SSLC ಫಲಿತಾಂಶ ಏಪ್ರಿಲ್‌ 23ರ, ಇಂದು ಮಧ್ಯಾಹ್ನ 12ಕ್ಕೆ ಪ್ರಕಟ

ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ನಲ್ಲಿ ಲಭ್ಯವಾಗುವಂತೆ ಮಾಡಿದೆ. ಮಧ್ಯಾಹ್ನ 12 ಕ್ಕೆ ಅಂಕಪಟ್ಟಿ ಲಭ್ಯ ವಿದ್ಯಾರ್ಥಿಗಳು ಮಧ್ಯಾಹ್ನ 12 ಗಂಟೆಯ ನಂತರ https://www.digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಡಿಜಿಲಾಕರ್‌ನಿಂದ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆ ಗೊತ್ತಿಲ್ಲದ ವಿದ್ಯಾರ್ಥಿಗಳಿಗಾಗಿ ಮಂಡಳಿಯು ವಿಡಿಯೋ ಲಿಂಕ್ ಒಂದನ್ನು ಹಂಚಿಕೊಂಡಿದೆ. ವಿದ್ಯಾರ್ಥಿಗಳು https://tinyurl.com/mw84wmh9 ಲಿಂಕ್ ಬಳಸಿ ಡೌನ್‌ಲೋಡ್ ಪ್ರಕ್ರಿಯೆಯನ್ನು ತಿಳಿದುಕೊಳ್ಳಬಹುದಾಗಿದೆ ಎಂದು […]

Continue Reading

ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗಾಗಿ ಎಸ್​​ಒಪಿ ಬಿಡುಗಡೆ; ಚಾರಣಕ್ಕೆ ನೋ ಎಂಟ್ರಿ

ಎಲ್ಲ ಚಾರಣ ಪಥಗಳಲ್ಲಿ ಒಂದು ಸಾರಿಗೆ ಗರಿಷ್ಠ 150 ಜನರಿಗೆ ಮಾತ್ರ ಸೀಮಿತಗೊಳಿಸಲಾಗುವುದು ಎಂದರು.ಚಾರಣಕ್ಕೆ ಬರುವವರು ಆನ್​ಲೈನ್​ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಒಂದೊಮ್ಮೆ ಯಾವುದೇ ದಿನ ಒಬ್ಬರೇ ಚಾರಣಿಗರು ನೋಂದಾಯಿಸಿದ್ದರೂ ಗೈಡ್ ಸೌಲಭ್ಯ ಕಲ್ಪಿಸಲಾಗುವುದು. ಗೈಡ್​ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ. ಇತ್ತೀಚೆಗೆ ಕೊಡಗಿನ ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳದಿಂದ ಚಾರಣಕ್ಕೆ ಬಂದಿದ್ದ ಮಹಿಳೆ ನಾಪತ್ತೆಯಾಗಿ ಕಾಡಿನಲ್ಲಿ 3 ದಿನ ಕಳೆಯುವಂತಾದ ಹಾಗೂ ಅರಣ್ಯ ವ್ಯಾಪ್ತಿಗೆ ಒಳಪಡದ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿ ಶವವಾಗಿ ಬಾಲಕಿ ಪತ್ತೆಯಾದ ಹಿನ್ನೆಲೆಯಲ್ಲಿ ಚಾರಣಿಗರ […]

Continue Reading

ಯೋಗೇಶ್ ಗೌಡ ಕೊಲೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ […]

Continue Reading

ನ್ಯಾ. ಸಂತೋಷ್ ಗಜಾನನ ಭಟ್ ಸೇರಿ 114 ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ ; ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನೂತನ ನ್ಯಾಯಧೀಶರ ನೇಮಕ

