ಶಿವಮೊಗ್ಗ | ಟಾಟಾ ಪವರ್‌ಗೆ ಪರವಾನಗಿ ವಿರುದ್ಧ ರೈತರಿಂದ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಮನವಿ

ಪ್ರತಿಭಟನೆಯಲ್ಲಿ ಭಾಗವಹಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರೈತರು, ವಿದ್ಯುತ್ ಕ್ಷೇತ್ರವು ಜನಸೇವೆಗೆ ಸಂಬಂಧಿಸಿದ ಪ್ರಮುಖ ವಲಯವಾಗಿದ್ದು, ಅದು ಸಾರ್ವಜನಿಕ ಹಿತದೃಷ್ಟಿಯಿಂದಲೇ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳು ಜನರ ಅಭಿಪ್ರಾಯವನ್ನು ಗೌರವಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Continue Reading

ಶಿಕಾರಿಪುರ | ಗಾಂಜಾ ಮಾರಾಟ ; ಇಬ್ಬರು ಪೊಲೀಸ್ ವಶಕ್ಕೆ

ಬಂಧಿತ ಆರೋಪಿಗಳಿಂದ ಅಂದಾಜು 15,000 ರೂಪಾಯಿ ಮೌಲ್ಯದ ಒಟ್ಟು 658 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Continue Reading

ಶಿವಮೊಗ್ಗ | ಪದವಿಪೂರ್ವ ಮತ್ತು ಪದವಿ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರೊಂದಿಗೆ ಟ್ರಾಫಿಕ್ ಪೊಲೀಸ್ ಸಭೆ

ಶಿವಮೊಗ್ಗ ಇ-ಪೇಪರ್ನಗರದಲ್ಲಿ ಅಪ್ರಾಪ್ತರು ವಾಹನ ಚಾಲನೆ ಮಾಡುತ್ತಿರುವುದು ಕಂಡುಬಂದಲ್ಲಿ, ಸಾರ್ವಜನಿಕರು ಆ ಕುರಿತಾದ ಫೋಟೋ, ವಿಡಿಯೋ ಹಾಗೂ ವಾಹನಕ್ಕೆ ಸಂಬಂಧಿಸಿದ ನಿಖರ ಮಾಹಿತಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕೃತ ವಾಟ್ಸಾಪ್ ಸಂಖ್ಯೆಗೆ ಕಳುಹಿಸುವ ಮೂಲಕ ಮಾಹಿತಿ ನೀಡಬೇಕು. ಇಂತಹ ಪ್ರಕರಣಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Continue Reading

ಶಿವಮೊಗ್ಗ | ತಾಯಿ ಮಕ್ಕಳು ಕಾಣೆಯಾಗಿದ್ದಾರೆ ; ಮಾಹಿತಿ ನೀಡಲು ಮನವಿ

ಅಶ್ವಿನ್‌ನ ಚಹರೆ: 3 ಅಡಿ ಎತ್ತರ, ಸಾಧಾರಣ ಮೈ ಕಟ್ಟು, ಎಣ್ಣೆಗಪ್ಪು ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಕಪ್ಪುಬಣ್ಣದ ಶರ್ಟ್ ಮತ್ತು ನೀಲಿ ಪ್ಯಾಂಟ್ ಧರಿಸಿರುತ್ತಾನೆ. ಈ ತಾಯಿ ಮಕ್ಕಳ ಬಗ್ಗೆ ಸುಳಿವು ಇದ್ದಲ್ಲಿ ದೂರವಾಣಿ ಸಂಖ್ಯೆ: ಜಿಲ್ಲಾ ಪೊಲೀಸ್ ಕಚೇರಿ, ಶಿವಮೊಗ್ಗ ನಂ:-08182- 261413,ಡಿ.ಎಸ್.ಪಿ ಶಿಕಾರಿಪುರ ಉಪ ವಿಭಾಗ ಶಿಕಾರಿಪುರ:-08187-222443/ 9480803323, ಪಿ..ಐ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ. 08187-222443/ 9480803366 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ […]

