ಶಿವಮೊಗ್ಗ | ರಾಜಕಾಲುವೆ ಒತ್ತುವರಿ ತೆರವು ಎಂಬ ಮಾಯಾಂಗನೆ…! ಮತ್ತದರ ಬೃಹನ್ನಾಟಕ..!!

ಆದರೆ ಈ ಸಂಬಂಧ ಇಲ್ಲಿವರೆಗೂ ಮಹಾನಗರ ಪಾಲಿಕೆ ಒತ್ತುವರಿ ಆಗಿರುವ ರಾಜಕಾಲುವೆ ತೆರವುಗೊಳಿಸದೇ ವಿಳಂಬ ಪ್ರಕ್ರಿಯೆ ನೆಹರು ರಸ್ತೆಯ ವರ್ತಕರಲ್ಲಿ ಆಕ್ರೋಶ ಹೆಚ್ಚಾಗಿದೆ . ರಾಜಕಾಲುವೆಯ ಒತ್ತುವರಿ ತೆರವಾದರೆ ಕನ್ಸರ್ವನ್ಸಿ ಪಾರ್ಕಿಂಗ್ ವ್ಯವಸ್ಥೆಗೆ ಚಾಲನೆ ಸಿಗಲಿದೆ. ಕನ್ಸರ್ವೆನ್ಸಿ ಪಾರ್ಕಿಂಗ್ ಆರಂಭವಾದರೆ ರಸ್ತೆಯ ಮೇಲೆ ವಾಹನಗಳ ಪಾರ್ಕಿಂಗ್ಗೆ ಇರುವ ಒತ್ತಡ ಕಡಿಮೆಯಾಗಲಿದೆ. ನೀರು ರಸ್ತೆಯ ವರ್ತಕರ ವಾಹನಗಳು ಮತ್ತು ಕೆಲಸಗಾರರ ವಾಹನಗಳು ಪಾರ್ಕಿಂಗ್ ವ್ಯವಸ್ಥೆಯಲ್ಲಿ ನಿಲ್ಲಿಸಿದರೆ ಅಂಗಡಿಗಳಿಗೆ ಬರುವ ಗ್ರಾಹಕರು ವಾಹನಗಳನ್ನು ನಿಲ್ಲಿಸಿ ಸುಗಮವಾಗಿ ವ್ಯಾಪಾರ ವಹಿವಾಟು ನಡೆಸುವ […]

Continue Reading

ಶಿವಮೊಗ್ಗ | ದೊಡ್ಡ ದಾನವಂದಿ ಶಾಲೆಯಲ್ಲಿ ಮಕ್ಕಳ ಸಂತೆ-ಗಣಿತ ಕಲಿಕೆಗೆ ಹೊಸ ದಾರಿ

ಈ ರೀತಿಯ ಚಟುವಟಿಕೆಗಳು ಕಲಿಕೆಯನ್ನು ಕೇವಲ ಪುಸ್ತಕಗಳಿಗೆ ಸೀಮಿತಗೊಳಿಸದೆ ಬದುಕಿನ ಅನುಭವದೊಂದಿಗೆ ಜೋಡಿಸುತ್ತವೆ ಎಂದು ಹೇಳಿದರು.ಎಸ್‌ಡಿಎಂಸಿ ಅಧ್ಯಕ್ಷೆ ಮಾಲಾ ಮಾತನಾಡಿ, ಶಾಲೆಯಲ್ಲಿ ಈ ರೀತಿಯ ಸಂತೆ ಆಯೋಜಿಸಿರುವುದು ಬಹಳ ಸಂತೋಷ ತಂದಿದೆ. ಮಕ್ಕಳಿಗೆ ವಿಶೇಷವಾಗಿ ಗಣಿತ ವಿಷಯವನ್ನು ಸರಳವಾಗಿ ಮತ್ತು ಆಸಕ್ತಿಯಿಂದ ಕಲಿಯಲು ಇದು ಉತ್ತಮ ಅವಕಾಶವಾಗಿದೆ. ತಮ್ಮ ಸ್ವಂತ ಅನುಭವದ ಮೂಲಕ ಮಕ್ಕಳು ಕಲಿಯುತ್ತಿರುವುದು ಅತ್ಯಂತ ಸಂತೋಷದ ಸಂಗತಿ ಎಂದು ಅಭಿಪ್ರಾಯಪಟ್ಟರು. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನಮ್ಮ ಮಾತನಾಡಿ, ಹಿಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ನಡೆಯುತ್ತಿದ್ದ […]

