ಎಸ್. ಐ. ಆರ್ | ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್..!

ಎಸ್‌ಐಆ‌ರ್ ಅನ್ನು ಚಲಾಯಿಸುವ ಮೂಲಕ ಚುನಾವಣಾ ಆಯೋಗವು ಶಾಸನಬದ್ಧ ಅಧಿಕಾರಗಳ ಹೊರಗೆ ಕಾರ್ಯನಿರ್ವಹಿಸಿಲ್ಲ ಎಂದು ಪೀಠ ಗಮನಿಸಿತು. ‘ಸಾಮಾನ್ಯವಾಗಿ ನಡೆಸುವುದಕ್ಕಿಂತ ಭಿನ್ನವಾಗಿರುವುದರಿಂದ ಇದನ್ನು ಅಲ್ಮಾ ವೈರ್‌ಗಳು ಎಂದು ಹೇಳಲಾಗುವುದಿಲ್ಲ’ ಎಂದು ನ್ಯಾಯಾಲಯ ಗಮನಿಸಿದೆ. “ಎಸ್‌ಐಆರ್ ಸಾಧಿಸಲು ಬಯಸುವ ಉದ್ದೇಶವು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳ ಸಾಂವಿಧಾನಿಕ ಗುರಿಯೊಂದಿಗೆ ನೇರ ಸಂಬಂಧ ಹೊಂದಿದೆ ಎಂದು ನಾವು ಅಷ್ಟೇ ತೃಪ್ತರಾಗಿದ್ದೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Continue Reading

ಶಿರಾಳಕೊಪ್ಪ | ‘ಸಮೃದ್ಧ ಮಣ್ಣು, ಸುಸ್ಥಿರ ಕೃಷಿ’ : ನೂತನ ಮಣ್ಣು ಪರೀಕ್ಷಾ ಕೇಂದ್ರ ಲೋಕಾರ್ಪಣೆ ಮಾಡಿದ ಸಂಸದ ಬಿ. ವೈ. ರಾಘವೇಂದ್ರ

ನಮ್ಮ ಕೃಷಿ ಇಲಾಖೆ (ಶಿವಮೊಗ್ಗ) ಇವರ ಅನುಷ್ಠಾನದೊಂದಿಗೆ, 2023-24ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಅನುದಾನದ ಅಡಿಯಲ್ಲಿ ಈ ಅತ್ಯಾಧುನಿಕ ಮಣ್ಣು ಪರೀಕ್ಷಾ ಕೇಂದ್ರವನ್ನು ನಿರ್ಮಿಸಲಾಗಿದೆ. ಧ್ಯೇಯ: “ನಿಮ್ಮ ಮಣ್ಣನ್ನು ತಿಳಿಯಿರಿ” (Know Your Soil) ಎಂಬ ಮಂತ್ರದೊಂದಿಗೆ ನಮ್ಮ ತಾಲ್ಲೂಕಿನ ಪ್ರತಿಯೊಬ್ಬ ರೈತನಿಗೂ ಡಿಜಿಟಲ್ ಹಾಗೂ ವೈಜ್ಞಾನಿಕ ಕೃಷಿಯ ಸೌಲಭ್ಯವನ್ನು ಹತ್ತಿರವಾಗಿಸುವುದು ನಮ್ಮ ಮೂಲ ಉದ್ದೇಶವಾಗಿದೆ ಎಂದರು . ರೈತರ ಆದಾಯ ದ್ವಿಗುಣಗೊಳಿಸಲು ಮತ್ತು ಮಣ್ಣಿನ ಗುಣಮಟ್ಟ ಕಾಪಾಡಲು ಇಂತಹ ತಾಂತ್ರಿಕ ಸೌಲಭ್ಯಗಳು […]

Continue Reading

ಶಿಕಾರಿಪುರ | ದಶಕಗಳ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ತಾರ್ಕಿಕ ಹಾಗೂ ಶಾಶ್ವತ ಪರಿಹಾರ ನಿಟ್ಟಿನಲ್ಲಿ ಸಂಸದರ ನೇತೃತ್ವದಲ್ಲಿ ಮಹತ್ವದ ಜಂಟಿ ಸಭೆ

