ಶಿವಮೊಗ್ಗ | ಡೊನೇಷನ್ ದಂಧೆ” ಹಾಗೂ “ಕಟ್ಟಡ ಶುಲ್ಕ”ದ ಹೆಸರಿನ ಸುಲಿಗೆ ತಡೆಗಟ್ಟಿ : HRJC ಮನವಿ

ಮನವಿ ಪತ್ರ ಸಲ್ಲಿಸುವ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಎನ್.ಎಂ. ಸಿಬ್ಗತ್ ಉಲ್ಲಾ, ಸಂಘಟನೆಯ ಪ್ರಮುಖ ಪದಾಧಿಕಾರಿಗಳಾದ ಲೋಕೇಶ್ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷರಾದ ಸಿಬ್ಗತ್ ಉಲ್ಲಾ ಅವರು, “ಪ್ರಸ್ತುತ ಖಾಸಗಿ ಶಾಲೆಗಳು ಸರ್ಕಾರದ ಯಾವುದೇ ನಿಯಮಾವಳಿಗಳಿಗೆ ಹಾಗೂ ಆದೇಶಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಶಾಲಾ ಪ್ರವೇಶಾತಿ (Admission) ಸಂದರ್ಭದಲ್ಲಿ ಪೋಷಕರಿಂದ ಯಾವುದೇ ರಶೀದಿ ಇಲ್ಲದೆ ಲಕ್ಷಾಂತರ ರೂಪಾಯಿಗಳನ್ನು ‘ಡೊನೇಷನ್’ ರೂಪದಲ್ಲಿ ಕಡ್ಡಾಯವಾಗಿ ವಸೂಲಿ ಮಾಡಲಾಗುತ್ತಿದೆ. ಇದರೊಂದಿಗೆ […]

Continue Reading

ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಮಗಳೂರಿನ ರೈತ

ಸುದ್ದಿಗಾರರೊಂದಿಗೆ ಮಾತನಾಡಿದ ವಿಶು ಕುಮಾರ್, ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಪರಿಹಾರವನ್ನು ಇನ್ನೂ ನೀಡಿಲ್ಲ ಎಂದು ಹೇಳಿದರು. ‘ನಾಲ್ಕು ವಾರಗಳಲ್ಲಿ ವಿಷಯವನ್ನು ಅಂತಿಮಗೊಳಿಸಿ ಪರಿಹಾರವನ್ನು ಪಾವತಿಸುವಂತೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗೆ ನ್ಯಾಯಾಲಯ ನಿರ್ದೇಶಿಸಿತ್ತು. ಆದರೆ, ಮೂರು ತಿಂಗಳು ಕಳೆದರೂ ನಮಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಜಮೀನಿನಲ್ಲಿ ನಾನು ಶ್ರೀಗಂಧದ ಮರಗಳನ್ನು ಬೆಳೆಸಿದ್ದೇನೆ. ಅಗತ್ಯವಿರುವ ನೋಟಿಸ್ ನೀಡದೆಯೇ ಮರಗಳನ್ನು ಕಡಿಯಲು ಅಧಿಕಾರಿಗಳು ಯೋಜಿಸಿದ್ದಾರೆ. ಈ ಪ್ರಕ್ರಿಯೆಯ ಬಗ್ಗೆ ಯಾವುದೇ ಮಾಹಿತಿಯನ್ನು ತನಗೆ ಒದಗಿಸಿಲ್ಲ’ ಎಂದು ವಿಶು ಕುಮಾರ್ ಆರೋಪಿಸಿದ್ದಾರೆ.

Continue Reading

ಶಿವಮೊಗ್ಗ | ದೇಶದಲ್ಲೆಡೆ ಎಸ್‌ಐಆರ್ ಜಾಗೃತಿ ಮೂಡಿಸಲು ಕಾರ್ಯಾಗಾರ : ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ

ಆದರೆ ಎಸ್‌ಐಆರ್ ಎನ್ನುವುದು ಮತದಾರರ ಪಟ್ಟಿ ಪರಿಷ್ಕರಣೆ ಮಾತ್ರವಲ್ಲ. ಇದು ಇಡೀ ಮತದಾರರ ಪಟ್ಟಿಯ ನವೀಕರಣ. ಹೊಸಪಟ್ಟಿಯ ರಚನೆಯಾಗಿದೆ. ಇದು ಈವರೆಗೆ ದೇಶದಲ್ಲಿ ನಡೆದಿಲ್ಲ. ಇದೇ ಮೊದಲ ಬಾರಿ ಇಂತಹ ಪುನರ್ನವೀಕರಣ ನಡೆಯುತ್ತಿದೆ ಎಂದರು.