Continue Reading

ಶಿವಮೊಗ್ಗ | ಭದ್ರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾರದಾ ಪೂಜೆ ಮಕ್ಕಳ ಹಕ್ಕುಗಳ ಬಗ್ಗೆ ಅರಿವು

ಸಂವಾದದಲ್ಲಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳಿ, ಸರಿಯಾದ ಉತ್ತರ ನೀಡಿದ ಮಕ್ಕಳಿಗೆ ಪುಸ್ತಕಗಳನ್ನು ನೀಡಿ ಪ್ರೋತ್ಸಾಹಿಸಿದರು.ಇದೇ ಸಂದರ್ಭದಲ್ಲಿ ಶಾಲೆಯಿಂದ ವರ್ಗಾವಣೆ ಹೊಂದಿರುವ ಶಿಕ್ಷಕರಾದ ವಿಜಯಕುಮಾರ್ ಅವರಿಗೆ ಶಾಲಾ ವತಿಯಿಂದ ಸನ್ಮಾನ ಹಾಗೂ ಬೀಳ್ಕೊಡುಗೆ ನೀಡಲಾಯಿತು. ಹಲವು ವರ್ಷಗಳಿಂದ ಶಾಲೆಯಲ್ಲಿ ಸೇವೆ ಸಲ್ಲಿಸಿದ ಅವರು ಮಕ್ಕಳ ಸ್ನೇಹಿಯಾಗಿ, ಹಿರಿಯ ಅಣ್ಣನಂತೆ ನಡೆದು ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಲು ಶ್ರಮಿಸಿದ್ದಾರೆ ಎಂದು ಶಿಕ್ಷಕರು ಹಾಗೂ ಪೋಷಕರು ಕೊಂಡಾಡಿದರು. ಕಾರ್ಯಕ್ರಮಕ್ಕೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಎಸ್. ಹರೀಶ್ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಸದಸ್ಯರಾದ […]

Continue Reading

‘ನವ ಕರ್ನಾಟಕದ ನಿರ್ಮಾಣ’ಕ್ಕೆ ಹೊಸ ಶಕ್ತಿ ತುಂಬಿದ ಬಜೆಟ್ : ಸಚಿವ ಮಧು ಬಂಗಾರಪ್ಪ

ಶೈಕ್ಷಣಿಕ ಮೂಲಸೌಕರ್ಯ, ಬೋಧಕ ಸಿಬ್ಬಂದಿಯ ಬಲವರ್ಧನೆ ಮತ್ತು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕೆ ಪೂರಕವಾದ ಯೋಜನೆಗಳನ್ನು ಘೋಷಿಸುವ ಮೂಲಕ ಸರ್ಕಾರವು ಜ್ಞಾನಾಧಾರಿತ ಸಮಾಜ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ.ಅದೇ ರೀತಿ, ನನ್ನ ತವರು ಜಿಲ್ಲೆಯಾದ ಶಿವಮೊಗ್ಗದ ಸಾಂಸ್ಕೃತಿಕ ಮತ್ತು ಆರ್ಥಿಕ ಪ್ರಗತಿಗೆ ನೀಡಿರುವ ವಿಶೇಷ ಕೊಡುಗೆಗಳು ಹಾಗೂ ಹಿಂದುಳಿದ ವರ್ಗಗಳ ಆರ್ಥಿಕ ಮತ್ತು ಶೈಕ್ಷಣಿಕ ಉನ್ನತಿಗಾಗಿ ಘೋಷಿಸಲಾಗಿರುವ ಕ್ರಾಂತಿಕಾರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಜನರ ಹಾಗೂ ಸಮುದಾಯದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ . […]

