ಚುನಾವಣೆಗೆ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ!

ಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ ಪಾಂಡುರಂಗ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದ. ಅವನಿಗೆ ಮೂರು ವರ್ಷದ ಗಂಡು ಮಗು ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಇದರಿಂದ ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಮಕ್ಕಳ ನಿಯಮ […]

Continue Reading

ಶಿವಮೊಗ್ಗ | ಇಂದಿನಿಂದ ಮಾರಿಜಾತ್ರೆ ; ಮಾರಿಕಾಂಬೆಯನ್ನು ಬರಮಾಡಿಕೊಳ್ಳಲು ಸಜ್ಜಾದ ಸಾಗರ

ಸಾಗರದ ಮಾರಿಕಾಂಬಾ ಜಾತ್ರೆ ಎಂದರೆ ಅದಕ್ಕೊಂದು ಜನಪದದ ಟಚ್ ಇರುತ್ತದೆ. ಜಾತ್ರೆ ಆರಂಭದಿಂದ ಅಮ್ಮನನ್ನು ವನಕ್ಕೆ ಬಿಡುವ ತನಕ ನಡೆಯುವ ಬಹುತೇಕ ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿ ಎತ್ತಿಹಿಡಿಯುವ ನಿಟ್ಟಿನಲ್ಲಿ ನಮ್ಮ ಹಿರಿಯರು ಹೆಣೆದು ಕೊಟ್ಟಿದ್ದಾರೆ. ಪ್ರತಿಯೊಂದು ಆಚರಣೆಯೂ ನಮ್ಮ ಜಾನಪದ ಶೈಲಿಯೊಂದಿಗೆ ಹೆಣೆದು ಕೊಂಡಿರುವುದು ವಿಶೇಷ. ಇಂದು ಅಮ್ಮನವರ ಆಗಮನ : ಫೆಬ್ರವರಿ 3ರ ಮಂಗಳವಾರ ತವರು ಮನೆ ದೇವಸ್ಥಾನದಲ್ಲಿ ಅಮ್ಮನವರ ಪ್ರತಿಷ್ಟಾಪನೆ ನಡೆಯಲಿದೆ. ಇದಕ್ಕೆ ಬೇಕಾದ ಪೂರ್ವಸಿದ್ದತೆ ನಡೆದಿದೆ. ಸೋಮವಾರ ರಾತ್ರಿಯಿಂದಲೇ ವಿಶೇಷ ಪೂಜೆ […]

Continue Reading

ಶಿವಮೊಗ್ಗ | ಕ್ಯಾಂಟರ್ ನಡುವೆ ಭೀಕರ ಅಪಘಾತ: ಸೊರಬದ ಇಬ್ಬರು ಸ್ಥಳದಲ್ಲೇ ಸಾವು

ಇಬ್ಬರೂ ಕಾರಿನಲ್ಲಿ ಸಾಗರದ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಸಾಗರದಿಂದ ಆನಂದಪುರದ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ವಾಹನವು, ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು,ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ ಎಂದುಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Continue Reading

ಶಿವಮೊಗ್ಗ | ಜೈಲಿನ ಆವರಣದಲ್ಲಿ ಕಪ್ಪು ಗಮ್ ಟೇಪ್ ಸುತ್ತಿದ್ದ ಅನುಮಾನಾಸ್ಪದ ವಸ್ತು ವಶ

ಪೊಟ್ಟಣವನ್ನು ಬಿಚ್ಚಿದಾಗ ಅದರಲ್ಲಿ ಒಂದು ನೀಲಿ ಬಣ್ಣದ ಪೊಕೊ (POCO) ಆಂಡ್ರಾಯ್ಡ್ ಮೊಬೈಲ್ ಫೋನ್, 93 ಬ್ರಾಂಡ್‌ನ 3 ಕಟ್ಟು ಬೀಡಿಗಳು ಹಾಗೂ ಬಿಡಿ 20 ಬೀಡಿಗಳು, 2 ಕ್ಲಾಸಿಕ್ ಕನೆಕ್ಟ್ ಸಿಗರೇಟ್ ಪ್ಯಾಕ್‌ಗಳು, 1 ಕಿಂಗ್ ಲೈಟ್ಸ್ ಸಿಗರೇಟ್ ಪ್ಯಾಕ್ ಹಾಗೂ ಒಂದು ಕಪ್ಪು ಬಣ್ಣದ ಚಾರ್ಜಿಂಗ್ ಕೇಬಲ್ ಪತ್ತೆಯಾಗಿವೆ. ಜೈಲಿನೊಳಗೆ ನಿಷೇಧಿತ ವಸ್ತುಗಳನ್ನು ಅಕ್ರಮವಾಗಿ ಎಸೆದ ಅನಾಮಧೇಯ ವ್ಯಕ್ತಿಗಳು ಹಾಗೂ ಇವುಗಳನ್ನು ಪಡೆಯಲು ಯತ್ನಿಸಿದ ಕೈದಿಗಳ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮ-2022 ರ […]

