ಶಿವಮೊಗ್ಗ | ಇನ್ನುಮುಂದೆ ನಗರದ ಸಿಟಿ ಬಸ್ ಗಳಲ್ಲಿ ಸಿಸಿಟಿವಿ ಕಡ್ಡಾಯ, ಪ್ರಯಾಣಿಕರ ಅನುಕೂಲಕ್ಕೆ ಪೊಲೀಸ್ ಸಹಾಯವಾಣಿ ನಂಬರ್

ಎಲ್ಲಾ ಸಿಟಿ ಬಸ್‌ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ರಸ್ತೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು.ಪ್ರಯಾಣಿಕರು ಕೈತೋರಿಸಿದ ಸ್ಥಳಗಳಲ್ಲಿ ಬಸ್ ನಿಲ್ಲಿಸದೆ, ನಿಗದಿಪಡಿಸಿರುವ ಬಸ್ ನಿಲ್ದಾಣಗಳಲ್ಲಿ ಮಾತ್ರ ಪ್ರಯಾಣಿಕರನ್ನು ಹತ್ತಿಸುವ ಮತ್ತು ಇಳಿಸುವಂತೆ ಸೂಚಿಸಲಾಯಿತು. ಅಲ್ಲದೆ, ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬಸ್ ಚಾಲಕರು ಅಥವಾ ನಿರ್ವಾಹಕರು ಅನುಚಿತವಾಗಿ ವರ್ತಿಸಿದರೆ, ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಸಿದರೆ, ಜೋರಾಗಿ ಅಸಭ್ಯ ಹಾಡುಗಳನ್ನು ಪ್ರಸಾರ ಮಾಡಿದರೆ ಅಥವಾ ಇತರೆ ಯಾವುದೇ […]

Continue Reading

“ನಮ್ಮಭಿಮಾನದ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ” ; ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದ ಸಿಎಂ

ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು, ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಗಳಾದ NPS ರದ್ದುಪಡಿಸಿ OPS ಜಾರಿಗೆ ತರುವ ಬಗ್ಗೆ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ ಯಾವುದೇ ಆತಂಕ ಬೇಡವೆಂದು ಸ್ಪಷ್ಟ ಭರವಸೆಯನ್ನು ನೀಡಿದರು. ಮಾನ್ಯ ಉಪಮುಖ್ಯಮಂತ್ರಿಗಳು ಸಹ ನಿಮ್ಮ ಜೊತೆ ನಾವಿದ್ದೇವೆ ನಮ್ಮ ಪ್ರಣಾಳಿಕೆಯಲ್ಲಿ ಓಪಿಎಸ್ ಜಾರಿ ಮಾಡುತ್ತೇವೆ ಎಂದು ಹೇಳಿದ್ದೇವೆ ಆ ಕಾರ್ಯವನ್ನು ನಾವು ಮಾಡುತ್ತೇವೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ […]

Continue Reading

ವರ್ಷದ ಬಳಿಕ ಬೆಳಕಿಗೆ ಬಂದ ಸಂಗೀತಾ ಸಾವಿನ ಪ್ರಕರಣ ಅತ್ಯಂತ ದುಃಖಕರ ಹಾಗೂ ಖಂಡನೀಯ : ಎಸ್‌ಐಟಿ (SIT) ತನಿಖೆಗೆ ಸಂಸದ ಬಿ. ವೈ. ರಾಘವೇಂದ್ರ ಆಗ್ರಹ!

ಪ್ರಕರಣದ ಆರೋಪಿಗಳು ಈಗಾಗಲೇ ಬಂಧನಕ್ಕೊಳಗಾಗಿದ್ದು, ಯಾವುದೇ ಕಾರಣಕ್ಕೂ ರಾಜಕೀಯ ಪ್ರಭಾವಕ್ಕೆ ಮಣಿಯದೆ ತಪ್ಪಿತಸ್ಥರಿಗೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣಾತಿಕಠಿಣ ಶಿಕ್ಷೆಯಾಗಬೇಕು. ಈ ಶೋಷಿತ ಕುಟುಂಬಕ್ಕೆ ಶೀಘ್ರವಾಗಿ ಸೂಕ್ತ ನ್ಯಾಯ ಮತ್ತು ಭದ್ರತೆ ದೊರೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಕೆ.ಎಸ್. ಗುರುಮೂರ್ತಿ ಅವರು, ತಾಲೂಕಿನ ಬಿಜೆಪಿ ಅಧ್ಯಕ್ಷರಾದ ಹನುಮಂತಪ್ಪ ಸಂಕ್ಲಾಪುರ ಹಾಗೂ ಬಣಜಾರ್ ಸಮಾಜದ ಮುಖಂಡರಾದ ರಾಮ ನಾಯ್ಕ್, ಬಂಗಾರಿ ನಾಯ್ಕ್, ರಮೇಶ್ ನಾಯ್ಕ್, ಸುರೇಶ್ ನಾಯ್ಕ್, ಶ್ರೀಮತಿ ವಿಜಯಲಕ್ಷ್ಮಿ ಸೇರಿದಂತೆ ಬಣಜಾರ್ […]