Continue Reading

ಬೆಂಗಳೂರು–ತಾಳಗುಪ್ಪ ಎಕ್ಸ್‌ಪ್ರೆಸ್ ರೈಲಿನಲ್ಲಿ ಮೊಬೈಲ್‌ ಬಿಟ್ಟು ಇಳಿದ ಪ್ರಯಾಣಿಕನಿಗೆ ಮರಳಿಸಿದ ಸಿಬ್ಬಂದಿ

ಅಧಿಕೃತ ದಾಖಲೆಗಳ ಪರಿಶೀಲನೆಯ ನಂತರ ಮೊಬೈಲ್ ಫೋನ್ ಅನ್ನು ಅದರ ಪ್ರೀತಮ್‌ ಅವರಿಗೆ ರೈಲ್ವೆ ನಿಲ್ದಾಣದಲ್ಲಿ ಸುರಕ್ಷಿತವಾಗಿ ಹಸ್ತಾಂತರಿಸಲಾಯಿತು ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ಹೊಸನಗರ | ಅನಾಥೆಗೆ ಸ್ಪಂದಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಮಾರುತಿಪುರ ಹಾಗೂ ಮೇಲಿನಸಂಪಳ್ಳಿ ಗ್ರಾಮಸ್ಥರು, ದಾನಿಗಳು ಮತ್ತು ಸಮಿತಿಯ ಸದಸ್ಯರು ಕೈಜೋಡಿಸಿ ಶಶಿಕಲಾ ಕುಟುಂಬಕ್ಕೆ ಹೊಸ ಮನೆಯನ್ನು ನಿರ್ಮಿಸಿಕೊಡುವ ಕಾರ್ಯ ಆರಂಭಿಸಿದರು.ಈ ನಡುವೆ ಶಶಿಕಲಾ ಅವರಿಗೆ ಕಿವಿಯಂತ್ರ, ರೇಷನ್ ಕಾರ್ಡ್, ಅಂಗವಿಕಲ ಮಗಳಿಗೆ ಆಧಾರ್ ಕಾರ್ಡ್, ತಾತ್ಕಾಲಿಕ ನಿವಾಸಕ್ಕೆ ನೀರು ಮತ್ತು ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿಯೂ ಕ್ರಮ ಕೈಗೊಳ್ಳಲಾಯಿತು. ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲಿನಸಂಪಳ್ಳಿ ಗ್ರಾಮದಲ್ಲಿ ಸುಮಾರು ₹6.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಮನೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸರ್ಕಾರದಿಂದ […]

Continue Reading

ಶಿವಮೊಗ್ಗ | ಅಂಧ ಮಕ್ಕಳಿಗೆ ನವೀನ ಆ್ಯನಿ ಸ್ವ-ಕಲಿಕಾ ಬ್ರೈಲ್ ಕಿಟ್ ಗಳನ್ನು ಒದಗಿಸಿದ ಸಂಸದ ಬಿ. ವೈ. ರಾಘವೇಂದ್ರ