Continue Reading

ದಾವಣಗೆರೆ | ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ವೈರಲ್ ; 10 ಜನರು ವಶಕ್ಕೆ

ಘಟನೆಗೆ ಸಂಬಂಧಿಸಿದಂತೆ ಬಸವಾಪಟ್ಟಣ ಪೊಲೀಸರು ಇಸ್ತ್ರಿ ನಾಗರಾಜ್, ನಾಗರಾಜ್, ಅರ್ಜುನ್, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ್, ಮಧು ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಮಹಿಳೆ ನೀಡಿದ ದೂರಿನ ಮೇರೆಗೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 88/2026 ದಾಖಲಿಸಲಾಗಿದೆ. ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿ ಎಚ್.ಟಿ. ಶೇಖ‌ರ್ ಬಸವಾಪಟ್ಟಣ ಠಾಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆರೋಪಿತರು ಹಾಗೂ ಸಂತ್ರಸ್ತೆಯನ್ನು ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. […]

Continue Reading

ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್ ಬಳಿ ಸಂಚಾರ ಬದಲಾವಣೆ

ಇದರಿಂದಾಗಿ ಈ ಭಾಗದಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ದಟ್ಟವಾಗಿತ್ತು.ನೂತನ ಆದೇಶ:ಈ ಗಂಭೀರ ಸಮಸ್ಯೆಯನ್ನು ಪರಿಗಣಿಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಶಿವಮೊಗ್ಗ ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಆಯನೂರು ಗೇಟ್ ಸಿಗ್ನಲ್‌ನಲ್ಲಿ ಆಲ್ಕೋಳ ಸರ್ಕಲ್ ಕಡೆಯಿಂದ ಹೆಲಿಪ್ಯಾಡ್ ಸರ್ಕಲ್ ಕಡೆಗೆ ಬರುವ ವಾಹನಗಳಿಗೆ ಎದುರಾಗಿ ಆಟೋ ಕಾಂಪ್ಲೆಕ್ಸ್ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ‘ನೋ ಎಂಟ್ರಿ’ ಆದೇಶ ಹೊರಡಿಸಲಾಗಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ […]

Continue Reading

ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಸಂಚರಿಸುವ ಪುರುಷರಿಗೂ ಸಹ ಶೀಘ್ರದಲ್ಲಿಯೇ ಸ್ಮಾರ್ಟ್ ಕಾರ್ಡ್ ಸೌಲಭ್ಯ : ಸಚಿವ ಬೈರತಿ ಸುರೇಶ್

3 ಕೋಟಿ ಸಾರ್ವಜನಿಕರಿಗೆ ಸ್ಮಾರ್ಟ್ ಕಾರ್ಡ್‌ ವಿತರಣೆಗೆ ಪ್ಲಾನ್ ಈ ನೂತನ ವ್ಯವಸ್ಥೆಯ ಮೂಲಕ ರಾಜ್ಯದ ಒಟ್ಟು 3 ಕೋಟಿ ಸಾರ್ವಜನಿಕರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ. ಮಹಿಳೆಯರಿಗೆ ನೀಡುವ ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ಕೇವಲ ಉಚಿತ ಪ್ರಯಾಣಕ್ಕಾಗಿ ಮಾತ್ರ ಬಳಸಬಹುದಾಗಿದ್ದರೆ, ಪುರುಷ ಪ್ರಯಾಣಿಕರಿಗೆ ವಿತರಿಸಲಾಗುವ ಸ್ಮಾರ್ಟ್ ಕಾರ್ಡ್‌ಗಳಿಗೆ ಹಣವನ್ನು ಭರ್ತಿ ಮಾಡಿಸಿ, ಆ ಮೂಲಕ ಬಸ್ ಟಿಕೆಟ್ ದರವನ್ನು ಪಾವತಿಸುವಂತಹ ಸುಲಭ ಹಾಗೂ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. […]

Continue Reading