ಶಿವಮೊಗ್ಗ | ಗಾಂಜಾ ನಶೆಗೆ ಕಾರು ಪೀಸ್ ಪೀಸ್

ಶರಾವತಿ ನಗರ ಸುತ್ತಮುತ್ತ ವರ್ಷಕ್ಕೊಮ್ಮೆ ಈ ಘಟನೆಗಳು ನಡೆಯುತ್ತಲೇ ಇವೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತಮಾಡಿದ ಸುರೇಶ್ ಅವರ ಸಂಬಂದಿ ಲೋಕೇಶ್ ಗಾಂಜಾ ನಶೆಯಲ್ಲೊ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಕಬ್ಬಿಣದ ರಾಡಿನಿಂದ ವಾಹನವನ್ನ ಹಾನಿಗೊಳಿಸಿದ್ದಾರೆ. ಅತ್ತಿಗೆಯವರ ಅನಾರೋಗ್ಯಕ್ಕಾಗಿ ಅವರನ್ನ ಹೊತ್ತೊಯ್ಯಲು ಕಾರು ಖರೀದಿಸಲಾಗಿತ್ತು. ಕಿಡಿಗೇಡಿಗಳ ಹಾವಳಿಗೆ ಈ ದುರ್ಘಟನೆ ನಡೆದಿದೆ ಎಂದರು. ಸುರೇಶ್ ಅವರ ಪತ್ನಿ ಪ್ರತಿಕ್ರಿಯಿಸಿದ್ದು ಶರಾವತಿ ನಗರದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಮನೆಯಲ್ಲಿ ಮಹಿಳಯರು ಒಬ್ಬರೆ ವಾಸವಾಗಲು ಭಯವಾಗುತ್ತದೆ. ಪೊಲೀಸರ ಬೀಟ್ ಇಲ್ಲದ ಕಾರಣ […]

Continue Reading

ಗದಗ | ದೇವಾಲಯ ನಿರ್ಮಾಣಕ್ಕೆ ಗೃಹಲಕ್ಷ್ಮೀ ಹಣ ದೇಣಿಗೆ ಕೊಟ್ಟ 850 ಮಹಿಳೆಯರು

ದೇವಾಲಯವನ್ನು ಪರಂಪರೆಯ ಶೈಲಿಯಲ್ಲಿ ನಿರ್ಮಿಸಲಾಗುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಭಕ್ತಿಧಾಮ ಹಾಗೂ ಪ್ರವಾಸಿ ಆಕರ್ಷಣೆಯಾಗಲಿದೆ ಎಂದು ಗ್ರಾಮ ಹಿರಿಯರು ಅಭಿಪ್ರಾಯಪಟ್ಟಿದ್ದಾರೆ. ದೇವಾಲಯ ನಿರ್ಮಾಣ ಪೂರ್ಣಗೊಳ್ಳಲು ಸುಮಾರು ರೂ.1 ಕೋಟಿ ವೆಚ್ಚವಾಗುವ ಅಂದಾಜಿಸಲಾಗಿದೆ. ಮಹಿಳೆಯರ ಈ ನಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.ತಿಮ್ಮಾಪುರದ ಮಹಿಳೆಯರು ತಮ್ಮ ಗೃಹಲಕ್ಷ್ಮಿ ಅನುದಾನವನ್ನು ಧಾರ್ಮಿಕ ಕಾರ್ಯಗಳಿಗಾಗಿ ಬಳಸುತ್ತಿದ್ದಾರೆ ಎಂದು ತಿಳಿದು ನಮಗೆ ಸಂತೋಷವಾಯಿತು. ಇದು ಅವರು ತಮ್ಮ ವೈಯಕ್ತಿಕ ಅಗತ್ಯಗಳಿಗಿಂತ ಸಮಾಜದ ಬಗ್ಗೆ ಯೋಚಿಸುತ್ತಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ. […]

Continue Reading

ಶಿವಮೊಗ್ಗ | KSRTC ಬಸ್ ನಿಲ್ದಾಣದಲ್ಲಿ ಯುವತಿಗೆ ಕಿರುಕುಳ ನೀಡುತ್ತಿದ್ದ ಯುವಕ ಅಕ್ಕಪಡೆಯ ವಶಕ್ಕೆ

ಬಂಧಿತ ಯುವಕನನ್ನು ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಆತನ ವಿರುದ್ಧ ಲಘು ಪ್ರಕರಣ ದಾಖಲಿಸಲಾಗಿದೆ. ನಂತರ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.

