ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ನೃತ್ಯಕ್ಕೆ ಬ್ರೇಕ್ : ಸರ್ಕಾರ ಆದೇಶ

ಶಾಲೆಯು ಮಕ್ಕಳಿಗೆ ಜ್ಞಾನ ದೇಗುಲವಿದ್ದಂತೆ. ಮಗುವಿನ ಭವಿಷ್ಯದ ನಿರ್ಮಾಣ, ಸಂಸ್ಕಾರ, ವಿನಯತೆ, ಒಳ್ಳೆಯ ನಡತೆ, ಮಾನಸಿಕ ಸ್ಥಿತಿ ಮತ್ತು ನೈತಿಕ ಮೌಲ್ಯಗಳ ಬೆಳವಣಿಗೆಯು ಶಾಲೆಯಿಂದಲೇ ಪ್ರಾರಂಭವಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವು ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಾಗ ಅಶ್ಲೀಲ ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ನೈತಿಕ ಮೌಲ್ಯಗಳ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರಲಿದ್ದು, ಶಿಕ್ಷಣದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಲಿದೆ. ಶಾಲಾ ಶಿಕ್ಷಣ […]

Continue Reading

ಶಿವಮೊಗ್ಗ | ಎಸ್‌ಎಸ್‌ಎಲ್‌ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷೆ-2 ಅವಕಾಶ : ಸಚಿವ ಎಸ್. ಮಧು ಬಂಗಾರಪ್ಪ

ಜೊತೆಗೆ, ಫಲಿತಾಂಶವನ್ನು ಸುಧಾರಿಸಿಕೊಳ್ಳಲು ಬಯಸುವವರಿಗೆ “ಇಂಪ್ರೂವ್ಮೆಂಟ್” ಅವಕಾಶವೂ ನೀಡಲಾಗಿದೆ.

Continue Reading

ಸಿಇಟಿ ಪರೀಕ್ಷೆಯಲ್ಲಿ ಅವಾಂತರ : ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

ಈ ಸಂದರ್ಭದಲ್ಲಿ ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಂಡಿದೆ. ಸುಪ್ರಿತ್ ಜನಿವಾರವನ್ನು ತೆಗೆದು ತನ್ನ ಬಳಿ ಇಟ್ಟುಕೊಳ್ಳಲು ಅನುಮತಿ ಕೇಳಿದಾಗ, ಅದನ್ನೂ ಅಧಿಕಾರಿಗಳು ನಿರಾಕರಿಸಿದರೆಂದು ಆರೋಪಿಸಲಾಗಿದೆ.ನಂತರ ಸ್ಥಳಕ್ಕೆ ಬಂದ ಮಹಿಳಾ ಸಿಬ್ಬಂದಿಯೊಬ್ಬರು ಕತ್ತರಿ ಬಳಸಿ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ನಡೆ ವಿದ್ಯಾರ್ಥಿಗೆ ತೀವ್ರ ಮಾನಸಿಕ ಆಘಾತ ಉಂಟುಮಾಡಿದೆ.ಈ ಅವಮಾನಕರ ಪರಿಸ್ಥಿತಿಯ ನಡುವೆಯೇ ಸುಪ್ರಿತ್ ಪರೀಕ್ಷೆಯನ್ನು ಬರೆದಿದ್ದಾನೆ. ಪರೀಕ್ಷೆ ಮುಗಿದ ನಂತರ, ಕಸದ ಬುಟ್ಟಿಯಲ್ಲಿ ಹಾಕಲಾಗಿದ್ದ ಜನಿವಾರವನ್ನು ಮರಳಿ ತೆಗೆದುಕೊಂಡು ಮನೆಗೆ ಹೋಗಿದ್ದಾನೆ.ಬಳಿಕ […]

Continue Reading

ಶಿವಮೊಗ್ಗ | ಪ್ರಥಮ ಪಿ.ಯು.ಸಿ. ದಾಖಲಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಕಾಲೇಜುಗಳ ವಿವರ ಮತ್ತು ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಗಾಜನೂರು-56 ಶಿವಮೊಗ್ಗ ತಾಲ್ಲೂಕು ಮೊ.ಸಂ.9739977365, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹೊಸೂರು-908 ಶಿಕಾರಿಪುರ ತಾಲ್ಲೂಕು ಮೊ. ಸಂ. 8971701958, ಅಟಲ್ ಬಿಹಾರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆವಿನಹಳ್ಳಿ-584 ಸಾಗರ ತಾಲ್ಲೂಕು ಮೊ.ಸಂ.9480767164/6363184683, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆನವೇರಿ-57, ಭದ್ರಾವತಿ ತಾಲೂಕು-8105352698 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ […]

