Category: ಶಿವಮೊಗ್ಗ
ಶಿವಮೊಗ್ಗ | ಧಿಡೀರನೆ ಹೊತ್ತು ಉರಿದ ಲಾರಿ ; ತಪ್ಪಿದ ಭಾರಿ ಅನಾಹುತ
ಶೇಷಾದ್ರಿಪುರಂ ರೈಲ್ವೆ ಮೇಲ್ ಸೇತುವೆಯ ಕೆಳಭಾಗದಲ್ಲಿ ನಿಂತ್ತಿದ್ದ ಈ ಲಾರಿ ಸಾಮಗ್ರಿಗಳನ್ನು ತುಂಬಲು ಬಂದಾಗ ಖಾಲಿ ಲಾರಿಯಾಗಿತ್ತು. ಕೆ.ಎ.-೨೫ಬಿ-೦೮೫೫ ಎಸ್ಕೆಪಿ ರೋಡ್ ಲೈನ್ಸ್ನ ಮಹಮ್ಮದ್ ಆಬಿದ್ ಅವರಿಗೆ ಸೇರಿದ ಲಾರಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿಯ ಮುಂಭಾಗ ಮತ್ತು ಇಂಜಿನ್ ಸಂಪೂರ್ಣ ಸುಟ್ಟು ಹೋಗಿದೆ ಎಂದು ತಿಳಿದುಬಂದಿದೆ .
Continue Readingಶಿವಮೊಗ್ಗ | ಅಮೃತ ಲೈಫ್ ಲೈನ್ ವೈದ್ಯರ ಎಡವಟ್ಟಿಗೆ ಮಹಿಳ ರೋಗಿಯ ಜೀವನ್ಮರಣದ ಹೋರಾಟ
ಮಾರ್ಚ್ 12ರಂದು ವೈದ್ಯರು ಇವರಿಗೆ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ನೀಡಲಾದ ಅನಸ್ತೇಶಿಯಾ (ಮತ್ತು ಮದ್ದು) ಪ್ರಮಾಣ ಮಿತಿ ಮೀರಿದ್ದರಿಂದ ಮಾರ್ಚ್ 13ರಿಂದಲೇ ಮಹಿಳೆಯ ದೇಹದಲ್ಲಿ ಯಾವುದೇ ಚಲನವಲನ ಇಲ್ಲದಂತಾಗಿದೆ. ಶಸ್ತ್ರಚಿಕಿತ್ಸೆ ಮುಗಿದು ದಿನಗಳೇ ಕಳೆದರೂ ದೇವಿ ಬಾಯಿ ಅವರು ಪ್ರಜ್ಞಾವಸ್ಥೆಗೆ ಬಂದಿಲ್ಲ. ವೈದ್ಯರ ಯಡವಟ್ಟಿನಿಂದಾಗಿ ಅವರು ಕೋಮಾ ಸ್ಥಿತಿಗೆ ತಲುಪಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಆಸ್ಪತ್ರೆಯ ವೈದ್ಯರ ಸಲಹೆಯಂತೆ ನಂತರ ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿಯೂ ಪರಿಸ್ಥಿತಿ […]
Continue Readingಶಿವಮೊಗ್ಗ | ಒಳಮೀಸಲಾತಿ ಜಾರಿಗೊಳಿಸಿ ; ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ
ಒಳಮೀಸಲಾತಿ ಜಾರಿಗೆ ಯಾವುದೇ ತಾಂತ್ರಿಕ ಅಡಚಣೆ ಅಥವಾ ನ್ಯಾಯಾಲಯದ ತಡೆಯಾಜ್ಞೆ ಇಲ್ಲದಿದ್ದರೂ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಸಂಘಟನೆಗಳು ಆರೋಪಿಸಿದವು. ಈ ಹಿನ್ನೆಲೆಯಲ್ಲಿ ಸಮುದಾಯದ ಉದ್ಯೋಗಾವಕಾಶಗಳು ಕಳೆದು ಹೋಗುವ ಭೀತಿ ವ್ಯಕ್ತವಾಗಿದೆ ಎಂದರು. ಮುಖ್ಯ ಹಕ್ಕೊತ್ತಾಯಗಳು 56,432 ಹುದ್ದೆಗಳ ನೇಮಕಾತಿ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಬೇಕುಒಳಮೀಸಲಾತಿ ಜಾರಿ ಮಾಡಿ ಜನಸಂಖ್ಯೆ ಅನುಗುಣ ಉದ್ಯೋಗ ಹಂಚಿಕೆ ಮಾಡಬೇಕು. ವಿಶ್ವವಿದ್ಯಾಲಯಗಳನ್ನು ಒಂದೇ ಘಟಕವಾಗಿ ಪರಿಗಣಿಸುವ ಕ್ರಮ ಕೈಬಿಡಬೇಕುಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕುಎಸ್ಸಿ/ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿ ಸಂವಿಧಾನದ 9ನೇ […]
Continue Readingಶಿವಮೊಗ್ಗ | ಉದ್ಯಮಿಗೆ ಬೆಳಗಾವಿ ಜೈಲಿನಿಂದ ರೌಡಿ ಫೌಝನ್ ಬೆದರಿಕೆ ಕರೆ
