74 ಡಿವೈಎಸ್‌ಪಿ ಹಾಗೂ 293 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಇನ್ಸ್‌ಪೆಕ್ಟರ್‌ಗಳ ಜೊತೆಗೆ 74 ಡಿವೈಎಸ್‌ಪಿ (DySP) ದರ್ಜೆಯ ಅಧಿಕಾರಿಗಳಿಗೂ ಹೊಸ ಸ್ಥಳಗಳನ್ನು ನಿಯುಕ್ತಿಗೊಳಿಸಲಾಗಿದೆ. ಉಪವಿಭಾಗಗಳ ಎಸಿಪಿ (ACP) ಮತ್ತು ಡಿವೈಎಸ್‌ಪಿ ಹುದ್ದೆಗಳಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಬೆಂಗಳೂರು ನಗರದ ಸಂಚಾರ ವಿಭಾಗ, ವಿಶೇಷ ಜಾರಿ ಕೋಶ (EEC) ಮತ್ತು ಜಿಲ್ಲಾ ಪೊಲೀಸ್ ಉಪವಿಭಾಗಗಳಲ್ಲಿ ಹೊಸ ಅಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ. ವರ್ಗಾವಣೆಗೊಂಡ ಎಲ್ಲಾ ಅಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಹಳೆಯ ಹುದ್ದೆಗಳಿಂದ ಬಿಡುಗಡೆಗೊಂಡು, ನಿಯೋಜಿತ ಹೊಸ ಸ್ಥಳಗಳಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಅನೇಕ ಅಧಿಕಾರಿಗಳಿಗೆ […]

Continue Reading

ತಮಿಳುನಾಡಿಗೆ ದಳಪತಿಯೇ ‘ಅಧಿಪತಿ’, ; ಮುಖ್ಯಮಂತ್ರಿಯಾಗಿ ವಿಜಯ್​​ ಪ್ರಮಾಣವಚನ

ಇನ್ನು ಇಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು.

Continue Reading

ಪಶ್ಚಿಮ ಬಂಗಾಳ | ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ : ಪ್ರಧಾನಿ ಸೇರಿ ಗಣ್ಯರು ಭಾಗಿ

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್​ ನಬಿನ್​, ಕೇಂದ್ರ ಸಚಿವರಾದ ನರಾಮ್​ ಮೋಹನ್​ ನಾಯ್ಡು, ಧರ್ಮೇಂದ್ರ ಪ್ರಧಾನ್​, ಬಿಜೆಪಿ ಆಡಳಿತ ರಾಜ್ಯಗಳ ಸಿಎಂಗಳಾದ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ದೆಹಲಿ ಸಿಎಂ ರೇಖಾ ಗುಪ್ತಾ ಭಾಗಿಯಾಗಿದ್ದಾರೆ. ಶುಕ್ರವಾರದಂದು ನಡೆದ ಬಿಜೆಪಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು […]

Continue Reading

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ

ಕೋಲ್ಕತ್ತಾದಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಮಿತ್ ಶಾ ಅವರು ಅಧಿಕಾರಿ ಅವರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ‘ಸುವೇಂದು ಅವರು ಸಂಘರ್ಷದ ಹಾದಿಯಲ್ಲಿ ಬಂದವರು. ಅವರಿಗೆ ಆಡಳಿತದ ಅನುಭವವಿದೆ.ಬಂಗಾಳದ ಜನತೆಯ ಆಸೆಗಳನ್ನು ಪೂರ್ಣಗೊಳಿಸಲು ಅವರು ಸಮರ್ಥರಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಿಯೋಜಿತ ಸಿಎಂ ಸುವೇಂದು ಅಧಿಕಾರಿ ಅವರು ಈಗಾಗಲೇ ರಾಜ್ಯಪಾಲ ಆರ್.ಎನ್. […]

Continue Reading

ಟಿವಿಕೆ ವಿಜಯ್‌ಗೆ ಬೆಂಬಲ ನೀಡುವ ಆತಂಕ : AIADMK ಶಾಸಕರು ಪುದುಚೇರಿ ರೆಸಾರ್ಟ್‌ಗೆ ಶಿಫ್ಟ್..!

ಶಾಸಕರು ತಂಗಿರುವ ರೆಸಾರ್ಟ್ಶಾಸಕರು ತಂಗಿರುವ ರೆಸಾರ್ಟ್ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಈಗಾಗಲೇ ಐದು ಕಾಂಗ್ರೆಸ್ ಶಾಸಕರ ಬೆಂಬಲವನ್ನು ಪಡೆದುಕೊಂಡಿದ್ದಾರೆ. ಆದರೆ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತವನ್ನು ತಲುಪಲು ಇನ್ನೂ ಐದು ಶಾಸಕರ ಬೆಂಬಲದ ಅಗತ್ಯವಿದೆ.

