‘ವಾಟ್ಸಾಪ್‌’ನಲ್ಲೇ ಇನ್ಮುಂದೆ ‘KSRTC ಬಸ್’ ಟಿಕೆಟ್ ಸೇವೆ ಲಭ್ಯ

ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ವಾಟ್ಸಾಪ್ ಮೂಲಕ KSRTC, NWKRTC ಹಾಗೂ KKRTC ಬಸ್‌ಗಳ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಒದಗಿಸಲಾಗಿದೆ. ಪ್ರಯಾಣಿಕರು 6364940880 ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸುವ ಮೂಲಕ ಬುಕ್ಕಿಂಗ್ ಆರಂಭಿಸಬಹುದು. ನಂತರ ವಾಟ್ಸಾಪ್‌ನಲ್ಲಿಯೇ ಲಭ್ಯವಾಗುವ ಸಂವಾದಾತ್ಮಕ ವ್ಯವಸ್ಥೆಯು ಟಿಕೆಟ್ ಕಾಯ್ದಿರಿಸುವಿಕೆಯ ಸಂಪೂರ್ಣ ಪ್ರಕ್ರಿಯೆಗೆ ಮಾರ್ಗದರ್ಶನ ನೀಡಲಿದೆ. ಪ್ರಯಾಣ ಆರಂಭದ ಸ್ಥಳ, ಹೋಗಬೇಕಾದ ಸ್ಥಳ ಹಾಗೂ ಪ್ರಯಾಣದ ದಿನಾಂಕ ಆಯ್ಕೆ ಮಾಡಿ ಲಭ್ಯವಿರುವ ಬಸ್ ಸೇವೆಗಳನ್ನು ಹುಡುಕಬೇಕು.ನಿಮ್ಮ ಪ್ರಯಾಣದ ಆದ್ಯತೆಗೆ ಅನುಗುಣವಾಗಿ ಸೂಕ್ತವಾದ ಬಸ್ ಆಯ್ಕೆ ಮಾಡಬೇಕು. ನಂತರ […]

Continue Reading

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂ : ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ಇದೇ ವೇಳೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿರುವ ಇಲಾಖೆ, ಒಂದು ಜೋಡಿ ಶೂ ಮತ್ತು ಎರಡು ಜೋಡಿ ಸಾಕ್ಸ್ ಪೂರೈಕೆ ಕುರಿತು ದೂರುಗಳು ಬಂದಿವೆ. ಬಳಸಿದ ತಕ್ಷಣವೇ ಅಥವಾ ಕೆಲವೇ ದಿನಗಳಲ್ಲಿ ಶೂ ಹರಿದುಹೋಗುವುದು, ಅಡಿಭಾಗ ಕಳಚಿಕೊಳ್ಳುವುದು, ಅತಿದೊಡ್ಡ ಗಾತ್ರದ ಅಥವಾ ಸರಿಯಾಗಿ ಹೊಂದಿಕೆಯಾಗದ ಶೂ ಪೂರೈಕೆ ಹಾಗೂ ಸಾಕ್ಸ್‌ಗಳಲ್ಲೂ ಇದೇ ರೀತಿಯ ದೋಷಗಳು ಕಂಡುಬಂದಿರುವ ಬಗ್ಗೆ ದೂರುಗಳು ಬಂದಿವೆ. ಪೂರೈಕೆದಾರರ ಜಿಎಸ್‌ಟಿ ನೋಂದಣಿ ಹಾಗೂ ಬಿಲ್‌ಗಳ ಬಗ್ಗೆಯೂ ವರದಿಗಳಲ್ಲಿ ಪ್ರಶ್ನೆಗಳನ್ನು ಎತ್ತಲಾಗಿದೆ.ದೂರುಗಳ ಹಿನ್ನೆಲೆಯಲ್ಲಿ ಶೂ ಮತ್ತು ಸಾಕ್ಸ್‌ಗಳನ್ನು […]

Continue Reading

ವಂದೇ ಮಾತರಂ” ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ರಾಜ್ಯ ಸರ್ಕಾರ ಆದೇಶ

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ “ವಂದೇ ಮಾತರಂ” ರಾಷ್ಟ್ರೀಯ ಗೀತೆಯ ವಾದನ/ಗಾಯನಕ್ಕೆ ಸಂಬಂಧಿಸಿದಂತೆ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಸರ್ಕಾರವು ಪರಿಗಣಿಸಿದೆ ಎಂದು ತಿಳಿಸಿದೆ

