ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಹೃದಯಾಘಾತದಿಂದ ವಿಧಿವಶ

ಹೆಚ್‌ಡಿ ದೇವೇಗೌಡ ಮತ್ತು ಚೆನ್ನಮ್ಮಾ ದಂಪತಿಗೆ ಆರು ಮಕ್ಕಳಿದ್ದು, ರಾಜಕೀಯ-ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಹೆಚ್‌ಡಿ ರೇವಣ್ಣ (ಹಿರಿಯ ಮಗ) ಹೆಚ್‌ಡಿ ಕುಮಾರಸ್ವಾಮಿ (ಎರಡನೇ ಮಗ) ಕೇಂದ್ರ ಸಚಿವ ಹೆಚ್‌ಡಿ ಬಾಲಕೃಷ್ಣ (ಮೂರನೇ ಮಗ) ಉದ್ಯಮಿ ಹೆಚ್‌ಡಿ ರಮೇಶ್ (ನಾಲ್ಕನೇ ಮಗ) ವೈದ್ಯಕೀಯ ವಿಭಾಗ ಹೆಚ್‌ಡಿ ಅನುಸೂಯಾ (ಮಗಳು) ಹೆಚ್‌ಡಿ ಶೈಲಜಾ (ಮಗಳು).

Continue Reading

ಶಿವಮೊಗ್ಗ | ಡಿಜಿಟಲ್ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾರೀ ಭ್ರಷ್ಟಾಚಾರ : ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಗಂಭೀರ ಆರೋಪ

ಆದರೆ, ಈ ಡಿಜಿಟಲ್ ವ್ಯಾಲ್ಯೂವೇಶನ್‌ನಲ್ಲಿ ವಿಪರೀತ ದುಂದುವೆಚ್ಚ ಮಾಡಲಾಗುತ್ತಿದೆ. ಇಲ್ಲಿ ಪ್ರತಿ ಬುಕ್‌ಲೆಟ್ ಮೌಲ್ಯಮಾಪನಕ್ಕೆ ಬರೋಬ್ಬರಿ 54 ರೂಪಾಯಿ ಚಾರ್ಜ್ ಮಾಡಲಾಗುತ್ತಿದ್ದು, ಒಂದು ಸೆಮಿಸ್ಟರ್ ಪ್ರಕ್ರಿಯೆ ಮುಗಿಸಲು ಬರೋಬ್ಬರಿ 2.36 ಕೋಟಿ ರೂಪಾಯಿ ಹಣವನ್ನು ವೆಚ್ಚ ಮಾಡಲಾಗಿದೆ ಎಂದು ಅಂಕಿ-ಅಂಶಗಳ ಸಮೇತ ವಿವರಿಸಿದರು.ಡಿಜಿಟಲ್ ವ್ಯಾಲ್ಯೂವೇಶನ್ ಜಾರಿಗೆ ಬಂದರೆ ಪಾರದರ್ಶಕತೆ ಇರುತ್ತದೆ, ಮಕ್ಕಳಿಗೆ ಬೇಗ ಅಂಕಪಟ್ಟಿ ಸಿಗುತ್ತದೆ ಎಂಬ ಆಶಯ ನಮ್ಮದಾಗಿತ್ತು. ಆದರೆ, 2024-25 ಹಾಗೂ 2025-26ನೇ ಸಾಲಿನ ಅಂಕಪಟ್ಟಿಗಳು ಇದುವರೆಗೂ ವಿದ್ಯಾರ್ಥಿಗಳ ಕೈಸೇರಿಲ್ಲ. ಈ ವಿಳಂಬಕ್ಕೆ ಕಾರಣವೇನು […]

Continue Reading

ಶಿವಮೊಗ್ಗ ನಗರದಲ್ಲಿ ನೂತನ ‘ಆಡಳಿತ ಸೌಧ’ ನಿರ್ಮಾಣಕ್ಕೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ

ಇದರಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬಾಡಿಗೆಯನ್ನು ಸರ್ಕಾರವೇ ಭರಿಸಬೇಕಾಗಿದ್ದು, ಬೊಕ್ಕಸಕ್ಕೆ ಅನಗತ್ಯ ಆರ್ಥಿಕ ಹೊರೆಯಾಗಿದೆ. ಅಷ್ಟೇ ಅಲ್ಲದೆ, ಈ ಕಚೇರಿಗಳು ನಗರದ ವಿವಿಧೆಡೆ ಹರಿದು ಹಂಚಿಹೋಗಿರುವುದರಿಂದ ಸಾರ್ವಜನಿಕರು ಹಾಗೂ ರೈತರು ಒಂದೇ ದಿನದಲ್ಲಿ ವಿವಿಧ ಇಲಾಖೆಗಳ ಕೆಲಸಗಳನ್ನು ಮುಗಿಸಿಕೊಳ್ಳಲು ತೀವ್ರ ಪರದಾಡುವಂತಾಗಿದೆ. ನೂತನ ಆಡಳಿತ ಸೌಧ ನಿರ್ಮಾಣಕ್ಕಾಗಿ ಗುರುತಿಸಲಾಗಿರುವ ಜಾಗವು ಶಿವಮೊಗ್ಗ ಮುಖ್ಯ ಬಸ್ ನಿಲ್ದಾಣದಿಂದ ಕೇವಲ 500 ಮೀಟರ್ ದೂರದಲ್ಲಿದೆ. ಇದು ಜಿಲ್ಲೆಯ ವಿವಿಧ ಭಾಗಗಳಿಂದ ಬರುವ ಜನಸಾಮಾನ್ಯರಿಗೆ ಅತ್ಯಂತ ಸುಲಭವಾಗಿ ತಲುಪಲು ಯೋಗ್ಯವಾದ […]

Continue Reading

ಬಿ.ಸಿ. ರೋಡ್‌ ಲಾವಣ್ಯಾ ಹತ್ಯೆ ಪ್ರಕರಣ ; ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಪ್ರಚೋದನಕಾರಿ ಪೋಸ್ಟ್ ಪ್ರಸಾರ ಮಾಡಿದವರ ಮೇಲೆ ದಾಖಲಾಯಿತು ಪ್ರಕರಣ..!

ಚೇತನ್ ಬೆಳ್ಳಾಡ ಎಂಬ ಪೇಸ್ ಬುಕ್ ಖಾತೆಯಲ್ಲಿ ಪ್ರಕರಣದ ಆರೋಪಿಯ ಪೋಟೋವನ್ನು ಕಾಂಗ್ರೆಸ್ ಪಾರ್ಟಿಯ ಕಾರ್ಯಕರ್ತ ಎಂದು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಮೇಲಿನ 3 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ : ಜು. 17 ರ ಪ್ರಗತಿ

ಶಿವಮೊಗ್ಗ ಗ್ರಾಮಾಂತರ: ಒಟ್ಟು 2,20,250 ಮತದಾರರಿದ್ದು, 2,20,250 ಶೇ. 100 ಇ-ಫಾರ್ಮ್ ವಿತರಿಸಲಾಗಿದೆ. 158001 ಅಂದರೆ ಶೇ. 71.74 ಡಿಜಿಟಲೀಕರಣಗೊಳಿಸಲಾಗಿದೆ.ಭದ್ರಾವತಿ: 2,14,907 ಮತದಾರರಿದ್ದು, 2,14,907 ಶೇ. 100 ಇ-ಫಾರ್ಮ್ ವಿತರಿಸಲಾಗಿದ್ದು, 110420 ಫಾರ್ಮ್ ಅಂದರೆ ಶೇ 4.12 ಡಿಜಿಟಲೀಕರಣಗೊಂಡಿದೆ.ಶಿವಮೊಗ್ಗ ನಗರ: 2,77,098 ಮತದಾರರನ್ನು ಹೊಂದಿದ್ದು, 275778 ಶೇ. 99.52 ಇ-ಫಾರ್ಮ್ ವಿತರಣೆಯಾಗಿದೆ. 144251 ಫಾರ್ಮ್ ಶೇ.52.06ಡಿಜಿಟಲೀಕರಣಗೊಂಡಿದೆ.ತೀರ್ಥಹಳ್ಳಿ: 1,92,314 ಮತದಾರರಿದ್ದು, 192113 ಶೇ. 99.90 ಇ-ಫಾರ್ಮ್ ವಿತರಿಸಲಾಗಿದೆ. 140863 ಫಾರ್ಮ್ ಶೇ. 73.25 ಡಿಜಿಟಲೀಕರಣಗೊಂಡಿದೆ. ಶಿಕಾರಿಪುರ 2,06,415 ಮತದಾರರಿದ್ದು,2,06,415 […]