Continue Reading

ಪಶ್ಚಿಮ ಬಂಗಾಳ | ರಾಜಿನಾಮೆ ಕೊಡದ ದೀದಿಗೆ ಮಂತ್ರಿಮಂಡಳವನ್ನೇ ವಿಸರ್ಜಿಸಿ ಶಾಕ್ ನೀಡಿದ ರಾಜ್ಯಪಾಲ ಆರ್‌ಎನ್ ರವಿ!

ಸಾಮಾನ್ಯವಾಗಿ, ರಾಜ್ಯಪಾಲರು ಮುಖ್ಯಮಂತ್ರಿಯ ಸಲಹೆಯ ಮೇರೆಗೆ ಹಾಗೆ ಮಾಡುತ್ತಾರೆ. ಆದಾಗ್ಯೂ, ಪ್ರಸ್ತುತ ಸಂದರ್ಭಗಳಲ್ಲಿ, ಸರ್ಕಾರ ಮತ್ತು ರಾಜಭವನದ ನಡುವಿನ ಸಂಘರ್ಷ ಉತ್ತುಂಗದಲ್ಲಿದ್ದಾಗ, ರಾಜ್ಯಪಾಲರು ಮಮತಾ ಬ್ಯಾನರ್ಜಿ ಸರ್ಕಾರದ ಅಸ್ತಿತ್ವವನ್ನು ಕೊನೆಗೊಳಿಸಲು ಈ ವೀಟೋ-ತರಹದ ಅಧಿಕಾರವನ್ನು ಬಳಸಿದರು. ಮುಖ್ಯ ಕಾರ್ಯದರ್ಶಿ ದುಷ್ಯಂತ್ ನರಿಯಾಲ ಅವರು ಹೊರಡಿಸಿದ ಅಧಿಸೂಚನೆಯು ಈ ನಿರ್ಧಾರವನ್ನು ರಾಜಭವನದ ನೇರ ಆದೇಶದ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸುತ್ತದೆ. ಐತಿಹಾಸಿಕ ವಜಾ: ರಾಜ್ಯಪಾಲ ಆರ್.ಎನ್. ರವಿ ಅವರು ಮಮತಾ ಬ್ಯಾನರ್ಜಿ ಅವರ ಸಂಪುಟವನ್ನು ವಜಾಗೊಳಿಸಿದ್ದಾರೆ. ಮೇ 7, […]

Continue Reading

ಪಶ್ಚಿಮ ಬಂಗಾಳ | ಸಿಎಂ ಅಭ್ಯರ್ಥಿ ಸುವೇಂದು ಅಧಿಕಾರಿ ಪಿಎ ಚಂದ್ರ ನಾಥ್ ದತ್ ಗುಂಡೆಟಿಗೆ ಬಲಿ!

ಬಿಜೆಪಿ ನಾಯಕ ಸದ್ಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥರನ್ನು ಬುಧವಾರ ತಡರಾತ್ರಿ ಗುಂಡಿಕ್ಕಿ ಕೊಲೆ ಮಾಡಲಾಗಿದ್ದು, ಈ ಬಗ್ಗೆ ಸುವೇಂದು ಅಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ಆಪ್ತನನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಈ ಹತ್ಯೆ ಘಟನೆ ನಡೆದ ಕೆಲ ಗಂಟೆಗಳ ನಂತರ ಆಸ್ಪತ್ರೆಗೆ ತೆರಳಿದ ಸುವೇಂದು ಅಧಿಕಾರಿ, ಹತ್ಯೆಯನ್ನು ‘ಶೀತಲ ರಕ್ತದ ಕೊಲೆ’ ಮತ್ತು ‘ಕ್ರೂರ ಕೊಲೆ’ ಎಂದು ಕರೆದಿದ್ದಾರೆ. ಆಸ್ಪತ್ರೆಯ ಹೊರಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ದಾಳಿ […]

