ಶಿವಮೊಗ್ಗ | ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ

ಡ್ರಗ್ಸ್‌ಗಳು ವ್ಯಕ್ತಿಯಲ್ಲಿ ಕ್ರೌರ್ಯ ಮತ್ತು ಅಮಾನವೀಯ ಪ್ರವೃತ್ತಿಗಳನ್ನು ಹೆಚ್ಚಿಸುತ್ತವೆ. ನಶೆಯ ಅಮಲಿನಲ್ಲಿ ನಡೆಯುವ ಅಪರಾಧಗಳಿಗೆ ಕಾನೂನು ಯಾವುದೇ ಕನಿಕರ ತೋರುವುದಿಲ್ಲ; ಅಂತಹವರನ್ನು ಮೊದಲು ಅಪರಾಧಿಗಳಾಗಿ ಪರಿಗಣಿಸಿ, ನಂತರ ಅಗತ್ಯವಿದ್ದಲ್ಲಿ ರೋಗಿಗಳಾಗಿ ನೋಡಲಾಗುತ್ತದೆ ಎಂದು ಎಚ್ಚರಿಸಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಯುವಜನತೆ ಇಂದು ಸರಿಯಾದ ಮಾರ್ಗದರ್ಶನ ಮತ್ತು ವಿವೇಚನೆಯ ಕೊರತೆಯಿಂದ ದಾರಿತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿ, ಮೌಲ್ಯಗಳು ಮತ್ತು ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳ ಕಡೆಗೆ ಹೆಚ್ಚು ಗಮನ ಹರಿಸಬೇಕು. ಪ್ರತಿಯೊಬ್ಬ […]

Continue Reading

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ

ತಮಿಳುನಾಡು ಮುಖ್ಯಮಂತ್ರಿ ಸಂಚರಿಸುವ ಮಾರ್ಗ ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ ಮತ್ತು ಸೌಪರ್ಣಿಕಾ ನದಿ ಜಲಾನಯನ ಪ್ರದೇಶದ ಬಳಿಯ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶದ ಮೂಲಕ ಹಾದುಹೋಗುತ್ತದೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಈ ಮಾರ್ಗದಲ್ಲಿ ಅನುಮಾನಾಸ್ಪದ ಚಟುವಟಿಕೆ ಮತ್ತು ವನ್ಯಜೀವಿಗಳ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಕೋರಲಾಗಿದೆ. ವಿಮಾನ ನಿಲ್ದಾಣ, ದೇವಾಲಯದ ಆವರಣ ಮತ್ತು ಪ್ರಯಾಣ ಮಾರ್ಗದಲ್ಲಿ ಕಟ್ಟುನಿಟ್ಟಾದ ಪ್ರವೇಶ ನಿಯಂತ್ರಣ ಮತ್ತು ವಿಧ್ವಂಸಕ ಕೃತ್ಯಗಳ ವಿರುದ್ಧ ತಪಾಸಣೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

Continue Reading

ಶಿವಮೊಗ್ಗ | ‘ವಿಕಸಿತ ಭಾರತ’ದ ಸಂಕಲ್ಪವು ಇನ್ನಷ್ಟು ಬಲಿಷ್ಠವಾಗಿ ಸಾಕಾರಗೊಳ್ಳಲಿ : ಸಂಸದ ಬಿ. ವೈ. ರಾಘವೇಂದ್ರ

ಮಾನ್ಯ ಪ್ರಧಾನಿಯವರ ಜನಪರ ಹಾಗೂ ದೇಶಭಕ್ತಿಯ ನಾಯಕತ್ವವು ನಮಗೆಲ್ಲರಿಗೂ ಸದಾ ದೇಶಸೇವೆಯಲ್ಲಿ ತೊಡಗಿಸಿಕೊಳ್ಳಲು ನಿರಂತರ ಪ್ರೇರಣೆಯಾಗಿದೆ ಎಂದು ತಿಳಿಸಿದರು.

