ಸಚಿವರಾದ ಡಾ. ಯತೀಂದ್ರರವರಿಗೆ ನಗರಾಭಿವೃದ್ಧಿ ಖಾತೆ ಹೊರತುಪಡಿಸಿ ಬದಲಿ ಖಾತೆ ನೀಡಿ ; ಮುಖ್ಯಮಂತ್ರಿಗಳಿಗೆ,ನೈಜ ಹೋರಾಟಗಾರರ ವೇದಿಕೆ ಆಗ್ರಹ..!

ಉಲ್ಲೇಖ 2ರಲ್ಲಿ ಶಾಸಕರು/ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಡಾಕ್ಟರ್ ಯತೀಂದ್ರರವರ ತಂದೆಯವರಾದ ಸನ್ಮಾನ್ಯ ಸಿದ್ದರಾಮಯ್ಯ V/s. ಸ್ನೇಹಮಯಿಕೃಷ್ಣ PCR 42/24 ಪ್ರಕರಣ ದಾಖಲಾಗಿದೆ. ಉಲ್ಲೇಖ 3ರಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ರಿಟ್ ಅರ್ಜಿಯ ಸಂಖ್ಯೆ : 22319/24 ಪ್ರಕರಣ ದಾಖಲಾಗಿದೆ. ಉಲ್ಲೇಖ 4ರಲ್ಲಿ ಜಾರಿ ನಿರ್ದೆಶನಾಲಯ ಇ.ಡಿ. ಸಂಖ್ಯೆ : ECIR/BGZO/49/24 ಪ್ರಕರಣಗಳು ಕೂಡಾ ದಾಖಲಾಗಿರುತ್ತದೆ. ಈ ಮೇಲ್ಕಂಡ ಎಲ್ಲಾ ಪ್ರಕರಣಗಳಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬದಲಿ ನಿವೇಶನ ಹಂಚಿಕೆಯ ಪ್ರಕರಣದಲ್ಲಿ […]

Continue Reading

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ; ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಈ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಕೇಸ್ ರದ್ದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.ಶಿವಮೊಗ್ಗ ಮೂಲದ ವಕೀಲ ಬಿ.ವಿನೋದ್‌, ಈಶ್ವರಪ್ಪ, ಅವರ ಪತ್ರ ಕೆ.ಇ.ಕಾಂತೇಶ್‌ ಹಾಗೂ ಕಾಂತೇಶ್‌ ಪತ್ನಿ ಶಾಲಿನಿ ವಿರುದ್ಧ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿ ಲೋಕಾಯುಕ್ತ ಪೊಲೀಸರ ಮುಂದೆ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ‘ಬಿ’ ರಿಪೋರ್ಟ್‌ ಸಲ್ಲಿಸಿದ್ದರು. ಆನಂತರ ವಿನೋದ್‌ ಆದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.ತದನಂತರ ನ್ಯಾಯಾಲಯವು […]

Continue Reading

ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ ; ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಸಂಸದ ಬಿ.ವೈ.ರಾಘವೇಂದ್ರ ಒತ್ತಾಯ

ಭೇಟಿಯ ಸಂದರ್ಭದಲ್ಲಿ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಉಪಸ್ಥಿತರಿದ್ದರು ಮತ್ತು ಸಂಸದರ ಬೇಡಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ನಡೆಯುತ್ತಿರುವ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಹಕ್ಕೊತ್ತಾಯ, ಹೋರಾಟಗಳ ನಡುವೆ, ಸಂಸದ ರಾಘವೇಂದ್ರ ಅವರ ಈ ಭೇಟಿಯು ಪ್ರಾಮುಖ್ಯತೆ ಪಡೆದಿದೆ. ಜೊತೆಗೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠವನ್ನು ಸ್ಥಾಪಿಸಬೇಕೆಂದು ನಿರಂತರವಾಗಿ ಪ್ರತಿಪಾದಿಸುತ್ತಿರುವ ಕಾನೂನು ವಲಯ, ವಕೀಲರ ಸಂಘಗಳು ಮತ್ತು ವಿವಿಧ ನಾಗರಿಕ ಸಮಾಜ ಸಂಸ್ಥೆಗಳ ಸದಸ್ಯರ ಬೇಡಿಕೆಗೆ […]

Continue Reading

ನಟ ಪ್ರಕಾಶ್ ರಾಜ್ ಗೆ ಅರೆಸ್ಟ್ ವಾರಂಟ್ ಜಾರಿ ಮಾಡಿದ ನ್ಯಾಯಾಲಯ ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

ಪೊಲೀಸರು ಕ್ರಮ ಕೈಗೊಳ್ಳದ ಕಾರಣ ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟಿದ್ದರು. ಬಳಿಕ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದರು. ಎಲ್ಲಿಯೂ ಕ್ರಮ ಕೈಗೊಳ್ಳದ ಕಾರಣ ದಿಲೀಪ್ ಅವರು ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕಾಶ್ ರಾಜ್ ಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಪ್ರಕಾಶ್ ರಾಜ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಕೋರ್ಟ್ ಇದೀಗ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

