ಕೇಂದ್ರ ಸರ್ಕಾರದಿಂದ ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ ನಿಯೋಜನೆ ಅವಧಿ ಒಂದು ವರ್ಷಕ್ಕೆ ವಿಸ್ತರಣೆ

ಲೋಕಾಯುಕ್ತದಲ್ಲಿದ್ದ ಭ್ರಷ್ಟಾಚಾರ ಜಾಲ ಹಾಗೂ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳನ್ನು ಬಯಲಿಗೆಳೆದ ಕೀರ್ತಿ ಇವರದು. 2016 ರಿಂದ ಕೇಂದ್ರ ಸೇವೆಗೆ ನಿಯೋಜನೆಗೊಂಡ ಇವರು, ರಾಷ್ಟ್ರೀಯ ತನಿಖಾ ದಳ (NIA) ಮತ್ತು ಜಾರಿ ನಿರ್ದೇಶನಾಲಯ (ED) ದಂತಹ ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಇದೀಗ ಸಿಐಎಸ್‌ಎಫ್‌ನಲ್ಲಿ ಅವರ ಸೇವಾವಧಿಯನ್ನು ವಿಸ್ತರಿಸಲಾಗಿದ್ದು, ಒಟ್ಟಾರೆಯಾಗಿ ಕಳೆದ 13 ವರ್ಷಗಳಿಂದ ಅವರು ಯಶಸ್ವಿಯಾಗಿ ಕೇಂದ್ರ ನಿಯೋಜನೆಯಲ್ಲಿಯೇ ಮುಂದುವರಿದಂತಾಗಿದೆ.

Continue Reading

ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಮೋದಿ ಸರ್ಕಾರ ಬದ್ಧ : ಸಂಸದ ರಾಘವೇಂದ್ರ ದೃಢ ಭರವಸೆ

ಈ ಕುರಿತು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ಮಾಡಿ ಮನವಿ ಸಲ್ಲಿಸಿರುವ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ದೇಶದ ಒಟ್ಟು ಅಡಿಕೆ ಉತ್ಪಾದನೆಯ ಸರಿಸುಮಾರು ಶೇ.65ರಷ್ಟನ್ನು ಒದಗಿಸುವ ಮಲೆನಾಡಿನ ಅಡಿಕೆ ಬೆಳೆಗಾರರು ತೀವ್ರ ಆತಂಕ ಮತ್ತು ಸಂಕಷ್ಟದಲ್ಲಿದ್ದು, ಅವರ ಪರವಾಗಿ ಸಂಸದ ರಾಘವೇಂದ್ರ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ಸುಮಾರು 1 ಲಕ್ಷ ಕೋಟಿ ರೂ. ಆರ್ಥಿಕತೆ […]

Continue Reading

ಕೇಂದ್ರ ಸರ್ಕಾರದಿಂದ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ

ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಹೆಚ್ಚುತ್ತಿರುವ ನಷ್ಟವನ್ನು ಸರಿದೂಗಿಸಲು ಈ ಕಡಿತವನ್ನು ಹೀರಿಕೊಳ್ಳುವ ನಿರೀಕ್ಷೆಯಿದೆ. ಜಾಗತಿಕ ಕಚ್ಚಾ ತೈಲ ಬೆಲೆಗಳು ಹೆಚ್ಚಿರುವುದರಿಂದ ಒಎಂಸಿಗಳು ಪ್ರಸ್ತುತ ಇಂಧನ ಮಾರಾಟದ ಮೇಲೆ ಲೀಟರ್‌ಗೆ ಸುಮಾರು 48.8 ರೂ.ಗಳಷ್ಟು ನಷ್ಟವನ್ನು ಅನುಭವಿಸುತ್ತಿವೆ ಎಂದು ಅಂದಾಜಿಸಲಾಗಿದೆ. ಜಾಗತಿಕ ತೈಲ ಬೆಲೆಗಳು ಕುಸಿದವು, ಬ್ರೆಂಟ್ ಕಚ್ಚಾ ತೈಲದ ಫ್ಯೂಚರ್‌ಗಳು ಪ್ರತಿ ಬ್ಯಾರೆಲ್‌ಗೆ ಶೇ. 2.29 ರಷ್ಟು ಕುಸಿದು $105.53 ಕ್ಕೆ ತಲುಪಿದೆ. ಯುಎಸ್ ಡಬ್ಲ್ಯೂಟಿಐ ಫ್ಯೂಚರ್‌ಗಳು ಸಹ ಬೆಳಿಗ್ಗೆ 8:50 ರ ಹೊತ್ತಿಗೆ ಶೇ. […]

