ಶಿವಮೊಗ್ಗ | ಮೃಗಲಾಯದಲ್ಲಿ ನೀರಾನೆ ಹಠಾತ್ ದಾಳಿ ; ಪಶು ವೈದ್ಯೆ ಸಾವು : ತನಿಖೆಗೆ ಅದೇಶಿಸಿದ ಸಚಿವರು

ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿವಮೊಗ್ಗದ ಮ್ಯಾಕ್ಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 6:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಶಿವಮೊಗ್ಗ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ದುರಂತದ ಕುರಿತು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ತಂಡವು ಕೂಲಂಕಷವಾಗಿ ತನಿಖೆ ನಡೆಸಲಿದೆ. […]

Continue Reading

ಆಟವಾಡುತ್ತಾ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ ; ಪ್ರಾಣದ ಹಂಗುತೊರೆದು ಮಗುವನ್ನು ರಕ್ಷಿಸಿದ ಆಪದ್ಬಾಂಧವ

ಗಾಬರಿಯಿಂದ ಮನೆಯೊಳಗೆಲ್ಲಾ ಹುಡುಕಿದರೂ ಮಗು ಸಿಗಲಿಲ್ಲ. ಕೊನೆಗೆ ಅನುಮಾನಗೊಂಡು ಮನೆಯ ಹಿಂದಿನ ಬಾವಿಯ ಬಳಿ ಹೋಗಿ ಇಣುಕಿ ನೋಡಿದಾಗ, ಬಾವಿಯೊಳಗಿನಿಂದ ಮಗುವಿನ ಅಳುವಿನ ಶಬ್ದ ಕೇಳಿಸಿದೆ. ಪುಟ್ಟ ಭುವಿ ಬಾವಿಯಲ್ಲಿದ್ದ ನೀರಿನ ಪಂಪ್‌ನ ಪೈಪ್‌ ಅನ್ನು ಗಟ್ಟಿಯಾಗಿ ಹಿಡಿದುಕೊಂಡು, ನೀರಿನ ಮೇಲೆ ಒದ್ದಾಡುತ್ತಾ ಅಳುತ್ತಿದ್ದಳು.ಅಜ್ಜಿಯ ಕೂಗಾಟ ಕೇಳಿ ತಕ್ಷಣವೇ ಅಕ್ಕಪಕ್ಕದವರು ಓಡಿಬಂದಿದ್ದಾರೆ. ಈ ಆತಂಕದ ಸುದ್ದಿ ಹತ್ತಿರದಲ್ಲೇ ವಾಸವಿದ್ದ ಪಯ್ಯು ಚೌಟಿ ಅವರಿಗೂ ತಲುಪಿದೆ. ಆಗಷ್ಟೇ ಬೆಂಗಳೂರಿಗೆ ಹೊರಡಲು ಸಿದ್ಧರಾಗಿದ್ದ ಅವರು, ವಿಷಯ ತಿಳಿದ ಕೂಡಲೇ ಒಂದು […]

Continue Reading

ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ನೋಟೀಸ್

ಪೊಲೀಸ್ ಇಲಾಖೆಯ ಶಿಫಾರಸ್ಸಿನ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು, ಅಹಮದ್, ಫಾರೂಕ್, ಇಬ್ರಾಹಿಂ ಅಲಿಯಾಸ್ ಇಬ್ಬು ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್, ಫಾಜಿಲ್ ಅಹಮದ್‌, ಜಾವೀದ್ […]

