಅಂತಿಮ ಧಾರ್ಮಿಕ ವಿಧಿ, ವಿಧಾನಗಳನ್ನು ಪೂರೈಸಿದ್ದಾರೆ.ಮೃತದೇಹದ ಸುತ್ತ ಹೆಗಲ ಮೇಲೆ ಕುಡಿಕೆ ಹೊತ್ತು ಸಂಪ್ರದಾಯದಂತೆ ವಿಧಿ ವಿಧಾನಗಳನ್ನು ನೆರವೇರಿಸಿದ ಹೆಣ್ಣುಮಗಳು ಎಲ್ಲರ ಗಮನ ಸೆಳೆದರು. ಬೀರೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಕುಟುಂಬದ ಹಿರಿಯರು ಹೆಣ್ಣುಮಕ್ಕಳ ನಿರ್ಧಾರಕ್ಕೆ ಬೆಂಬಲ ನೀಡಿದ್ದು, ಸಮಾಜದವರು ಮತ್ತು ಸ್ನೇಹಿತರು ಯುವತಿಯರ ಧೈರ್ಯಶಾಲಿ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Continue Reading

ಚಿಕ್ಕಮಗಳೂರು | ಪೊಲೀಸರ ಎದುರೇ ಕತ್ತು ಕುಯ್ದುಕೊಂಡ ಯುವಕ ; ಆಸ್ಪತ್ರೆಯಲ್ಲಿ ಹೊಲಿಗೆ ಹಾಕುತ್ತಿದ್ದಂತೆ ಪರಾರಿ

ಇದೆ ವಿಚಾರ ಸಂಬಂಧ ಅತ್ತೆ ಬಳಿ ಹಣ ಕೇಳಿದ್ದಾನೆ ಎನ್ನಲಾಗಿದೆ. ಈ ವೇಳೆ ಅತ್ತೆ ಹಣ ನೀಡಲು ನಿರಾಕರಿಸಿದರು ಎಂಬ ಕಾರಣಕ್ಕೆ ಪೊಲೀಸರ ಬಳಿ ನ್ಯಾಯ ಕೇಳಲು ಬಂದ ಯುವಕ ಬ್ಲೆಡ್ ನಿಂದ ಕತ್ತು ಕುಯ್ದುಕೊಂಡಿದ್ದಾನೆ. ಈ ವೇಳೆ ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ದಾಖಲೀಸಲಾಗಿದೆ.ಹಾಗೂ ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ನರ್ಸ್ ಗಳು ಹೊಲಿಗೆ ಹಾಕುತ್ತಿದ್ದಂತೆ ಯುವಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಬಳಿ ಈ ಒಂದು ಘಟನೆ ನಡೆದಿದೆ

Continue Reading

15 ವರ್ಷಗಳಿಂದ ಪರಿಹಾರ ನೀಡದೆ ವಿಳಂಬ ; KSRTC Bus ಜಪ್ತಿ ಮಾಡಿದ ನ್ಯಾಯಾಲಯ

ಈ ಬಗ್ಗೆ ಇಲಾಖೆಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪರಿಹಾರ ನೀಡದೇ ಕಾಲಹರಣ ಮಾಡುತ್ತಿದ್ದುದರಿಂದ ಬಸ್ ಜಪ್ತಿ ಮಾಡುವಂತೆ ಚನ್ನರಾಯಪಟ್ಟಣ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅದರಂತೆ ಬೇಲಿಫ್‌ಗಳ ಸಹಾಯದಿಂದ ಚಿಕ್ಕಮಗಳೂರು ಡಿಪೊಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಅನ್ನು ಜಪ್ತಿ ಮಾಡಲಾಗಿದೆ.

