ಶಿವಮೊಗ್ಗ | ಬಸ್ ಸಂಚಾರಕ್ಕೆ ಸಚಿವ ಮಧುಬಂಗಾರಪ್ಪ ಚಾಲನೆ

ಹೀಗಾಗಿ ಸೊರಬ ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆ ಮಾಡಿರುವ ₹50 ಕೋಟಿಯಲ್ಲಿ ₹45 ಕೋಟಿಯನ್ನು ರಸ್ತೆ ಅಭಿವೃದ್ಧಿ ಗೆ ಬಳಕೆ ಮಾಡಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ ಎಂದರು.

Continue Reading

ಶಿವಮೊಗ್ಗ | ಬಂಗಾರ’ದ ಹಾದಿಯ ವೀಕ್ಷಣೆಗೆ ಡಿಜಿಟಲ್ ವ್ಯವಸ್ಥೆ : ಸಚಿವ ಮಧು ಬಂಗಾರಪ್ಪ ಹೇಳಿಕೆ

‘ಬಂಗಾರಪ್ಪ ಬರೀ ವ್ಯಕ್ತಿಯಲ್ಲ. ಅವರು ನಾಡಿನ ಎಲ್ಲ ಸಮುದಾಯಗಳ ಬಡವರಿಗೆ ಶಕ್ತಿ ತುಂಬಿದ್ದ ಜನನಾಯಕ. ವ್ಯಕ್ತಿಯಾಗಿ ಅವರು ಇಲ್ಲದಿದ್ದರೂ ಚಿಂತನೆಗಳ ಮೂಲಕ ಜನಮಾನಸದಲ್ಲಿ ಸದಾ ಜೀವಂತವಾಗಿರಲಿದ್ದಾರೆ. ಅವರ ವಿಚಾರಗಳು ಇಂದಿಗೂ ಪ್ರಸ್ತುತ. ಹೀಗಾಗಿಯೇ ಬಂಗಾರಧಾಮ ಶೋಷಿತರು ಹಾಗೂ ಬಡವರ ಚೈತ್ರಭೂಮಿಯಾಗಿ ಮಾರ್ಪಟ್ಟಿದೆ’ ಎಂದರು. ಮಧು ಬಂಗಾರಪ್ಪ ಪತ್ನಿ ಅನಿತಾ, ಪುತ್ರ ಸೂರ್ಯ, ಮಾವನೂ ಆದ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರೊಂದಿಗೆ ಅಪ್ಪ-ಅಮ್ಮನ ಸಮಾಧಿ ಸ್ಥಳದ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಬಂಗಾರಧಾಮಕ್ಕೆ ಮುಂಜಾನೆಯೇ ಸೊರಬ ಕ್ಷೇತ್ರ ಮಾತ್ರವಲ್ಲದೆ […]

Continue Reading

ಶಿವಮೊಗ್ಗ | ಮರ್ಯಾದ ಹತ್ಯೆ ಪ್ರಕರಣಗಳಿಗೆ ; “ಮಾನ್ಯಾ ಕಾಯ್ದೆ” ಎಂಬ ಪ್ರತ್ಯೇಕ ಹೆಸರಿನಲ್ಲಿ ಕಠಿಣ ಕಾಯ್ದೆ ರೂಪಿಸಬೇಕು : ಎನ್. ರವಿಕುಮಾರ್(ಟೆಲೆಕ್ಸ್), ಆಗ್ರಹ

ಅಂತರ್‌ಜಾತಿ ವಿವಾಹವಾದ ಮಕ್ಕಳನ್ನು, ಪರಸ್ಪರ ಪ್ರೀತಿಸಿದವರನ್ನು ತಮ್ಮ ಪೋಷಕರೇ ಕಾನೂನಿನ ಭಯವಿಲ್ಲದೆ ಮರ್ಯಾದೆಯ ಹೆಸರಲ್ಲಿ ನಿರ್ದಯವಾಗಿ ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಮುಂದಿನ ದಿನಗಳಲ್ಲಿ ಜಾತಿವಾದಿಗಳು ಇಂತಹ ಕ್ರೌರ್ಯವನ್ನೇ ಸಾಮಾಜಿಕ ಘನತೆ/ ಮೌಲ್ಯ ಎಂಬಂತೆ ಪ್ರತಿಷ್ಠಾಪಿಸುವ ಅಪಾಯವೂ ಇದೆ. ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಲು ಸರ್ಕಾರ ಇಚ್ಛಾಶಕ್ತಿ ತೋರಬೇಕು. ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ , ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು “ಘೋರ ಅಪರಾಧ” ಎಂದು ಪರಿಗಣಿಸಬೇಕು ಜಾತಿ […]