Continue Reading

ಶಿವಮೊಗ್ಗ | ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ರಾಮನವಮಿ ಉತ್ಸವ

ಮಾ.19 (ಗುರುವಾರ) – ಯುಗಾದಿ ಹಬ್ಬದ ಅಂಗವಾಗಿ ಪಂಚಾಂಗ ಶ್ರವಣ, ಮಹಾವಿಷ್ಣು ಅಲಂಕಾರ ಮಾ.20 (ಶುಕ್ರವಾರ) – ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ವಿಶ್ವಾಮಿತ್ರ ಯಜ್ಞ ಸಂರಕ್ಷಣೆ ಅಲಂಕಾರ ಮಾ.21 (ಶನಿವಾರ) – ಉಪನ್ಯಾಸ ಕಾರ್ಯಕ್ರಮ (ಸೀತಾ ಪರಿಹಾರ), ಅಹಲ್ಯಾ ಶಾಪ ವಿಮೋಚನೆ ಅಲಂಕಾರ ಮಾ.22 (ಭಾನುವಾರ) – ಶಾಸ್ತ್ರೀಯ ಸಂಗೀತ, ಸೀತಾ ಕಲ್ಯಾಣ ಅಲಂಕಾರ ಮಾ.23 (ಸೋಮವಾರ) – ಗಮಕ ವಾಚನ ಹಾಗೂ ಉಪನ್ಯಾಸ, ಗುಹಾ ಅತಿಥ್ಯ ಅಲಂಕಾರ ಮಾ.24 (ಮಂಗಳವಾರ) – ಸಂಗೀತ ಕಾರ್ಯಕ್ರಮ, […]

Continue Reading

ದಾವಣಗೆರೆ ದಕ್ಷಿಣ ಶ್ರೀನಿವಾಸ ದಾಸ ಕರಿಯಪ್ಪ, ಬಾಗಲಕೋಟೆ ವೀರಣ್ಣ ಚರಂತಿಮಠ ; ಉಪಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ

ಅಚ್ಚರಿ ತೀರ್ಮಾನ ಎಂಬಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಟಿ ಸಮುದಾಯದ ಶ್ರೀನಿವಾಸ ದಾಸ ಕರಿಯಪ್ಪ ಟಿಕೆಟ್ ನೀಡುವ ಮೂಲಕ ಬಿಜೆಪಿ ಹೈ ಕಮಾಂಡ್ ಅಚ್ಚರಿ ನಿರ್ಧಾರ ಕೈಗೊಂಡಿದೆ. ಕುರುಬ ಸಮುದಾಯದ ಜಿ.ಬಿ.ವಿನಯ್ ಕುಮಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಲವಾದ ಮಾತುಗಳು ಕೇಳಿ ಬರುತ್ತಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿಸಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು. ಆದರೆ, ಅಚ್ಚರಿ ಎಂಬಂತೆ ಬಿಜೆಪಿ ಹೈ ಕಮಾಂಡ್ ಸ್ಥಳೀಯ […]

Continue Reading

‘ಸಹ್ಯಾದ್ರಿ_ಮಲೆನಾಡು ಉತ್ಸವ’ ಆಯೋಜನೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದು ಶೀಘ್ರವೇ ಕಾಲಮಿತಿಯೊಳಗೆ ಉತ್ಸವವನ್ನು ಏರ್ಪಡಿಸಬೇಕು ಎಂದು ಅವರು ಆಗ್ರಹಿಸಿದರು. ಬೇಸಿಗೆಯ ರಜಾ ಅವಧಿಯಲ್ಲಿ ಇಂತಹ ಉತ್ಸವವನ್ನು ಹಮ್ಮಿಕೊಳ್ಳುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲೆಯ ಇತಿಹಾಸ, ಸಂಸ್ಕೃತಿ ಮತ್ತು ಕಲಾ ಪ್ರಕಾರಗಳ ಬಗ್ಗೆ ಅರಿವು ಮೂಡಿಸಲು ಒಂದು ಸಕಾರಾತ್ಮಕ ವೇದಿಕೆಯಾಗಲಿದೆ. ಇದು ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವುದಲ್ಲದೆ, ಪ್ರವಾಸೋದ್ಯಮದ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ಅವರು ಸದನದ ಗಮನ ಸೆಳೆದರು.ಜಿಲ್ಲೆಯ ಹಿರಿಯ ಸಾಧಕರನ್ನು […]

Continue Reading

ಸಾಗರ | ಹಾವು ಕಚ್ಚಿ ರೈತ ಸಾವು

ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬದವರು ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 9:45ರ ಸುಮಾರಿಗೆ ಹುಚ್ಚಪ್ಪ ಅವರು ಕೊನೆಯುಸಿರೆಳೆದಿದ್ದಾರೆ.