Continue Reading

ತುಷ್ಟೀಕರಣ ರಾಜಕಾರಣ ಬಿಟ್ಟು ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ರಾಜ್ಯ ಸರ್ಕಾರಕ್ಕೆ ಡಿ.ಎಸ್. ಅರುಣ್ ಆಗ್ರಹ

ಮತ್ತೊಂದೆಡೆ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ್ ಹಾಗೂ ತಮಿಳುನಾಡು ಮುಂತಾದ ರಾಜ್ಯಗಳು ಭಾರೀ ಪ್ರಮಾಣದಲ್ಲಿ ಕೈಗಾರಿಕಾ ಹೂಡಿಕೆಗಳನ್ನು ಆಕರ್ಷಿಸಿ ಉದ್ಯೋಗ ಸೃಷ್ಟಿಯಲ್ಲಿ ಮುಂಚೂಣಿಯಲ್ಲಿ ಸಾಗುತ್ತಿರುವಾಗ, ಕರ್ನಾಟಕದಲ್ಲಿ ಆಡಳಿತಾತ್ಮಕ ವಿಳಂಬ, ಹೆಚ್ಚುತ್ತಿರುವ ತೆರಿಗೆಗಳು ಹಾಗೂ ಅನಿಶ್ಚಿತ ನೀತಿಗಳ ಪರಿಣಾಮವಾಗಿ ಹೂಡಿಕೆದಾರರು ಹಿಂಜರಿಯುತ್ತಿರುವುದು ಸ್ಪಷ್ಟವಾಗಿದೆ. ವಿದ್ಯುತ್ ದರ ಹಾಗೂ ಭೂಮಿಯ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ಕೈಗಾರಿಕೆಗಳು ಇತರ ರಾಜ್ಯಗಳತ್ತ ಮುಖ ಮಾಡುತ್ತಿರುವುದು ರಾಜ್ಯದ ಆರ್ಥಿಕತೆಗೆ ಹಿನ್ನಡೆಯಾಗಿದೆ.ಅತ್ಯಂತ ಮುಖ್ಯವಾಗಿ, *ರಾಜ್ಯದ ಯುವಕರು ಇಂದು ಉದ್ಯೋಗಕ್ಕಾಗಿ ಆತಂಕದಲ್ಲಿದ್ದಾರೆ. ಬಜೆಟ್‌ನಲ್ಲಿ ಉದ್ಯೋಗದ ಬಗ್ಗೆ ಹಲವಾರು […]

Continue Reading

ಹಾವೇರಿ | ಫೀಸ್ ಕಟ್ಟದಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದೇ ದರ್ಪ ತೋರಿದ್ದ ಶಿಕ್ಷಕಿ ಅಮಾನತು

ಸಾರಾ ಜೆಸ್ಸಿಕಾ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ರಾಣೆಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿಗೆ ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ಬಿ ಶುಲ್ಕ ಕಟ್ಟಿಲ್ಲ ಅಂತ ಪರೀಕ್ಷೆಗೆ ಬಿಡದೇ ಸತಾಯಿಸಿದ್ದರು. 30 ಸಾವಿರ ರೂ. ಶುಲ್ಕ ಕಟ್ಟಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹಾಲ್ ಟಿಕೆಟ್ ನೀಡಿಲ್ಲ. ಆದರೂ ವಿದ್ಯಾರ್ಥಿನಿ ಇಂದು (ಫೆ.28) ಕನ್ನಡ ಪರೀಕ್ಷೆ ಬರೆಯಲು ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ವಿದ್ಯಾರ್ಥಿನಿ ಸಾರಾಳನ್ನು ತಡೆದು, ಎಲ್ಲಾ ಕಾಲೇಜಿನವರೂ ಪುಗಸೆಟ್ಟೆ ಕಲಿಸ್ತಾರಾ? ಎಂದಿದ್ದರು.ಈ […]