Continue Reading

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿ ಮುದ್ದು ಮಕ್ಕಳು ಕೃಷ್ಣ ಮತ್ತು ರಾಧೆಯ ವೇಷ ಹಾಕಿರುವ ಕೆಲ ವಿಶೇಷ ಫೋಟೋಗಳನ್ನು ವೀಕ್ಷಿಸಿ

ಶಿವಮೊಗ್ಗದ ಸೂಪರ್ ಕಾಪ್ ಎಂದೇ ಪ್ರಸಿದ್ದಿ ಪಡೆದಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ಅವರ ಮುದ್ದು ಪುಟಾಣಿ ಪ್ರಾಂಶಿ T.S. ಇವರ ಫೋಟೋ ವೀಕ್ಷಿಸಿ 👇 ಶಿವಮೊಗ್ಗದ ಕರ್ನಾಟಕ ಬ್ಯಾಂಕ್ ಉದ್ಯೋಗಿ ಚಿದಂಬರ ಹಾಗೂ ಮಹಾವೀರ ಶಾಲೆಯ ಶಿಕ್ಷಕರಾದ ವಂದನಾ ಅವರ ಪುತ್ರ ಕ್ರಿಷಿವ್ ಶರ್ಮನನ್ನು ಈ ಕೆಳಗಿನ ಫೋಟೋದಲ್ಲಿ ನೋಡಿ ಪುಟಾಣಿ ಧ್ವನಿ ತಂದೆ ಮನೋಹರ್ ವೃತ್ತಿ ತೆಂಗಿನಕಾಯಿ ಮಂಡಿ ಹಾಗೂ ತಾಯಿ ರೇಖಾ ಊರು ತಿಪಟೂರ್ ಈ ಪುಟಾಣಿ ಫೋಟೋ 👇 ಪುಟಾಣಿ ನಿಭಾ […]

Continue Reading

ನವದೆಹಲಿ | ಕೇಂದ್ರ ಸಂಪುಟ ಪುನರಚನೆ ಆಗುವ ಸಾಧ್ಯತೆ : ರಾಜ್ಯದಿಂದ ತೇಜಸ್ವಿ ಸೂರ್ಯ ಬಿ. ವೈ ರಾಘವೇಂದ ಹೆಸರು

ಅಮಿತ್ ಶಾ, ಜೆ.ಪಿ. ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ಮನೋಹರ್ ಲಾಲ್, ಎಚ್.ಡಿ. ಕುಮಾರಸ್ವಾಮಿ, ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಮನ್ಸುಖ್ ಮಾಂಡವಿಯಾ ಸೇರಿದಂತೆ ಅನೇಕ ಸಚಿವರು ಹೆಚ್ಚುವರಿ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ. ಹೊಸಬರು ಬಂದರೆ ಈ ಖಾತೆಗಳಲ್ಲಿ ಕೆಲವು ಮರುಹಂಚಿಕೆಯಾಗುವ ಸಾಧ್ಯತೆ ಇದೆ.ಕರ್ನಾಟಕದ ಮಟ್ಟಿಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರರವರ ಅವರ ಹೆಸರು ಸಂಭವನೀಯ ಹೊಸ ಮುಖಗಳ ಚರ್ಚೆಯಲ್ಲಿ ಕಾಣಿಸಿಕೊಂಡಿದೆ. ತೇಜಸ್ವಿ ಸೂರ್ಯ […]

Continue Reading

ಮದ್ಯಪಾನ ಸೇವನೆ ಆರೋಗ್ಯಕ್ಕೆ ಹಾನಿಕಾರಕ.! : ಅರೋಗ್ಯ ಸಚಿವರೇ ರಾಜ್ಯದಲ್ಲಿ ಮದ್ಯ ನಿಷೇಧಿಸಿ, ಜನರ ಅರೋಗ್ಯ ಕಾಪಾಡಿ : ನೈಜ ಹೋರಾಟಗಾರರ ವೇದಿಕೆ ಮನವಿ