Continue Reading

ಭಾರತೀಯ ಸಂಸ್ಕೃತಿ ಸಾರುವ ಶಿಶುಗೀತೆಗಳ ರಚನೆ : ಮೆಚ್ಚುಗೆಗಳಿಸಿದ ಬೆಳಗಾವಿಯ ಬಾಲಕಿ

ಈ ಪುಸ್ತಕವನ್ನು ಏಪ್ರಿಲ್ 18ರಂದು ಮುಂಬೈನಲ್ಲಿ ಚೇತನ್ ಭಗತ್ ಅವರು ಲೋಕಾರ್ಪಣೆಗೊಳಿಸಿ, ಲಾವಣ್ಯಳ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ಪೂರ್ವ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ‘ಟ್ವಿಂಕಲ್ ಟ್ವಿಂಕಲ್ ಲಿಟಲ್ ಸ್ಟಾರ್’ ಅಥವಾ ‘ಜಾಕ್ ಆ್ಯಂಡ್ ಜಿಲ್’ ನಂತಹ ಪಾಶ್ಚಾತ್ಯ ಮೂಲದ ಕವಿತೆಗಳನ್ನು ಕಲಿಸುವುದು ಸಾಮಾನ್ಯ. ಆದರೆ, ನಮ್ಮ ದೇಶದ ಮಕ್ಕಳಿಗೆ, ಭಾರತೀಯ ಸಂಸ್ಕೃತಿ, ಮೌಲ್ಯಗಳು ಮತ್ತು ನಾಯಕರನ್ನು ಪರಿಚಯಿಸಬೇಕು. ನಮ್ಮತನದ ಶಿಶುಗೀತೆಗಳ ಮೂಲಕ ಮಕ್ಕಳಿಗೆ ನಮ್ಮ ದೇಶದ ಇತಿಹಾಸವನ್ನು ತಿಳಿಸುವ ಉದ್ದೇಶದಿಂದ ಈ ಪುಸ್ತಕವನ್ನು ರಚಿಸಿದ್ದೇನೆ ಎಂದು ಲಾವಣ್ಯ ಹೇಳಿದರು.

Continue Reading

ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ನೃತ್ಯಕ್ಕೆ ಬ್ರೇಕ್ : ಸರ್ಕಾರ ಆದೇಶ

ಶಾಲೆಯು ಮಕ್ಕಳಿಗೆ ಜ್ಞಾನ ದೇಗುಲವಿದ್ದಂತೆ. ಮಗುವಿನ ಭವಿಷ್ಯದ ನಿರ್ಮಾಣ, ಸಂಸ್ಕಾರ, ವಿನಯತೆ, ಒಳ್ಳೆಯ ನಡತೆ, ಮಾನಸಿಕ ಸ್ಥಿತಿ ಮತ್ತು ನೈತಿಕ ಮೌಲ್ಯಗಳ ಬೆಳವಣಿಗೆಯು ಶಾಲೆಯಿಂದಲೇ ಪ್ರಾರಂಭವಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವು ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಾಗ ಅಶ್ಲೀಲ ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ನೈತಿಕ ಮೌಲ್ಯಗಳ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರಲಿದ್ದು, ಶಿಕ್ಷಣದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಲಿದೆ. ಶಾಲಾ ಶಿಕ್ಷಣ […]

Continue Reading

ಸಾವಿನ ಪುರಾವೆ ಕೇಳಿದ ಬ್ಯಾಂಕ್‌; ಸಮಾಧಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ವ್ಯಕ್ತಿ!

ಬ್ಯಾಂಕ್ ನಿಯಮಗಳ ಪ್ರಕಾರ, ಮೃತ ವ್ಯಕ್ತಿಯ ಹಣವನ್ನು ಪಡೆಯಲು ವಾರಸುದಾರರ ಮರಣ ಪ್ರಮಾಣಪತ್ರ ಅಥವಾ ನಾಮಿನಿ ವಿವರ ಬೇಕಾಗುತ್ತದೆ. ಆದರೆ, ಇವುಗಳ ಅರಿವಿಲ್ಲದ ಜಿತು ಮುಂಡಾ ಅವರು, ಬ್ಯಾಂಕ್ ಅಧಿಕಾರಿಗಳು ಪದೇ ಪದೆ ದಾಖಲೆ ಕೇಳುತ್ತಿರುವುದಕ್ಕೆ ಬೇಸರಗೊಂಡಿದ್ದರು. ತನ್ನ ತಂಗಿ ಎರಡು ತಿಂಗಳ ಹಿಂದೆಯೇ ಮೃತಪಟ್ಟಿದ್ದಾಳೆ ಎಂದು ಬ್ಯಾಂಕ್​ ಸಿಬ್ಬಂದಿಗೆ ತಿಳಿಸಿದರೂ, ನಿಯಮಗಳ ಪ್ರಕಾರ ಹಣ ನೀಡಲು ದಾಖಲೆ ಸಲ್ಲಿಸಲು ಅವರು ಸೂಚಿಸಿದ್ದರು. ತಂಗಿ ಮೃತಪಟ್ಟಿದ್ದಾಳೆ ಎಂದು ಸಾಬೀತುಪಡಿಸಲು ಬೇರೆ ದಾರಿಯಿಲ್ಲದೆ, ಆತ ಸ್ಮಶಾನಕ್ಕೆ ತೆರಳಿ ಹೂತಿಟ್ಟ […]

Continue Reading