ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಪುನಾರಂಭಿಸಿ ಎಂದು ಕೇಂದ್ರಕ್ಕೆ ರಾಜ್ಯ ಪತ್ರ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಒದಗಿಸುವ ಕಾಮಗಾರಿ ಭರದಿಂದ ಸಾಗಿದೆ. ಇದಲ್ಲದೆ, ಉಳಿದ ಎಲ್ಲಾ ಸೌಲಭ್ಯಗಳೂ ಇಲ್ಲಿ ಈಗಾಗಲೇ ಇವೆ. ಆದ್ದರಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಪಾಟೀಲ ಕೋರಿದ್ದಾರೆ.

Continue Reading

ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಮಗಳೂರಿನ ರೈತ

ಸುದ್ದಿಗಾರರೊಂದಿಗೆ ಮಾತನಾಡಿದ ವಿಶು ಕುಮಾರ್, ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಪರಿಹಾರವನ್ನು ಇನ್ನೂ ನೀಡಿಲ್ಲ ಎಂದು ಹೇಳಿದರು. ‘ನಾಲ್ಕು ವಾರಗಳಲ್ಲಿ ವಿಷಯವನ್ನು ಅಂತಿಮಗೊಳಿಸಿ ಪರಿಹಾರವನ್ನು ಪಾವತಿಸುವಂತೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗೆ ನ್ಯಾಯಾಲಯ ನಿರ್ದೇಶಿಸಿತ್ತು. ಆದರೆ, ಮೂರು ತಿಂಗಳು ಕಳೆದರೂ ನಮಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಜಮೀನಿನಲ್ಲಿ ನಾನು ಶ್ರೀಗಂಧದ ಮರಗಳನ್ನು ಬೆಳೆಸಿದ್ದೇನೆ. ಅಗತ್ಯವಿರುವ ನೋಟಿಸ್ ನೀಡದೆಯೇ ಮರಗಳನ್ನು ಕಡಿಯಲು ಅಧಿಕಾರಿಗಳು ಯೋಜಿಸಿದ್ದಾರೆ. ಈ ಪ್ರಕ್ರಿಯೆಯ ಬಗ್ಗೆ ಯಾವುದೇ ಮಾಹಿತಿಯನ್ನು ತನಗೆ ಒದಗಿಸಿಲ್ಲ’ ಎಂದು ವಿಶು ಕುಮಾರ್ ಆರೋಪಿಸಿದ್ದಾರೆ.

Continue Reading

ಸೂರಜ್ ಹೆಗ್ಡೆ ನಿಧನಕ್ಕೆ ಮಾಜಿ ಸಚಿವ ಮಧು ಬಂಗಾರಪ್ಪ ತೀವ್ರ ಸಂತಾಪ

ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದ ನೋವಿನಲ್ಲಿ ನಾನು ಸಹ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

Continue Reading

ಬೆಂಗಳೂರು | 94ನೇ ವಸಂತಕ್ಕೆ ಕಾಲಿಟ್ಟ ದೇವೇಗೌಡರು ; ಮಾಜಿ ಪ್ರಧಾನಿಯವರಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ

ಭೇಟಿಯ ಸಂದರ್ಭದಲ್ಲಿ ಪಕ್ಷದ ಸಂಘಟನೆ, ಮುಂದಿನ ರಾಜಕೀಯ ಕಾರ್ಯಕ್ರಮಗಳು ಹಾಗೂ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ನಗರ ಅಧ್ಯಕ್ಷರಾದ ದೀಪಕ್ ಸಿಂಗ್ , ಪ್ರಮುಖ ಮುಖಂಡರಾದ ಗೋಪಿನಾಥ್ ಮೊದಲಿಯರ್ , ರಘು ಹಾಗೂ ಸಂಸದ Dr. C. N. ಮಂಜುನಾಥ್ ಉಪಸ್ಥಿತರಿದ್ದರು. ದೇವೇಗೌಡರ ದೀರ್ಘ ರಾಜಕೀಯ ಅನುಭವ, ರೈತರ ಪರ ಹೋರಾಟ ಮತ್ತು ಸರಳ ವ್ಯಕ್ತಿತ್ವವನ್ನು ಈ ಸಂದರ್ಭದಲ್ಲಿ ಹಲವು ನಾಯಕರು […]

Continue Reading

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ಬೈಗುಳ, ಕಿರುಕುಳ ; ನ್ಯಾಯಾಲಯದ ಬಳಿ ಕಷ್ಟ ಹೇಳಿಕೊಂಡ ನಟ ದರ್ಶನ್