Continue Reading

ವಾದಿರಾಜರ ಅವತಾರ ಭೂಮಿಯಲ್ಲಿ ಭತ್ತನಾಟಿ ಮಾಡಿದ ಜಗದ್ಗುರು ಸೋದೆ ಶ್ರೀಪಾದರು

ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಭಾರತದಲ್ಲೇ ಮೊದಲೆನಿಸಿದ ನಿತ್ಯ ಒಂದೊಂದು ತಳಿ ಶುದ್ಧ ನೈವೇದ್ಯ ಅನ್ನಬ್ರಹ್ಮನಿಗೆ ಸಮರ್ಪಿಸುವ ಯೋಜನೆಯ ರೂವಾರಿ ಹಾದಿಗಲ್ಲು ಅಭಯಲಕ್ಷ್ಮೀನೃಸಿಂಹ ದೇಗುಲದ ಧರ್ಮದರ್ಶಿ, ಸಂಸ್ಕೃತಿ ಚಿಂತಕ ಹಾದಿಗಲ್ಲು ಲಕ್ಷ್ಮೀನಾರಾಯಣ ಅವರು ರೈತರ ಕೈ ಬಲಪಡಿಸಲು ಬೆಳೆವ ಭೂಮಿ ಇಲ್ಲದವರೂ ಸಹ ಆರ್ಥಿಕ ನೆರವಿನ ಪ್ರಾಯೋಜನೆಯ ಮೂಲಕ ಪರೋಕ್ಷ ರೈತರಾಗಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಬಹುದೆಂದರು. ಕೃಷಿ ಋಷಿ ಪುರುಷೋತ್ತಮರಾಯರು ಸಾವಯವ ಕೃಷಿ ಪಸರಿಸಿದ ಬಗೆ ಮತ್ತು ಪಾರಂಪರಿಕ ಬೀಜತಳಿ ಸಂರಕ್ಷಣೆಗಾಗಿ ಕೃಷಿ ಪ್ರಯೋಗ ಪರಿವಾರ ಹಮ್ಮಿಕೊಂಡ […]

Continue Reading

ಮಾಧುರ್ಯಭರಿತ ಧ್ವನಿಯಿಂದಲೇ ಅದೆಷ್ಟೋ ಜನರ ಮನಗೆದ್ದಿದ್ದ “ಜಾನಕಿ ಅಮ್ಮ” ಇನ್ನಿಲ್ಲ

ಎಸ್‌.ಜಾನಕಿ ಅವರಿಗೆ ಈವರೆಗೂ ನಾಲ್ಕು ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿವಿಧ ರಾಜ್ಯಗಳಿಂದ 33 ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬಹುಮುಖ ಪ್ರತಿಭೆಯ ಗಾಯಕಿಯಾಗಿ ವ್ಯಾಪಕವಾಗಿ ಅವರು ಮೆಚ್ಚುಗೆ ಪಡೆದಿದ್ದರು. ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಸಂಗೀತ ನಿರ್ದೇಶಕ ಇಳಯರಾಜ ಅವರೊಂದಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದರು. 1960, 1970 ಮತ್ತು 1980 ರ ದಶಕಗಳಲ್ಲಿ ಪಿ.ಬಿ. ಶ್ರೀನಿವಾಸ್ , ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಡಾ. ರಾಜ್‌ಕುಮಾರ್ ಜೊತೆಗೆ ಆಪ್ತ ಒಡನಾಟ ಹೊಂದಿದ್ದರು. ಹೆಚ್ಚೂಕಡಿಮೆ ಡಾ.ರಾಜ್‌ಕುಮಾರ್‌ ಅವರ ಎಲ್ಲಾ ಚಿತ್ರಗಳಲ್ಲೂ ಎಸ್‌.ಜಾನಕಿ ಅವರ […]

Continue Reading

ಶಿವಮೊಗ್ಗ | ಪಿಎಸ್ಐ ನಾರಾಯಣ ಮಧುಗಿರಿ ತಂಡದಿಂದ ಭರ್ಜರಿ ಕಾರ್ಯಾಚರಣೆ ನಕಲಿ ಬಂಗಾರ ಅಡವಿಟ್ಟವರು ಅರೆಸ್ಟ್

