ಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ : ಆರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣ ಸಂಬಂಧ ಆರು ಜನ ಅರೋಪಿಗಳನ್ನು ದೋಷಿ ಎಂದು ಈ ಹಿಂದೆ ಕೋರ್ಟ್ ತೀರ್ಪು ನೀಡಿ, ಇಂದಿಗೆ ಶಿಕ್ಷೆ ಪ್ರಮಾಣ ಕಾಯ್ದಿರಿಸಿತ್ತು. ಅಂತೆಯೇ ಇಂದು ನ್ಯಾಯಾಧೀಶರು, ಆರು ಜನರಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿದ್ದಾರೆ. ಅಪರಾಧಿಗಳು ಅಗತ್ಯವಿದ್ದರೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ನ್ಯಾಯಾಧೀಶರು ಸಲಹೆಯಲ್ಲಿ ತಿಳಿಸಿದ್ದಾರೆ ಎಂದು ಸರ್ಕಾರಿ ಅಭಿಯೋಜಕಿ ಎಸ್. ನಾಗಲಕ್ಷ್ಮಿ ಮಾಹಿತಿ ನೀಡಿದರು.

Continue Reading

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ : ಮಲ್ಲಿಕಾರ್ಜುನ ಖರ್ಗೆ

ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಕೆ: ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿಗಳಿದ್ದಾರೆ, ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಉದ್ಭವಿಸುವುದಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅದಕ್ಕೆ ಸಮಯ ಹಿಡಿಯುತ್ತದೆ, ಆ ಸಮಯ ಬಂದಾಗ ನೋಡೋಣ ಎಂದರು.ಕರ್ನಾಟಕದಲ್ಲಿ ಸಿಎಂ ಬದಲಾವಣೆ ಮಾಡಬೇಕೆಂದು ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರು ನಿರ್ಣಯ ತೆಗೆದುಕೊಂಡರೆ ಸಮಯ ಹಿಡಿಯುತ್ತದೆ. ನಾನು ಸಿಎಂ ಆದರೆ ಉತ್ತಮ ಎಂದು ಅವರು ಹೇಳುತ್ತಾರೆ, […]

Continue Reading

ಹಾಸನ | ಪ್ರೀ ವೆಡ್ಡಿಂಗ್​ ಶೂಟ್​ಗೆ ಹೊರಟ ಭಾವಿ ವರ ಅಪಘಾತದಲ್ಲಿ ದುರ್ಮರಣ

ಮದುವೆಗೆ ಭರದಿಂದ ಸಿದ್ಧತೆ ನಡೆದಿದ್ದು, ಪ್ರೀ ವೆಡ್ಡಿಂಗ್ ಶೂಟ್‌ಗೆಂದು ಭಾವಿ ಪತ್ನಿಯನ್ನು ಕರೆ ತರಲು ಕಾರಿನಲ್ಲಿ ಮನು ಹೋಗುತ್ತಿದ್ದರು. ಈ ವೇಳೆ ಮೂಗಲಿ ಬಳಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಕುವೆಂಪು ವಿವಿ,ಕುಲಪತಿ ಕಚೇರಿಗೆ ಮಸಿ ಬಳಿದ ಪ್ರಕರಣ ; 40ಕ್ಕೂ ಹೆಚ್ಚು ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯಕುಮಾರ್ ಸೇರಿದಂತೆ 15 ಪ್ರಮುಖ ನಾಯಕರು ಹಾಗೂ ಇತರ 30ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಬಿಎನ್ಎಸ್ (BNS) 2023ರ ವಿವಿಧ ಕಠಿಣ ಕಲಂಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆಯಡಿ ಮೊಕದ್ದಮೆ ಹೂಡಲಾಗಿದೆ. ಶೇ. 98ರಷ್ಟು ಸಮಸ್ಯೆ ಪರಿಹರಿಶಲಾಗಿದೆ: ಕುಲಸಚಿವ ಹೇಮಂತ್ ಸ್ಪಷ್ಟನೆ ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿವಿ ಪ್ರಭಾರ ಕುಲಸಚಿವ ಹಾಗೂ ಜಿ.ಪಂ. ಸಿಇಒ ಹೇಮಂತ್ ಅವರು, ಪ್ರತಿಭಟನೆಯ ಹೆಸರಿನಲ್ಲಿ ನಡೆದ ದಾಂಧಲೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಅಂಕಪಟ್ಟಿ […]