ಇದರಿಂದ ಬೇಸತ್ತ ಉದ್ಯಮಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ. ಪೊಲೀಸ್ ತನಿಖೆಯ ವೇಳೆ ಉದ್ಯಮಿಯ ಮೊಬೈಲ್ಗೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಇಂಟರ್ನೆಟ್ ಕರೆಗಳುಬಂದಿರುವುದು ದೃಢಪಟ್ಟಿದೆ. ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಈ ಕ್ರಿಮಿನಲ್, ಹೊರಗಿರುವ ತನ್ನ ಬೆಂಬಲಿಗರ ಮೂಲಕ ಇಂತಹ ಸುಲಿಗೆ ಸಂಚು ರೂಪಿಸುತ್ತಿರುವುದು ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ದೊಡ್ಡಪೇಟೆ ಪೊಲೀಸರು ಈ ಕುರಿತು ಎಫ್ಐಆರ್ ದಾಖಲಿಸಿಕೊಂಡಿದ್ದು, ಜೈಲಿನಿಂದ ಬಂದ ಕರೆಯ ಮೂಲ ಹಾಗೂ ಸ್ಥಳೀಯವಾಗಿ ಸಹಕರಿಸಿದವರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
Continue Readingದಾವಣಗೆರೆ ದಕ್ಷಿಣ ಉಪಚುನಾವಣೆ ; ಕುಬೇರ ವರ್ಸಸ್ ಸಾಮಾನ್ಯ ವ್ಯಕ್ತಿಯ ಮಧ್ಯೆ ಚುನಾವಣೆ : ಸಂಸದ ಬಿ. ವೈ. ರಾಘವೇಂದ್ರ
ಸಕಾರಾತ್ಮಕವಾಗಿ ಅವರು ಸ್ಪಂದಿಸಿದ್ದು ಮೇ ತಿಂಗಳಿಂದ ಇಂಡಿಗೋ ಯಾನ ನಿಲ್ಲಿಸದಂತೆ ನಾನು ಕೂಡ ಹಲವು ಬಾರಿ ಮನವಿ ಮಾಡಿದ್ದೇನೆ. ಶಿವಮೊಗ್ಗ-ಬೆಂಗಳೂರು ವಿಮಾನ ಮಾರ್ಗ ಉಡಾನ್ ಯೋಜನೆಯಡಿ ಬರುವುದಿಲ್ಲ ಎಂದರು. ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಬಗ್ಗೆ ಮಾvನಾಡಿದ ಸಂಸದರು, ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರ ಮತ್ತು ರಾಜ್ಯ ೬೦-೪೦ರ ಅನುಪಾತದಲ್ಲಿ ಈ ಯೋಜನೆಗೆ ಚಿಂತಿಸಿತ್ತು, ಆದರೆ ಕೇಂದ್ರ ಇನ್ನೂ ಅಧಿಕೃತ ಒಪ್ಪಿಗೆ ನೀಡಿಲ್ಲ. ಸದ್ಯಕ್ಕೆ ಪರಿಸರದ ದೃಷ್ಟಿಯಿಂದ ಯೋಜನೆ ಯನ್ನು ತಡೆಹಿಡಿಯುವ ಕೆಲಸ ಆಗಿದೆ. ಯಾವುದೇ […]
Continue Readingಶಿವಮೊಗ್ಗ | ಭಾರಿ ಮಳೆಯಿಂದ ವಾಹನದ ಮೇಲೆ ಬಿದ್ದ ತೆಂಗಿನಮರ
ಘಟನೆಯ ವೇಳೆ ಯಾರೂ ವಾಹನದ ಒಳಗೆ ಇಲ್ಲದಿರುವುದು ದೊಡ್ಡ ಅಪಾಯವನ್ನು ತಪ್ಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಳಿ ಮಳೆಯ ತೀವ್ರತೆಗೆ ಕೆಲಕಾಲ ಜನರಲ್ಲಿ ಆತಂಕ ಉಂಟಾಗಿತ್ತು. ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪಿಎಸ್ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರವನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಸ್ಥಳೀಯರ ಸಹಾಯದಿಂದ ಕ್ರಮ ಕೈಗೊಳ್ಳಲಾಗಿದೆ.
Continue Readingಶಿವಮೊಗ್ಗ | ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ : ಸಂಚಾರಿ ಪೊಲೀಸ್ ವೈ.ಸುರೇಶ್ ಕುಮಾರ್
ಇತ್ತೀಚಿನ ದಿನಗಳಲ್ಲಿ ವ್ಹೀಲಿಂಗ್ ಮಾಡುವುದು, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ಅಪಘಾತಗಳ ಪ್ರಮಾಣ ಸಂಖ್ಯೆ ಹೆಚ್ಚುತ್ತಿದೆ. ಯುವಜನರು ವಾಹನ ಓಡಿಸುವಾಗ ಏಕಾಗ್ರತೆಯಿಂದ ಎಚ್ಚರಿಕೆ ವಹಿಸಬೇಕು ಎಂದರು. ಈಗಾಗಲೇ ಶಿವಮೊಗ್ಗದಲ್ಲಿ ನಾಲ್ಕು ಸಾವಿರ ಸಿಸಿ ಕ್ಯಾಮರಾಗಳು ಚಾಲನೆಯಲ್ಲಿವೆ. ಬರುವ ದಿನಗಳಲ್ಲಿ ಹೊಸ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಇಂತಹ ಜಾಗೃತಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ತಿಳಿಸುವುದರ ಮುಖಾಂತರ ಅಪಘಾತಗಳನ್ನು ತಪ್ಪಿಸಬೇಕು. 18 […]
Continue Reading
