ಬೆಂಗಳೂರು | ಶೀಘ್ರದಲ್ಲಿ ಮೆಟ್ರೋ ದರ ಏರಿಕೆ

ನಿಗದಿ ಆಗಿದ್ದ 5% ದರದಲ್ಲಿ 1% ಅಥವಾ 2% ಗೆ ದರ ನಿಗದಿ ಮಾಡಬಹುದು ಅಂತಾ ಹೇಳಲಾಗುತ್ತಿದೆ. ಅದಕ್ಕಿಂತ ಜಾಸ್ತಿ ಆಗಬಹುದು ಅಂತಾ ಕೂಡ ಚರ್ಚೆ ಇದೆ. ಆದರೆ, ದರ ಇಳಿಕೆ ಅಥವಾ ಏರಿಕೆ ಆಗಬೇಕು ಅಂದರೆ ಹೊಸ ದರ ನಿಗದಿ ಸಮಿತಿ ರಚನೆ ಆಗಬೇಕು. ಅ ನಿಟ್ಟಿನಲ್ಲಿ ಆಡಿಟ್ ಮುಕ್ತಾಯ ಆದ ಹಿನ್ನೆಲೆ ಮೆಟ್ರೋ ಬೋರ್ಡ್ ಮೀಟಿಂಗ್ ಸಮಯ ನಿಗದಿ ಮಾಡುವ ವಿಚಾರವನ್ನ ಬಿಎಂಆರ್‌ಸಿಎಲ್ ಎಂಡಿ ಅವರು ಕೇಂದ್ರ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಮನವಿ ಮಾಡಲಿದ್ದಾರೆ. […]

Continue Reading

ಶಿವಮೊಗ್ಗ | ಹತಾಶೆಯಿಂದ ಕಂಗೆಟ್ಟ ಬಿಜೆಪಿ ; ರಾಜ್ಯ ಸರ್ಕಾರದ ಮೇಲೆ ಸುಳ್ಳು ಆರೋಪ : ಚೇತನ್ ಗೌಡ ಆಕ್ರೋಶ

ಬರಗಾಲದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಬೇಕಿದ್ದ 18,171 ಕೋಟಿ ರೂ. ಬರ ಪರಿಹಾರವನ್ನು ನೀಡದೆ ದ್ರೋಹ ಬಗೆದಿದ್ದರೂ, ನಮ್ಮ ಸರ್ಕಾರವು ತನ್ನ ಸ್ವಂತ ಬೊಕ್ಕಸದಿಂದ 33 ಲಕ್ಷಕ್ಕೂ ಅಧಿಕ ರೈತರಿಗೆ ತಲಾ 2000 ರೂ.ಗಳಂತೆ ಮೊದಲ ಹಂತದ ಪರಿಹಾರವನ್ನು ವಿತರಿಸಿ ರೈತಪರ ಕಾಳಜಿ ಮೆರೆದಿದೆ. ಕಮಿಷನ್ ಆರೋಪ ಮಾಡುವ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಅಡಿಯಲ್ಲಿ ಕೌಶಲ್ಯ ಅಭಿವೃದ್ಧಿ (Skill Development) ಯೋಜನೆಗಳಲ್ಲಿ ನಡೆದಿರುವ ಸುಮಾರು 10,000 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಬೃಹತ್ […]

Continue Reading

ಬೆಂಗಳೂರು | ಶಿಕ್ಷಕರ ತಾಂತ್ರಿಕ,ಆಡಳಿತಾತ್ಮಕ ಸಮಸ್ಯೆ ; ಶಿಕ್ಷಣ ಸಚಿವರಿಂದ ಪರಿಹಾರದ ಭರವಸೆ

ಪದೋನ್ನತಿ (Promotion): ಸರ್ಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ನಿಯಮ 32ರ ಅಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಹಾಗೂ ತತ್ಸಮಾನ ವೃಂದದ ಹುದ್ದೆಗಳಿಗೆ ಪದೋನ್ನತಿ ನೀಡುವ ಕುರಿತು ಚರ್ಚಿಸಲಾಯಿತು. ಸೇವಾ ಶ್ಲಾಘನೆ: ನಿಯಮ 42ರ ಅಡಿ ಕರ್ತವ್ಯ ನಿರ್ವಹಿಸುತ್ತಿರುವವರ ಸೇವೆಯನ್ನು ಪರಿಗಣಿಸಿ ಅವರಿಗೆ ‘ಅಫೀಷಿಯೇಟಿಂಗ್ ಚಾರ್ಜ್’ ಮಾಡುವ ಕುರಿತಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. ಶಿಕ್ಷಣ ಇಲಾಖೆಯ ಬೆನ್ನೆಲುಬಾಗಿರುವ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಶಿಕ್ಷಕರ ಬೇಡಿಕೆಗಳು ನ್ಯಾಯಯುತವಾಗಿದ್ದು, ಈ ಬಗ್ಗೆ ಇಲಾಖೆಯ ಉನ್ನತ […]

