ಬೆಂಗಳೂರು | 94ನೇ ವಸಂತಕ್ಕೆ ಕಾಲಿಟ್ಟ ದೇವೇಗೌಡರು ; ಮಾಜಿ ಪ್ರಧಾನಿಯವರಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ

ಭೇಟಿಯ ಸಂದರ್ಭದಲ್ಲಿ ಪಕ್ಷದ ಸಂಘಟನೆ, ಮುಂದಿನ ರಾಜಕೀಯ ಕಾರ್ಯಕ್ರಮಗಳು ಹಾಗೂ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ನಗರ ಅಧ್ಯಕ್ಷರಾದ ದೀಪಕ್ ಸಿಂಗ್ , ಪ್ರಮುಖ ಮುಖಂಡರಾದ ಗೋಪಿನಾಥ್ ಮೊದಲಿಯರ್ , ರಘು ಹಾಗೂ ಸಂಸದ Dr. C. N. ಮಂಜುನಾಥ್ ಉಪಸ್ಥಿತರಿದ್ದರು. ದೇವೇಗೌಡರ ದೀರ್ಘ ರಾಜಕೀಯ ಅನುಭವ, ರೈತರ ಪರ ಹೋರಾಟ ಮತ್ತು ಸರಳ ವ್ಯಕ್ತಿತ್ವವನ್ನು ಈ ಸಂದರ್ಭದಲ್ಲಿ ಹಲವು ನಾಯಕರು […]

Continue Reading

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ಬೈಗುಳ, ಕಿರುಕುಳ ; ನ್ಯಾಯಾಲಯದ ಬಳಿ ಕಷ್ಟ ಹೇಳಿಕೊಂಡ ನಟ ದರ್ಶನ್

ದೀರ್ಘಕಾಲದ ಜೈಲುವಾಸದಿಂದ ವೃತ್ತಿ ಜೀವನಕ್ಕೆ ತೊಂದರೆ ಆಗಿದೆ. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ ಎಂದು ಕೂಡ ಅವರು ಹೇಳಿದ್ದಾರೆ. ಸಹಕೈದಿಗಳಿಂದ ಕಿರುಕುಳ, ಬೈಗುಳ ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ ಹಾಕಲಾಗುತ್ತಿದೆ. ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ತಮ್ಮನ್ನು ಕ್ವಾರಂಟೈನ್ ಸೆಲ್​ನಲ್ಲಿಡಲಾಗಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಹಾನಿಕಾರಕ ಪರಿಣಾಮವಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ ಅವರು ಕಷ್ಟ ಹೇಳಿಕೊಂಡಿದ್ದಾರೆ. ಆಹಾರ, ಬಟ್ಟೆ, ಹಾಸಿಗೆ ಪಡೆಯಲೂ ಬಿಡುತ್ತಿಲ್ಲ ಇದಲ್ಲದೆ ಜೈಲಿನಲ್ಲಿ ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ […]

Continue Reading

ಉಪಮುಖ್ಯಮಂತ್ರಿ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ.ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ 2021ರ ಫೆ.14 ರಂದು ವಿವಾಹವಾಗಿದ್ದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಆಗಿನ ಸಿಎಂ ಬಿ.ಎಸ್‌.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಭಾಗವಹಿಸಿ, ನವಜೋಡಿಗೆ ಶುಭ ಹಾರೈಸಿದ್ದರು.

Continue Reading

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರ ಅಧಿಕೃತ ಮಾಹಿತಿ ಬಿಡುಗಡೆ ಹಾಗೂ ಪರಿಹಾರ ಘೋಷಣೆ

ಬೆಂಗಳೂರಿನ ಜೆಸಿ ನಗರದ ಮೊಹಮ್ಮದ್ ಅಬ್ದುಲ್ (52) ಡಿ.ಜೆ.ಹಳ್ಳಿಯ ಫಯಾಜ್ ಅಹ್ಮದ್ (39)ಕೆ.ಜೆ.ಹಳ್ಳಿಯ ಮುಸಾವಿರ್ ಬೇಗಂ (6)ಕೇರಳದ ಎರ್ನಾಕುಲಂನ ಸ್ಮಿತಾ (47) ಹಾಗೂ ಲತಾ (57)ಕಾರ್ ಸ್ಟಿಕ್ಕರಿಂಗ್ ಕೆಲಸ ಮಾಡುತ್ತಿದ್ದ ಅಸ್ಸಾಂನ ನಸೀಮುಲ್ಲಾ (19) ಉತ್ತರ ಪ್ರದೇಶದ ವ್ಯಾಪಾರಿ ಸಲಾವುದ್ದೀನ್ ಅನ್ಸಾರಿ (36). ಏಪ್ರಿಲ್ 29ರ ಬುಧವಾರ ಸಂಜೆ ಸುಮಾರು 5 ಗಂಟೆಯ ಸುಮಾರಿಗೆ ಬೆಂಗಳೂರಿನಲ್ಲಿ ದಿಢೀರ್ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ ಆರಂಭವಾಯಿತು. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ […]