Continue Reading

ಶಿಕಾರಿಪುರ | ಅಡಿಕೆ ಕಳ್ಳತನ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಶಿಕಾರಿಪುರ ಇನ್ಸ್‌ಪೆಕ್ಟರ್‌ ಸಂತೋಷ್‌ ಎಂ.ಪಾಟೀಲ್‌, ಶಿರಾಳಕೊಪ್ಪ ಪಿಎಸ್ಐ ಪ್ರಶಾಂತ ಕುಮಾರ ಟಿ.ಬಿ. ನೇತೃತ್ವದ ತಂಡವು ತನಿಖೆ ನಡೆಸಿತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಕಳುವಾಗಿದ್ದ ಅಡಿಕೆ ಮತ್ತು ಕೃತ್ಯಕ್ಕೆ ಬಳಸಿದ್ದ ಗೂಡ್ಸ್‌ ವಾಹನವನ್ನು ವಶಕ್ಕೆ ಪಡೆದ ಶಿರಾಳಕೊಪ್ಪ ಠಾಣೆ ಪೊಲೀಸರು. ಆರೋಪಿ 1: ಮಹಮ್ಮದ್ ಮನ್ಸೂರ್ (30), ಕುಂಬಾರ್ ಗುಂಡಿ ಕೊಪ್ಪಲು, ಶಿಕಾರಿಪುರ ಟೌನ್.ಆರೋಪಿ 2: ಷಹಾದ ಉಲ್ಲಾ (35), ಗಬ್ಬೂರು, ಶಿಕಾರಿಪುರ […]

Continue Reading

ಸಾಗರ | ಬೀಗ ಹಾಕಿದ್ದ ಮನೆಯಿಂದ 50 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಕಳ್ಳತನ

ಇಂದು ಮನೆಗೆ ಮರಳಿದ ಕುಟುಂಬಸ್ಥರಿಗೆ ಬಾಗಿಲು ಮುರಿದಿರುವುದು ಮತ್ತು ಮನೆಯೊಳಗಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದು ಕಂಡುಬಂದಿದೆ. ಕೂಡಲೇ ನಂದನ ಕುಮಾರ್ ಅವರು ಸಾಗರ ಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ರಕ್ಷಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ದಾವಣಗೆರೆ | ಕಾಂಗ್ರೆಸ್ ನಿಂದ ಆರು‌ ಮುಖಂಡರು ಉಚ್ಛಾಟನೆ..!

ಈಗಾಗಲೇ ಉಚ್ಚಾಟನೆ ಆಗಿರುವ ಅಬ್ದುಲ್ ಜಬ್ಬಾರ್ ಅವರನ್ನು ವಾಪಾಸ್ ಪಕ್ಷಕ್ಕೆ ಕರೆತರವುದು ಬೇಡ. ಎಐಸಿಸಿ ಕೆಪಿಸಿಸಿ ಆರು ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಅದರೂ ಅವರನ್ನು ವಾಪಾಸ್ ಕರೆತರಲು ಪ್ರಯತ್ನ ನಡೆದಿದ್ದು, ಇದಕ್ಕೆ ನಮ್ಮ ವಿರೋಧ ಇದೆ ಎಂದು ಅಸಮಾಧಾನ ಹೊರಹಾಕಿದ್ರು. ಜಬ್ಬಾರ್ ಅವರನ್ನು ವಾಪಸ್ ಪಕ್ಷಕ್ಕೆ ಕರೆತಂದ್ರೆ ಪ್ರತಿಭಟನೆ : ಉಪಚುನಾವಣೆ ವೇಳೆ ಕೆಲವರು ಪಕ್ಷಕ್ಕೆ ಅವಮಾನ ಆಗುವಂತೆ ನಾಯಕರನ್ನು ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು ಆರು ಜನರನ್ನು ಉಚ್ಚಾಟಿಸಲಾಗಿದೆ. ಇವರ ಪಕ್ಷ ವಿರೋಧಿ ಚಟುವಟಿಕೆ […]

