ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ,ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಅವರು ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು. ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥೀವ ಶರೀರವನ್ನು ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದಲ್ಲಿ ವಾಸವಾಗಿದ್ದ ಮನೆ 295/12/1 7ನೇ ಮೇನ್ 16 ನೇ ಕ್ರಾಸ್ ಇಡಲಾಗುವುದು ಎಂದು ಗಿರೀಶ್ ಲಿಂಗಣ್ಣ […]

Continue Reading

ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ

ನಂದಿನಿ ಬ್ರ್ಯಾಂಡ್‌ನ ಮೌಲ್ಯಗಳನ್ನು ಜನರಿಗೆ ತಲುಪಿಸಲು ಸುಧಾರಾಣಿ ಅವರಂತಹ ವಿಶ್ವಾಸಾರ್ಹ ವ್ಯಕ್ತಿತ್ವದ ಅಗತ್ಯವಿತ್ತು. ಅವರ ಸರಳತೆ ಮತ್ತು ಕೌಟುಂಬಿಕ ಗೌರವ ನಂದಿನಿ ಉತ್ಪನ್ನಗಳ ಗುಣಮಟ್ಟಕ್ಕೆ ಹೊಸ ಮೆರುಗು ನೀಡಲಿದೆ” ಎಂದಿದ್ದಾರೆ. ತಲೆಮಾರುಗಳಿಂದ ಪ್ರತಿಯೊಬ್ಬ ಕನ್ನಡಿಗನ ನಂಬಿಕೆಯ ಪ್ರತೀಕ ನಂದಿನಿ. ರೈತರ ಸಹಕಾರಿ ಸಂಸ್ಥೆಯಾದ ಬಮುಲ್ ನಂದಿನಿ ಜೊತೆ ಒಡಗೂಡುವ ಅವಕಾಶ ನನಗೆ ಅತ್ಯಂತ ಗೌರವದ ವಿಷಯ ಎಂದಿದ್ದಾರೆ.

Continue Reading

ಜಾಲತಾಣದಲ್ಲಿ ಮಾನಹಾನಿ, ಪ್ರಚೋದನೆ, ಆಕ್ಷೇಪಾರ್ಹ ಹೇಳಿಕೆ ವಿರುದ್ಧ ದೂರು ದಾಖಲು ; ಪೊಲೀಸರಿಗೆ ಮಾರ್ಗಸೂಚಿ

ವ್ಯಕ್ತಿಗಳ ವಿರುದ್ಧ ಮಾನಹಾನಿಯಾಗಿದೆ ಎಂದು‌ ದೂರುವ ವ್ಯಕ್ತಿಯಿಂದ ಪ್ರಕರಣ ದಾಖಲಿಸಿಕೊಳ್ಳಬೇಕು. ಗಂಭೀರ ಅಪಾದನೆಗಳು ಬಂದಾಗ ಮಾತ್ರ ಅನ್ಯರಿಂದ ದೂರು ಬಂದರೆ ಪರಿಗಣಿಸಬಹುದು.ದೂರಿನಲ್ಲಿ ಉಲ್ಲೇಖಿತ ಆಪಾದನೆಗಳು ಮೇಲ್ನೋಟಕ್ಕೆ ನಿಜವಾಗಿರಬೇಕು.‌ ಈ ಬಗ್ಗೆ ಪ್ರಾಥಮಿಕ ವಿಚಾರಣೆಯ ಬಳಿಕವಷ್ಟೇ ಪ್ರಕರಣ ದಾಖಲಿಸಬೇಕು. ದ್ವೇಷ ಬಿತ್ತುವುದು, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದು ಅಥವಾ ದೇಶದ್ರೋಹದಂತಹ ಆರೋಪಗಳಿದ್ದಾಗ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವಂತಹ ಸ್ಪಷ್ಟ ಸಾಕ್ಷ್ಯಗಳಿದ್ದರೆ ಮಾತ್ರ ಪ್ರಕರಣ ದಾಖಲಿಸಬೇಕು. ರಾಜಕೀಯವಾಗಿ ಕಟುಟೀಕೆ, ಆಕ್ಷೇಪಾರ್ಹ ಹೇಳಿಕೆ ಆಧರಿಸಿ ಯಾಂತ್ರಿಕವಾಗಿ ಕೇಸ್ ಮಾಡಬಾರದು. ಸಂವಿಧಾನದ 19 (1) […]