ಈ ನಡುವೆ ಸಂತೋಷ್ ಗಜಾನನ ಭಟ್ ವರ್ಗಾವಣೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ, ಪ್ರತಿವರ್ಷದಂತೆ ನಡೆಯುವ ಸಾಮಾನ್ಯ ವಾರ್ಷಿಕ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವರ್ಗಾವಣೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವರ್ಗಾವಣೆಗೊಂಡಿರುವ ಎಲ್ಲಾ ನ್ಯಾಯಾಧೀಶರು ಜೂನ್ 1 ರಿಂದಲೇ ಅನ್ವಯವಾಗುವಂತೆ ತಮ್ಮ ಹೊಸಕಾರ್ಯಕ್ಷೇತ್ರಗಳಲ್ಲಿ ಜವಾಬ್ದಾರಿವಹಿಸಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಸಂತೋಷ್ ಗಜಾನನ ಭಟ್ ಅವರ ವರ್ಗಾವಣೆಯಿಂದ ತೆರವಾದಜನಪ್ರತಿನಿಧಿಗಳ ವಿಶೇಷನ್ಯಾಯಾಧೀಶರ ಸ್ಥಾನಕ್ಕೆ ಕೆ.ಬಿ. ಶಿವಪ್ರಸಾದ್ ಅವರನ್ನು ನೇಮಿಸಲಾಗಿದೆ. ಶಿವಪ್ರಸಾದ್ ಅವರು ಪ್ರಸ್ತುತ ಮಂಡ್ಯದ 1ನೇ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದು, […]

Continue Reading

ಯೋಗೇಶ್ ಗೌಡ ಹತ್ಯೆ ಪ್ರಕರಣ ; ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ ನ್ಯಾಯಾಲಯ ಮಹತ್ವದ ತೀರ್ಪು

ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ. 21 ಆರೋಪಿಗಳ ಪೈಕಿ 17 ಮಂದಿ ದೋಷಿಗಳಾಗಿದ್ದಾರೆ. 20ನೇ ಆರೋಪಿ ವಾಸುದೇವ ನಿಲಕೇಣಿ, 21ನೇ ಆರೋಪಿ ಸೋಮಶೇಕರ್ ನ್ಯಾಮಗೌಡ ಅವರನ್ನು ಕೋರ್ಟ್‌ ಈ ಪ್ರಕರಣದಿಂದ ಖುಲಾಸೆಗೊಳಿಸಿದೆ. ಎಲ್ಲಾ ದೋಷಿಗಳನ್ನು ಕಸ್ಟಡಿಗೆ ಪಡೆಯುವಂತೆ ಕೋರ್ಟ್‌ ಸಿಬಿಐಗೆ ಸೂಚಿಸಿದೆ. ಎ-1 ಬಸವರಾಜ್ ಮುತ್ತಗಿ ಮತ್ತು ಎ17 – ಶಿವಾನಂದ ಬಿರಾದರ್ ಸರ್ಕಾರಿ ಸಾಕ್ಷಿಗಳಾಗಿರುವ ಕಾರಣ ಅವರನ್ನು ಕೋರ್ಟ್‌ ನಿರ್ದೋಷಿ ಎಂದು ಹೇಳಿದೆ. ಸಿಆರ್‌ಪಿಸಿ ಸೆಕ್ಷನ್ 302 (ಕೊಲೆ), 120B (ಕ್ರಿಮಿನಲ್ ಪಿತೂರಿ), ಸೆಕ್ಷನ್ […]

Continue Reading

ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಆಶಾ ಭೋಂಸ್ಲೆ ಅವರ ನಿಧನದ ಸುದ್ದಿ ತೀವ್ರ ದುಃಖ ಉಂಟುಮಾಡಿದೆ : ಸಚಿವ ಮಧು ಬಂಗಾರಪ್ಪ ಸಂತಾಪ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (1967) ಚಿತ್ರದ “ಯಾಕೋ ಏನೋ”, ದೂರದ ಬೆಟ್ಟ ಚಿತ್ರದ “ಸವಾಲು ಹಾಕಿ ಸೋಲಿಸಿ”, ಹಾಗೂ ಮತ್ತೆ ಮುಂಗಾರು ಚಿತ್ರದ “ಹೇಳದೆ ಕಾರಣ” ದಂತಹ ಮರೆಯಲಾಗದ ಗೀತೆಗಳನ್ನು ಅವರು ಕರುನಾಡಿಗೆ ನೀಡಿದ್ದಾರೆ. ಅವರ ಈ ಕೊಡುಗೆಯನ್ನು ಕರ್ನಾಟಕ ಸದಾ ಸ್ಮರಿಸುತ್ತದೆ. ಅವರ ಸಂಗೀತವು ತಲೆಮಾರುಗಳನ್ನು ಮೀರಿ ನಿಂತಿದ್ದು, ಮುಂಬರುವ ಪೀಳಿಗೆಗೂ ಸ್ಫೂರ್ತಿಯಾಗಲಿದೆ. ಅವರ ಕುಟುಂಬ, ಅಪಾರ ಅಭಿಮಾನಿಗಳು ಹಾಗೂ ಸಂಗೀತ ಲೋಕಕ್ಕೆ ಅವರ ಅಗಲಿಕೆ ನೋವನ್ನು ಬರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ […]