Continue Reading

T-20 ವಿಶ್ವಕಪ್ -26 ; ಭಾರತದ ವಿರುದ್ಧದ ಪಂದ್ಯ ಬಹಿಷ್ಕಾರಕ್ಕೆ ಪಾಕಿಸ್ತಾನ ನಿರ್ಧಾರ

ನಂತರ ಬಾಂಗ್ಲಾದೇಶ ತಂಡ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದು, ಅದರ ಬದಲಿಗೆ ಸ್ಕಾಟ್ಲೆಂಡ್ ತಂಡವನ್ನು ಸೇರಿಸಲಾಯಿತು.ಬಾಂಗ್ಲಾದೇಶದ ನಿಲುವಿಗೆ ಬೆಂಬಲ ಸೂಚಿಸಿದ್ದ ಪಾಕಿಸ್ತಾನ, ಪಂದ್ಯ ಬಹಿಷ್ಕರಿಸುವ ಸಾಧ್ಯತೆಯನ್ನು ಮುಂಚೆಯೇ ಸೂಚಿಸಿತ್ತು.ಕಳೆದ ವಾರ ನಡೆದ ICC ಮಂಡಳಿಯ ವರ್ಚುವಲ್ ಸಭೆಯಲ್ಲೂ ಇದೇ ನಿಲುವನ್ನು ಪುನರುಚ್ಚರಿಸಿದೆ. ಕಳೆದ ವರ್ಷದ ಚಾಂಪಿಯನ್ಸ್ ಟ್ರೋಫಿ ವೇಳೆ ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಭಾರತದ ಪಂದ್ಯಗಳನ್ನು ಪಾಕಿಸ್ತಾನದಿಂದ ದುಬೈಗೆ ಸ್ಥಳಾಂತರಿಸಿದ್ದ ಘಟನೆಯನ್ನೂ ಪಾಕಿಸ್ತಾನ ಉಲ್ಲೇಖಿಸಿದೆ ಎಂದು ತಿಳಿದು ಬಂದಿದೆ. 2008ರಿಂದ ಭಾರತ ತಂಡವು ಪಾಕಿಸ್ತಾನ ಪ್ರವಾಸ ಕೈಗೊಂಡಿಲ್ಲ. 2025ರ […]

Continue Reading

ಶಿವಮೊಗ್ಗ | ಸ್ಬುಡದಲ್ಲಿ ಕೋಟಿಗಟ್ಟಲೆ ಭ್ರಷ್ಟಾಚಾರ ; ತನಿಖೆಗೆ ಆಗ್ರಹಿಸಿದ ಮಾಜಿ ಶಾಸಕ ಪ್ರಸನ್ನಕುಮಾರ್

ವಿಶೇಷವೆಂದರೆ, ಲೋಕಾಯುಕ್ತಕ್ಕೆ ದೂರು ನೀಡಿದ ನಂತರ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿವೆ ಹಾಗೂ ಲಂಚದ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ಇವ್ಯಾವುದಕ್ಕೂ ಬಗ್ಗದ ಗುತ್ತಿಗೆದಾರರು ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ ಎಂದು ಪ್ರಸನ್ನ ಕುಮಾರ್ ವಿವರಿಸಿದರು. ಅಕ್ರಮಕ್ಕೆ ಸಾಕ್ಷಿಯಾಗಿ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ಕಾಮಗಾರಿಯನ್ನು ಉದಾಹರಿಸಿದ ಅವರು, ಅಲ್ಲಿ ನಿಯಮದ ಪ್ರಕಾರ 1441 ಮೀಟರ್ ಕಬ್ ಸ್ಟೋನ್ ಅಳವಡಿಸಬೇಕಿತ್ತು. ಆದರೆ ವಾಸ್ತವದಲ್ಲಿ ಕೇವಲ 518 ಮೀಟರ್ ಕಬ್ ಸ್ಟೋನ್ ಮಾತ್ರ ಅಳವಡಿಸಿ, ಬಾಕಿ ಮೊತ್ತವನ್ನು ಅಧಿಕಾರಿಗಳು ಮತ್ತು ಸಂಬಂಧಪಟ್ಟವರು ಲೂಟಿ […]

Continue Reading

ಕೇಂದ್ರದ ಬಜೆಟ್, ದೇಶಾದ್ಯಂತ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ : ಬಿ. ವೈ. ವಿಜಯೇಂದ್ರ

ಕೈಗಾರಿಕೆ, ಸೆಮಿಕಂಡಕ್ಟರ್, ಕೃತಕ ಬುದ್ಧಿಮತ್ತೆ ಸೇರಿದಂತೆ ಎಲ್ಲ ವಲಯಗಳಿಗೂ ಸಮಾನ ಆದ್ಯತೆ ನೀಡಲಾಗಿದ್ದು, ಆರ್ಥಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಕಾಪಾಡಲಾಗಿದೆ ಎಂದು ಹೇಳಿದರು. ಹಿಂದಿನ ಆರ್ಥಿಕ ವರ್ಷದಲ್ಲಿ ಹಣಕಾಸು ಕೊರತೆಯನ್ನು 4.4 ಶೇಕಡಕ್ಕೆ ಇಳಿಸಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಮೂಲಭೂತ ಸೌಕರ್ಯಗಳಿಗೆ ಅಲ್ಪ ಅನುದಾನ ನೀಡಲಾಗುತ್ತಿದ್ದರೆ, ಎನ್‌ಡಿಎ ಸರ್ಕಾರದ ಕಾಲದಲ್ಲಿ ರಸ್ತೆ, ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಇತಿಹಾಸದಲ್ಲೇ ಅತ್ಯಧಿಕ ವೆಚ್ಚ ಮಾಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ದಿಕ್ಕಿನಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆಹಾರ ಮತ್ತು […]

Continue Reading