Continue Reading

ಶಿವಮೊಗ್ಗ | ಜೇನುಹುಳುಗಳ ದಾಳಿ ; ಆಸ್ಪತ್ರೆಗೆ ದಾಖಲು

ಶಾಲಾ-ಕಾಲೇಜು ವಿದ್ಯಾರ್ಥಿಗಳೂ ಈ ದಾಳಿಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ. ವಿಶೇಷವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಾಲ್ ಟಿಕೆಟ್ ಪಡೆಯಲು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳು ದಾಳಿ ಮಾಡಿವೆ. ಸರ್ಕಾರಿ ಶಾಲೆಯ ಬಾಲಕ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ದಾಳಿಯಲ್ಲಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಉಪಚರಿಸಲಾಗಿದೆ.

Continue Reading

ತೀರ್ಥಹಳ್ಳಿ | ಮಹಿಳಾ ಕಾಂಗ್ರೆಸ್ ನಿಂದ ಮಾ. 20ರಂದು ಪ್ರತಿಭಟನೆ : ಕಿಮ್ಮನೆ ರತ್ನಾಕರ್ ಹೇಳಿಕೆ

ಮೂರು ತಿಂಗಳಿಗೆ ಆಗುವಷ್ಟು ಸ್ಟಾಕ್ ನಮ್ಮ ಬಳಿ ಆಯಿಲ್ ಇದೆ ಎಂದು ಹೇಳಿದ್ದರು. ಈಗ ಅದಕ್ಕೆ ಹಣವನ್ನು ಜಾಸ್ತಿ ಮಾಡಿದ್ದಾರೆ. ಇವರು ಬಿಸಿನೆಸ್ ಮಾಡ್ತಾ ಇದ್ದಾರಾ? ಇರುವ ಸ್ಟಾಕ್ ಗೆ ಜನರ ಮೇಲೆ ಹೊರೆ ಹಾಕುತ್ತಿರುವುದು ಸರಿಯೇ? ಇನ್ನು ಎಂಟು ದಿನ ಯುದ್ಧ ನಡೆದರೆ ಹಲವರು ಮನೆ ಸೇರಬೇಕಾಗುತ್ತದೆ ಎಂದರು. ಜ್ಞಾನೇಂದ್ರ ಅಸೆಂಬ್ಲಿಯಲ್ಲಿ ಹೀರೊ, ಇಲ್ಲಿ ಮರಳು ಹೊಡೆಯುತ್ತಿದ್ದರೂ ಕೇಳುವುದಿಲ್ಲ ಆದರೆ ಅಲ್ಲಿ ಜ್ಞಾನೇಂದ್ರ ಮಾತನಾಡುವುದು ನೋಡಿದರೆ ಇವರಷ್ಟು ಪ್ರಾಮಾಣಿಕರು ಯಾರೂ ಇಲ್ಲ ಎಂದು ತಿಳಿಯಬೇಕು. ಜ್ಞಾನೇಂದ್ರ […]

Continue Reading

ಅಡಕೆ ಕ್ಯಾನ್ಸರ್ ಕಾರಕವಲ್ಲ ; ಅಡಿಕೆ ಬೆಳೆಗಾರರಿಗೆ ನೆಮ್ಮದಿಯ ಸುದ್ದಿ

ಸಂಶೋಧನೆಯ ಪೂರ್ಣ ಪ್ರಮಾಣದ ಅಂತಿಮ ವರದಿ ಶೀಘ್ರದಲ್ಲೇ ಬರಲಿದ್ದು, ಆ ಬಳಿಕ ಅಡಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬ ಬಗ್ಗೆ ಸರ್ಕಾರವೇ ಅಧಿಕೃತವಾಗಿ ವ್ಯಾಪಕ ಪ್ರಚಾರ ಕೈಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಈ ಮೂಲಕ ಅಡಕೆ ಕೃಷಿಯನ್ನು ನೆಚ್ಚಿಕೊಂಡಿರುವ ಲಕ್ಷಾಂತರ ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು.

Continue Reading