ವಿವರ ಕೆಳಕಂಡಂತಿರುತ್ತದೆ : ಪಂಜಾಬ್ ನ್ಯಾಶನಲ್ ಬ್ಯಾಂಕ್ ಸವಾರ್ ಲೈನ್ ರಸ್ತೆ ಶಿವಮೊಗ್ಗ ದಲ್ಲಿ 163.300 ಗ್ರಾಂ ಅಡ ಇಟ್ಟು 7,62,557/- ರೂ ಸಾಲ ವರ್ತಕರ ಸೌಹಾರ್ಧ ಸಂಘ ನಿಯಮಿತ ತೀರ್ಥಹಳ್ಳಿ ದಲ್ಲಿ 75.844 ಗ್ರಾಂ ಅಡ ಇಟ್ಟು 9,33,000/- ರೂ ಸಾಲಪಡೆದಿರುತ್ತಾನೆ. ಸಿರಿ ಸೌಹಾರ್ಧ ಕ್ರೆಡಿಟ್ ಆಪರೇಟಿವ್ ಸಂಘ, ಆಲ್ಕೋಳ ಶಿವಮೊಗ್ಗ ದಲ್ಲಿ 75.01 ಗ್ರಾಂ ಅಡ ಇಟ್ಟು 7,43,000/- ರೂ ಸಾಲಡಿ.ಸಿ.ಸಿ ಬ್ಯಾಂಕ್ ಗೋಪಾಳ ಶಿವಮೊಗ್ಗ ದಲ್ಲಿ 48.28 ಗ್ರಾಂ ಅಡ ಇಟ್ಟು 1,79,000/- […]

Continue Reading

ಶಿವಮೊಗ್ಗ | ಬೈಕ್‌ನ ಪೆಟ್ರೋಲ್ ಖಾಲಿಯಾಗಿದೆಯಂತ ಹುಡುಗ-ಹುಡುಗಿ ಮಧ್ಯೆ ರಸ್ತೆಯಲ್ಲೇ ಗಲಾಟೆ

ರಸ್ತೆಯಲ್ಲೇ ಇಬ್ಬರೂ ಜೋರಾಗಿ ಗಲಾಟೆ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ ಸಾರ್ವಜನಿಕರೊಬ್ಬರು, ತಕ್ಷಣವೇ 112 ತುರ್ತು ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ.ವಿಷಯ ತಿಳಿಯುತ್ತಿದ್ದಂತೆಯೇ ಇಆರ್‌ವಿ (ERV) ಪೊಲೀಸ್ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲಿ ಜಗಳ ನಿಲ್ಲಿಸಿ ವಿಚಾರಣೆ ನಡೆಸಿದಾಗ ಪೆಟ್ರೋಲ್ ಖಾಲಿಯಾದ ಕಾರಣಕ್ಕೆ ಗಲಾಟೆ ನಡೆದಿರುವುದು ಬೆಳಕಿಗೆ ಬಂದಿದೆ. ತದನಂತರ ಇಬ್ಬರಿಗೂ ಬುದ್ಧಿವಾದ ಹೇಳಿದ ಪೊಲೀಸರು, ಅವರವರ ಮನೆಗೆ ಕಳುಹಿಸಿದ್ದಾರೆ.

Continue Reading

ಶಿವಮೊಗ್ಗ | ಬಿಸಿಯೂಟ ನೌಕರರ ಧರಣಿ ಸತ್ಯಾಗ್ರಹ

ಇದಲ್ಲದೆ, ಆರೋಗ್ಯ ವಿಮೆ ಜಾರಿಗೊಳಿಸುವುದು, ಮಾಸಿಕ ₹10,000 ಪಿಂಚಣಿ ನೀಡುವುದು, ನಿವೃತ್ತಿ ಹೊಂದಿದ ನೌಕರರಿಗೆ ಬಾಕಿ ಇರುವ ಸೌಲಭ್ಯಗಳನ್ನು ಬಿಡುಗಡೆ ಮಾಡುವುದು, ಸುಸಜ್ಜಿತ ಅಡುಗೆ ಕೇಂದ್ರಗಳನ್ನು ನಿರ್ಮಿಸಿ ಸ್ವಚ್ಛ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವುದು, ಬೇಸಿಗೆ, ದಸರಾ ಹಾಗೂ ಚುನಾವಣಾ ಅವಧಿಯಲ್ಲಿಯೂ ವೇತನ ನೀಡುವುದು, ಕರ್ತವ್ಯದ ವೇಳೆ ಅಪಘಾತ ಅಥವಾ ಮರಣ ಸಂಭವಿಸಿದರೆ ₹25 ಲಕ್ಷ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿದರು. ಕಳೆದ 25 ವರ್ಷಗಳಿಂದ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಿ […]

Continue Reading

ಶಿವಮೊಗ್ಗ | ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 13 ರಂದು ನೇರ ಸಂದರ್ಶನ

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಪ್ರವೇಶ ಉಚಿತವಾಗಿರುತ್ತದೆ. ನೇರ ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್,ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆಗಳು: 9108235132,/ 9380663606 ಮೂಲಕ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಗಳು ತಿಳಿಸಿದ್ದಾರೆ.

Continue Reading