Continue Reading

ಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ಸೌಲಭ್ಯಗಳ ವಿತರಣೆ : 105 ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಹಾಗೂ ಉದ್ಯೋಗ ಸಾಲ ವಿತರಣೆ

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ನಮ್ಮ ಅವಧಿಯಲ್ಲಿ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ, ಅರ್ಹತೆ ಹೊಂದಿರುವ ನೈಜ ಫಲಾನುಭವಿಗಳಿಗೆ ನೇರವಾಗಿ ಸರ್ಕಾರದ ಸೌಲಭ್ಯಗಳು ತಲುಪುವಂತೆ ಪಾರದರ್ಶಕ ವ್ಯವಸ್ಥೆ ಕಲ್ಪಿಸಲಾಗಿದೆ. ಕರ್ತವ್ಯ ಭವನವು ಸದಾ ಸಾರ್ವಜನಿಕರ ಹಿತರಕ್ಷಣೆಗೆ ಮತ್ತು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕೆಲಸ ಕಾರ್ಯಗಳಿಗೆ ಮುಕ್ತವಾಗಿರುತ್ತದೆ” ಎಂದರು. ಇದೇ ವೇಳೆ ಸೌಲಭ್ಯಗಳನ್ನು ಸ್ವೀಕರಿಸಿದ ಫಲಾನುಭವಿಗಳು ಶಾಸಕರ ತ್ವರಿತ ಸ್ಪಂದನೆ ಹಾಗೂ ಕಾಳಜಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ […]

Continue Reading

ಬಿಜೆಪಿ ಮೈತ್ರಿ ಬಿಟ್ಟು ಹೊರಗೆ ಬನ್ರಿ ನೋಡೋಣ? : ಕೇಂದ್ರ ಸಚಿವ ಎಚ್‌ಡಿಕೆಗೆ, ಮಾಜಿ ಸಚಿವ ಚಲುವರಾಯಸ್ವಾಮಿ ಪಂಥಾಹ್ವಾನ..!?

ತಮಿಳುನಾಡು ಮಾಜಿ ಸಿಎಂ ದಿವಂಗತ ಕರುಣಾನಿಧಿ ಮಗನನ್ನು ನೋಡಿ ಕಲಿತುಕೊಳ್ಳಿ. ದೇವೇಗೌಡರ ಮಗನಾಗಿ ಏನ್ರಿ ನಿಮ್ಮ ಸಾಧನೆ? ಇನ್ನು ಮುಂದೆಯಾದರೂ ಗೌರವದಿಂದ ಮಾತನಾಡಿ ಮಿಸ್ಟರ್ ಕುಮಾರಸ್ವಾಮಿಯವರೇ. ನಮಗೆ ಕುಮಾರಸ್ವಾಮಿ ಅಭಿನಂದನೆ ಬೇಕಾಗಿಲ್ಲ, ಅವರ ಸರ್ಟಿಫಿಕೇಟ್ ಬೇಕಾಗಿಲ್ಲ. ರೇವಣ್ಣಗೆ ಇರುವ ಮನಸ್ಸೂ ನಿಮಗೆ ಇಲ್ಲ ಎಂದು ಕಿಡಿಕಾರಿದರು.

Continue Reading

ಬೆಂಗಳೂರು ಬಳಿ ಎರಡನೆ ವಿಮಾನ‌ ನಿಲ್ದಾಣ ಬೇಡ : ಸಿಎಂಗೆ ವಿಜಯೇಂದ್ರ ಪತ್ರ..!

ಎರಡನೆಯದಾಗಿ, ಬೆಂಗಳೂರು ಈಗಾಗಲೇ ಜನಸಂಖ್ಯೆ, ವಾಹನ ದಟ್ಟಣೆ. ಕುಡಿಯುವ ನೀರು. ಸಂಚಾರ ಮತ್ತು ಪರಿಸರದ ಮೇಲೆ ಅತಿಯಾದ ಒತ್ತಡವನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೊಂದು ಬೃಹತ್ ಮೂಲ ಸೌಕರ್ಯ ಯೋಜನೆಯನ್ನು ಬೆಂಗಳೂರಿನ ಸುತ್ತಮುತ್ತಲೇ ಕೇಂದ್ರೀಕರಿಸುವುದು ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸುವ ಇರಾದೆ ಎಂದಿದ್ದಾರೆ.

