ದಾವಣಗೆರೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ ; ಜಮೀರ್ ವಿರುದ್ಧ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ

ಸಿಟ್ಟಿನಿಂದ ಬೆಂಬಲಿಗರ ಮುಂದೆ ಗುಡುಗಿದ ಸಿದ್ದರಾಮಯ್ಯ, “ಅವನು ನನ್ನ ಪರಮಾಪ್ತ ಅಂತ ನೀವೆಲ್ಲ ಹೇಳ್ತೀರಾ, ಆದರೆ ಅವನು ಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ” ಎಂದು ಗರಂ ಆಗಿ ಹೇಳಿದ್ದಾರೆ. ಅದಕ್ಕೆ ಬೆಂಬಲಿಗರು ಸಮಜಾಯಿಷಿ ನೀಡಲು ನೋಡಿದ್ದಾರೆ.ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಜಮೀರ್ ಅಹ್ಮದ್ ಖಾನ್ ಅವರು ವಸತಿ ಸಚಿವರಾಗಿ ಪ್ರಭಾವಿ ಖಾತೆಯನ್ನು ನಿಭಾಯಿಸಿದ್ದರು. ಸಿದ್ದರಾಮಯ್ಯನವರು ಹೋದಲ್ಲೆಲ್ಲಾ ಜಮೀರ್ ಇರುತ್ತಿದ್ದರು. ಈಗಿನ ರಾಜಕೀಯ ಪರಿಸ್ಥಿತಿಯಲ್ಲಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲು ಜಮೀರ್ ಹರಸಾಹಸ ಪಡುತ್ತಿದ್ದಾರೆ.

Continue Reading

ಸರಿಗಮಪ ಜೂನಿಯರ್-22 ಸ್ಪರ್ಧಿ ಸೊರಬದ ಕೀರ್ತಿ ಎಸ್, ಅವರಿಗೆ ಮಾಜಿ ಸಚಿವ ಮಧು ಬಂಗಾರಪ್ಪನವರಿಂದ ಅಭಿನಂದನೆ

ಈ ಸಂದರ್ಭದಲ್ಲಿ ಕುಮಾರಿ ಕೀರ್ತಿಯವರ ಯಶೋಗಾಧೆಯನ್ನು ಆಕೆಯ ಮಾತುಗಳಲ್ಲಿಯೇ ಕೇಳಿ. ಆಕೆಯನ್ನು ಗೌರವಿಸಿ, ಪ್ರೇರಣೆ-ಪ್ರೋತ್ಸಾಹ ನೀಡಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.ನಮ್ಮ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಧುನಿಕ ಸಂಗೀತ ಲೋಕದ ಪರಿಚಯವಾಗಲಿ ಎಂಬ ಉದ್ದೇಶದಿಂದ ನಮ್ಮ ಒಡೆತನದ “ಆಕಾಶ್ ಆಡಿಯೋ” ಸ್ಟುಡಿಯೋ ತೋರಿಸುವ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿನ ಲೈವ್ ರೆಕಾರ್ಡಿಂಗ್ ಹಾಗೂ ತಾಂತ್ರಿಕ ಪ್ರಕ್ರಿಯೆಗಳ ಪ್ರತ್ಯಕ್ಷ ಅನುಭವ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿತ್ತು. ಮಕ್ಕಳೆಲ್ಲರೂ ಸ್ಟುಡಿಯೋ ಒಳಗಿನ ಪ್ರಪಂಚವನ್ನು ನೋಡಿ ಅಪಾರ ಸಂತಸ ವ್ಯಕ್ತಪಡಿಸದ್ದಲ್ಲದೆ, ಹೊಸ ವಿಷಯಗಳನ್ನು ಕುತೂಹಲದಿಂದ ತಿಳಿದುಕೊಂಡರು. ಸೌಲಭ್ಯಗಳ […]

Continue Reading

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ರಾಜ್ಯ ಸರ್ಕಾರ ಆದೇಶ

15 ದಿನದೊಳಗೆ ಪಾವತಿ ರಾಜ್ಯದಲ್ಲಿ ವಾಸವಿದ್ದು, ಗಡಿರಾಜ್ಯಗಳಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಗಡಿರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸಲಾಗುವುದು. ಉಚಿತ ಬಸ್ ಪಾಸ್ ಯೋಜನೆ ಜಾರಿಯಾಗುವುದರಿಂದ ಶುಲ್ಕ ಪಡೆದು ವಿತರಿಸಲಾದ ಪಾಸುಗಳ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸಲು ಆದೇಶಿಸಲಾಗಿದೆ.

Continue Reading

ಹೊಸನಗರ | ಟ್ರಾಕ್ಟರ್- ಕಾರು ಮುಖಾಮುಖಿ ಡಿಕ್ಕಿ ; ಮೂವರಿಗೆ ಗಾಯ

ಅಪಘಾತದಲ್ಲಿ ಕಾರಿನಲ್ಲಿದ್ದ ನಾಗರತ್ನ, ಆನಂದ್ ಹಾಗೂ ರುಕ್ಕಿಣಿ ಅವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಅರುಣ್ ಕುಮಾರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ಸಂಬಂಧ ಟ್ರಾಕ್ಟರ್ ಚಾಲಕ ಆರೀಫ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಪುನಾರಂಭಿಸಿ ಎಂದು ಕೇಂದ್ರಕ್ಕೆ ರಾಜ್ಯ ಪತ್ರ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಒದಗಿಸುವ ಕಾಮಗಾರಿ ಭರದಿಂದ ಸಾಗಿದೆ. ಇದಲ್ಲದೆ, ಉಳಿದ ಎಲ್ಲಾ ಸೌಲಭ್ಯಗಳೂ ಇಲ್ಲಿ ಈಗಾಗಲೇ ಇವೆ. ಆದ್ದರಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಪಾಟೀಲ ಕೋರಿದ್ದಾರೆ.