ಇದರೊಂದಿಗೆ, ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಅರ್ಹ ಸಾಗುವಳಿ ಜಮೀನುಗಳನ್ನು ಮುಕ್ತಗೊಳಿಸಲು ಮತ್ತು ಮಲೆನಾಡಿನ ರೈತರ ಹಿತರಕ್ಷಣೆಯನ್ನು ಕಾಯ್ದುಕೊಳ್ಳಲು ಸರ್ಕಾರದ ಉನ್ನತ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಸಮಾಲೋಚಿಸಲಾಯಿತು. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಕಾನೂನಾತ್ಮಕವಾಗಿ ಮತ್ತು ಆಡಳಿತಾತ್ಮಕವಾಗಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಿರಂತರವಾಗಿ ಮುಂದುವರೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಉನ್ನತ ಮಟ್ಟದ ಸಭೆಯು ಶಿಕಾರಿಪುರ ಕ್ಷೇತ್ರದ ಶಾಸಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಮತ್ತು ಪ್ರಮುಖರಾದ ಕೆ.ಎಸ್. ಗುರುಮೂರ್ತಿ ಅವರ ಉಪಸ್ಥಿತಿ ಹಾಗೂ ಜಂಟಿ […]

Continue Reading

ಮಲೆನಾಡಿಗೆ ಕಳಂಕ ತರುತ್ತಿರುವ Spa ಅಡ್ಡೆಗಳು..!?

ಶಿವಮೊಗ್ಗದಲ್ಲಿ ಸ್ಪಾಗಳನ್ನು ಪೊಲೀಸ್ ಇಲಾಖೆ ಬಂದ್ ಮಾಡಿಸುತ್ತಿದ್ದಂತೆ ಇಲ್ಲಿರುವ ದಂಧೆಕೋರರು ಮಲೆನಾಡಿನ ಸಾಗರ ಮತ್ತು ತೀರ್ಥಹಳ್ಳಿಗೆ ಹೋಗಿ ಬರುವಂತೆ ನೋಡಿಕೊಳ್ಳಗುತ್ತಿತ್ತಂತೆ. ಇನ್ನು ಈ Spa ಗಳ ಬಗ್ಗೆ ಮತ್ತೊಂದಿಷ್ಟು ಮಾಹಿತಿ ಏನಂದರೆ ಇಲ್ಲಿ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಸಂಬಳವಿರುವುದಿಲ್ಲ ಎಂಬುದಾಗಿದೆ. ಇನ್ನು ಮುಖ್ಯ ವಿಚಾರವೇನೆಂದರೆ ಭದ್ರಾವತಿ ಕಿಂಗ್ ಪಿನ್ ಗಳು ಶಿವಮೊಗ್ಗದಲ್ಲಿ ಸಾಮಾಜಿಕ ಸ್ವಾಸ್ತ್ಯ ಹಾಳುಮಡುತ್ತಿರುವ ಆರೋಪಗಳು ಕೇಳಿ ಬರುತ್ತಿದೆ. ಇನ್ನು ವಿದ್ಯಾನಗರದ ಎವರ್ಗ್ರೀನ್ Spa ಮೇಲೆ ವ್ಯಕ್ತಿ ಒಬ್ಬನಿಂದ ಬೇರೆ ಜಿಲ್ಲೆಯಿಂದ ಯುವತಿಯರು ಹಾಗೂ ನಗರದಲ್ಲಿರುವ […]

Continue Reading

ಶಿವಮೊಗ್ಗ | ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ : ಶರತ್ ಕಲ್ಯಾಣಿ ನೇತೃತ್ವದಲ್ಲಿ ದೂರು

ಇತನ ಕೃತ್ಯ ಸಮಾಜದಲ್ಲಿ ರಾಜಕೀಯ ಪಕ್ಷಗಳ ಗುಂಪುಗಳ ನಡುವೆ ಘರ್ಷಣೆಯನ್ನು ಉಂಟು ಮಾಡಲು ಪ್ರೇರೇಪಿಸುತ್ತಿರುವುದು ಸ್ಪಷ್ಟವಾಗಿರುತ್ತದೆ ಎಂದು ಉಲ್ಲೇಖಸಿದ್ದಾರೆ . ಆದ್ದರಿಂದ, ನಂಜೇಗೌಡ ಎಂಬ ವ್ಯಕ್ತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಮನವಿ.ಈ ದೂರಿನೊಂದಿಗೆ ಮಾನ್ಯ ಪ್ರಧಾನಮಂತ್ರಿಗಳ ವಿರುದ್ಧ ಮಾಡಿರುವ ಸುಳ್ಳು ಪೋಸ್ಟ್ ಅನ್ನು ಲಗ್ಗತಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶರತ್ ಎಸ್. ವಿ. ಕಲ್ಯಾಣಿ, ದಿನೇಶ್ ಆಚಾರ್ಯ, ವಕೀಲರಾದ ಸುರೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಹೈಕೋರ್ಟ್ ಪೀಠ ಜಿಲ್ಲೆಗಳ ಜನರ ಸ್ವಾಭಿಮಾನದ ಹಾಗೂ ನ್ಯಾಯದ ಹಕ್ಕಿನ ಹೋರಾಟ : ಸಂಸದ BYR