Continue Reading

ದಾವಣಗೆರೆ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿದ್ದೇಶ್ವರ್​ ಅಸಮಾಧಾನ

ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಬದಲಾವಣೆ ಮಾಡಿದ್ದಾರೆ, ಮಾಡಲಿ. ಆದರೆ ಬದಲಾವಣೆ ಮಾಡುವಾಗ ನಮ್ಮನ್ನು ಒಂದು ಮಾತು ಕೇಳಬೇಕಿತ್ತು. ನಾವು ಮಾಡಿದ್ದ ಪ್ರಧಾನ ಕಾರ್ಯದರ್ಶಿಗಳನ್ನು ಏಕೆ ತೆಗೆದರು ಎನ್ನುವುದು ಗೊತ್ತಾಗಬೇಕಿದೆ. ಮೂರು ತಿಂಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ತೆಗೆದರೆ ಅದರ ಅರ್ಥ ಏನು?. ಹೀಗೆ ಮಾಡಿದರೆ ನಾವು ಕಾರ್ಯಕರ್ತರಿಗೆ ಮತ್ತು ಜನರಿಗೆ ಏನು ಉತ್ತರ ಕೊಡಬೇಕು?. ರಾಜ್ಯಾಧ್ಯಕ್ಷರೇ ಇದಕ್ಕೆಲ್ಲ ಉತ್ತರ ಕೊಡಬೇಕು ಎಂದು ಹೇಳಿದರು. ನಾನು ರಾಜ್ಯಾಧ್ಯಕ್ಷರಿಗೆ ಕರೆ ಮಾಡಿ ಮಾತನಾಡಿದರೆ ಇವತ್ತು ಅಮವಾಸ್ಯೆ ಇದೆ ಮಾತಾಡೋದು ಬೇಡಾ ಅಂತ […]

Continue Reading

ದೇಶದ ಪ್ರಥಮ ಹೈಡ್ರೋಜನ್ ಚಾಲಿತ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ..!

ಇಂಧನವಾಗಿ ಡೀಸೆಲ್ ಬಳಸುವ ಹಾಗೂ ಕಾರ್ಬನ್ ಹೊರಸೂಸುವ ಸಾಮಾನ್ಯ ರೈಲುಗಳಿಗೆ ಹೋಲಿಸಿದರೆ, ಈ ಹೈಡ್ರೋಜನ್ ಚಾಲಿತ ರೈಲು ಭಿನ್ನವಾಗಿದ್ದು, ಕೇವಲ ನೀರಾವಿಯನ್ನು ಮಾತ್ರ ಹೊರಹಾಕುತ್ತದೆ. ಹೀಗಾಗಿ ಇದು ಸಂಪೂರ್ಣವಾಗಿ ಶೂನ್ಯ-ಉದ್ವಾರದ (Zero-emission) ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯಾಗಿದೆ. ರೈಲಿನ ಸಂಚಾರಕ್ಕೆ ಅಗತ್ಯವಿರುವ ಗ್ರೀನ್ ಹೈಡ್ರೋಜನ್ ಅನ್ನು ಜಿಂದ್‌ನಲ್ಲಿಯೇ ಸ್ಥಾಪಿಸಲಾದ ಸುಸಜ್ಜಿತ ಘಟಕದಿಂದ ಪೂರೈಸಲಾಗುತ್ತದೆ. ಸುರಕ್ಷಿತ ಸಂಚಾರಕ್ಕಾಗಿ ಈ ಯೋಜನೆಯಲ್ಲಿ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ. ಜರ್ಮನಿ, ಯುನೈಟೆಡ್ ಕಿಂಗ್‌ಡಮ್, ಫ್ರಾನ್ಸ್, ಇಟಲಿ ಮತ್ತು ಅಮೆರಿಕ ಸೇರಿದಂತೆ ಕೆಲವೇ […]

Continue Reading