Continue Reading

ಶಿವಮೊಗ್ಗ ಮೂಲದ ಉದ್ಯಮಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣು

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿಗೆ ಪರಿಶೀಲನೆ ವೇಳೆ ಡೆತ್ ನೋಟ್ ಸಿಕ್ಕಿದೆ. ಅದರಲ್ಲಿ ಆನಂದ್ ಸುಬ್ಬರಾವ್​ ತಮ್ಮ ಸಾವಿಗೆ ಮಾನಸಿಕ ಖಿನ್ನತೆ ಮತ್ತು ವೈಯಕ್ತಿಕ ಕಾರಣಗಳೇ ಹೊರತು ಬೇರಾರೂ ಕಾರಣರಲ್ಲ ಎಂದು ಉಲ್ಲೇಖಿಸಿದ್ದಾರೆ. ಹೋಟೆಲ್‌ನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಕೂಲಂಕಷವಾಗಿ ಪರಿಶೀಲಿಸಿದ್ದು, ಘಟನೆಯಲ್ಲಿ ಯಾವುದೇ ಅನುಮಾನಾಸ್ಪದ ಸನ್ನಿವೇಶಗಳು ಕಂಡುಬಂದಿಲ್ಲ. ಆನಂದ್ ಸುಬ್ಬರಾವ್​ರನ್ನ ಯಾರೂ ತಳ್ಳಿಲ್ಲ ಮತ್ತು ಅವರು ತಾವಾಗಿಯೇ ಜಿಗಿದಿರುವುದು ದೃಢಪಟ್ಟಿದೆ. ಗುರುವಾರ ಮಧ್ಯಾಹ್ನ ಗುರುಗ್ರಾಮದಲ್ಲಿ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಆನಂದ್ ಸುಬ್ಬರಾವ್ ಅವರ […]

Continue Reading

LPG ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ

ಪಿಎಂಯುವೈ (ಉಜ್ವಲ್ ಗ್ಯಾಸ್) 45 ದಿನ, ನಗರ ಪ್ರದೇಶಕ್ಕೆ 25 ದಿನ ಹಾಗೂ ಗ್ರಾಮೀಣ ಭಾಗಕ್ಕೆ 45 ದಿನ ಇದರಲ್ಲಿ ಯಾವುದೇ ಬದಲಾವಣೆಯಿಲ್ಲ. ದಯವಿಟ್ಟು ಅಧಿಕೃತವಾಗಿ ಕಂಪನಿಗಳಿಂದ ಬರುವ ಮಾಹಿತಿಗಳ ಮೇಲೆ ಗಮನಹರಿಸಿ. ಗಾಬರಿಯಲ್ಲಿ ಗ್ಯಾಸ್ ಬುಕ್ ಮಾಡಬೇಡಿ ಎಂದು ಬರೆದುಕೊಂಡಿದೆ.