ತಮ್ಮ ಕಾರ್ಯಚಟುವಟಿಕೆಗಳಿಗೆ ನೈಜ ಹೋರಾಟಗಾರರ ವೇದಿಕೆಯು ತಮ್ಮನ್ನು ಅಭಿನಂದಿಸುತ್ತದೆ. ಮಾಧ್ಯಮಗಳಲ್ಲಿ ತಾವು ಮಾತನಾಡುತ್ತಾ ಪೆಪ್ಸಿ ಅಂತ ಪಾನಿಯಗಳನ್ನು ಮಕ್ಕಳಿಗೆ ಕೊಡುವುದರಿಂದ ಅವರ ಆರೋಗ್ಯ ಹಾನಿಯಾಗುವುದರ ಬಗ್ಗೆ ಕಾಳಜಿವಹಿಸಿದ್ದೀರಿ. ಶುದ್ಧ ಆಹಾರವನ್ನು ಮಕ್ಕಳಿಗೆ ಕೊಡುವಂತೆ ಪೋಷಕರಿಗೆ ಕಿವಿಮಾತನ್ನು ಸಹ ಹೇಳಿದ್ದೀರಿ. ಇದು ಕೂಡ ಅತ್ಯಂತ ಶ್ಲಾಘನೀಯ ಎಂದಿದ್ದಾರೆ. ಆದರೆ ಸರ್ಕಾರದ ದ್ವಂದ್ವ ನೀತಿಗಳು ಜನರ ಕಣ್ಣಿಗೆರಚ್ಚುತ್ತಿದೆ. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ ಮದ್ಯಪಾನ ಸೇವನೆ ಆರೋಗ್ಯಕ್ಕೆ ಹಾನಿಕರ ಎಂದು “ಮಧ್ಯದ ಬಾಟಲಿಯ ಮೇಲೆ ಮುದ್ರಿಸಿ” ರಾಜ್ಯದ ನಾಗರಿಕರಿಗೆ ಮಾರಾಟ ಮಾಡುತ್ತಿರುವ […]

Continue Reading

80ನೇ ಸ್ವಾತಂತ್ರ್ಯ ದಿನದಂದು ಯುವಜನರಿಗೆ ಉದ್ಯೋಗ, ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆ, ರೈತ ಸಬಲೀಕರಣ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ಯೋಜನೆ ಘೋಷಿಸಿದ ಸಿಎಂ ಡಿ.ಕೆ. ಶಿವಕುಮಾರ್

‘ಮುಖ್ಯಮಂತ್ರಿ ಉದ್ಯೋಗ ಸಂಕಲ್ಪ’ರಾಜ್ಯದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಿಎಂ ಹಲವು ಕ್ರಾಂತಿಕಾರಿ ಕ್ರಮಗಳನ್ನು ಪ್ರಕಟಿಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 72,000 ಪ್ರಮುಖ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ 6 ತಿಂಗಳಲ್ಲಿ ಎಲ್ಲಾ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮ ತಡೆಗಟ್ಟಲು ಮತ್ತು ಪಾರದರ್ಶಕತೆ ತರಲು ಪರಿಣಿತ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, 2 ತಿಂಗಳಲ್ಲಿ ವರದಿ ಆಧರಿಸಿ ದೇಶಕ್ಕೇ ಮಾದರಿಯಾದ ಪರೀಕ್ಷಾ ನೀತಿ ಜಾರಿಗೆ ಬರಲಿದೆ. ಹಿಂದುಳಿದ 10 ಜಿಲ್ಲೆಗಳಲ್ಲಿ […]

Continue Reading

ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ತೊಂದರೆ ಆಗುವುದಿಲ್ಲ : ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಿರುವ ಆದೇಶವನ್ನು ಸರ್ಕಾರ ವಾಪಸ್ ಪಡೆದಿಲ್ಲ : ಸಚಿವ ಯು.ಟಿ. ಖಾದರ್ ಸ್ಪಷ್ಟನೆ

ರಾಜ್ಯ ಸರ್ಕಾರದ ಈ ನಿರ್ಧಾರವು ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ವಿರುದ್ಧವಾಗಿಲ್ಲ. ರೈತರಿಗೆ ಅಗತ್ಯವಾದ ಬೆಂಬಲ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಖಾದರ್ ಭರವಸೆ ನೀಡಿದರು. ಗುಟ್ಕಾ ಹಾಗೂ ಪಾನ್ ಮಸಾಲ ಬಳಕೆಯಿಂದ ಸಾರ್ವಜನಿಕ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ಪರಿಗಣಿಸಿ ನಿಷೇಧ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿಷೇಧ ಆದೇಶವನ್ನು ಸದ್ಯಕ್ಕೆ ವಾಪಸ್ ಪಡೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಗುಟ್ಕಾ ನಿಷೇಧದ ಕುರಿತು ಅಡಿಕೆ ಬೆಳೆಗಾರರಲ್ಲಿ ಉಂಟಾಗಿದ್ದ ಆತಂಕಕ್ಕೆ ಸರ್ಕಾರ ಸ್ಪಷ್ಟನೆ ನೀಡಿದೆ.

Continue Reading

ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ನಿಷೇಧ

ಆರೋಗ್ಯಕರ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸರ್ಕಾರದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕೆಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಮನವಿ ಮಾಡಿದ್ದಾರೆ.

Continue Reading