Continue Reading

ಶಿವಮೊಗ್ಗ | ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ಕಳ್ಳತನ

ಇನ್ನೇನು ಸಮೀಪದಲ್ಲಿರುವ ಜಾತ್ರೆಗೆ ಲಕ್ಷಾಂತರ ಜನ ಅಮ್ಮನವರ ದರ್ಶನಕ್ಕೆ ಆಗಮಿಸುತ್ತಾರೆ.ಈ ವೇಳೆಯಲ್ಲಿ ಇಂತಃ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾರಿಕಾಂಬ ದೇವಸ್ಥಾನ ಸಮಿತಿಯ ಸದಸ್ಯನೊಬ್ಬ ಕಳ್ಳತನ ಮಾಡಿರುವುದಾಗಿ ತಿಳಿದುಬಂದಿದೆ. ಸುಮಾರು 10 ಲಕ್ಷ ರೂಪಾಯಿ ಸಂಗ್ರಹವಾಗಿದ್ದು ಅದರಲ್ಲಿ 6 ಲಕ್ಷ ರೂಪಾಯಿ ಬ್ಯಾಂಕ್ ಗೆ ಹಣ ಕಟ್ಟಲು ಇಟ್ಟಿದ್ದರು. ಈ ವೇಳೆ ಸಮಿತಿ ಸಭೆ ನಡೆಯುತ್ತಿರುವಾಗ ಸಮಿತಿಯ ಸದಸ್ಯ ಪ್ರಭಾಕರ್ ಎಂಬಾತನು 50,000₹ ರೂಪಾಯಿಗು ಅಧಿಕ ಹಣವನ್ನು ಕವರ್ ಗೆ ಹಾಕಿಕೊಂಡು ತೆರಳಿದ್ದಾನೆ. ತದ ನಂತರ ಖಜಾಂಚಿ ತಿಮ್ಮಪ್ಪರವರು […]

Continue Reading

ಹುಬ್ಬಳ್ಳಿ | ಮಾನ್ಯ ಪಾಟೀಲ್ ಹತ್ಯೆ ಪ್ರಕರಣ ; ಕಠಿಣ ಶಿಕ್ಷೆಗೆ ಆಗ್ರಹಿಸಿದ ಅಭಿಲಾಷ್ ಹುರಳಿಕೊಪ್ಪ

ಪ್ರೀತಿಸಿ ಮದುವೆಯಾದ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನೇ ಹೆತ್ತ ತಂದೆ ಕೊಲೆ ಮಾಡಿರುವುದು ಕ್ರೂರ ಘಟನೆಯಾಗಿದೆ. 12ನೇ ಶತಮಾನದಲ್ಲಿ ಬಸವಣ್ಣ ಅವರು ಅಂತರ್ಜಾತಿ ವಿವಾಹವನ್ನು ಮಾಡಿ ಜಾತಿಯತೆಯನ್ನು ಹೋಗಲಾಡಿಸಲು ಅಡಿಪಾಯ ಹಾಕಿದರು. ಬಸವಣ್ಣನವರು‌ ಹುಟ್ಟಿದ ನಾಡಿನಲ್ಲೇ ಇಂತಹ ಘಟನೆಗಳು ನಡೆಯುತ್ತಿರುವುದು ಅಕ್ಷಮ್ಯ. ಗದಗದಲ್ಲಿ 2019 ರಲ್ಲಿ ಗಂಗಮ್ಮ ಮತ್ತು ರಮೇಶ್ ಎನ್ನುವವರು ಅಂತರ್ಜಾತಿ ವಿವಾಹವಾದಾಗ ದೀಪಾವಳಿ ಹಬ್ಬದ ನೆಪದಲ್ಲಿ ಕರೆಸಿಕೊಂಡು ಗಂಗಮ್ಮಳ ಸಂಭಂದಿಕರು ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಸಾಯಿಸಿದರು. ಮಂಡ್ಯ, ಕೋಲಾರ, ವಿಜಯಪುರ, ಹಾಸನದಲ್ಲಿ ಸಾಕಷ್ಟು […]

