‘ನವ ಕರ್ನಾಟಕದ ನಿರ್ಮಾಣ’ಕ್ಕೆ ಹೊಸ ಶಕ್ತಿ ತುಂಬಿದ ಬಜೆಟ್ : ಸಚಿವ ಮಧು ಬಂಗಾರಪ್ಪ
ಶೈಕ್ಷಣಿಕ ಮೂಲಸೌಕರ್ಯ, ಬೋಧಕ ಸಿಬ್ಬಂದಿಯ ಬಲವರ್ಧನೆ ಮತ್ತು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕೆ ಪೂರಕವಾದ ಯೋಜನೆಗಳನ್ನು ಘೋಷಿಸುವ ಮೂಲಕ ಸರ್ಕಾರವು ಜ್ಞಾನಾಧಾರಿತ ಸಮಾಜ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ.ಅದೇ ರೀತಿ, ನನ್ನ ತವರು ಜಿಲ್ಲೆಯಾದ ಶಿವಮೊಗ್ಗದ ಸಾಂಸ್ಕೃತಿಕ ಮತ್ತು ಆರ್ಥಿಕ ಪ್ರಗತಿಗೆ ನೀಡಿರುವ ವಿಶೇಷ ಕೊಡುಗೆಗಳು ಹಾಗೂ ಹಿಂದುಳಿದ ವರ್ಗಗಳ ಆರ್ಥಿಕ ಮತ್ತು ಶೈಕ್ಷಣಿಕ ಉನ್ನತಿಗಾಗಿ ಘೋಷಿಸಲಾಗಿರುವ ಕ್ರಾಂತಿಕಾರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಜನರ ಹಾಗೂ ಸಮುದಾಯದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ . […]
Continue Reading