ದೀರ್ಘಕಾಲದ ಜೈಲುವಾಸದಿಂದ ವೃತ್ತಿ ಜೀವನಕ್ಕೆ ತೊಂದರೆ ಆಗಿದೆ. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ ಎಂದು ಕೂಡ ಅವರು ಹೇಳಿದ್ದಾರೆ. ಸಹಕೈದಿಗಳಿಂದ ಕಿರುಕುಳ, ಬೈಗುಳ ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ ಹಾಕಲಾಗುತ್ತಿದೆ. ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ತಮ್ಮನ್ನು ಕ್ವಾರಂಟೈನ್ ಸೆಲ್​ನಲ್ಲಿಡಲಾಗಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಹಾನಿಕಾರಕ ಪರಿಣಾಮವಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ ಅವರು ಕಷ್ಟ ಹೇಳಿಕೊಂಡಿದ್ದಾರೆ. ಆಹಾರ, ಬಟ್ಟೆ, ಹಾಸಿಗೆ ಪಡೆಯಲೂ ಬಿಡುತ್ತಿಲ್ಲ ಇದಲ್ಲದೆ ಜೈಲಿನಲ್ಲಿ ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ […]

Continue Reading

ಉಪಮುಖ್ಯಮಂತ್ರಿ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ.ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ 2021ರ ಫೆ.14 ರಂದು ವಿವಾಹವಾಗಿದ್ದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಆಗಿನ ಸಿಎಂ ಬಿ.ಎಸ್‌.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಭಾಗವಹಿಸಿ, ನವಜೋಡಿಗೆ ಶುಭ ಹಾರೈಸಿದ್ದರು.

Continue Reading

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರ ಅಧಿಕೃತ ಮಾಹಿತಿ ಬಿಡುಗಡೆ ಹಾಗೂ ಪರಿಹಾರ ಘೋಷಣೆ

ಬೆಂಗಳೂರಿನ ಜೆಸಿ ನಗರದ ಮೊಹಮ್ಮದ್ ಅಬ್ದುಲ್ (52) ಡಿ.ಜೆ.ಹಳ್ಳಿಯ ಫಯಾಜ್ ಅಹ್ಮದ್ (39)ಕೆ.ಜೆ.ಹಳ್ಳಿಯ ಮುಸಾವಿರ್ ಬೇಗಂ (6)ಕೇರಳದ ಎರ್ನಾಕುಲಂನ ಸ್ಮಿತಾ (47) ಹಾಗೂ ಲತಾ (57)ಕಾರ್ ಸ್ಟಿಕ್ಕರಿಂಗ್ ಕೆಲಸ ಮಾಡುತ್ತಿದ್ದ ಅಸ್ಸಾಂನ ನಸೀಮುಲ್ಲಾ (19) ಉತ್ತರ ಪ್ರದೇಶದ ವ್ಯಾಪಾರಿ ಸಲಾವುದ್ದೀನ್ ಅನ್ಸಾರಿ (36). ಏಪ್ರಿಲ್ 29ರ ಬುಧವಾರ ಸಂಜೆ ಸುಮಾರು 5 ಗಂಟೆಯ ಸುಮಾರಿಗೆ ಬೆಂಗಳೂರಿನಲ್ಲಿ ದಿಢೀರ್ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ ಆರಂಭವಾಯಿತು. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ […]

Continue Reading

ಬೆಂಗಳೂರಿನಲ್ಲಿ ಭಾರೀ ಮಳೆ ; ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿತ, ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಗೋಡೆ ಕುಸಿದ ಬೆನ್ನಲ್ಲೇ ಸ್ಥಳದಲ್ಲಿದ್ದ ಸಾರ್ವಜನಿಕರು ರಕ್ಷಣಾ ಕಾರ್ಯ ನಡೆಸಿ ಕೆಲವರನ್ನ ರಕ್ಷಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬೌರಿಂಗ್ ಆಸ್ಪತ್ರೆಯ ಹಳೆಯ ಗೋಡೆಗೆ ದೊಡ್ಡ ಟಾರ್ಪಾಲ್ ಹಾಕಿ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದರು. ದಿಢೀರನೆ ಜೋರಾಗಿ ಮಳೆ ಸುರಿದ ಪರಿಣಾಮ ಟಾರ್ಪಾಲ್ ಕೆಳಗೆ ಪಾದಚಾರಿಗಳು ನಿಂತುಕೊಂಡರು. ಈ ವೇಳೆ ಬಿರುಗಾಳಿ ಸಮೇತ ಸುರಿದ ಜೋರು ಮಳೆಗೆ ಕಾಂಪೌಂಡ್ ಕುಸಿದು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Continue Reading