Continue Reading

ಬೆಂಗಳೂರಿನಲ್ಲಿ ಭಾರೀ ಮಳೆ ; ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿತ, ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಗೋಡೆ ಕುಸಿದ ಬೆನ್ನಲ್ಲೇ ಸ್ಥಳದಲ್ಲಿದ್ದ ಸಾರ್ವಜನಿಕರು ರಕ್ಷಣಾ ಕಾರ್ಯ ನಡೆಸಿ ಕೆಲವರನ್ನ ರಕ್ಷಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬೌರಿಂಗ್ ಆಸ್ಪತ್ರೆಯ ಹಳೆಯ ಗೋಡೆಗೆ ದೊಡ್ಡ ಟಾರ್ಪಾಲ್ ಹಾಕಿ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದರು. ದಿಢೀರನೆ ಜೋರಾಗಿ ಮಳೆ ಸುರಿದ ಪರಿಣಾಮ ಟಾರ್ಪಾಲ್ ಕೆಳಗೆ ಪಾದಚಾರಿಗಳು ನಿಂತುಕೊಂಡರು. ಈ ವೇಳೆ ಬಿರುಗಾಳಿ ಸಮೇತ ಸುರಿದ ಜೋರು ಮಳೆಗೆ ಕಾಂಪೌಂಡ್ ಕುಸಿದು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Continue Reading

ಬೆಂಗಳೂರು | ನಗ್ನ ಸ್ಥಿತಿಯಲ್ಲಿ ಯುವತಿ ಶವ ಪತ್ತೆ!

ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಆಕೆಯ ಮನೆ ಬಾಗಿಲು ಬೀಗ ಹಾಕಿದ್ದ ಕಾರಣ ಅದನ್ನು ಹೊಡೆದು ಒಳಗೆ ಹೋಗಿ ನೋಡಿದ್ದು, ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಆಕೆಯ ದೇಹವು ಬೆತ್ತಲೆಯಾಗಿ, ರಕ್ತದ ಮಡುವಿನಲ್ಲಿ ಮತ್ತು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, ಕನಿಷ್ಠ ಮೂರು ದಿನಗಳ ಹಿಂದೆ ಆಕೆ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಿ, ಆಕೆಯ ಮನೆಯನ್ನು ಶೋಧ ಮಾಡಿದ್ದು, ಈ ವೇಳೆ ರೂಂ ತುಂಬಾ ಪೇಪರ್ ತುಂಡುಗಳನ್ನು ಹರಿದು ಹಾಕಿರೋದು ಪತ್ತೆಯಾಗಿದೆ. ಅಷ್ಟೇ ಅಲ್ಲದೆ, ಆಕೆಯ ಕೈ […]

Continue Reading

ಒಂದೇ ಸ್ಕೂಟಿಯಲ್ಲಿ 6 ಮಕ್ಕಳ ಸಂಚಾರದ ಫೋಟೋ ವೈರಲ್ ; ಮಾಲೀಕರ ವಿರುದ್ಧ ದಾಖಲಾಯಿತು FIR

ಮಾಲೀಕರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದಂತೆ, ಮಾಗಡಿ ರಸ್ತೆ ಸಂಚಾರ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ನೋಂದಣಿ ಸಂಖ್ಯೆ ಆಧರಿಸಿ ಪರಿಶೀಲಿಸಿದಾಗ ಮಾಲೀಕ ಅಜ್ವರ್ ಪಾಷಾ ಬಾಪೂಜಿ ನಗರದ ನಿವಾಸಿ ಎಂದು ಗೊತ್ತಾಗಿದೆ. ವಿಳಾಸ ಆಧರಿಸಿ ಮನೆ ಬಳಿ ಹೋದಾಗ ಮನೆ ಇಲ್ಲದಿರುವುದು ತಿಳಿದುಬಂದಿದೆ. ವೈರಲ್ ಆಗುತ್ತಿರುವ ಪೋಸ್ಟ್​​​ನಲ್ಲಿ ಬೈಕ್ ಚಾಲನೆ ಮಾಡುತ್ತಿರುವ ಬಗ್ಗೆ ಎಲ್ಲಿಯೂ ವಿಡಿಯೋ ದೊರೆತಿಲ್ಲ. ಮಕ್ಕಳನ್ನು ವಾಹನದಲ್ಲಿ ಕೂರಿಸಿಕೊಂಡು ಫೋಟೋ ಸೆರೆಹಿಡಿಯಲು ಈ ರೀತಿ ಮಾಡಿರಬಹುದಾ? ಎಂಬುದರ […]