ತಂತ್ರಜ್ಞಾನವು ಜೀವನವನ್ನು ಪರಿವರ್ತಿಸುವ ಶಕ್ತಿಯನ್ನು ಹೊಂದಿದೆ ಮತ್ತು ದೈಹಿಕ ಸವಾಲುಗಳನ್ನು ಮೆಟ್ಟಿನಿಂತು ಪ್ರತಿ ಮಗುವೂ ಗುಣಮಟ್ಟದ ಶಿಕ್ಷಣ ಮತ್ತು ಅವರ ಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಸಾಧನಗಳನ್ನು ಹೊಂದುವುದು ಅಗತ್ಯವಾಗಿದೆ. ದೃಷ್ಟಿಹೀನ ಮಕ್ಕಳು ಸ್ವತಂತ್ರವಾಗಿ ಬ್ರೈಲ್ ಮೂಲಕ ಕಲಿಯಲು, ಅವರ ಶೈಕ್ಷಣಿಕ ಬೆಳವಣಿಗೆಯನ್ನು ಬಲಪಡಿಸಲು ಮತ್ತು ಅವರ ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಯನ್ನು ಹೆಚ್ಚಿಸಲು ಆ್ಯನಿ ಸ್ವಕಲಿಕಾ ಸಾಧನಗಳು ನೆರವಾಗಲಿವೆ ಎಂದು ಸಂಸದ ರಾಘವೇಂದ್ರ ಹೇಳಿದರು. ನಾವೀನ್ಯತೆ ಮತ್ತು ಸಮಗ್ರ ಅಭಿವೃದ್ಧಿಯ ಮೂಲಕ ದಿವ್ಯಾಂಗರಿಗೆ ಘನತೆ, ಸಬಲೀಕರಣ ಮತ್ತು […]

Continue Reading

ಶಿವಮೊಗ್ಗ | ಮಹಿಷಿ ಉತ್ತರಾಧಿಮಠದ ಕೋಟ್ಯಾಂತರ ರೂ. ಮೌಲ್ಯದ ಬಂಗಾರದ ಹಲಗಾರತಿ ಕಳ್ಳತನ ಪ್ರಕರಣದ ಆರೋಪಿ ಬಂಧನ

ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಂಜಿ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಗಳಾದ ಇಮ್ರಾನ್ ಬೇಗ್, ರಾಜಶೇಖರ್, ಸಬ್ ಇನ್ಸ್’ಪೆಕ್ಟರ್ ಸುನೀಲ್ ಕುಮಾರ್, ಸಿಬ್ಬಂದಿಗಳಾದ ಲಿಂಗೇಗೌಡ, ಸುರಕ್ಷಿತ್, ಕುಮಾರ್, ರವಿ, ಸುರೇಶ್ ನಾಯ್ಕ್, ಸಂತೋಷ್, ವಿನಯ್ ಕುಮಾರ್ ರವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.

Continue Reading

ಶಿವಮೊಗ್ಗ | ಆಟೋ ಚಾಲಕರು , ಮಾಲೀಕರ ಸಂಘದಿಂದ ಪ್ರತಿಭಟನೆ

ಪ್ರಾಮಾಣಿಕವಾಗಿ ದುಡಿಯುವ ಆಟೋ ಚಾಲಕರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಗ್ಯಾಸ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿರುವ ಕಾರಣ ಆಟೋ ಕನಿಷ್ಠ ಬಾಡಿಗೆಯನ್ನು ₹50ಕ್ಕೆ ನಿಗದಿಪಡಿಸಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ. ಗ್ಯಾಸ್ ಬಂಕ್‌ಗಳಲ್ಲಿ ಒಂದೇ ರೀತಿಯ ಬೆಲೆ ಇಲ್ಲದಿರುವುದರಿಂದ ಕೆಲವು ಬಂಕ್‌ಗಳಲ್ಲಿ ಅನಧಿಕೃತವಾಗಿ ಅಧಿಕ ಹಣ ಪಡೆಯಲಾಗುತ್ತಿದೆ. ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು ಎಂದು ಸಂಘಟನೆಯು ಒತ್ತಾಯಿಸಿದೆ. ಅಲ್ಲದೆ, ರೈಲ್ವೆ ನಿಲ್ದಾಣದ ಆಟೋ ನಿಲ್ದಾಣದ ಹತ್ತಿರ ಪರವಾನಗಿ ಇಲ್ಲದೆ ಸಂಚರಿಸುವ ಸಿಟಿ ಬಸ್‌ಗಳನ್ನು ತಡೆಹಿಡಿಯಬೇಕು ಎಂದು […]

Continue Reading