Continue Reading

ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್ : ಚೇತನ್ ಗೌಡ ಅಭಿಪ್ರಾಯ

ಹಾಗೆಯೇ ನಾಡಿನ ಉಜ್ವಲ ಭವಿಷ್ಯವನ್ನು ಕಟ್ಟುವ ದೃಷ್ಟಿಯಿಂದ ಈ ಬಜೆಟ್ ರೂಪಿತವಾಗಿದ್ದು, ನಾಡಿನ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸುವ ದೂರದೃಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿಗೆ ಬಜೆಟ್ ಮಂಡಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಜನಪರ ಸರ್ಕಾರ ಎನ್ನುವುದನ್ನು ಸಾಬೀತು ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ದುರ್ಗಿಗುಡಿಯಲ್ಲಿ ಸಂಚಾರಿ ಪೊಲೀಸರಿಂದ ಸುಗಮ ಸಂಚಾರಕ್ಕೆ ಕ್ರಮ

ಮುಖ್ಯ ರಸ್ತೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ತಳ್ಳುವ ಗಾಡಿಗಳಿಗೆ ಶಾಶ್ವತವಾಗಿ ನಿಲ್ಲಲು ಅವಕಾಶವಿಲ್ಲ ಎಂದು ಟ್ರಾಫಿಕ್ ನಿರೀಕ್ಷಕರು ತಿಳಿಸಿದ್ದಾರೆ. ಅಲ್ಲದೆ ಆಟೋ ಚಾಲಕರು ಕೂಡ ಮನಬಂದಂತೆ ಆಟೋಗಳನ್ನು ನಿಲ್ಲಿಸುತ್ತಿದ್ದು ಅವರು ನಿಗದಿತ ಜಾಗದಲ್ಲಿ ಪಾರ್ಕಿಂಗ್ ಮಾಡಬೇಕು. ಸಂಚಾರಿ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು. ವ್ಯಾಪಾರಸ್ಥರು ಕೂಡ ಅದನ್ನು ಪಾಲಿಸಬೇಕು. ಅಲ್ಲದೆ ಕನ್ಸರ್ವನ್ಸಿಗಳನ್ನು ತಮ್ಮ ದ್ವಿಚಕ್ರ ವಾಹನಗಳು ನಿಲುಗಡೆಗೆ ಬಳಸಿಕೊಳ್ಳಬೇಕೆಂದು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ವಿಶ್ವ ಹಿಂದೂ ಪರಿಷದ್ ನಿಂದ ಮಾದಕ ವಸ್ತು ಮತ್ತು ವ್ಯಸನಿಗಳ ವಿರುದ್ದ ಸಮರ

ವಿಶೇಷವಾಗಿ ಹೆಣ್ಣುಮಕ್ಕಳ ಜೊತೆ ಅಶ್ಲೀಲವಾಗಿ ವರ್ತಿಸಿ ಭಯ ಹುಟ್ಟಿಸುವ ನೀಚ ಕೃತ್ಯಗಳು ಹೆಚ್ಚುತ್ತಿವೆ. ಇಷ್ಟೆಲ್ಲಾ ದೌರ್ಜನ್ಯ ನಡೆಯುತ್ತಿದ್ದರೂ ಸರ್ಕಾರ ಮಾತ್ರ ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದರು. ಸೂಳೆಬೈಲ್‌ನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಪೊಲೀಸರು ಇದನ್ನು ಕೇವಲ ಕ್ರಿಕೆಟ್ ವಿಚಾರದ ಗಲಾಟೆ ಎಂದು ಬಿಂಬಿಸುತ್ತಿರುವುದು ತಪ್ಪು ಮಾಹಿತಿಯಾಗಿದೆ. ಇದು ಹಿಂದೂ ಬಾಲಕನನ್ನು ಗುರಿಯಾಗಿಸಿಕೊಂಡು ನಡೆದ ಪೂರ್ವ ಯೋಜಿತ ಕೃತ್ಯವಾಗಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದರು. ಸಾಗರ ತಾಲೂಕಿನಲ್ಲಿಯೂ […]

Continue Reading