ಶಿವಮೊಗ್ಗ | ಹಳಗನ್ನಡ : ಅಭಿವ್ಯಕ್ತಿಯ ಕೌಶಲಗಳ ಶೋಧನೆ ಅಗತ್ಯ

ಹಳಗನ್ನಡ ಕಾವ್ಯಗಳನ್ನು ಕೇವಲ ವಿಚಾರದ ನೆಲೆಯಲ್ಲಿ ನೋಡದೆ ತರಗತಿಯಲ್ಲಿ ಆಕರ್ಷಕವಾಗಿ ಮಂಡಿಸುವ ಕೌಶಲಗಳ ಬಗೆಗೆ ಚಿಂತಿಸಬೇಕಿದೆ. ಕನ್ನಡ ಭಾಷೆಯು ಅನ್ಯ ಭಾಷೆಗಳೊಟ್ಟಿಗೆ ಯಾವ ರೀತಿಯಾದ ಸಂಬಂಧವನ್ನು ಹೊಂದಿದೆ ಎಂಬುದನ್ನು ಹಾಗೂ ಕನ್ನಡ ಸಂಸ್ಕೃತಿಯ ಅಂತಸತ್ವವನ್ನು ಸರಿಯಾದ ಕ್ರಮದಲ್ಲಿ ಅರಿಯುವ ವಿಧಾನಗಳನ್ನು ಇಂದು ರೂಢಿಸಿಕೊಳ್ಳಬೇಕಿದೆ. ಹಳಗನ್ನಡ ಓದು ಅನ್ನುವುದು ತರಗತಿಯಲ್ಲಿ ಕಾವ್ಯವನ್ನು ಆಕರ್ಷಕವಾಗಿ ದಾಟಿಸುವ ಕೌಶಲಗಳ ಶೋಧನೆಗೆ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಸಲಹೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರಾಜ್ಯಾದ್ಯಂತ ಪದವಿ ಕಾಲೇಜುಗಳ […]

Continue Reading

ಶಿವಮೊಗ್ಗ | ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ನೀಡಿ : ಅಧಿಕಾರಿಗಳಿಗೆ ಸಂಸದ ಬಿ.ವೈ ರಾಘವೇಂದ್ರ ಕಟ್ಟುನಿಟ್ಟಿನ ಆದೇಶ

ಕೇಂದ್ರ ಭೂಸಾರಿಗೆ ಮಂತ್ರಾಲಯದ ಪ್ರಾದೇಶಿಕ ಅಧಿಕಾರಿಗಳಾದ ಬಿ ಟಿ ಶ್ರೀಧರ್ ರವರು ಮಾತನಾಡಿ, ಅರಣ್ಯ ಬಿಡುಗಡೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ಆಗುತ್ತಿರುವ ವಿಳಂಬ ಮತ್ತು ಅದರಿಂದ ಆಗುತ್ತಿರುವ ಪರಿಣಾಮಗಳ ಬಗ್ಗೆ ವಿವರವಾಗಿ ಸಭೆಗೆ ವಿವರಿಸಿ, ಈ ತಿಂಗಳ ಅಂತ್ಯದೊಳಗೆ ಎಲ್ಲಾ ಅರಣ್ಯ ಬಿಡುಗಡೆ ಸಂಬಂಧ ಎಲ್ಲಾ ಪ್ರಕ್ರಿಯೆಗಳನ್ನು ಹಾಗೂ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕಾಮಗಾರಿಯನ್ನು ಅನುಷ್ಟಾನಗೊಳಿಸಲು ಸಹಕಾರ ನೀಡುವಂತೆ ಸಭೆಯಲ್ಲಿ ಹಾಜರಿದ್ದ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕೋರಿದರು. ಸಭೆಯಲ್ಲಿ ಹಾಜರಿದ್ದ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು […]

Continue Reading

ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗಾಗಿ ಪ್ರಧಾನಿ ಮುಂದೆ ಎಚ್.ಡಿ. ದೇವೇಗೌಡರು ಪ್ರತಿಭಟನೆ ನಡೆಸಲಿ : ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಸಲಹೆ

ಹಾಸನ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಲ್ಲಿನ ರೈತರ ಸಮಸ್ಯೆಗಳ ಬಗ್ಗೆ ದೇವೇಗೌಡರು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಪುತ್ರ ವ್ಯಾಮೋಹ ಬಿಟ್ಟು ರಾಜ್ಯದ ಜನರ ಸಮಸ್ಯೆಗಳ ಕಡೆ ಗಮನಹರಿಸಬೇಕು, ಕುಮಾರಸ್ವಾಮಿ, ಮತ್ತು ನಿಖಿಲ್ ಅವರನ್ನು ಮೆಚ್ಚಿಸಲು ಧರಣಿ ಕೂರಬೇಡಿ ಎಂದು ಸಲಹೆ ನೀಡಿದರು.

Continue Reading

ಶಿವಮೊಗ್ಗ | ಕೇಂದ್ರ ಕಾರಾಗೃಹಕ್ಕೆ ಕರೆತರುತ್ತಿದ್ದ ಆರೋಪಿ ಸಿಬ್ಬಂದಿ ದಬ್ಬಿ ಪರಾರಿ

ನ್ಯಾಯಾಲಯದ ಆದೇಶದಂತೆ ಅರಣ್ಯ ಉಪವಲಯ ಅಧಿಕಾರಿಗಳಾದ ಸುನೀಲ್ ಡಿ. ಕುಂಬಾರ್, ಇಬ್ರಾಹಿಂ, ಅರಣ್ಯ ವೀಕ್ಷಕ ಅಯಾನ್ ಬೆಡೆಭಾಯಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಅವರು ಇಲಾಖಾ ವಾಹನದಲ್ಲಿ ಆರೋಪಿಯನ್ನು ಶಿವಮೊಗ್ಗಕ್ಕೆ ಕರೆದೊಯ್ಯುತ್ತಿದ್ದರು. ಮಧ್ಯಾಹ್ನ 2 ಗಂಟೆ‌ ಹೊತ್ತಿಗೆ ವಾಹನವು ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ತಲುಪಿದಾಗ, ತನಗೆ ಹಸಿವಾಗುತ್ತಿದೆ. ಊಟ ಕೊಡಿಸುವಂತೆ ಆರೋಪಿ ವೆಂಕಟೇಶ್ ಸಿಬ್ಬಂದಿಗೆ ತಿಳಿಸಿದ್ದ. ಸಿಬ್ಬಂದಿಯನ್ನು ದಬ್ಬಿ ಪರಾರಿ: ಘಟನೆಯ ತಕ್ಷಣ ಸಿಬ್ಬಂದಿ ಬಟ್ಟೆಮಲ್ಲಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಶೋಧ ನಡೆಸಿದರೂ […]

Continue Reading

ವಿಜಯನಗರ | ಪ್ರೊಬೇಷನರಿ ಪಿಎಸ್‌ಐ ದೊರೆನಾಯ್ಕ್ ಬಂಧನ

ಘಟನೆಗೆ ಸಂಬಂಧಿಸಿದಂತೆ ಹಗರಿಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪ್ರೊಬೇಷನರಿ ಪಿಎಸ್‌ಐ ದೊರೆನಾಯ್ಕ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Continue Reading

