ದಾವಣಗೆರೆ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿದ್ದೇಶ್ವರ್​ ಅಸಮಾಧಾನ

ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಬದಲಾವಣೆ ಮಾಡಿದ್ದಾರೆ, ಮಾಡಲಿ. ಆದರೆ ಬದಲಾವಣೆ ಮಾಡುವಾಗ ನಮ್ಮನ್ನು ಒಂದು ಮಾತು ಕೇಳಬೇಕಿತ್ತು. ನಾವು ಮಾಡಿದ್ದ ಪ್ರಧಾನ ಕಾರ್ಯದರ್ಶಿಗಳನ್ನು ಏಕೆ ತೆಗೆದರು ಎನ್ನುವುದು ಗೊತ್ತಾಗಬೇಕಿದೆ. ಮೂರು ತಿಂಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ತೆಗೆದರೆ ಅದರ ಅರ್ಥ ಏನು?. ಹೀಗೆ ಮಾಡಿದರೆ ನಾವು ಕಾರ್ಯಕರ್ತರಿಗೆ ಮತ್ತು ಜನರಿಗೆ ಏನು ಉತ್ತರ ಕೊಡಬೇಕು?. ರಾಜ್ಯಾಧ್ಯಕ್ಷರೇ ಇದಕ್ಕೆಲ್ಲ ಉತ್ತರ ಕೊಡಬೇಕು ಎಂದು ಹೇಳಿದರು. ನಾನು ರಾಜ್ಯಾಧ್ಯಕ್ಷರಿಗೆ ಕರೆ ಮಾಡಿ ಮಾತನಾಡಿದರೆ ಇವತ್ತು ಅಮವಾಸ್ಯೆ ಇದೆ ಮಾತಾಡೋದು ಬೇಡಾ ಅಂತ […]

Continue Reading

ದಾವಣಗೆರೆ | ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು

ಸುಶೀಲ್ ಕುಮಾರ್ ಅವರ ತಾಯಿ ದೇವಮ್ಮ ಜಿಲ್ಲಾಸ್ಪತ್ರೆಯಲ್ಲಿ ಡಿ ಗ್ರೂಪ್​ನಲ್ಲಿ ಕೆಲಸ ಮಾಡುತ್ತಿದ್ದು, ಮುಂದೆ ನನಗೆ ಆಸರೆ ಯಾರು ಎಂದು ಗೋಳಾಡುತ್ತಿರುವುದು ಎಲ್ಲರನ್ನೂ ಭಾವುಕರನ್ನಾಗಿಸಿತು.

Continue Reading

ದಾವಣಗೆರೆ | ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ವೈರಲ್ ; 10 ಜನರು ವಶಕ್ಕೆ

ಘಟನೆಗೆ ಸಂಬಂಧಿಸಿದಂತೆ ಬಸವಾಪಟ್ಟಣ ಪೊಲೀಸರು ಇಸ್ತ್ರಿ ನಾಗರಾಜ್, ನಾಗರಾಜ್, ಅರ್ಜುನ್, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ್, ಮಧು ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಮಹಿಳೆ ನೀಡಿದ ದೂರಿನ ಮೇರೆಗೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 88/2026 ದಾಖಲಿಸಲಾಗಿದೆ. ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿ ಎಚ್.ಟಿ. ಶೇಖ‌ರ್ ಬಸವಾಪಟ್ಟಣ ಠಾಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆರೋಪಿತರು ಹಾಗೂ ಸಂತ್ರಸ್ತೆಯನ್ನು ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. […]

Continue Reading

ದಾವಣಗೆರೆ | ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ

ಸ್ವಾಮೀಜಿಗಳು ಗೌರವಯುತವಾಗಿ ಮಠವನ್ನು ಬಿಡಬೇಕು ಎಂದು ಮನವಿ ಮಾಡಲಾಗಿತ್ತು. ಈಗಾಗಲೇ ಮಾರ್ಚ್ 24ಕ್ಕೆ ನಿರ್ಣಯ ತೆಗೆದುಕೊಳ್ಳಲು ಅಂತಿಮ ಗಡುವು ನೀಡಿದ್ದೆವು. ಆದರೆ, ಈ ಬಗ್ಗೆ ಅವರು ಯಾವುದೇ ಮಾಹಿತಿ ನೀಡಿದ ಕಾರಣ ಅವರನ್ನು ಪೀಠದಿಂದ ತೆಗೆದುಹಾಕುವ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದರು.