Continue Reading

ಎಸ್ಸೆಸೆಲ್ಸಿ ಪರೀಕ್ಷೆ ಫಲಿತಾಂಶ : ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬಾಲಕಿಯರದ್ದೇ ಮೇಲುಗೈ: ಈ ಬಾರಿಯೂ ಬಾಲಕಿಯರೇ ಮೇಲುಗೈ (ಶೇ.96) ಸಾಧಿಸಿದ್ಧಾರೆ. ದಕ್ಷಿಣ ಕನ್ನಡ ಟಾಪ್ (98.40), ಕಲಬುರಗಿ ಕೊನೆಯ (85.06) ಸ್ಥಾನ ಪಡೆದಿದೆ. ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ಧಾರೆ ಎಂದು ಸಚಿವರು ಮಾಹಿತಿ ನೀಡಿದರು. ಜಿಲ್ಲಾವಾರು ಸಾಧನೆ: ದಕ್ಷಿಣ ಕನ್ನಡಕ್ಕೆ ಅಗ್ರಸ್ಥಾನ. ಜಿಲ್ಲಾವಾರು ಫಲಿತಾಂಶದ ಪಟ್ಟಿಯಲ್ಲಿ ಕರಾವಳಿ ಜಿಲ್ಲೆಗಳು ಅದ್ಭುತ ಸಾಧನೆ ಮಾಡಿದ್ದವು. ಶೇ. 91.12ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ಶೇ. 89.96ರೊಂದಿಗೆ […]

Continue Reading

SSLC ಪರೀಕ್ಷಾ ಫಲಿತಾಂಶ ಪ್ರಕಟ : ಶೇ.94.1 ರಷ್ಟು ತೇರ್ಗಡೆ ; ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್,ಉಡುಪಿ ಜಿಲ್ಲೆ ದ್ವಿತೀಯ- ಕಲಬುರಗಿ ಲಾಸ್ಟ್

ಅಥವಾ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಷ್ಟೇ ಅಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ ಎಸ್‌ಎಂಎಸ್ (SMS) ಮೂಲಕ ಫಲಿತಾಂಶ ಕಳುಹಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ. ಮೂವರು ವಿದ್ಯಾರ್ಥಿಗಳು 625 ಅಂಕಕ್ಕೆ625 ಅಂಕ ಪಡೆದಿದ್ದಾರೆ. 7 ಲಕ್ಷದ 24 ಸಾವಿರದ 794 ಮಕ್ಕಳು ಪಾಸ್ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. […]

Continue Reading

SSLC ಫಲಿತಾಂಶ ಏಪ್ರಿಲ್‌ 23ರ, ಇಂದು ಮಧ್ಯಾಹ್ನ 12ಕ್ಕೆ ಪ್ರಕಟ

ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ನಲ್ಲಿ ಲಭ್ಯವಾಗುವಂತೆ ಮಾಡಿದೆ. ಮಧ್ಯಾಹ್ನ 12 ಕ್ಕೆ ಅಂಕಪಟ್ಟಿ ಲಭ್ಯ ವಿದ್ಯಾರ್ಥಿಗಳು ಮಧ್ಯಾಹ್ನ 12 ಗಂಟೆಯ ನಂತರ https://www.digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಡಿಜಿಲಾಕರ್‌ನಿಂದ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆ ಗೊತ್ತಿಲ್ಲದ ವಿದ್ಯಾರ್ಥಿಗಳಿಗಾಗಿ ಮಂಡಳಿಯು ವಿಡಿಯೋ ಲಿಂಕ್ ಒಂದನ್ನು ಹಂಚಿಕೊಂಡಿದೆ. ವಿದ್ಯಾರ್ಥಿಗಳು https://tinyurl.com/mw84wmh9 ಲಿಂಕ್ ಬಳಸಿ ಡೌನ್‌ಲೋಡ್ ಪ್ರಕ್ರಿಯೆಯನ್ನು ತಿಳಿದುಕೊಳ್ಳಬಹುದಾಗಿದೆ ಎಂದು […]

Continue Reading

ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗಾಗಿ ಎಸ್​​ಒಪಿ ಬಿಡುಗಡೆ; ಚಾರಣಕ್ಕೆ ನೋ ಎಂಟ್ರಿ

ಎಲ್ಲ ಚಾರಣ ಪಥಗಳಲ್ಲಿ ಒಂದು ಸಾರಿಗೆ ಗರಿಷ್ಠ 150 ಜನರಿಗೆ ಮಾತ್ರ ಸೀಮಿತಗೊಳಿಸಲಾಗುವುದು ಎಂದರು.ಚಾರಣಕ್ಕೆ ಬರುವವರು ಆನ್​ಲೈನ್​ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಒಂದೊಮ್ಮೆ ಯಾವುದೇ ದಿನ ಒಬ್ಬರೇ ಚಾರಣಿಗರು ನೋಂದಾಯಿಸಿದ್ದರೂ ಗೈಡ್ ಸೌಲಭ್ಯ ಕಲ್ಪಿಸಲಾಗುವುದು. ಗೈಡ್​ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ. ಇತ್ತೀಚೆಗೆ ಕೊಡಗಿನ ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳದಿಂದ ಚಾರಣಕ್ಕೆ ಬಂದಿದ್ದ ಮಹಿಳೆ ನಾಪತ್ತೆಯಾಗಿ ಕಾಡಿನಲ್ಲಿ 3 ದಿನ ಕಳೆಯುವಂತಾದ ಹಾಗೂ ಅರಣ್ಯ ವ್ಯಾಪ್ತಿಗೆ ಒಳಪಡದ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿ ಶವವಾಗಿ ಬಾಲಕಿ ಪತ್ತೆಯಾದ ಹಿನ್ನೆಲೆಯಲ್ಲಿ ಚಾರಣಿಗರ […]

Continue Reading

ಯೋಗೇಶ್ ಗೌಡ ಕೊಲೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ […]

Continue Reading