Continue Reading

ಮುಖಕ್ಕೆ ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಅಪಹರಣ ; ಸ್ಥಳದಲ್ಲೇ ಕುಸಿದು ಬಿದ್ದು ಮಹಿಳೆ ಸಾವು

ಕೂಡಲೇ ಮಹಿಳೆಯನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷೆಯ ಬಳಿಕ ಸಾವನ್ನಪ್ಪಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ

Continue Reading

ಭಾರತ- ಅಮೆರಿಕಾ ವ್ಯಾಪಾರ ಒಪ್ಪಂದ ; ರೈತರ ಪಾಲಿಗೆ ಮರಣಶಾಸನ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರಗಳ ಹೇರಿಕೆಯಿಂದ ನಡೆಯಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿರುವ ವಿಧಿ-ವಿಧಾನಗಳನ್ನು ಗಮನಿಸಿದರೆ, ಇದು ಒಡೆಯನ ಅಜ್ಞೆಗೆ ಸೇವಕ ತಲೆಯಾಡಿಸಿದಂತಿದೆ ಎಂದಿದ್ದಾರೆ. ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಯರ್ರಾಬಿರ್ರಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏರಿಸಿದ್ದರು. ಈಗ ಅದನ್ನು ಶೇಕಡ 25ರಿಂದ ಶೇಕಡ 18ಕ್ಕೆ ಇಳಿಸಿ ಭಾರತಕ್ಕೆ ಮಹಾ ಉಪಕಾರ ಮಾಡಿದಂತೆ ನಾಟಕವಾಡಿದ್ದಾರೆ. ಇದಕ್ಕೆ […]

Continue Reading

ಬೆಂಗಳೂರು | ಮನೆಯಲ್ಲಿ ಬೈದ್ರು ಅಂತ KSRTC ಉಚಿತ ಬಸ್ ಹತ್ತಿಕೊಂಡು ಭದ್ರಾವತಿಗೆ ಬಂದ ಮಕ್ಕಳ ರಕ್ಷಿಸಿದ ಪೊಲೀಸರು

ಶಕ್ತಿ ಯೋಜನೆಯ ಅಡಿಯಲ್ಲಿ ಆಧಾರ್ ಕಾರ್ಡ್ ತೋರಿಸಿ ತನಗೆ ಉಚಿತ ಟಿಕೆಟ್ ಮಾಡಿಸಿಕೊಂಡ ಬಾಲಕಿ, ತಮ್ಮನಿಗೆ ಉಚಿತ ಪ್ರಯಾಣದ ಟಿಕೆಟ್ ಮಾಡಿಸಿದ್ದಳು. ತಮ್ಮನ ಜೊತೆಗೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರೆಗೂ ಪ್ರಯಾಣ ಬೆಳೆಸಿದ್ದಳು. ಈ ಮಧ್ಯೆ ಪೋಷಕರು ಮಕ್ಕಳು ಕಾಣದೇ ಪೊಲೀಸರ ಮೊರೆ ಹೋಗಿದ್ದರು. ಇನ್ನೂ ಪೊಲೀಸರು ಸಹ ತಡಮಾಡದೇ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಕ್ಕಳು ಬ್ಯಾಗ್ ಹಿಡಿದುಕೊಂಡು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೋಗಿರುವುದು ಕಾಣಿಸಿದೆ. ಬಸ್​ನಿಲ್ದಾಣದ ದೃಶ್ಯಗಳನ್ನ ಪರಿಶೀಲಿಸಿದ ಅವರಿಗೆ ಇಬ್ಬರು ಮಕ್ಕಳು ಶಿವಮೊಗ್ಗದ ಬಸ್ ಹತ್ತಿರುವುದು […]

Continue Reading

ಭದ್ರಾ ಅಣೆಕಟ್ಟಿನ ಆಡಳಿತವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ಡಿಸಿಎಂ ಡಿ.ಕೆ.ಶಿಗೆ ಮನವಿ