Continue Reading

ರೈಲು ಟಿಕೆಟ್​ ರದ್ದತಿ ರೀಫಂಡ್‌ಗೆ ಹೊಸ ನಿಯಮ ಜಾರಿ

ರೈಲು ಹೊರಡುವ 72 ಗಂಟೆಗಳಿಗಿಂತ ಮೊದಲು ಟಿಕೆಟ್​ ಮಾಡಿದರೆ ಪ್ರತಿ ಪ್ರಯಾಣಿಕರಿಗೆ ಸ್ಥಿರ ರದ್ದತಿ ಶುಲ್ಕ ಹೊರತುಪಡಿಸಿ ಪೂರ್ಣ ಮರುಪಾವತಿಯನ್ನು ನೀಡಲಾಗುತ್ತದೆ. ಅಸ್ತಿತ್ವದಲ್ಲಿರುವ ನೀತಿಯಡಿಯಲ್ಲಿ, 48 ರಿಂದ 12 ಗಂಟೆಗಳ ನಡುವೆ ಮಾಡಿದ ರದ್ದತಿಗೆ ಟಿಕೆಟ್ ವೆಚ್ಚದ ಶೇ.25ರಷ್ಟು ಕಡಿತಗೊಳಿಸಲಾಗುತ್ತದೆ. ಆದರೆ 48 ಗಂಟೆಗಳಿಗಿಂತ ಮುಂಚಿತವಾಗಿ ಮಾಡಿದ ರದ್ದತಿಗೆ ಪೂರ್ಣ ಮರುಪಾವತಿ ನೀಡಲಾಗುತ್ತಿದೆ. ಕಾಳಸಂತೆಯಲ್ಲಿ ಹಾಗೂ ಏಜೆಂಟ್​ಗಳಿಂದ ಕೊನೆಯ ಕ್ಷಣದ ಟಿಕೆಟ್​ಗಳ ಮಾರಾಟವನ್ನು ತಡೆಯಲು ಮರುಪಾವತಿ ನಿಯಮವನ್ನು ಮಾರ್ಪಡಿಸಲಾಗುತ್ತಿದೆ ಎಂದು ವೈಷ್ಣವ್​ ಹೇಳಿದರು. ಹೊಸ ಮರುಪಾವತಿ ನಿಯಮವು […]

Continue Reading

ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ದಿನಾಂಕ ಪ್ರಕಟ ; ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟ

ಅಸ್ಸಾಮ್, ಕೇರಳ ಮತ್ತು ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ. ತಮಿಳುನಾಡಿನಲ್ಲೂ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಬಹಳಷ್ಟು ಜಾಗಗಳು ಹಿಂಸಾಚಾರಗಳಿಗೆ ಸೂಕ್ಷ್ಮವಾಗಿರುವುದರಿಂದ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತದೆ. ಏಪ್ರಿಲ್ 23 ಮತ್ತು 29ರಂದು ಮತದಾನ ನಡೆಯಲಿದೆ. ಈ ಮೇಲಿನ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಯಲ್ಲಿ ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಐದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು […]

Continue Reading

“ ನಾನು ಭ್ರಷ್ಟನಲ್ಲ” : ಅರವಿಂದ್ ಕೇಜ್ರಿವಾಲ್ ಕಣ್ಣೀರಿನಲ್ಲಿ ಹೇಳಿಕೆ

ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಂಚು ಆರೋಪ ಮಾಡಿದರು. “ಆಮ್ ಆದ್ಮಿ ಪಕ್ಷದ ಐವರು ಪ್ರಮುಖ ನಾಯಕರನ್ನು ಬಂಧಿಸಲಾಯಿತು. ಅಧಿಕಾರದಲ್ಲಿದ್ದ ಮುಖ್ಯಮಂತ್ರಿಯನ್ನೇ ಬಂಧಿಸಲಾಯಿತು. ಆದರೆ ನಾನು ಸಂಪಾದಿಸಿರುವುದು ಪ್ರಾಮಾಣಿಕತೆ ಮಾತ್ರ,” ಎಂದು ಭಾವುಕರಾಗಿ ನುಡಿದರು. ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ರವರು ಕೇಜ್ರಿವಾಲ್, ಸಿಸೋಡಿಯಾ ಸೇರಿದಂತೆ ಇನ್ನೂ 21 ಮಂದಿಗೆ ವಿನಾಯಿತಿ ನೀಡಿದರು. ಆರೋಪಪಟ್ಟಿಯಲ್ಲಿ ಸಾಕ್ಷ್ಯಾಧಾರಗಳ ಕೊರತೆ ಮತ್ತು ಹಲವು ದೋಷಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. […]