ಐಎಸ್​ಒ ಪ್ರಮಾಣ ಪತ್ರ ಪಡೆದ ದ.ಭಾರತದ ಶಿವಮೊಗ್ಗದ ಮೊದಲ‌ ರಾಘವೇಂದ್ರ ಸ್ವಾಮಿ ಮಠ

ISO 9001:2015– ಗುಣಮಟ್ಟ ನಿರ್ವಹಣಾ ವ್ಯವಸ್ಥೆ. ISO 14001:2015– ಪರಿಸರ ನಿರ್ವಹಣಾ ವ್ಯವಸ್ಥೆ. ISO 45001: 2018– ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತಾ ನಿರ್ವಹಣಾ ವ್ಯವಸ್ಥೆ.ಹೀಗೆ ಮೂರು ಹಂತದ ಪ್ರಶಸ್ತಿಯನ್ನು ಪಡೆದ ಮೊದಲ ಮಠವಾಗಿದೆ. ಇವು ಕೇವಲ ಪ್ರಮಾಣ ಪತ್ರಗಳಲ್ಲ. ಇದು ಮಠವನ್ನು‌ ಅಂತಾರಾಷ್ಟ್ರೀಯ ಮಟ್ಟಕ್ಕೆ ಕರೆದುಕೊಂಡು‌ ಹೋಗಿವೆ. ಮಠದ ಆಡಳಿತದಲ್ಲಿನ ಪಾರರ್ದಶಕತೆ, ಗುಣಮಟ್ಟ, ಪರಿಸರ ಕಾಳಜಿ ಹಾಗೂ ಸುರಕ್ಷತೆಯ ಬಗ್ಗೆ ಪರಿಶೀಲಿಸಿ, ಜಾಗತಿಕ‌ ಮಟ್ಟದಲ್ಲಿ ಧೃಢೀಕರಿಸುವ ಮಾನ್ಯತೆಗಳಾಗಿವೆ. ಅಲ್ಲದೆ ಐಎಸ್​ಒದವರು ಶ್ರೀ ರಾಘವೇಂದ್ರ ಸೇವಾ ಸಮಿತಿ […]

Continue Reading

ಶಿವಮೊಗ್ಗ | ವಸತಿ ಶಾಲೆಗಳ ಮಹಿಳಾ ಕೇರ್‌ಟೇಕರ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜು.28 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-200266 ಹಾಗೂ ಶಿವಮೊಗ್ಗ ಮತ್ತು ಸಾಗರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದುಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ನಗರದಲ್ಲಿ ಎಲ್ಲೆಂದರಲ್ಲಿ, ಕೈ ತೋರಿಸಿದ ಕಡೆಯಲ್ಲ ಸಿಟಿ ಬಸ್ ನಿಲ್ಲಿಸುವಂತಿಲ್ಲ..! ಆಟೋಗಳಿಗೂ ಸೂಚನೆ…

ರ್ಯಾಪಿಡೋ ಅಥವಾ ಅಂತಹ ಯಾವುದೇ ಸಂಸ್ಥೆಯು ಸಾರಿಗೆ ಸೇವೆ ಆರಂಭಿಸಿದಲ್ಲಿ ಸರ್ಕಾರದ ಮಾರ್ಗಸೂಚಿಯನುಸಾರ ಅನುಮತಿ ನೀಡಲಾಗುವುದು. ಮಾನ್ಯತೆ ಪಡೆಯದೇ, ದಾಖಲೆಗಳಿಲ್ಲದೆ ಅನಧಿಕೃತವಾಗಿ ವಾಹನ ಚಲಾಯಿಸುತ್ತಿದ್ದಲ್ಲಿ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದರು. ಆಟೋ ಚಾಲಕರು ಯಾವುದೇ ಅವಘಡಗಳು ನಡೆಯದಂತೆ ವಿಶೇಷ ಕಾಳಜಿ ವಹಿಸಿ. ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಬನ್ನಿ. ಶಾಲಾ ಮಕ್ಕಳ ಪ್ರಯಾಣದ ಸಂದರ್ಭದಲ್ಲಿ ಸಂಚಾರಿ ನಿಯಮಗಳನ್ನು ಅನುಸರಿಸಿ. ನಗರದಲ್ಲಿ 5665 ನೋಂದಾಯಿತ ಆಟೋಗಳಿವೆ. ಆಟೋದಲ್ಲಿ ಚಾಲಕ-ಮಾಲಕರ, ಪೊಲೀಸ್‌ ಇಲಾಖೆಯ ನೋಂದಣಿ ಹೊಂದಿರುವ ಮಾಹಿತಿ ಫಲಕವನ್ನು […]

Continue Reading