“ನಮಗೆ ಕರಾವಳಿಯ ಸಹೋದರರ ಬಗ್ಗೆ ಅಪಾರ ಪ್ರೀತಿ ಮತ್ತು ಗೌರವವಿದೆ. ಆದರೆ ಭೌಗೋಳಿಕ ವಾಸ್ತವವನ್ನು ಅರಿಯದವರು ಮಾತ್ರ ಇಂತಹ ಪ್ರಸ್ತಾವನೆ ಮಂಡಿಸಲು ಸಾಧ್ಯ ಎಂದು ಹೇಳಿದರು.ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು ಕರೆ ನೀಡಿದ ಅವರು, ಭೌಗೋಳಿಕ ಸವಾಲುಗಳನ್ನು ಕಡೆಗಣಿಸಿ ಮಂಗಳೂರು ಪೀಠಕ್ಕೆ ಶಿವಮೊಗ್ಗ ಸೇರಿಸುವ ಪ್ರಸ್ತಾವನೆಗೆ ತೀವ್ರ ಅಸಮ್ಮತಿ ವ್ಯಕ್ತಪಡಿಸಿದರು. ಶಾಸಕರಾದ ಡಿ.ಎಸ್.ಅರುಣ್, ಡಾ||ಧನಂಜಯ ಸರ್ಜಿ, ಪರಿಷತ್ ಮಾಜಿ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. […]

Continue Reading

ಕೇಂದ್ರ ಸರ್ಕಾರದಿಂದ ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ ನಿಯೋಜನೆ ಅವಧಿ ಒಂದು ವರ್ಷಕ್ಕೆ ವಿಸ್ತರಣೆ

ಲೋಕಾಯುಕ್ತದಲ್ಲಿದ್ದ ಭ್ರಷ್ಟಾಚಾರ ಜಾಲ ಹಾಗೂ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳನ್ನು ಬಯಲಿಗೆಳೆದ ಕೀರ್ತಿ ಇವರದು. 2016 ರಿಂದ ಕೇಂದ್ರ ಸೇವೆಗೆ ನಿಯೋಜನೆಗೊಂಡ ಇವರು, ರಾಷ್ಟ್ರೀಯ ತನಿಖಾ ದಳ (NIA) ಮತ್ತು ಜಾರಿ ನಿರ್ದೇಶನಾಲಯ (ED) ದಂತಹ ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಇದೀಗ ಸಿಐಎಸ್‌ಎಫ್‌ನಲ್ಲಿ ಅವರ ಸೇವಾವಧಿಯನ್ನು ವಿಸ್ತರಿಸಲಾಗಿದ್ದು, ಒಟ್ಟಾರೆಯಾಗಿ ಕಳೆದ 13 ವರ್ಷಗಳಿಂದ ಅವರು ಯಶಸ್ವಿಯಾಗಿ ಕೇಂದ್ರ ನಿಯೋಜನೆಯಲ್ಲಿಯೇ ಮುಂದುವರಿದಂತಾಗಿದೆ.

Continue Reading

ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲೂ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್​

ಇದರ ಬೆನ್ನಲ್ಲೇ, ಪ್ರಕರಣದ ವಿವರಗಳನ್ನು ಮಾಧ್ಯಮಗಳಿಗೆ ತಿಳಿಸಲು ಒಬ್ಬರು ಮಹಿಳಾ ಐಜಿ (IG) ಅಧಿಕಾರಿ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿ ಕರೆದಿದ್ದರು. ಆದರೆ, ಸುದ್ದಿಗೋಷ್ಠಿ ಆರಂಭವಾಗುವ ಮುನ್ನ ಈ ಮೂವರು ಅಧಿಕಾರಿಗಳು ಅತ್ಯಂತ ಬೇಜವಾಬ್ದಾರಿಯಿಂದ ಒಬ್ಬರಿಗೊಬ್ಬರು ಜೋಕ್ ಮಾಡುತ್ತಾ, ನಗುತ್ತಾ ಕಾಲ ಕಳೆದಿದ್ದಾರೆ. ವಿಶೇಷವಾಗಿ ಆ ಮಹಿಳಾ ಐಜಿ ಅಧಿಕಾರಿ, ಸಂತ್ರಸ್ತೆಯ ನೋವನ್ನು ಮರೆತು ನಗುನಗುತ್ತಾ ಮುಖದ ಮೇಲೆ ಯಾವುದೇ ಗಂಭೀರತೆ ಇಲ್ಲದೆ ವರ್ತಿಸಿದ್ದಾರೆ.​ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ: ​ಈ ಅಧಿಕಾರಿಗಳು ನಗುತ್ತಿರುವ ದೃಶ್ಯಗಳು […]

Continue Reading