Continue Reading

ನಗರ ಪೊಲೀಸರಿಂದ ಅಂತರ್ ಜಿಲ್ಲಾ ಕಳ್ಳರ ಬಂಧನ

ಬಂಧಿತರಿಂದ ಒಟ್ಟು 3.87 ಲಕ್ಷ ರೂ. ಮೌಲ್ಯದ 30 ಗ್ರಾಂ ತೂಕದ ಚಿನ್ನದ ನೆಕ್ಲಸ್, 93 ಸಾವಿರ ರೂ. ಮೌಲ್ಯದ 6 ಗ್ರಾಂ ಬ್ರೇಸ್‌ಲೆಟ್, 50 ಗ್ರಾಂ ಬೆಳ್ಳಿ ಪದಾರ್ಥಗಳು, ಮೊಬೈಲ್ ಫೋನ್ ಹಾಗೂ ಕಳ್ಳತನಕ್ಕೆ ಬಳಸಿದ್ದ ಇಟಿಯೋಸ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Continue Reading

ಶಿವಮೊಗ್ಗ | ಮಾರಕಾಸ್ತ್ರ ಹಿಡಿದು ಸಂಚರಿಸುತ್ತಿದ್ದ ಇಬ್ಬರು ಸೆರೆ

ವಿಚಾರಣೆ ವೇಳೆ ಆರೋಪಿಗಳು ಸಮರ್ಪಕ ಉತ್ತರ ನೀಡಿಲ್ಲ. ಹೀಗಾಗಿ ಆರ್ಮ್ಸ್​ ಆಕ್ಟ್​ ಅಡಿಯಲ್ಲಿ ಕೇಸ್ ದಾಖಲಿಸಿ, ಇಬ್ಬರನ್ನು ಬಂಧನಕ್ಕೆ ಒಳಪಡಿಸಿದ್ದರು. ಈ ಬಗ್ಗೆ ತನಿಖೆ ಮುಂದುವರಿದಿದೆ.

Continue Reading

ದಾವಣಗೆರೆಯ ಜೈನ ಸಮಾಜದ ನಾಲ್ವರಿಂದ ಸನ್ಯಾಸ ದೀಕ್ಷೆ ಸ್ವೀಕಾರ

ಕ್ರುನಾಲಿ ಅವರು ಕಮಲೇಶ್ ಜೈನ್ ಮತ್ತು ಬಬಿತಾ ಜೈನ್ ಅವರ ಪುತ್ರಿ. ವಿಶೇಷವೆಂದರೆ, ಭರತ್ ಜೈನ್ ಹಾಗೂ ಆರತಿ ದಂಪತಿಯ ಇಬ್ಬರು ಪುತ್ರರು ಮೂರು ವರ್ಷಗಳ ಹಿಂದೆ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಮಗ್ನಶೇಖರ್ ವಿಜಯ್ ಮಹಾರಾಜ್ (28) ಹಾಗೂ ಪೂರ್ಣಶೇಖರ್ ವಿಜಯ್ (25) ಈಗ ಧಾರ್ಮಿಕ ಕೈಂಕರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಪುತ್ರರ ಮಾರ್ಗವನ್ನು ಅನುಸರಿಸಿ ದಂಪತಿಗಳೂ ಈಗ ಗ್ರಹಸ್ಥಾಶ್ರಮ ತ್ಯಜಿಸಿ ಧರ್ಮ ಮಾರ್ಗವನ್ನು ಆರಿಸಿಕೊಂಡಿದ್ದಾರೆ.