Continue Reading

ಶಿವಮೊಗ್ಗ | ಪೊಲೀಸರು, ತಮ್ಮ ಆರೋಗ್ಯ ಜೋಪಾನ ಮಾಡಿಕೊಳ್ಳಬೇಕು : ಎಸ್ ಪಿ ಮನವಿ

ಚಂದ್ರಶೇಖರ್, ಹೆಚ್ಚುವರಿ ಜಿಲ್ಲಾ ಎ.ಜಿ. ರಕ್ಷಣಾಧಿ ಕಾರಿ ಕಾರಿಯಪ್ಪ, ಡಿ.ವೈ.ಎಸ್.ಪಿ. ಬಾಬು ಅಂಜನಪ್ಪ, ಜಿಲ್ಲಾ ಪೊಲೀಸ್ ಇಲಾಖೆಯ ಆಪ್ತ ಸಮಾಲೋಚಕರಾದ ವಿ.ಪಿ. ಮಲ್ಲಪ್ಪ, ಬಿ.ಎಸ್.ಎನ್.ಎಲ್. ನಿವೃತ್ತ ಅಧಿಕಾರಿ ಹೆಚ್.ಸಿ. ಕೃಷ್ಣಮೂರ್ತಿ, ಸರ್ಜಿ ಆಸ್ಪತ್ರೆಯ ಡಯಟಿಷಿಯನ್ ಶ್ರೇಯಸ್, ರಾಘವೇಂದ್ರ ಯೋಗ ಕೇಂದ್ರದ ಸಂಸ್ಥಾಪಕರು, ಯೋಗ ತಜ್ಞರು ಯೋಗ ಸಾಮ್ರಾ ಎಸ್.ಗೋಪಾಲಕೃಷ್ಣ, ಹೆಚ್ಚುವರಿ ಎಸ್.ಪಿ. ಆಪ್ತಸಹಾಯಕರು ಹಾಗೂ ಕಾರ್ಯಕ್ರಮದ ನಿರೂಪಕಿಯಾದ ಅನಿತಾ ಸೇರಿದಂತೆ ಆಸ್ಪತ್ರೆ ಸಿಬ್ಬಂದಿಗಳು ಸಕಾರ್ಯಕ್ರಮದಲ್ಲಿ ಮೂತ್ರಕೋಶ ತಜ್ಞ ಡಾ. ಚಂದ್ರಶೇಖರ್ ಉಪಸ್ಥಿತರಿದ್ದರು.

Continue Reading

ICSE 10th ಪರೀಕ್ಷೆ ಫಲಿತಾಂಶ ಪ್ರಕಟ : ಸಾನ್ವಿತಗೆ ಉತ್ತಮ ಅಂಕ, ಶುಭಾಶಯಗಳು ಹಾರೈಕೆ

ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ – results.cisce.org ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅನಂತ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಾನ್ವಿತ.ಕೆ. ಎಸ್ ಈ ಬಾರಿ ನಡೆದ ICSE 10th ಪರೀಕ್ಷೆಯಲ್ಲಿ ಶೇಕಡ. 79% ಪರ್ಸಂಟೇಜ್ ಗಳಿಸುವ ಮೂಲಕ ಉತ್ತಮ ಅಂಕ ಪಡೆದಿದ್ದಾರೆ. ಸಾನ್ವಿತ ಅವರ ತಾಯಿ ದಿವ್ಯ ಗೃಹಿಣಿಯಾಗಿದ್ದಾರೆ ಹಾಗೂ ತಂದೆ ಸುಧಾಕರ್ ಅವರು ಅರಸೀಕೆರೆಯಲ್ಲಿರುವ ಪ್ರತಿಷ್ಠಿತ ಚಂದ್ರಶೇಖರಭಾರತಿ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ. ಸಾನ್ವಿತ ವಿದ್ಯಾರ್ಥಿನಿಯು ಇ-ಕನ್ನಡ ಮಾಧ್ಯಮ ಸಂಪಾದಕರಾದ ರಾಘವೇಂದ್ರ ಅವರ ಸಹೋದರಿಯ […]

Continue Reading