Continue Reading

ದಾವಣಗೆರೆ | ಈ ಚುನಾವಣೆ ಫಲಿತಾಂಶ ಕಾಂಗ್ರೆಸ್ ಅಧಪತನದ ಮೊದಲನೇ ಹೆಜ್ಜೆ ; ಬೊಮ್ಮಾಯಿ ವಾಗ್ದಾಳಿ

ಆಸ್ಪತ್ರೆ ಔಷಧಿ ಖರೀದಿಯಲ್ಲೂ ಭ್ರಷ್ಟಾಚಾರ ನಡೀತಿದೆ. ವರ್ಗಾವಣೆ ದಂಧೆ ಅನ್ನುವುದು ದೊಡ್ಡ ಇಂಡಸ್ಟ್ರಿಯಾಗಿ ಪರಿಣಮಿಸಿದೆ ಎಂದು ವಾಗ್ದಾಳಿ ನಡೆಸಿದರು. ಜನರ ಮೇಲೆ ಭ್ರಷ್ಟಾಚಾರದ ಹೊರೆ ಹಾಕುತ್ತಿದ್ದಾರೆ. ಇಲೆಕ್ಟ್ರಾನಿಕ್ ಮೀಟರ್ ನಲ್ಲಿ ಆರು ಸಾವಿರ ಕೋಟಿ ಭ್ರಷ್ಟಾಚಾರವಾಗಿದೆ, ಭ್ರಷ್ಟಾಚಾರದಿಂದ ಸರ್ಕಾರ ತುಂಬಿ ತುಳಿಕಿದೆ ಎಂದು ಹರಿಹಾಯ್ದರು. ಮುಖ್ಯಮಂತ್ರಿ ಕಚೇರಿಯಲ್ಲಿ ಭ್ರಷ್ಟಾಚಾರ ಆಗುತ್ತಿದೆ ಎಂದರು. ಸಿದ್ದರಾಮಯ್ಯ ದುರಾಡಳಿತ ಮನೆ ಮನೆಗೆ ತಲುಪಿದೆ. ಜನ ಚುನಾವಣೆಯಲ್ಲಿ ಉತ್ತರಿಸಲು ಕಾಯುತ್ತಿದ್ದಾರೆ. ದುಷ್ಟ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸುವವರೆಗೆ ವಿಶ್ರಮಿಸುವುದಿಲ್ಲ ಎಂದ ಬಸವರಾಜ್ […]

Continue Reading

ದಾವಣಗೆರೆ | ಕಾರು ಅಡ್ಡಗಟ್ಟಿ ದರೋಡೆ

ಇದರಿಂದ ಭಯಗೊಂಡ ಅವರು ಕಾರನ್ನು ಜೋರಾಗಿ ಓಡಿಸಿಕೊಂಡು ಹೋಗಿದ್ದಾರೆ. ಅವರನ್ನು ಹಿಂಬಾಲಿಸಿಕೊಂಡು ಬಂದ ಗ್ಯಾಂಗ್ ಒಂದು ಹೊನ್ನಾಳಿ ತಾಲೂಕಿನ ಅರಕೆರೆ ಕಾಲೋನಿ ಬಳಿ ಅಡ್ಡಗಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಿಂದ ಇಳಿದು ಬಂದ ನಾಲ್ವರು ಮಾಲತೇಶ್ ಮೇಲೆ ಹಲ್ಲೆ ಮಾಡಿ, ಬಳಿಕ ಕಾರಿನಲ್ಲಿದ್ದ 38 ಲಕ್ಷ ರೂ. ಸಮೇತ ಪರಾರಿ ಆಗಿದ್ದಾರೆ.ಪ್ರಾಣಭಯದಿಂದ ಮಾಲತೇಶ್ ತಕ್ಷಣ ಮಲೆಬೆನ್ನೂರಿಗೆ ಮರಳಿ, ಉಳಿದ ಹಣವನ್ನು ಸಂಬಂಧಿಕರ ಮನೆಯಲ್ಲಿಟ್ಟು ನೇರವಾಗಿ ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದಾವಣಗೆರೆ ಎಸ್ಪಿ ಹೆಚ್.ಟಿ. ಶೇಖರ್ ಸ್ಥಳಕ್ಕೆ […]