Continue Reading

ಚಿಕ್ಕಮಗಳೂರು | ಅಪಘಾತದಲ್ಲಿ ಮೃತನಾದ ಪತಿಯ ಅಂಗಾಂಗ ದಾನ ಮಾಡಿದ ಪತ್ನಿ ; ಸಾವಿನಲ್ಲೂ ಸಾರ್ಥಕತೆ ಮೆರೆದ ಪತ್ನಿ

ಕುಟುಂಬದಿಂದ ಮಹತ್ವದ ನಿರ್ಧಾರ: ಮಂಜುನಾಥ್ ಸಾವಿನ ಬಳಿಕ ಅವರ ಕುಟುಂಬದ ಸದಸ್ಯರು ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ನಿನ್ನೆ ದಿವಸ (ಗುರುವಾರ) ಮಧ್ಯಾಹ್ನ ಮುಂಜುನಾಥ್ ಅವರ ಹೃದಯ, ಕಿಡ್ನಿ, ಲಿವರ್ ಸೇರಿ ಅಂಗಾಂಗ ದಾನಕ್ಕೆ ಅವರ ಪತ್ನಿ ಮುಂದಾದರು. ಈ ಮೊದಲು ಮಣಿಪಾಲ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿ ಫೀಸ್ ಫ್ರೀ ಮಾಡಿಕೊಡ್ತೀವಿ ಎಂದಿದ್ದರಂತೆ. ಆದರೆ, ಪತಿ ತೀರಿಕೊಂಡ ದುಃಖದಲ್ಲಿದ್ದ ಪತ್ನಿಗೆ ಅದಕ್ಕೆ ಮನಸ್ಸು ಒಪ್ಪಿರಲಿಲ್ಲ. ಆಗ ಹಣ ನೀಡಿ ಪತಿಯ ಶವವನ್ನು ಪಡೆದುಕೊಂಡು ಮನೆಗೆ ಬಂದಿದ್ದರು.ಆದರೆ, ಆ […]

Continue Reading

ಚಿಕ್ಕಮಗಳೂರು | ಪತ್ನಿಯ ಶೀಲ ಶಂಕಿಸಿ ಪತಿಯಿಂದ ಪತ್ನಿ ಹತ್ಯೆ

ಹೊಸದುರ್ಗ ಮೂಲದ ರಂಗನಾಥ್ (36) ಬಿರೂರಿನಲ್ಲಿ ಪತ್ನಿ ಜೊತೆ ವಾಸವಿದ್ದ, ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಪತ್ನಿ ಮಮತಾ (33)ಮೃತ ದುರ್ದೈವಿಯಾಗಿದ್ದಾರೆ. ಸ್ಥಳಕ್ಕೆ ಬೀರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ; ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ತೀವ್ರ ಪ್ರಯತ್ನಗಳು ಮುಂದುವರಿದಿವೆ. ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಚಾರ್ಮಾಡಿ ಘಾಟಿಯ […]

Continue Reading

ತರೀಕೆರೆ | ಜಾತ್ರೆ ಮೆರವಣಿಗೆ ವೇಳೆ ಸಿಪಿಐ ಮೇಲೆ ಹರಿದ ಎತ್ತಿನಗಾಡಿ ; ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ಈ ವೇಳೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸ್ತಿದ್ದ ಅಜ್ಜಂಪುರ ವೃತ್ತ ನಿರೀಕ್ಷಕ (ಸಿಪಿಐ) ವೀರೇಂದ್ರ ಅವರ ಮೇಲೆ ಎತ್ತಿನಗಾಡಿ ಹರಿದಿದೆ. ಗಮನ ಬೇರೆಡೆಗೆ ಇದ್ದ ಹೊತ್ತಿನಲ್ಲಿ ಹಿಂದಿನಿಂದ ವೇಗವಾಗಿ ಬಂದ ಎತ್ತಿನಗಾಡಿಯನ್ನು ಅಧಿಕಾರಿ ವೀರೇಂದ್ರರವರು ಗಮನಿಸಿದರಾದರೂ ಸಹ ಅಷ್ಟರಲ್ಲಿ ಎತ್ತಿನ ಗಾಡಿ ಅವರ ಮೇಲೆ ಹರಿದಿದೆ. ವೀರೇದ್ರರವರು ಪಕ್ಕಕ್ಕೆ ಸರಿಯಲು ಯತ್ನಿಸುವಷ್ಟರಲ್ಲೇ ಗಾಡಿಯ ಚಕ್ರ ಅವರ ಮೇಲೆ ಹರಿದಿದೆ. ಟೈರ್ ಗಾಡಿಯಾಗಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣವೇ ಗಾಯಗೊಂಡ ಇನ್ಸ್‌ಪೆಕ್ಟರ್ ವೀರೇಂದ್ರ ಅವರನ್ನು […]

Continue Reading