Continue Reading

ಅಡುಗೆ ಎಣ್ಣೆ ದರ ಇಳಿಸಲು ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಈಗ ಈ ಸುಂಕವನ್ನು ಶೇ.10ಕ್ಕೆ ಇಳಿಸಲಾಗಿದೆ. ಇದರ ಪರಿಣಾಮವಾಗಿ ಈ ಮೂರು ಎಣ್ಣೆಗಳ ಮೇಲಿನ ಒಟ್ಟು ತೆರಿಗೆ ಹೊರೆ 27.5% ರಿಂದ 16.5% ಕ್ಕೆ ಇಳಿಕೆ ಆಗಲಿದೆ. ಸೆಪ್ಟೆಂಬರ್ 2024ರಲ್ಲಿ ಅಡುಗೆ ಎಣ್ಣೆಗಳ ಮೇಲಿನ ತೆರಿಗೆ ಹೆಚ್ಚಳದಿಂದ ಬೆಲೆಗಳು ಗಗನಕ್ಕೇರಿದ್ದವು. ಈಗಿನ ಸುಂಕ ಕಡಿತದಿಂದ ಮಾರುಕಟ್ಟೆಯಲ್ಲಿ ಸ್ಥಿರತೆ ಮೂಡಿಸಿ, ಹಣದುಬ್ಬರವನ್ನು ನಿಯಂತ್ರಿಸುವುದು ಸರ್ಕಾರದ ಉದ್ದೇಶವಾಗಿದೆ. ಕೆಲವು ಕಂಪನಿಗಳು ಈಗಾಗಲೇ ಪ್ಯಾಕೆಟ್ ಸೂರ್ಯಕಾಂತಿ ಮತ್ತು ಸೋಯಾಬೀನ್ ಎಣ್ಣೆಗಳ ಬೆಲೆ ಇಳಿಕೆ ಘೋಷಿಸಿವೆ. ಮುಂದಿನ ದಿನಗಳಲ್ಲಿ ಕಡಿಮೆ ಸುಂಕದ ಹೊಸ […]

Continue Reading

T-20 ವಿಶ್ವಕಪ್ -26 ; ಭಾರತದ ವಿರುದ್ಧದ ಪಂದ್ಯ ಬಹಿಷ್ಕಾರಕ್ಕೆ ಪಾಕಿಸ್ತಾನ ನಿರ್ಧಾರ

ನಂತರ ಬಾಂಗ್ಲಾದೇಶ ತಂಡ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದು, ಅದರ ಬದಲಿಗೆ ಸ್ಕಾಟ್ಲೆಂಡ್ ತಂಡವನ್ನು ಸೇರಿಸಲಾಯಿತು.ಬಾಂಗ್ಲಾದೇಶದ ನಿಲುವಿಗೆ ಬೆಂಬಲ ಸೂಚಿಸಿದ್ದ ಪಾಕಿಸ್ತಾನ, ಪಂದ್ಯ ಬಹಿಷ್ಕರಿಸುವ ಸಾಧ್ಯತೆಯನ್ನು ಮುಂಚೆಯೇ ಸೂಚಿಸಿತ್ತು.ಕಳೆದ ವಾರ ನಡೆದ ICC ಮಂಡಳಿಯ ವರ್ಚುವಲ್ ಸಭೆಯಲ್ಲೂ ಇದೇ ನಿಲುವನ್ನು ಪುನರುಚ್ಚರಿಸಿದೆ. ಕಳೆದ ವರ್ಷದ ಚಾಂಪಿಯನ್ಸ್ ಟ್ರೋಫಿ ವೇಳೆ ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಭಾರತದ ಪಂದ್ಯಗಳನ್ನು ಪಾಕಿಸ್ತಾನದಿಂದ ದುಬೈಗೆ ಸ್ಥಳಾಂತರಿಸಿದ್ದ ಘಟನೆಯನ್ನೂ ಪಾಕಿಸ್ತಾನ ಉಲ್ಲೇಖಿಸಿದೆ ಎಂದು ತಿಳಿದು ಬಂದಿದೆ. 2008ರಿಂದ ಭಾರತ ತಂಡವು ಪಾಕಿಸ್ತಾನ ಪ್ರವಾಸ ಕೈಗೊಂಡಿಲ್ಲ. 2025ರ […]

Continue Reading