ರೈತ ಸಂಘದ ರಾಜ್ಯಾಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ, ಶಾಸಕರಾದ ಶಾಂತನಗೌಡ (ಹೊನ್ನಾಳಿ), ಬಸವರಾಜ್ ಶಿವಗಂಗಾ (ಚನ್ನಗಿರಿ), ಬಸವಂತಪ್ಪ (ಮಾಯಕೊಂಡ), ಲತಾ ಮಲ್ಲಿಕಾರ್ಜುನ (ಹರಪನಹಳ್ಳಿ) ಅವರು ಈ ನಿಯೋಗದಲ್ಲಿದ್ದರು. ಈ ಬಗ್ಗೆ ಸಭೆ ನಡೆಸುವುದಾಗಿ ಹೇಳಿದ ಡಿಸಿಎಂ ಅವರಿಗೆ ನಿಯೋಗವು ಧನ್ಯವಾದ ತಿಳಿಸಿತು.

Continue Reading

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ವಿಧಾನಸಭೆಯಲ್ಲಿ‌ ನಿರ್ಣಯ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ ಮನರೇಗಾ ಕಾಯ್ದೆಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಈ ಒತ್ತಾಯಿಸಿದರು.

Continue Reading

ಗ್ರಾ.ಪಂ.ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ : ಪ್ರಿಯಾಂಕ್ ಖರ್ಗೆ

ಸಚಿವ ಪ್ರಿಯಾಂಕ್ ಖರ್ಗೆಆದರೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ. ಚುನಾವಣೆಯನ್ನು ಸರ್ಕಾರ ಆದಷ್ಟು ಬೇಗ ನಡೆಸಲಿದೆ. ಆದಾಗ್ಯೂ ಚುನಾವಣೆ ನಡೆಸುವುದು ತಡವಾದಲ್ಲಿ ಸದಸ್ಯರ ಮನವಿ ಕುರಿತು ಕಾನೂನಿನಡಿ ಪರಿಶೀಲಿಸಲಾಗುವುದು ಎಂದರು.

Continue Reading

ಕರ್ನಾಟಕದ ಹಿತಾಸಕ್ತಿ ಹಾಗೂ ಮಲೆನಾಡಿನ ರೈಲ್ವೆ-ನೀರಾವರಿ ಯೋಜನೆಗಳಿಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ ಬಜೆಟ್ : ಕೆ. ಚೇತನ್ ಗೌಡ ಹೇಳಿಕೆ

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಈ ಹಿಂದೆ ಇದ್ದ ಶೇ. 4.71ರಷ್ಟು ಪಾಲನ್ನು ಶೇ. 3.64ಕ್ಕೆ ಇಳಿಸಿರುವುದು ರಾಜ್ಯದ ಅಭಿವೃದ್ಧಿಗೆ ದೊಡ್ಡ ಹೊಡೆತ ನೀಡಿದೆ. ಕರ್ನಾಟಕವು ಕೇಂದ್ರಕ್ಕೆ ನೀಡುವ ಪ್ರತಿ ಒಂದು ರೂಪಾಯಿಗೆ ಕೇವಲ 13 ರಿಂದ 15 ಪೈಸೆ ಮಾತ್ರ ಮರಳಿ ಪಡೆಯುತ್ತಿರುವುದು ಒಕ್ಕೂಟ ವ್ಯವಸ್ಥೆಯ ಅಸಮಾನತೆಯನ್ನು ಎತ್ತಿ ತೋರಿಸುತ್ತಿದೆ. ಜನಸಂಖ್ಯೆ ನಿಯಂತ್ರಣದಲ್ಲಿ ರಾಜ್ಯ ಸಾಧಿಸಿದ ಯಶಸ್ಸನ್ನೇ ಮಾನದಂಡವಾಗಿ ಬಳಸಿ ಅನುದಾನ ಕಡಿತಗೊಳಿಸಿರುವುದು ರಾಜ್ಯದ ಪ್ರಗತಿಗೆ ಮುಳುವಾಗಿದೆ.​ಇನ್ನು ಮಲೆನಾಡು ಭಾಗದ ದೃಷ್ಟಿಕೋನದಿಂದ ನೋಡಿದರೆ, ಶಿವಮೊಗ್ಗ ಮತ್ತು ಸುತ್ತಮುತ್ತಲ […]

Continue Reading