Continue Reading

ಶಿವಮೊಗ್ಗ | ಕಿಮ್ಮನೆ ರತ್ನಾಕರ್ ಆಪ್ತ ಅಮರಪಾಲಿ ಸುರೇಶ್ ರಿಂದ ಮಹಿಳೆಗೆ ಲಕ್ಷಾಂತರ ವಂಚನೆ

ಬಿಎನ್ಎಸ್ ಕಾಯಿದೆ 2023ರ ಕಲಂ 3(5).,318(4). ಅಡಿಯಲ್ಲಿ ಪ್ರಕರಣ ವನ್ನು ದಾಖಲೆ ಮಾಡಿದ್ದು . ಅಮರಪಾಲಿ ಸುರೇಶ ಪೊಲೀಸರ ಬಂಧನದಿಂದ ತಲೆಮರಿಸಿಕೊಂಡಿದ್ದು ,ಪೊಲೀಸರು ಬಂಧನಕ್ಕಾಗಿ ಹುಡುಕಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಆರೋಪಿ ಅಮರಪಾಲಿ ಸುರೇಶ ನನ್ನು ಬಂಧಿಸಲು ತೀರ್ಥಹಳ್ಳಿಯಲ್ಲೂ ಸಹ ಒಂದು ಹುಡುಕಿ ಪತ್ತೆ ಆಗದೆ ಕಾರಣ ವಾಪಾಸ್ ಹೋಗಿದ್ದಾರೆ ಎಂದು ಬಲ್ಲ ಮೂಲಗಳಿಂದ ಗಳಿಂದ ತಿಳಿದು ಬಂದಿರುತ್ತೆ. ಪ್ರಾಮಾಣಿಕ ರಾಜಕಾರಣಿ ಆಗಿರುವ ಕಿಮ್ಮನೆ ರತ್ನಾಕರ್ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಅಮರಪಾಲಿ ಸುರೇಶ್ […]

Continue Reading

ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಸಚಿವರು

ದ್ವಿತೀಯ ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ ಫೆಬ್ರವರಿ 28: ಕನ್ನಡ, ಅರೇಬಿಕ್, ಮಾರ್ಚ್ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, ಮಾರ್ಚ್ 3: ಇಂಗ್ಲಿಷ್ ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾರ್ಚ್ 5: ಇತಿಹಾಸ, ಮಾರ್ಚ್ 6: ಭೌತಶಾಸ್ತ್ರ, ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ, ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ, ಮಾರ್ಚ್ 10: ಅರ್ಥಶಾಸ್ತ್ರ, ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ […]

Continue Reading

KSRTC ಬಸ್‌ಗೆ ಡಿಕ್ಕಿ ಹೊಡೆದ ಕಾರು ; ಐವರು ಸಾವು

ನಂತರ ಪಕ್ಷದ ರಸ್ತೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಬಸ್ಸಿನ ಮುಂಭಾಗವೂ ಹಾನಿಗೊಳಗಾಗಿದೆ. ಆದರೆ, ಬಸ್ಸಿನಲ್ಲಿದ್ದ ಎಲ್ಲಾ 43 ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading

3.5 ಕೋಟಿ ರೂ. ಮೌಲ್ಯದ ಗ್ರಾಹಕರ ಚಿನ್ನವನ್ನು ಅಡಮಾನ ಇಟ್ಟಿದ್ದ ಬ್ಯಾಂಕ್ ಅಧಿಕಾರಿ ಬಂಧನ

ತನಿಖೆಯ ಸಮಯದಲ್ಲಿ ಆರೋಪಿಗಳು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಹಣವನ್ನು ಖರ್ಚು ಮಾಡಿದ್ದಾರೆ ಎಂಬುದು ಪತ್ತೆಯಾಗಿದೆ. ಪ್ರಕರಣ ಸಂಬಂಧ ಆರೋಪಿ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಅನ್ನು ಬಂಧಿಸಲಾಗಿದೆ. ನಾವು ಚಿನ್ನವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಇಲ್ಲಿಯವರೆಗೆ ಸುಮಾರು 700 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಲೋಕೇಶ್ ಬಿ ಜಗಲಾಸರ್ ಹೇಳಿದರು. ಇದೇ ವೇಳೆ, ಗ್ರಾಹಕರಿಗೆ ಬ್ಯಾಂಕ್ ಲಾಕರ್‌ಗಳಲ್ಲಿ ಇರಿಸಲಾಗಿರುವ ತಮ್ಮ ಆಭರಣಗಳ ಸುರಕ್ಷತೆ ಮತ್ತು ಸ್ಥಿತಿಯನ್ನು ಪರಿಶೀಲಿಸುವಂತೆ ಪೊಲೀಸರು ಸಲಹೆ ನೀಡಿದರು.

Continue Reading

ಕೊಲೆ ಆರೋಪ ; ಮಾಜಿ ಸಚಿವ ಬೈರತಿ ಬಸವರಾಜ್ ಬಂಧನ

ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ ಬೈರತಿ ಬಸವರಾಜ್ ಅವರು ಇಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ದೇವನಹಳ್ಳಿ ಎಸಿಪಿ ಹರ್ಷ ಅವರ ನೇತೃತ್ವದ ಪೊಲೀಸ್ ತಂಡ ಹಾಗೂ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು. ಶಾಸಕರು ಬರುತ್ತಿದ್ದಂತೆಯೇ ವಶಕ್ಕೆ ಪಡೆಯಲು ಟರ್ಮಿನಲ್ 1ರ ಬಳಿ ಭಾರೀ ಬಂದೋಬಸ್ತ್ ಮಾಡಲಾಗಿತ್ತು. ಕೆಎಸ್ಆರ್ಪಿ (KSRP) ತುಕಡಿಗಳನ್ನು ಕೂಡ ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಲಾಗಿತ್ತು. ಅಹಮದಾಬಾದ್‌ನಿಂದ ಹೊರಟಿದ್ದ ಇಂಡಿಗೋ ವಿಮಾನ (6E683) ಸಂಜೆ […]

Continue Reading