Continue Reading

ಊರು ತುಂಬೆಲ್ಲಾ ಸಾಲ ಪಡೆದಿದ್ದಾನೆಂದು ಪೋಸ್ಟರ್ ಅಂಟಿಸಿ ವ್ಯಕ್ತಿಗೆ ಅವಮಾನ

ಸಿದ್ದರಾಜಯ್ಯ ಅವರು ಕುರಂಕೋಟೆ ಗ್ರಾಮದ ನಿವಾಸಿಯಾಗಿದ್ದಾರೆ. ಸಿದ್ದರಾಜು ಸಾಲಕ್ಕೆ ಜಾಮೀನು ನೀಡಿರುವ ವ್ಯಕ್ತಿಯ ಫೋಟೋ ಸಹ ಪೋಸ್ಟರ್‌ನಲ್ಲಿ ಹಾಕಲಾಗಿದೆ. ಕೊಡಚಾದ್ರಿ ಚಿಟ್ಸ್ ಕಂಪನಿ ಕುರಂಕೋಟೆ ಗ್ರಾಮದ ಶುದ್ದ ಕುಡಿಯುವ ನೀರಿನ ಘಟಕ, ಬಸ್ ನಿಲ್ದಾಣ, ಹಾಗೂ ಊರಿನ ಪ್ರಮುಖ ರಸ್ತೆಯಲ್ಲಿ ಪೊಸ್ಟರ್ ಅಂಟಿಸಲಾಗಿದೆ. ಹಣಕಾಸಿನ ಸಂಸ್ಥೆ ಹೆಸರಿನಲ್ಲಿ ಈ ರೀತಿಯ ಪೋಸ್ಟರ್ ಅಂಟಿಸಲಾಗಿದೆ. ಇನ್ನು ಪೋಸ್ಟರ್ ಕಾಣುತ್ತಿದ್ದಂತೆ ಸಿದ್ದರಾಜಯ್ಯ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಹಣಕಾಸಿನ ಸಂಸ್ಥೆ ಘಟಕಕ್ಕೆ ಬಂದಿದ್ದಾರೆ. ನಾವು ಈ ರೀತಿಯಲ್ಲಿ ಪೋಸ್ಟರ್ ಅಂಟಿಸಲ್ಲ. […]

Continue Reading

ಶಿವಮೊಗ್ಗ | ಮಲವಗೋಪ್ಪದ ಜನತಾ ಶಾಲೆಗೆ ಉತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಮಕ್ಕಳ ಕಲಿಕೆ, ಸಹಪಠ್ಯ ಚಟುವಟಿಕೆಯಲ್ಲಿ ಮಕ್ಕಳ ಭಾಗವಹಿಸುವಿಕೆ ಉತ್ತಮವಾಗಿದೆ. ಮಕ್ಕಳ ದಸರಾ, ಗಣರಾಜ್ಯ ದಿನ, ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಶಾಲೆಯ ಮಕ್ಕಳು ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಮಲವಗೊಪ್ಪದ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ತುಳಸಿ ಅಡಿಗ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ರಕ್ತದಾನ ಜೀವಮಾನದ ಮಹಾದಾನ : ಡಾ. ತಿಮ್ಮಪ್ಪ ಟಿ.ಡಿ. ಅಭಿಪ್ರಾಯ

ರಕ್ತದಾನದ ಕುರಿತು ಇಂದು ಸಾಕಷ್ಟು ಜಾಗೃತಿ ಮೂಡಿದ್ದು ರಕ್ತದಾನಿಗಳ ಸಂಖ್ಯೆ ಹೆಚ್ಚು ಆಗುತ್ತಿರುವುದು ಸಂತೋಷದಾಯಕವಾದ ಸಂಗತಿ ಆಗಿದೆ ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಪ್ರಾಚಾರ್ಯರಾದ ಡಾ. ಟಿ. ಅವಿನಾಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದು ಜಗತ್ತಿನಲ್ಲಿ ರಕ್ತ ಚೆಲ್ಲುವ ರಕ್ತ ಬಯಸುವ ವಿದ್ಯಮಾನಗಳು ನಡೆಯುತ್ತಿವೆ. ಎಲ್ಲೆಲ್ಲೂ ಹಿಂಸೆ ತಾಂಡವವಾಡುತ್ತಿದೆ. ಇಂಥ ಸಂದರ್ಭದಲ್ಲಿ ನಮ್ಮ ವಿದ್ಯಾರ್ಥಿಗಳು ರಕ್ತದಾನ ಮಾಡುತ್ತಿರುವುದು ಸಮಾಜಕ್ಕೆ ಶುಭ ಸಂದೇಶವನ್ನು ನೀಡುವ ಸಂಗತಿಯಾಗಿದೆ. ರಕ್ತದಾನಿಗಳು ಆತ್ಮವಿಶ್ವಾಸದಿಂದ ರಕ್ತದಾನ ಮಾಡುವುದರ ಮೂಲಕ ಸಮಾಜ ಕಾರ್ಯದಲ್ಲಿ ತಮ್ಮನ್ನು […]

Continue Reading