Continue Reading

ಜನಗಣತಿ ಕರ್ತವ್ಯಕ್ಕೆ ಅಡ್ಡಿ ; ಮಹಿಳಾ ಸಿಬ್ಬಂದಿಗೆ ಅವಮಾನ ದಾಖಲಾಯಿತು FIR

ವಾರ್ಡ್ ಸಂಖ್ಯೆ 43ರಲ್ಲಿ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಗಣತಿದಾರರಾದ ಶ್ರೀಮತಿ ವೀಣಾ ಅವರು ಏಪ್ರಿಲ್ 20ರಂದು ಆರ್.ಟಿ. ನಗರದ ಸುಲ್ತಾನಪಾಳ್ಯದ ಪೇರಿ ಮೊನಾರ್ಕ್ ಅಪಾರ್ಟ್‌ಮೆಂಟ್‌ಗೆ ಮಾಹಿತಿ ಸಂಗ್ರಹಿಸಲು ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ನಿವಾಸಿಯೊಬ್ಬರು ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಈ ಕುರಿತು ಏಪ್ರಿಲ್ 25ರಂದು ಮೇಲ್ವಿಚಾರಕರಾದ ಶ್ರೀಮತಿ ರಶ್ಮಿ ಆರ್ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕೇಳಿದಾಗ, ಆ ನಿವಾಸಿಯು ಗಣತಿ ಕಾರ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಮಹಿಳಾ ಸಿಬ್ಬಂದಿಯೊಂದಿಗೆ ಅತ್ಯಂತ ಅಸಭ್ಯವಾಗಿ ವರ್ತಿಸಿ ನಿಂದಿಸಿದ್ದಾರೆ. ಸಿಬ್ಬಂದಿ […]

Continue Reading

ಕುವೆಂಪು ವಿ.ವಿ ಹಗರಣ ; ತನಿಖೆಗೆ ಸಮಿತಿ

ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್‌ಕ್ಲಾಸ್ ಸೌಲಭ್ಯ ಒದಗಿಸಲು 2022ನೇ ಜನವರಿಯಲ್ಲಿ ರಾಜ್ಯ ಸರ್ಕಾರ 75 ಕೋಟಿ ಅನುದಾನ ಒದಗಿಸಿತ್ತು. ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ‘ಸ್ಮಾರ್ಟ್‌ಕ್ಲಾಸ್‌’ಗಳನ್ನು ಸಿದ್ಧಪಡಿಸಲಾಗಿತ್ತು. ಆದರೆ, ಮಾರುಕಟ್ಟೆ ಬೆಲೆಗಿಂತ ಅಧಿಕ ದರದಲ್ಲಿ ಸಾಮಗ್ರಿಗಳನ್ನು ಖರೀದಿಸಿ ವಂಚಿಸಲಾಗಿದೆ. ಭೌತಿಕ ಪರಿಶೀಲನೆ ನಡೆಸದೆ, ನಗದು ರಸೀದಿ ಪಡೆಯದೆ ಗುತ್ತಿಗೆ ಕಂಪನಿಯೊಂದಕ್ಕೆ 12.99 ಕೋಟಿ ಪಾವತಿಸಲಾಗಿದೆ ಎಂದು ಕೆಲವರು ಉನ್ನತ ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು. ಈ ಕುರಿತು ಈಗಾಗಲೇ ಶಿವಮೊಗ್ಗ ಜಿಲ್ಲಾ ನ್ಯಾಯಾಧೀಶ ಎಚ್.ಬಿ.ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸ ಲಾಗಿತ್ತು. […]

Continue Reading

ಚಿರತೆಯಿಂದ ಅತ್ತೆಯನ್ನು ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಮನೆಯ ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ, ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಅಪ್ಪಿಕೊಂಡು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿ. ಸಾಕ್ಷಾತ್ ಮೃತ್ಯುವಿನ ದವಡೆಯಿಂದ ಅತ್ತೆಯನ್ನ ರಕ್ಷಿಸಿದ ಅವರ ಸಮಯಪ್ರಜ್ಞೆ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ಸೂಚಿಸಿದ್ದಾರೆ. ಅತ್ತೆ-ಸೊಸೆಯ ಸಂಬಂಧದ ಬಗ್ಗೆ ಸಮಾಜದಲ್ಲಿರುವ ಹಳೆಯ ಕಲ್ಪನೆಗಳನ್ನ ಅಳಿಸಿ, ಸುಜಾತಾ ಅವರು ಇಂದು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ […]

Continue Reading