Continue Reading

ದಾವಣಗೆರೆ ಉಪಚುನಾವಣೆ ; ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಕಣಕ್ಕೆ

ತಾತನ ಕಾರನ್ನು ಸ್ವಚ್ಛಗೊಳಿಸಿ ಪೂಜೆ ಮಾಡಿ, ಅದೇ ಕಾರಿನಲ್ಲಿ ಶುಭಗಳಿಗೆಯಲ್ಲಿ ತಾಯಿ ಪ್ರಭಾ ಮಲ್ಲಿಕಾರ್ಜುನ ಅವರ ಜೊತೆಗೆ ಅಜ್ಜಿ ಮನೆಗೆ ತೆರಳಿ ಅಜ್ಜಿಯ ಆಶೀರ್ವಾದ ಪಡೆದರು. ಬಳಿಕ ಅಲ್ಲಿಂದ ನೇರವಾಗಿ ಮಹಾನಗರ ಪಾಲಿಕೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ಎಸಿ ಹಾಗೂ ಚುನಾವಣಾಧಿಕಾರಿ ಸಂತೋಷ್ ಅವರಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಕಟ್ಟಿರುವುದೇ ಅಪ್ಪಾಜಿ, ಕಾಂಗ್ರೆಸ್​​ನಿಂದಲೇ ನಾಮಪತ್ರ ಸಲ್ಲಿಕೆ: ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಸಮರ್ಥ್ ಶಾಮನೂರು ಅವರು ಅಪ್ಪಟ ದೇಸಿ ಸಾಂಪ್ರದಾಯಿಕ ಉಡುಗೆಯಲ್ಲಿ ನಾಮಪತ್ರ ಸಲ್ಲಿಸಲು ಹೊರಡುವ […]

Continue Reading

ದಾವಣಗೆರೆ ದಕ್ಷಿಣ ಶ್ರೀನಿವಾಸ ದಾಸ ಕರಿಯಪ್ಪ, ಬಾಗಲಕೋಟೆ ವೀರಣ್ಣ ಚರಂತಿಮಠ ; ಉಪಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ

ಅಚ್ಚರಿ ತೀರ್ಮಾನ ಎಂಬಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಟಿ ಸಮುದಾಯದ ಶ್ರೀನಿವಾಸ ದಾಸ ಕರಿಯಪ್ಪ ಟಿಕೆಟ್ ನೀಡುವ ಮೂಲಕ ಬಿಜೆಪಿ ಹೈ ಕಮಾಂಡ್ ಅಚ್ಚರಿ ನಿರ್ಧಾರ ಕೈಗೊಂಡಿದೆ. ಕುರುಬ ಸಮುದಾಯದ ಜಿ.ಬಿ.ವಿನಯ್ ಕುಮಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಲವಾದ ಮಾತುಗಳು ಕೇಳಿ ಬರುತ್ತಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿಸಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು. ಆದರೆ, ಅಚ್ಚರಿ ಎಂಬಂತೆ ಬಿಜೆಪಿ ಹೈ ಕಮಾಂಡ್ ಸ್ಥಳೀಯ […]

Continue Reading

ದಾವಣಗೆರೆ | ಜಮೀರ್‌ ಬಳಿ ಕ್ಷಮೆ ಕೇಳಿ : ಎಸ್. ಎಸ್.ಮಲ್ಲಿಕಾರ್ಜುನ್ ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌..!

ಶಾಮನೂರು ಶಿವಶಂಕರಪ್ಪ ಅವಧಿಯಿಂದ ನಾವು ಮನವಿ ಮಾಡುತ್ತಿದ್ದು, ಇಲ್ಲಿಯವರೆಗೂ ಅವರಿಗೆ ಬೆಂಬಲ ನೀಡುತ್ತಾ ಬಂದಿದ್ದೇವೆ. ಅವರ ಕಾಲವಾದ ನಂತರ ನಮಗೆ ಅವಕಾಶ ಕೇಳಿದ್ದೇವೆ. ಶಾಮನೂರು ನಮ್ಮ ಜೊತೆ ಚೆನ್ನಾಗಿದ್ದರು. ಆದರೆ ಎಸ್‌ಎಸ್‌ ಮಲ್ಲಿಕಾರ್ಜುನ್ ವರ್ತನೆ ಬೇರೆ ರೀತಿಯಲ್ಲಿ ಇದೆ. ಶಿವಶಂಕರಪ್ಪನವರ ಅವರ ಬುದ್ದಿ ಅವರ ಮಗನಲ್ಲಿ ಇಲ್ಲ ಎಂದು ದೂರಿದರು. ಜಮೀರ್ ಅಲ್ಪಸಂಖ್ಯಾತರಲ್ಲದೇ ಎಲ್ಲಾ ಅಹಿಂದ ಸಮುದಾಯಗಳ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಚುನಾವಣೆ ಗೆಲುವಿಗೆ ಜಮೀರ್ ಅಹ್ಮದ್ ಖಾನ್ ಶ್ರಮ ಸಾಕಷ್ಟಿದೆ. ಅಂತವರಿಗೆ ಮಲ್ಲಿಕಾರ್ಜುನ್ ಏಕವಚನದಲ್ಲಿ ಮಾತನಾಡಿದ್ದಾರೆ. ಅದಕ್ಕೆ […]

Continue Reading