Continue Reading

ಹಾವೇರಿ | ಶಾಲೆ ಫೀಸ್ ಕಟ್ಟಿ ವಿದ್ಯೆ ಕಲಿಸಿದ ಗುರುವಿಗೆ ಹೊಸ ಕಾರನ್ನು ಉಡುಗೊರೆಯಾಗಿ ನೀಡಿ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿ

ಅವರು ನನಗೆ ಕೇವಲ ಶಿಕ್ಷಕರಲ್ಲ. ನಾನು ಸ್ನಾತಕೋತ್ತರ ಪದವಿ ಪೂರ್ಣಗೊಳಿಸುವವರೆಗೂ ತಂದೆಯಂತೆ ನನ್ನ ಜೊತೆ ನಿಂತಿದ್ದರು. ನನ್ನ ಜೀವನವನ್ನು ಬದಲಿಸಿದ ವ್ಯಕ್ತಿಗೆ ಕೃತಜ್ಞತೆ ಸಲ್ಲಿಸಬೇಕೆಂಬ ಆಸೆ ಇತ್ತು. ಈ ಕಾರು ನನ್ನ ಜೀವಮಾನವಿಡೀ ಇರುವ ಗೌರವ ಮತ್ತು ಕೃತಜ್ಞತೆಯ ಒಂದು ಸಣ್ಣ ಸಂಕೇತ ಮಾತ್ರ ಎಂದು ನವೀನ್ ಹೇಳುತ್ತಾರೆ. ಹಾನಗಲ್ ಕುಮಾರೇಶ್ವರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಈ ಭಾವನಾತ್ಮಕ ಕ್ಷಣ ಅನಾವರಣಗೊಂಡಿತು. ಹೊಸ ಕಾರನ್ನು ವೇದಿಕೆಯ ಬಳಿ ತಂದು ಅದರ ಕೀಗಳನ್ನು […]

Continue Reading

ಶಿವಮೊಗ್ಗ | ಕಾರಾಗೃಹ ಸಜಾ ಬಂದಿಗಳಿಂದ ಸ್ವಚ್ಛತಾ ಜಾಗೃತಿ ಗೀತೆಗಳ ಧ್ವನಿಮುದ್ರಿಕೆ ಬಿಡುಗಡೆ

ಸಂಗೀತ ಮತ್ತು ಸಾಹಿತ್ಯವು ವ್ಯಕ್ತಿತ್ವ ಪರಿವರ್ತನೆಗೆ ಪರಿಣಾಮಕಾರಿ ಮಾಧ್ಯಮಗಳಾಗಿವೆ. ಬಂಧಿಗಳಲ್ಲಿರುವ ಪ್ರತಿಭೆಯನ್ನು ಸಮಾಜದ ಒಳಿತಿಗಾಗಿ ಬಳಸುವ ಉದ್ದೇಶದಿಂದ ಈ ಸ್ವಚ್ಛತಾ ಜಾಗೃತಿ ಗೀತೆಗಳನ್ನು ಸಿದ್ಧಪಡಿಸಲಾಗಿದೆ. ನಗರದ ಜನರು ಈ ಹಾಡುಗಳ ಸಂದೇಶವನ್ನು ಅಳವಡಿಸಿಕೊಂಡು ಸ್ವಚ್ಛ ಶಿವಮೊಗ್ಗ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು ಹೇಳಿದರು.ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದಲ್ಲಿ ಜಾರಿಗೊಂಡಿರುವ ಈ ಯೋಜನೆ, ಕೇವಲ ಸ್ವಚ್ಛತಾ ಅಭಿಯಾನವಷ್ಟೇ ಅಲ್ಲದೆ, ಬಂಧಿಗಳ ಪುನರ್ವಸತಿ ಮತ್ತು ಸಮಾಜದೊಂದಿಗೆ ಅವರ ಸಕಾರಾತ್ಮಕ ಸಂಪರ್ಕವನ್ನು ಬೆಳೆಸುವ ಪ್ರಯತ್ನವೂ ಆಗಿದೆ. ಇಂದಿನಿಂದ ಕಸ […]

Continue Reading

ಶಿವಮೊಗ್ಗ | ಉದ್ಯಮ ಸ್ನೇಹಿ ಸುಧಾರಣೆಗಳ ಮೂಲಕ ದೇಶದ ಕೈಗಾರಿಕಾ ಪರಿಸರವನ್ನು ಬಲಪಡಿಸಿದೆ : ಸಂಸದ ಬಿ. ವೈ. ರಾಘವೇಂದ್ರ

ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು Ease of Doing Business, Make in India, Startup India, PM Vishwakarma, Production Linked Incentive (PLI) ಸೇರಿದಂತೆ ಹಲವು ಉದ್ಯಮ ಸ್ನೇಹಿ ಸುಧಾರಣೆಗಳ ಮೂಲಕ ದೇಶದ ಕೈಗಾರಿಕಾ ಪರಿಸರವನ್ನು ಬಲಪಡಿಸಿದೆ ಎಂದರು. ಈ ಪರಿವರ್ತನೆಯ ಫಲವಾಗಿ MSME ವಲಯವು ದೇಶದ ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಶಿವಮೊಗ್ಗ ಮತ್ತು ಮಲೆನಾಡು ಭಾಗದ ಕೈಗಾರಿಕಾ ಬೆಳವಣಿಗೆಯನ್ನು ಮತ್ತಷ್ಟು […]

Continue Reading