Continue Reading

ಝಾಂಬಿ ಡ್ರಗ್ಸ್ ; ಸುಳ್ಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು,ಆತಂಕ ಸೃಷ್ಟಿಸಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿ

ವೈದ್ಯಕೀಯ ವರದಿಯ ಪ್ರಕಾರ ಆ ವ್ಯಕ್ತಿ ಯಾವುದೇ ಮಾದಕವಸ್ತು ಸೇವಿಸಿರಲಿಲ್ಲ. ಅನಾರೋಗ್ಯವೇ ಕಾರಣ: ಆ ವ್ಯಕ್ತಿಗೆ ತೀವ್ರವಾದ ಸಂಧಿವಾತ (ಆರ್ಥೈಟಿಸ್) ಇರುವುದು ದೃಢಪಟ್ಟಿದೆ. ಮಿಶ್ರ ಪ್ರತಿಕ್ರಿಯೆ: ಸಂಧಿವಾತಕ್ಕೆ ವೈದ್ಯರು ನೀಡಿದ್ದ ನೋವು ನಿವಾರಕ ಮಾತ್ರೆಗಳ ಜೊತೆಗೆ ಆತ ಮದ್ಯ ಸೇವಿಸಿದ್ದರಿಂದ ಮೈಮೇಲೆ ಪ್ರಜ್ಞೆ ಇಲ್ಲದಂತೆ ವರ್ತಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಪೊಲೀಸ್ ಆಯುಕ್ತರ ಎಚ್ಚರಿಕೆ: ಪ್ರಕರಣದ ಕುರಿತು ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, “ಆಧಾರರಹಿತ ಮಾಹಿತಿ ಅಥವಾ ವಿಡಿಯೋಗಳನ್ನು ಸಾರ್ವಜನಿಕರು ಹಂಚಿಕೊಳ್ಳಬಾರದು. ಈ […]

Continue Reading

ದ್ವಿತೀಯ ಪಿಯು ಫಲಿತಾಂಶ ಸರ್ಕಾರದ ಅಧಿಕೃತ ವೆಬ್‌ಸೈಟ್‌ ಎಡವಟ್ಟಿನಿಂದ ವಿದ್ಯಾರ್ಥಿಗಳಿಗೆ 600ಕ್ಕೆ 630, 680 ಅಂಕ

ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಭವಿಷ್ಯವೇ ಹಾಳಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಫಲಿತಾಂಶ ಪ್ರಕಟಿಸುವಾಗ ಅಧಿಕಾರಿಗಳ ಗಮನ ಎಲ್ಲಿತ್ತು ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ದೋಷವನ್ನು ಒಪ್ಪಿಕೊಂಡು, ತಾಂತ್ರಿಕ ಸಮಸ್ಯೆಯಿಂದ ವ್ಯತ್ಯಯ ಉಂಟಾಗಿದೆ ಎಂದು ಸ್ಪಷ್ಟಪಡಿಸಿದ್ದು, ತಪ್ಪಾಗಿ ಮುದ್ರಿತವಾಗಿರುವ ಅಂಕಪಟ್ಟಿಗಳಿಗೆ ಪರಿಷ್ಕೃತ ಫಲಿತಾಂಶವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದೆ. ಏಪ್ರಿಲ್ 9ರಂದು ಪ್ರಕಟವಾದ 2026ರ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ […]

Continue Reading