Continue Reading

ಶಿವಮೊಗ್ಗ | ಸಿಲಿಂಡರ್ ಸ್ಪೋಟಗೊಂಡ ಮನೆಗಳಿಗೆ ಶಾಸಕ ಚನ್ನಬಸಪ್ಪ ಭೇಟಿ

ಈ ಭೇಟಿಯ ಸಮಯದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಜಗದೀಶ್, ಜಿಲ್ಲಾ ಉಪಾಧ್ಯಕ್ಷರುಗಳಾದ ಶ್ರೀ ಜ್ಞಾನೇಶ್ವರ್ ಹಾಗೂ ಶ್ರೀ ನಾಗರಾಜ್, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಮುಖರಾದ ಪ್ರಭಾಕರ್ ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದು ಸಂತ್ರಸ್ತರಿಗೆ ಧೈರ್ಯ ತುಂಬಿದರು.

Continue Reading

KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು ; ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ವಶಕ್ಕೆ ಪಡೆದ ಪೊಲೀಸರು

ಇದೇ ತಿಂಗಳ 8ನೇ ತಾರೀಕು ಬೆಂಗಳೂರಿನಿಂದ ಹೈದರಾಬಾದ್​​ಗೆ ಹೊರಟಿದ್ದ KSRTC ಎಸಿ ಸ್ಲೀಪರ್​​ ಐಷಾರಾಮಿ ಬಸ್​​ನಲ್ಲಿ ವೆಂಕಟೇಶ್ವರ್​ ರಾವ್​ ಎಂಬವರು ಪ್ರಯಾಣಿಸುತ್ತಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ಇರುವ ಹೋಟಲ್​​ವೊಂದರಲ್ಲಿ ಪ್ರಯಾಣಿಕರಿಗೆ ಊಟ ಮಾಡಲು ಚಾಲಕ ಬಸ್​​ ನಿಲ್ಲಿಸಿದ್ದ. ಈ ವೇಳೆ ವೆಂಕಟೇಶ್ವರ್​ ರಾವ್ ತಮ್ಮ ಬಳಿ ಇದ್ದ ಹಣದ ಬ್ಯಾಗ್​​ನ ಬಸ್​​ನಲ್ಲೇ ಬಿಟ್ಟು ಊಟಕ್ಕೆ ತೆರಳಿದ್ದರು. ಆದರೆ ಹಿಂದಿರುಗಿ ಬಂದು ನೋಡುವಾಗ ಸೀಟ್​​ನಲ್ಲಿದ್ದ ಬ್ಯಾಗ್​​ ನಾಪತ್ತೆಯಾಗಿತ್ತು. ಕಾರಲ್ಲಿ ಬಂದ ವ್ಯಕ್ತಿ ಸೀದಾ ಬಸ್​​ಗೆ ನುಗ್ಗಿ […]

Continue Reading

ಶಿವಮೊಗ್ಗ | ವಿಕಲಚೇತನ ವ್ಯಕ್ತಿಗೆ ಸಹಾಯಹಸ್ತ ಚಾಚಿದ ಹರೀಶ್ ನಾಯ್ಕ್

ಸಮಾಜ ಸೇವಕ ಯುವ ನಾಯಕ ಹರೀಶ್ ನಾಯ್ಕ್ ನೊಂದ ಜೀವಕ್ಕೆ ಆಸರೆಯಾಗಿ, ಸಂಚರಿಸಲು ಮೂರು ಚಕ್ರದ ಸೈಕಲ್ ನೀಡಿ ಸಹಾಯಹಸ್ತ ಚಾಚಿದ್ದಾರೆ. ಇದು ಜನ ಮೆಚ್ಚುಗೆಗೆ ಪಾತ್ರವಾಗಿದೆ.. ಈ ಸಂದರ್ಭದಲ್ಲಿ ಶಶಿಕುಮಾರ್ ನಾಯ್ಕ್. ಕೆಂಚಪ್ಪ ರಘು ಹೇಮತ್ ಶಿವು ಸಿದ್ದು ಉಮೇಶ್ ಈಶಣ್ಣ ಗ್ರಾಮಸ್ಥರು ಉಪಸ್ಥಿತರಿದ್ದರು

Continue Reading