Continue Reading

ಸ್ಪಾಗಳ ಅನೈತಿಕ ಚಟುವಟಿಕೆಗೆ ಬ್ರೇಕ್ ; ಶೀಘ್ರದಲ್ಲಿ ಪ್ರತ್ಯೇಕ ಕಾನೂನು ಜಾರಿ

ಸ್ಪಾ ಕೇಂದ್ರಗಳಲ್ಲಿ ಲೈಂಗಿಕ ಚಟುವಟಿಕೆ ಸಂಪೂರ್ಣ ನಿಷೇಧವಾಗಿರಲಿದೆ. ಪುರುಷ ಮತ್ತು ಮಹಿಳೆಯರ ವಿಭಾಗಗಳನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ಗ್ರಾಹಕರ ಗುರುತಿನ ಚೀಟಿ ದಾಖಲೆ ಕಡ್ಡಾಯವಾಗಿದ್ದು, ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಕನಿಷ್ಠ 3 ತಿಂಗಳು ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು. ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಮಾತ್ರ ಕಾರ್ಯಾಚರಿಸಬೇಕು. ಮಸಾಜ್ ಸೇವೆ ನೀಡುವ ಸಿಬ್ಬಂದಿ ಮಾನ್ಯತೆ ಪಡೆದ ಪ್ರಮಾಣಪತ್ರ ಅಥವಾ ಡಿಪ್ಲೊಮಾ ಹೊಂದಿರುವುದು ಕಡ್ಡಾಯವಾಗಲಿದೆ. ಮಾಲೀಕರು ಹಾಗೂ ಸಿಬ್ಬಂದಿಗೆ ಪೊಲೀಸ್‌ ಪರಿಶೀಲನೆ ಮತ್ತು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಅಗತ್ಯವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Continue Reading

ಶಿವಮೊಗ್ಗ | ಜೂನ್ 12 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2026”

ಅದೇ ದಿನ ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಶಿವಮೊಗ್ಗದ ಮಹಾತ್ಮ ಗಾಂಧಿ ಪಾರ್ಕ್ ಎದುರಿಗಿರುವ ದೇಶೀಯ ವಿದ್ಯಾ ಸಂಸ್ಥೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ಬಿ.ಎಚ್. ನೆರವೇರಿಸುವರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರಾದಪ್ರಭುಲಿಂಗ ಕವಳಿಕಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹೇಮಂತ್ ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ […]

Continue Reading

ಗೃಹ ಸಚಿವರ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ : ಸಂಸದ ಬಿ. ವೈ. ರಾಘವೇಂದ್ರ

ಆರ್‌ಎಸ್‌ಎಸ್ ಎನ್ನುವುದು ಕೇವಲ ಒಂದು ಸಂಘಟನೆಯಲ್ಲ, ಅದು ದೇಶದ ಜನರು ಮತ್ತು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಜಾಗತಿಕ ವಿಚಾರಧಾರೆಯಾಗಿದೆ. ಸಂಘದ ಇದೇ ದೇಶಭಕ್ತಿಯ ಪ್ರತಿಫಲದಿಂದಲೇ ಇಂದು ಭಾರತ ಜಗತ್ತಿನಾದ್ಯಂತ ಹೆಮ್ಮೆಯಿಂದ ಮುನ್ನಡೆಯುತ್ತಿದೆ. ಆದರೆ ಗೃಹ ಸಚಿವರಿಗೆ ಕನಿಷ್ಠ ರಾಜಕೀಯ ಸಂಯಮವೇ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಅನ್ನು ಓಲೈಸಲು ಹಾಗೂ ಸಚಿವ ಸಂಪುಟದಲ್ಲಿ ತಮ್ಮ ಖುರ್ಚಿ ಮತ್ತು ಖಾತೆಯನ್ನು ಭದ್ರಪಡಿಸಿಕೊಳ್ಳಲು ಅವರು ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವೇ ಇಲ್ಲ ಎಂದು ಲೇವಡಿ […]

Continue Reading