Continue Reading

ಸರಿಗಮಪ ಜೂನಿಯರ್-22 ಸ್ಪರ್ಧಿ ಸೊರಬದ ಕೀರ್ತಿ ಎಸ್, ಅವರಿಗೆ ಮಾಜಿ ಸಚಿವ ಮಧು ಬಂಗಾರಪ್ಪನವರಿಂದ ಅಭಿನಂದನೆ

ಈ ಸಂದರ್ಭದಲ್ಲಿ ಕುಮಾರಿ ಕೀರ್ತಿಯವರ ಯಶೋಗಾಧೆಯನ್ನು ಆಕೆಯ ಮಾತುಗಳಲ್ಲಿಯೇ ಕೇಳಿ. ಆಕೆಯನ್ನು ಗೌರವಿಸಿ, ಪ್ರೇರಣೆ-ಪ್ರೋತ್ಸಾಹ ನೀಡಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.ನಮ್ಮ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಧುನಿಕ ಸಂಗೀತ ಲೋಕದ ಪರಿಚಯವಾಗಲಿ ಎಂಬ ಉದ್ದೇಶದಿಂದ ನಮ್ಮ ಒಡೆತನದ “ಆಕಾಶ್ ಆಡಿಯೋ” ಸ್ಟುಡಿಯೋ ತೋರಿಸುವ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿನ ಲೈವ್ ರೆಕಾರ್ಡಿಂಗ್ ಹಾಗೂ ತಾಂತ್ರಿಕ ಪ್ರಕ್ರಿಯೆಗಳ ಪ್ರತ್ಯಕ್ಷ ಅನುಭವ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿತ್ತು. ಮಕ್ಕಳೆಲ್ಲರೂ ಸ್ಟುಡಿಯೋ ಒಳಗಿನ ಪ್ರಪಂಚವನ್ನು ನೋಡಿ ಅಪಾರ ಸಂತಸ ವ್ಯಕ್ತಪಡಿಸದ್ದಲ್ಲದೆ, ಹೊಸ ವಿಷಯಗಳನ್ನು ಕುತೂಹಲದಿಂದ ತಿಳಿದುಕೊಂಡರು. ಸೌಲಭ್ಯಗಳ […]

Continue Reading

ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಪುನಾರಂಭಿಸಿ ಎಂದು ಕೇಂದ್ರಕ್ಕೆ ರಾಜ್ಯ ಪತ್ರ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಒದಗಿಸುವ ಕಾಮಗಾರಿ ಭರದಿಂದ ಸಾಗಿದೆ. ಇದಲ್ಲದೆ, ಉಳಿದ ಎಲ್ಲಾ ಸೌಲಭ್ಯಗಳೂ ಇಲ್ಲಿ ಈಗಾಗಲೇ ಇವೆ. ಆದ್ದರಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಪಾಟೀಲ ಕೋರಿದ್ದಾರೆ.

Continue Reading

ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಮಗಳೂರಿನ ರೈತ

ಸುದ್ದಿಗಾರರೊಂದಿಗೆ ಮಾತನಾಡಿದ ವಿಶು ಕುಮಾರ್, ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಪರಿಹಾರವನ್ನು ಇನ್ನೂ ನೀಡಿಲ್ಲ ಎಂದು ಹೇಳಿದರು. ‘ನಾಲ್ಕು ವಾರಗಳಲ್ಲಿ ವಿಷಯವನ್ನು ಅಂತಿಮಗೊಳಿಸಿ ಪರಿಹಾರವನ್ನು ಪಾವತಿಸುವಂತೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗೆ ನ್ಯಾಯಾಲಯ ನಿರ್ದೇಶಿಸಿತ್ತು. ಆದರೆ, ಮೂರು ತಿಂಗಳು ಕಳೆದರೂ ನಮಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಜಮೀನಿನಲ್ಲಿ ನಾನು ಶ್ರೀಗಂಧದ ಮರಗಳನ್ನು ಬೆಳೆಸಿದ್ದೇನೆ. ಅಗತ್ಯವಿರುವ ನೋಟಿಸ್ ನೀಡದೆಯೇ ಮರಗಳನ್ನು ಕಡಿಯಲು ಅಧಿಕಾರಿಗಳು ಯೋಜಿಸಿದ್ದಾರೆ. ಈ ಪ್ರಕ್ರಿಯೆಯ ಬಗ್ಗೆ ಯಾವುದೇ ಮಾಹಿತಿಯನ್ನು ತನಗೆ ಒದಗಿಸಿಲ್ಲ’ ಎಂದು ವಿಶು ಕುಮಾರ್ ಆರೋಪಿಸಿದ್ದಾರೆ.

Continue Reading

ಸೂರಜ್ ಹೆಗ್ಡೆ ನಿಧನಕ್ಕೆ ಮಾಜಿ ಸಚಿವ ಮಧು ಬಂಗಾರಪ್ಪ ತೀವ್ರ ಸಂತಾಪ

ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದ ನೋವಿನಲ್ಲಿ ನಾನು ಸಹ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

Continue Reading